< ಅರಸುಗಳು - ದ್ವಿತೀಯ ಭಾಗ 6 >

1 ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,
ပရောဖက်အမျိုးသားတို့က၊ ကိုယ်တော်နှင့်အတူ ယခုနေသော အရပ်သည် ကျဉ်းမြောင်းပါ၏။
2 ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು.
အကျွန်ုပ်တို့သည် ယော်ဒန်မြစ်နားသို့ သွားပါ ရစေ။ ထိုအရပ်၌ဝိုင်း၍ သစ်သားကိုခုတ်ပြီးလျှင်၊ ကိုယ်နေစရာဘို့ လုပ်ပါရစေဟု ဧလိရှဲထံ၌ အခွင့်တောင်း လျှင်၊ သွားကြလော့ဟု အခွင့်ပေး၏။
3 ಆಗ ಅವರಲ್ಲಿ ಒಬ್ಬನು ಎಲೀಷನಿಗೆ, “ನೀವು ದಯಮಾಡಿ ನಿಮ್ಮ ಸೇವಕರ ಸಂಗಡ ಬರುವಿರಾ?” ಎಂದನು. ಅದಕ್ಕವನು, “ನಾನು ಬರುತ್ತೇನೆ,” ಎಂದನು.
အချို့ကလည်း မငြင်းပါနှင့်။ ကိုယ်တော် ကျွန် တို့နှင့် ကြွတော်မူပါဟု တောင်းပန်လျှင်၊ ငါသွားမည်ဟု ဝန်ခံသည်အတိုင်း၊
4 ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನ್ ನದಿಯ ಕಡೆಗೆ ಬಂದು ಅಲ್ಲಿ ಮರಗಳನ್ನು ಕಡಿದರು.
သူတို့နှင့်အတူ လိုက်လေ၏။ ယော်ဒန်မြစ်နား သို့ ရောက်သောအခါ သစ်သားကိုခုတ်ကြ၏။
5 ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.
တယောက်သောသူသည် ခုတ်စဉ်တွင်၊ ရေထဲသို့ ပုဆိန်ကျ၏။ ခုတ်သောသူကလည်း၊ ခက်လှပြီသခင်။ ထိုပုဆိန်သည် ငှါးခဲ့သောဥစ္စာ ဖြစ်ပါ၏ဟု အော်ဟစ် လျှင်၊
6 ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು.
ဘုရားသခင်၏လူက၊ အဘယ်မှာ ကျသနည်းဟု မေးသော်၊ ကျရာအရပ်ကိုပြပြီးမှ၊ ဒုတ်ကိုခုတ်၍ ထိုအရပ်၌ချသဖြင့် ပုဆိန်သည် ပေါလောနေ၏။
7 ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
ဆယ်ယူလော့ဟု ဧလိရှဲဆိုသည်အတိုင်း၊ တပည့် သည် လက်ကို ဆန့်၍ ဆယ်ယူ၏။
8 ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
တဖန် ရှုရိရှင်ဘုရင်သည် ဣသရေလပြည်ကို စစ်တိုက်၍၊ ဤမည်သောအရပ်၊ ဤမည်သောအရပ်၌ ငါတို့သည် တပ်ချကြ ကုန်အံ့ဟု ကျွန်တို့နှင့် တိုင်ပင်သောအခါ၊
9 ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.
ဘုရားသခင်၏လူသည် ဣသရေလရှင်ဘုရင် ထံသို့ လူကိုစေလွှတ်၍၊ဤမည်သောအရပ်ကို သတိပြုပါ။ ထိုအရပ်သို့ ရှုရိလူတို့သည် လာကြပြီဟု၊
10 ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ, ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿ ಕಳುಹಿಸಿ, ತನ್ನ ಸೈನ್ಯವನ್ನು ಕರೆಯಿಸಿಕೊಂಡನು. ಹೀಗೆ ಅವನು ಹಲವು ಸಾರಿ ತಪ್ಪಿಸಿಕೊಂಡನು.
၁၀သတိပေးသောအရပ်သို့ ဣသရေလရှင်ဘုရင် သည် လူကိုစေလွှတ်၍ တကြိမ်နှစ်ကြိမ်မက ရန်သူတို့ကို ရှောင်လေ၏။
11 ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು.
၁၁ထိုအကြောင်းကြောင့် ရှုရိရှင်ဘုရင်သည် စိတ် ပူပန်၍ ကျွန်တို့ကို ခေါ်ပြီးလျှင်၊ ငါတို့တွင် အဘယ်သူ သည် ဣသရေလရှင်ဘုရင်ဘက်၌ နေသည်ကို ငါ့အား မပြဘဲနေကြသနည်းဟုမေးသော်၊
12 ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.
