< ಅರಸುಗಳು - ದ್ವಿತೀಯ ಭಾಗ 22 >

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.
शासन शुरू करते समय योशियाह की उम्र आठ साल थी. उसने येरूशलेम में एकतीस साल शासन किया. उसकी माता का नाम येदिदाह था, वह बोत्सकथ नगर के अदाइयाह की पुत्री थी.
2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
उसने वह किया, जो याहवेह की दृष्टि में सही था. अपने पूर्वज दावीद के सारी मार्गों का आचरण करता रहा. वह इनसे न तो दाएं मुड़ा और न बाएं.
3 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,
राजा योशियाह के राज्य के अठारहवें वर्ष में राजा ने मेशुल्लाम के पोते, अज़लियाह के पुत्र शापान को, जो सचिव था, इस आदेश के साथ याहवेह के भवन को भेजा,
4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
“महापुरोहित हिलकियाह के पास जाइए कि वह याहवेह के भवन में लाए गए दान की गिनती करें, जो द्वारपालों द्वारा आराधकों से इकट्ठा किया गया है.
5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.
यह धन याहवेह के भवन के लिए चुने गए अधिकारियों को सौंप दिया जाए, और वे इसे उन्हें देते जाएं जिनकी जवाबदारी याहवेह के भवन की मरम्मत करना है,
6 ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.
यानी बढ़ई, तराशनेवालों और राजमिस्त्रियों को, कि वे भवन की मरम्मत के लिए ज़रूरी लकड़ी और तराशी गई चट्टानें ले आएं.
7 ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.
इनसे लेनदेन का लेखा न लिया जाए, क्योंकि वे अपने लेनदेन में सच्चे हैं.”
8 ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.
महापुरोहित हिलकियाह ने लिपिक शापान को सूचित किया, “याहवेह के भवन में मुझे व्यवस्था की पुस्तक मिली है!” हिलकियाह ने पुस्तक शापान को सौंप दी. शापान ने उसे पढ़ा.
9 ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.
लिपिक शापान ने राजा के पास जाकर उसे इसकी सूचना दी, “भवन में रखी सारी चांदी निकाल ली गई हैं और यह धन उन कर्मचारियों को दे दिया गया है, जिन्हें याहवेह के भवन के देखरेख की जवाबदारी सौंपी गई है.”
10 ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.
इसके बाद लिपिक शापान ने राजा को यह सूचना भी दी, “पुरोहित हिलकियाह ने मुझे एक पुस्तक दी है.” शापान ने राजा के सामने उस पुस्तक में से पढ़कर सुनाया.
11 ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
जब राजा ने व्यवस्था की पुस्तक से सुना, उसने अपने वस्त्र फाड़ दिए.
12 ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
राजा ने पुरोहित हिलकियाह, शापान के पुत्र अहीकाम, मीकायाह के पुत्र अखबोर, लिपिक शापान और राजा के सेवक असाइयाह को यह आदेश दिया,
13 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.
“इस पुस्तक में हमारे लिए जो लिखा है, उसके विषय में, मेरी ओर से, यहूदिया और प्रजा की ओर से याहवेह की इच्छा मालूम करो, क्योंकि भयंकर है याहवेह का क्रोध, जो हमारे लिए भड़का है; क्योंकि हमारे पूर्वजों ने इस पुस्तक के आदेशों का पालन नहीं किया है. उन्होंने वह सब नहीं किया है, जो इस पुस्तक में हमारे लिए लिखा है.”
14 ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
तब पुरोहित हिलकियाह, अहीकाम, अखबोर, शापान और असाइयाह हुलदाह नामक स्त्री से भेंटकरने गए, जो एक भविष्यद्वक्ता थी, वह वस्त्रों के रखवाले शल्लूम की पत्नी थी, जो तिकवाह का पुत्र, हरहास का पोता था. वह येरूशलेम के मिशनेह क्षेत्र में रहती थी. उन्होंने हुलदाह से सलाह-मशवरा किया.
15 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
हुलदा ने उन्हें उत्तर दिया, “याहवेह, इस्राएल के परमेश्वर का संदेश यह है ‘जिस व्यक्ति ने तुम्हें मुझसे मिलने के लिए भेजा है, उससे यह कहना,
16 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.
याहवेह का संदेश यह है, “देख लेना, इस देश और इसके वासियों पर मैं बुराई भेजूंगा; वे सभी बातें, जो यहूदिया के राजा ने पढ़े हैं.
17 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’
क्योंकि उन्होंने मुझे त्याग दिया है और वे पराए देवताओं के सामने धूप जलाते हैं. वे अपने हाथ से बनाई हुई सारी वस्तुओं के द्वारा मेरे क्रोध को भड़काएं. इसलिये इस स्थान के विरुद्ध मेरा क्रोध भड़का है, और मेरा क्रोध शांत न होगा.”’
18 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
मगर यहूदिया के राजा, जिसने, तुम्हें मेरे पास भेजा है, कि मैं याहवेह से उनकी इच्छा पता करूं, उससे तुम यह कहना: ‘याहवेह, इस्राएल के परमेश्वर का संदेश यह है: उन बातों के बारे में, जो तुमने सुनी है:
19 ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.
इसलिये कि तुम्हारा मन दीन है और तुमने खुद को याहवेह के सामने विनम्र बना लिया, जब तुमने मुझे इस जगह और इसके निवासियों के विरुद्ध कहते सुना, कि वे उजड़ जाएंगे, शाप बन जाएंगे, तुमने अपने वस्त्र फाड़े और तुमने मेरे सामने विलाप किया है, विश्वास करो, मैंने तुम्हारी प्रार्थना सुन ली है, यह याहवेह की घोषणा है.
20 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
इसलिये सुनो, मैं तुम्हें तुम्हारे पूर्वजों में मिला दूंगा. शान्तिपूर्ण स्थिति में तुम्हारा अंतिम संस्कार होगा. इस स्थान पर जो बुराई मेरे द्वारा भेजी जाएगी, उसे तुम्हारी आंखें न देखेंगी.’” यह संदेश उन्होंने राजा को जा सुनाया.

< ಅರಸುಗಳು - ದ್ವಿತೀಯ ಭಾಗ 22 >