< ಅರಸುಗಳು - ದ್ವಿತೀಯ ಭಾಗ 23 >

1 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
ထိုအခါရှင်ဘုရင်သည် ယုဒပြည်သူ ယေရု ရှလင်မြို့သား အသက်ကြီးသူအပေါင်းတို့ကို ခေါ်၍၊
2 ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
ယုဒပြည်သူယေရုရှလင်မြို့သား၊ ယဇ်ပုရော ဟိတ်၊ ပရောဖက်၊ လူအကြီးအငယ်အပေါင်းတို့နှင့်တကွ ဗိမာန်တော်သို့တက်၍၊ ဗိမာန်တော်၌ တွေ့သော ပဋိညာဉ်ကျမ်းစာရှိသမျှကို သူတို့ရှေ့မှာ ဘတ်တော်မူ၏။
3 ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.
ရှင်ဘုရင်ကလည်း၊ ထာဝရဘုရားကို ဆည်းကပ် ပါမည်။ စီရင်ထုံးဖွဲ့ချက်ပညတ်တရားကို စိတ်နှလုံး အကြွင်းမဲ့စောင့်ရှောက်ပါမည်။ ဤကျမ်းစာ၌ပါသော ပဋိညာဉ်စကားအတိုင်း ကျင့်ပါမည်ဟု တိုင်နားမှာ ရပ်၍ အဓိဋ္ဌာန်ပြု၏။ လူအပေါင်းတို့သည်လည်း ထိုအဓိဋ္ဌာန်ကိုဝန်ခံကြ၏။
4 ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.
နောက်တဖန်ယဇ်ပုရောဟိတ်မင်း ဟိလခိ၊ ဒုတိယယဇ် ပုရောဟိတ်များနှင့် တံခါးစောင့်များတို့သည် ဗာလဘုရား၊ အာရှရပင်၊ မိုဃ်းကောင်းကင် တန်ဆာအဘို့ လုပ်သမျှသော အသုံးအဆောင်တို့ကို ဗိမာန် တော်ထဲက ထုတ်မည်အကြောင်း ရှင်ဘုရင်စီရင်သဖြင့်၊ ယေရုရှလင် မြို့ပြင်၊ ကေဒြုန်တော၌ မီးရှို့၍ပြာကို ဗေသလမြို့သို့ ဆောင်သွားကြ၏။
5 ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ, ಯೆರೂಸಲೇಮಿನ ಸುತ್ತಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸರು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ, ಸೂರ್ಯನಿಗೂ, ಚಂದ್ರನಿಗೂ, ಗ್ರಹಗಳಿಗೂ, ಆಕಾಶದ ಸಮಸ್ತ ಸೈನ್ಯಕ್ಕೂ, ಧೂಪಸುಡುವವರನ್ನೂ ತೆಗೆದುಹಾಕಿದನು.
ယေရုရှလင်မြို့ပတ်လည် အစရှိသော ယုဒမြို့ ရွာ၌ မြင့်သော အရပ်တို့အပေါ်မှာ နံ့သာပေါင်းကို မီးရှို့ စေခြင်းငှါ၊ ယုဒရှင်ဘုရင် ခန့်ထားသော ယဇ်ပုရောဟိတ် တို့ကို၎င်း၊ ဗာလဘုရား၊ နေလရာသီစောင့် အစရှိသော မိုဃ်းကောင်းကင်တန်ဆာတို့အား နံ့သာပေါင်းကို မီးရှို့ သော သူတို့ကို၎င်း၊ သုတ်သင်ပယ်ရှင်းတော်မူ၏။
6 ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.
အာရှရပင်ကိုလည်း ဗိမာန်တော်ထဲကထုတ်၍ ယေရုရှလင်မြို့ပြင်၊ ကေဒြုန်ချောင်းသို့ ယူသွားသဖြင့်၊ ထိုချောင်းနားမှာ မီးရှို့ပြီးလျှင် ညက်ညက်ချေ၍၊ အမှုန့်ကို ဆင်းရဲသားသင်္ချိုင်းပေါ်မှာ ဖြန့်ဖြူးတော်မူ၏။
7 ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.