၁၂ကျွန်တယောက်က၊ ထိုသို့မဟုတ်ပါ အရှင် မင်းကြီး၊ ကိုယ်တော်စက်တော်မူခန်းထဲ၌ မိန့်တော်မူသော စကားကိုပင်၊ ဣသရေလပြည်၌ရှိသော ပရောဖက်ဧလိရှဲ သည်၊ ဣသရေလရှင်ဘုရင်အား ပြန်ပြောတတ်ပါသည် ဟု လျှောက်လေ၏။
13 ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
၁၃ရှင်ဘုရင်ကလည်း၊ သူသည်အဘယ်အရပ်၌ ရှိသည်ကို သွား၍ ချောင်းကြည့်လော့။ သူ့ကို ဘမ်းဆီး စေခြင်းငှါ ငါစေလွှတ်မည်ဟု မိန့်တော်မူပြီးမှ၊ ဒေါသန်မြို့ ၌ ရှိပါသည်ဟု လျှောက်လေ၏။
14 ಆದ್ದರಿಂದ ಅರಾಮ್ಯರ ಅರಸನು ಅಲ್ಲಿಗೆ ಕುದುರೆಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
၁၄ထိုမြို့သို့မြင်းစီးသူရဲ၊ ရထားစီးသူရဲ၊ ဗိုလ်ခြေများ ကို စေလွှတ်သဖြင့်၊ ညဉ့်အခါရောက်၍ မြို့ကိုဝိုင်းကြ၏။
15 ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.
၁၅နံနက် စောစောဘုရားသခင့်လူ၏ ကျွန်သည် ထ၍ ပြင်သို့ ထွက်သောအခါ၊ မြင်းစီးသူရဲ၊ ရထားစီးသူရဲ၊ ဗိုလ်ခြေတို့သည် မြို့ကို ဝိုင်းလျက်ရှိကြသည်ဖြစ်၍၊ အိုသခင်၊ အဘယ်သို့ ပြုရပါမည်နည်းဟု မိမိသခင်အား ဆို၏။
16 ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.
၁၆ဧလိရှဲကမစိုးရိမ်နှင့်။ ငါတို့ဘက်၌ နေသော သူတို့သည် ရန်သူတို့ဘက်၌ နေသောသူတို့ထက်သာ၍ များကြသည်ဟု ဆိုလျက်၊
17 ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.
၁၇အိုထာဝရဘုရား၊ ဤသူသည် မြင်နိုင်မည် အကြောင်း သူ၏မျက်စိကို ဖွင့်တော်မူပါဟု ဆုတောင်း သည်အတိုင်း၊၊ ထာဝရဘုရားသည် ထိုလုလင်၏ မျက်စိကို ဖွင့်တော်မူသဖြင့်၊ ဧလိရှဲပတ်လည်၌ တတောင်လုံး သည်မီးမြင်း၊ မီးရထားနှင့်ပြည့်သည်ကို မြင်လေ၏။
18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.
၁၈ရှုရိလူတို့သည် ရောက်လာသောအခါ၊ ဧလိရှဲက၊ အိုထာဝရ ဘုရား၊ ဤသူတို့၏ မျက်စိမမြင်စေခြင်းငှါ၊ ဒဏ်ခတ်တော်မူပါဟု ဆုတောင်းသည်အတိုင်း၊ ဒဏ်ခတ် တော်မူ၏။
19 ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.
၁၉ဧလိရှဲကလည်း၊ ဤလမ်းမဟုတ်။ ဤမြို့လည်း မဟုတ်။ ငါ့နောက်သို့လိုက်ကြ။ သင်တို့ရှာသောသူရှိရာသို့ ငါပို့မည်ဟု ဆိုလျက်ရှမာရိမြို့သို့ ပို့လေ၏။
20 ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು.
၂၀မြို့ထဲသို့ရောက်ပြီးမှ ဧလိရှဲက၊ အိုထာဝရဘုရား၊ ဤသူတို့သည် မြင်နိုင်မည်အကြောင်း သူတို့၏ မျက်စိကို ဖွင့်တော်မူပါဟု ဆုတောင်းသည်အတိုင်း၊ သူတို့၏မျက်စိ ကို ဖွင့်တော်မူသဖြင့်၊ သူတို့သည် မြင်၍ ရှမာရိ မြို့ထဲမှာ ရှိသည်ဟု သိကြ၏။
21 ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.
၂၁ဣသရေလရှင်ဘုရင်ကလည်း၊ အဘ၊ ထိုသူတို့ကိုထားနှင့် သတ်ရပါမည်လောဟု ဧလိရှဲအားမေးလျှင်၊
22 ಅದಕ್ಕವನು, “ಸಂಹರಿಸಬೇಡ. ನೀನು ನಿನ್ನ ಖಡ್ಗದಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳದವರನ್ನು ಹೊಡೆಯುತ್ತೀಯೋ? ರೊಟ್ಟಿಯನ್ನೂ, ನೀರನ್ನೂ ಇವರ ಮುಂದೆ ಇಡು. ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ,” ಎಂದನು.
၂၂မသတ်ပါနှင့်။ ထားနှင့်ခုတ်လျက်၊ လေးနှင့် ပစ်လျက်စစ်တိုက်၍ ဘမ်းမိသောသူတို့ကို သတ်ရမည် လော။ သူတို့ရှေ့မှာ မုန့်နှင့်ရေကိုထည့် ၍သူတို့သည် စားသောက်ပြီးမှ၊ မိမိတို့သခင်ထံသို့ သွားပါစေဟု ဆိုလျှင်၊
23 ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.