မိန်းမတို့သည် အာရှရပင်အဘို့ ကုလားကာကို ရက်ရာအရပ် ဗိမာန်တော်နားမှာ ယောက်ျားအလိုသို့ လိုက်တတ်သော မိန်းမလျှာတို့ နေရာအိမ်များကိုလည်း ဖျက်တော်မူ၏။
8 ಯೋಷೀಯನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರಮಾಡಿ, ಗಿಬೆಯ ಪಟ್ಟಣದಿಂದ ಬೇರ್ಷೆಬದವರೆಗೂ, ಯಾಜಕರು ಧೂಪ ಸುಡುತ್ತಿದ್ದ ಉನ್ನತ ಪೂಜಾಸ್ಥಳಗಳನ್ನೂ ಅಶುದ್ಧ ಮಾಡಿದನು. ಅನಂತರ ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ದ್ವಾರದಲ್ಲಿದ್ದ ಬಾಗಿಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
ယဇ်ပုရောဟိတ်အပေါင်းတို့ကို ယုဒမြို့ရွာတို့မှ မခေါ်ခဲ့၍၊ သူတို့သည် နံ့သာပေါင်းကိုမီးရှို့ရာမြင့်သော အရပ်များကို ဂေဗမြို့မှစ၍ ဗေရရှေဘမြို့တိုင်အောင် ညစ်ညှုးစေတော်မူ၏။ ယေရုရှလင်မြို့ဝန် ယောရှု၏ တံခါးဝလက်ဝဲဘက်နားမှာတည်သော မြို့တံခါး၏ ကုန်း တို့ကိုလည်း ဖြိုဖျက်တော်မူ၏။
9 ಆದರೆ ಉನ್ನತ ಪೂಜಾಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಬಲಿಪೀಠದ ಬಳಿಯಲ್ಲಿ ಸೇವೆ ಮಾಡದೇ ಇದ್ದರೂ, ತಮ್ಮ ಸಹೋದರರ ಮಧ್ಯದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
မြင့်သောအရပ်နှင့်ဆိုင်သော ယဇ်ပုရောဟိတ် တို့သည်၊ ယေရုရှလင်မြို့ဗိမာန်တော် ယဇ်ပလ္လင်နားသို့ မချဉ်းရဘဲ၊ အပေါင်းအဘော်တို့နှင့် တဆေးမဲ့မုန့်ကို စားရ သော အခွင့်သာရှိကြ၏။
10 ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.
၁၀အဘယ်သူမျှ မိမိသားသမီးကို မောလုတ်ဘုရား အား မီးဖြင့် မပူဇော်နိုင်မည်အကြောင်း၊ ဟိန္နုံသား၏ ချိုင့်၌ရှိသော တောဖက်အရပ်ကိုလည်း ညစ်ညှုးစေတော် မူ၏။
11 ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠೆಪಡಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಯೋಷೀಯನು ಸುಟ್ಟುಹಾಕಿದನು. ಅವು ಯೆಹೋವ ದೇವರ ಆಲಯದ ದ್ವಾರದಲ್ಲಿ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದವು. ಅರಸರು ಸೂರ್ಯನಿಗೆ ಸಮರ್ಪಿಸಿ ನಿಲ್ಲಿಸಿದ್ದ ರಥಗಳನ್ನು ಸಹ ಸುಟ್ಟುಬಿಟ್ಟನು.
၁၁ယုဒရှင်ဘုရင်တို့သည် နေကိုပူဇော်၍၊ ဗိမာန် တော်ဝင်းပြင် အရာရှိနာသမ္မေလက်အိမ်နား၊ ဝင်းတော် တံခါးဝ၌ထားသော မြင်းတို့ကိုလည်း ပယ်ရှား၍ နေရထားတို့ကိုလည်း မီးရှို့တော်မူ၏။
12 ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.
၁၂ယုဒရှင်ဘုရင်တို့သည် အာဟပ်မင်းတိုက်တော် အထက်ဆင့် အပေါ်မှာတည်ထားသော ယဇ်ပလ္လင်တို့နှင့် မနာရှေမင်းသည် ဗိမာန်တော်တန်တိုင်းနှစ်ရပ်တွင် တည်ထားသော ပလ္လင်တို့ကို ရှင်ဘုရင်ဖြိုချ ချေဖျက်၍ အမှုန့်ကို ကေဒြုန်ချောင်းထဲသို့ ပစ်တော်မူ၏။
13 ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.
၁၃ဣသရေလရှင်ဘုရင်ရှောလမုန်သည် ယေရုရှလင်မြို့အရှေ့၊ ဖျက်ဆီးခြင်းတောင်လက်ျာဘက်၌ ရွံရှာဘွယ်သော ဇိဒုန်ဘုရားအာရှတရက်၊ ရွံရှာဘွယ် သော မောဘဘုရား ခေမုရှ၊ ရွံရှာဘွယ်သော အမ္မုန်ဘုရားမိလကုံအဘို့ တည်သော ကုန်းတို့ကို လည်း ရှင်ဘုရင် ညစ်ညှုးစေတော်မူ၏။
14 ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
၁၄ရုပ်တုဆင်းတုတို့ကို ချိုးဖဲ့၍ အာရှရပင်တို့ကို ခုတ်လှဲပြီးမှ၊ သူတို့တည်ရာအရပ်များကို လူသေအရိုးတို့ နှင့် ပြည့်စေတော်မူ၏။
15 ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.
၁၅ဣသရေလအမျိုးကို ပြစ်မှားစေသော နေဗတ် ၏သား ယေရောဗောင်သည်၊ ဗေသလမြို့၌တည်သော ကုန်းနှင့် ယဇ်ပလ္လင်ကိုလည်း ဖြိုချ၍ မီးရှို့ပြီးမှ ညက် ညက်ခြေတော်မူ၏။ အာရှရပင်ကိုလည်း မီးရှို့တော်မူ၏။
16 ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.
၁၆ယောရှိမင်းသည် လှည့်လည်၍ ကြည့်ရှုလျက်၊ ထိုတောင်ပေါ်မှာရှိသော သင်္ချိုင်းကို မြင်သောအခါ၊ လူကို စေလွှတ်၍ ထိုသင်္ချိုင်းထဲက လူသေအရိုးတို့ကို ထုတ်ပြီး လျှင်၊ ထိုအမှုကို အထက်ကဘော်ပြသော ဘုရားသခင် ၏လူ ဆင့်ဆိုသော ထာဝရဘုရား၏ စကားတော်အတိုင်း၊ အရိုးတို့ကို ယဇ်ပလ္လင်ပေါ်မှာ မီးရှို့၍ညစ်ညူးစေတော် မူ၏။
17 ಆಗ ಅರಸನು, “ನಾನು ಕಾಣುವ ಈ ಸಮಾಧಿ ಕಲ್ಲು ಯಾರದು?” ಎಂದು ಕೇಳಿದನು. ಅದಕ್ಕೆ ಆ ಊರಿನವರು ಅವನಿಗೆ, “ನೀನು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದದ ದೇವರ ಮನುಷ್ಯನ ಸಮಾಧಿ,” ಎಂದರು.
၁၇ယောရှိမင်းကလည်း၊ ငါမြင်သော ထိုမှတ် ကျောက်ကား အဘယ်သို့နည်းဟုမေးလျှင်၊ မြို့သားတို့က၊ ကိုယ်တော်သည် ဗေသလယဇ် ပလ္လင်၌ပြုတော်မူသော အမှုကို၊ ယုဒပြည်မှလာ၍ ဘော်ပြသော ဘုရားသခင်၏ လူသင်္ချိုင်းဖြစ်ပါသည်ဟု ပြန်လျှောက်ကြသော်၊
18 “ಅದನ್ನು ಬಿಟ್ಟುಬಿಡಿರಿ. ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ,” ಎಂದನು. ಹಾಗೆಯೇ ಅವನು ಅವರ ಎಲುಬುಗಳನ್ನು ಸಮಾರ್ಯದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಬಿಟ್ಟುಬಿಟ್ಟರು.
၁၈ရှင်ဘုရင်က၊ ရှိစေလော့။ ထိုသူ၏အရိုးတို့ကို အဘယ်သူမျှ မရွှေ့စေနှင့်ဟု မိန့်တော်မူသည်အတိုင်း သူ၏ အရိုးတို့နှင့် ရှမာရိမြို့မှ လာသောပရောဖက်အရိုး တို့ကို ရှိစေကြ၏။
19 ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.
၁၉ဣသရေလရှင်ဘုရင်တို့သည် အမျက်တော်ကို နှိုးဆော်ခြင်းငှါ၊ ရှမာရိမြို့ရွာတို့၌ မြင့်သောအရပ်ပေါ်မှာ တည်လုပ်သောအိမ်ရှိသမျှတို့ကိုလည်း ယောရှိမင်းသည် ပယ်ရှား၍၊ ဗေသလမြို့၌ ပြုသမျှအတိုင်း ပြုတော်မူ၏။
20 ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.
၂၀မြင့်သော အရပ်နှင့် ဆိုင်သောယဇ်ပုရောဟိတ် အပေါင်းတို့ကိုလည်း ယဇ်ပလ္လင်ပေါ်မှာ ကွပ်မျက်၍၊ လူသေအရိုးတို့ကို မီးရှို့ပြီးမှ ယေရုရှလင်မြို့သို့ ပြန်တော် မူ၏။
21 ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು.
၂၁တဖန်ရှင်ဘုရင်ကလည်း၊ ဤပဋိညာဉ်ကျမ်းစာ ၌လာသည်အတိုင်း၊ သင်တို့၏ဘုရားသခင်ထာဝရဘုရား အား ပသခါပွဲကို ဆောင်ကြလော့ဟု လူအပေါင်းတို့ကို မိန့်တော်မူ၏။
22 ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲುಗೊಂಡು, ಇಸ್ರಾಯೇಲಿನ ಯೆಹೂದದ ಅರಸರ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ.
၂၂အကယ်၍ ဣသရေလအမျိုးကို အုပ်စိုးသော တရားသူကြီးလက် ထက်မှစ၍၊ ဣသရေလရှင်ဘုရင်နှင့် ယုဒရှင်ဘုရင်လက်ထက် ကာလပတ်လုံး၊ ထိုသို့သော ပသခါပွဲကို တခါမျှမဆောင်ကြ။
23 ಅರಸನಾದ ಯೋಷೀಯನ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಆಚರಿಸಲಾಯಿತು.
၂၃ယောရှိမင်းကြီးနန်းစံ ဆယ်ရှစ်နှစ်တွင် ထိုပွဲကို ယေရုရှလင်မြို့၌ ထာဝရဘုရားအား ဆောင်ကြသတည်း။
24 ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.
၂၄ထိုမှတပါး၊ ဗိမာန်တော်၌ ယဇ်ပုရောဟိတ် ဟိလ ခိတွေ့သော ကျမ်းစာ၌ပါသော စကားအတိုင်း ကျင့်လို သောငှါ၊ ယောရှိမင်းသည် စုန်း၊ နတ်ဝင်၊ တေရပ် ရုပ်တုမှ စ၍ ရုပ်တုဆင်းတုများကို၎င်း၊ ယေရုရှလင်မြို့နှင့် ယုဒ ပြည်လုံးတွင် ရွံရှာဘွယ်သောအရာ တွေ့သမျှတို့ကို၎င်း၊ သုတ်သင် ပယ်ရှင်းတော်မူ၏။
25 ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.
၂၅မောရှေတရား၌ ပါသမျှကို ကျင့်သဖြင့်၊ စိတ် နှလုံး အကြွင်းမဲ့အစွမ်းသတ္တိရှိသမျှနှင့် ထာဝရဘုရား အထံတော်သို့ ပြောင်းလဲ၍၊ ယောရှိမင်းနှင့်တူသော ရှင်ဘုရင်တယောက်မျှ မဖြစ်စဖူး။ နောင်ကာလ၌လည်း မပေါ်မရှိ။
26 ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.
၂၆သို့ရာတွင် မနာရှေသည် ထာဝရဘုရား၏ အမျက်တော်ကို နှိုးဆော်ခြင်းငှါ၊ ပြစ်မှားသော အပြစ် ရှိသမျှတို့ကြောင့်၊ ယုဒအမျိုး၌ ပြင်းစွာ အမျက်ထွက်၍ စိတ်တော်မပြေ။
27 ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.
၂၇ဣသရေလအမျိုးကို ငါ့မျက်မှောက်မှ ပယ်ရှား သကဲ့သို့ ယုဒအမျိုးကိုလည်း ငါပယ်ရှားမည်။ ငါရွေးချယ် သော ယေရုရှလင်မြို့ကို၎င်း၊ အကြင်ဗိမာန်၌ငါ့နာမကို ငါတည်စေမည်ဟု ငါဆိုသော ဗိမာန်ကို၎င်း၊ ငါစွန့်ပစ် မည်ဟု မိန့်တော်မူ၏။
28 ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
၂၈ယောရှိပြုမူသော အမှုအရာကြွင်းလေသမျှတို့ သည် ယုဒရာဇဝင်၌ ရေးထားလျက်ရှိ၏။
29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.
၂၉ထိုမင်းလက်ထက်၌ အဲဂုတ္တု ဖာရောဘုရင် နေခေါသည် ဥဖရတ်မြစ်တိုင်အောင် အာရှုရိရှင်ဘုရင်ကို စစ်ချီ၍၊ ယောရှိမင်းကြီးသည် ဆီးတားခြင်းငှါ ထွက်ရာ တွင်၊ မေဂိဒ္ဒေါမြို့မှာ မင်းချင်းတွေ့သောအခါ၊ ယောရှိမင်း သည် အသက်ဆုံးလေ၏။
30 ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.
၃၀ကျွန်တို့သည် ရထားတော်ပေါ်မှာ တင်ပြီးလျှင်၊ မင်းကြီးသေစဉ်တွင် မေဂိဒ္ဒေါမြို့မှ ယေရုရှလင်မြို့သို့ ဆောင်သွား၍ သင်္ချိုင်းတော်၌ သင်္ဂြိုဟ်ကြ၏။ ပြည်သူ ပြည်သားတို့သည် ယောရှိသားယောခတ်ကို ယူ၍ဘိသတ် ပေးလျက် ခမည်းတော်အရာ၌ နန်းတင်ကြ၏။
31 ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.
၃၁ယောခတ်သည် အသက်နှစ်ဆယ်သုံးနှစ်ရှိသော်၊ နန်းထိုင်၍ ယေရုရှလင်မြို့၌ သုံးလစိုးစံလေ၏။ မယ်တော်ကား၊ လိဗနမြို့သား ယေရမိ၏ သမီးဟာမုတာလ အမည်ရှိ၏။
32 ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
၃၂ထိုမင်းသည် ဘိုးဘေးပြုသမျှအတိုင်း ထာဝရ ဘုရား ရှေ့တော်၌ ဒုစရိုက်ကိုပြု၏။
33 ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.
၃၃ဖာရောနေခေါသည် ထိုမင်းကို ယေရုရှလင် မြို့မှာ မင်းမပြုစေခြင်းငှါ ဟာမတ်ပြည်၊ ရိဗလမြို့မှာ အကျဉ်းထား၍၊ ယုဒပြည်၌ ငွေအခွက်တထောင်နှင့် ရွှေအခွက် တဆယ်ကိုအခွန် တောင်းလေ၏။
34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.
၃၄ဖာရော နေခေါသည်လည်း၊ ယောရှိသား ဧလျာ ကိမ်ကို ခမည်းတော်အရာ၌ နန်းတင်၍ ယောယကိမ် အမည်သစ်ကိုပေး၏။ ယောခတ်ကို အဲဂုတ္တု ပြည်သို့ယူသွား၍ ထိုပြည်၌ ယောခတ်သည်သေ၏။
35 ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.
၃၅ယောယကိမ်သည်လည်း ဖာရောဘုရင် အမိန့် တော်အတိုင်း၊ တပြည်လုံးတွင် ရွှေငွေခွဲ၍ ဖာရောဘုရင် အား အခွန်ဆက်ရ၏။ ပြည်သူပြည်သား အသီးအသီး တို့ကို ရွှေငွေခွဲသည်အတိုင်း၊ ကျပ်တည်းစွာ တောင်း၍ ဖာရောနေခေါအား ဆက်လေ၏။
36 ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.
၃၆ယောယကိမ်သည် အသက်နှစ်ဆယ်ငါးနှစ် ရှိသော် နန်းထိုင်၍ ယေရုရှလင်မြို့၌ တဆယ်တနှစ် စိုးစံလေ၏။ မယ်တော်ကား၊ ရုမမြို့သား ပေဒဲယ၏သမီး ဇေဗုဒအမည်ရှိ၏။
37 ಅವನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
၃၇ထိုမင်းသည် ဘိုးဘေးပြုသမျှအတိုင်း ထာဝရ ဘုရားရှေ့တော်၌ ဒုစရိုက်ကို ပြု၏။

< ಅರಸುಗಳು - ದ್ವಿತೀಯ ಭಾಗ 23 >