၂၃များစွာသော စားစရာကို ပြင်ဆင်၍ စား သောက်စေပြီးမှ လွှတ်လိုက်သဖြင့်၊ သူတို့သည် မိမိတို့ သခင်ထံသို့ ပြန်သွားကြ၏။ ထိုနောက်မှ ရှုရိလူတို့သည် အလိုအလျောက်တပ်ဖွဲ့၍ ဣသရေလပြည်သို့ မလာကြ။
24 ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು.
၂၄နောက်တဖန်ရှုရိရှင်ဘုရင် ဗင်္ဟာဒဒ်သည် ဗိုလ်ခြေအပေါင်းကို စုဝေးစေသဖြင့် စစ်ချီ၍ ရှမာရိမြို့ကို ဝိုင်းထား၏။
25 ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.
၂၅ကြာမြင့်စွာဝိုင်းထားသောကြောင့်၊ ရှမာရိမြို့၌ အလွန်အစာခေါင်းပါး၍၊ မြည်းခေါင်းတလုံးကို ငွေ ရှစ်ဆယ်နှင့်၎င်း၊ ပဲကြမ်းတပြည်ကို ငွေငါးကျပ်နှင့်၎င်း ရောင်းရ၏။
26 ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು.
၂၆ဣသရေလရှင်ဘုရင်သည် မြို့ရိုးပေါ်မှာ ရှောက်သွားစဉ်၊ မိန်းမတယောက်ကအရှင်မင်းကြီး၊ ကယ်မတော်မူပါဟု အော်ဟစ်၏။
27 ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.
၂၇ရှင်ဘုရင်က၊ ထာဝရဘုရားကယ်မတော်မမူ လျှင်၊ ငါသည် အဘယ်သို့ ကယ်မနိုင်မည်နည်း။ စပါးနယ်ရာတလင်း၊ စပျစ်သီးနယ်ရာ ကျင်းထဲက ကယ်မနိုင်မည်လောဟူ၍၎င်း၊
28 ಅರಸನು ಅವಳಿಗೆ, “ನಿನ್ನ ದುಃಖವೇನು?” ಎಂದನು. ಅದಕ್ಕವಳು, “ಈ ಸ್ತ್ರೀಯು ನನಗೆ ಹೇಳಿದ್ದೇನೆಂದರೆ, ‘ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು, ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದಳು.
၂၈သင်၌ အဘယ်သို့ ဖြစ်သနည်းဟူ၍၎င်း မေးလျှင်၊ မိန်းမက၊ ဤမိန်းမသည်ကျွန်မဆီသို့လာ၍၊ သင့်သားကို ယနေ့ငါတို့စားဘို့အပ်ပါ။ နက်ဖြန်နေ့၌ ငါ့သားကို စားရမည်ဟုဆိုသည်အတိုင်း၊
29 ಹಾಗೆಯೇ ನಾವು ನನ್ನ ಮಗನನ್ನು ಬೇಯಿಸಿ ಅವನನ್ನು ತಿಂದೆವು. ಮಾರನೆಯ ದಿವಸದಲ್ಲಿ ನಾನು ಅವಳಿಗೆ, ‘ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು,’ ಎಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ,” ಎಂದಳು.
၂၉ကျွန်မ၏သားကို ပြုတ်၍စားကြပါ၏။ နက်ဖြန် နေ့၌ ကျွန်မက၊ သင်၏သားကို ငါတို့စားဘို့ အပ်ပါဟု တောင်းသော်၊ သူသည် မိမိသားကို ဝှက်ထားပါသည်ဟု လျှောက်လေ၏။
30 ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು.
၃၀ရှင်ဘုရင်သည် ထိုမိန်းမ၏စကားကို ကြားလျှင်၊ မိမိအဝတ်ကို ဆုတ်လေ၏။ မြို့ရိုးပေါ်မှာ ရှောက်သွားစဉ် လူတို့သည်ကြည့်၍၊ အတွင်း၌ လျှော်တေအဝတ်ဖြင့် ဝတ်တော်မူကြောင်းကိုသိမြင်ရကြ၏။
31 ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.
၃၁ရှင်ဘုရင်ကလည်း၊ ရှာဖတ်သားဧလိရှဲ၏ ဦးခေါင်းသည် ယနေ့ သူ့ကိုယ်နှင့် မကွာဘဲနေလျှင်၊ ထာဝရဘုရားသည် ထိုမျှမက၊ ငါ၌ပြုတော်မူပါစေသော ဟု ဆို၏။
32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.
၃၂ဧလိရှဲသည် မိမိအိမ်၌ထိုင်၍ အသက်ကြီးသူတို့ သည် သူနှင့်အတူ ထိုင်ကြစဉ်၊ ရှင်ဘုရင်သည် မိမိရှေ့မှာ လူတယောက်ကို စေလွှတ်၏။ ထိုတမန်မရောက်မှီ ဧလိရှဲက၊ လူသတ်၏သားသည် ငါ့လည်ပင်းကို ဖြတ်စေ ခြင်းငှါ၊ စေလွှတ်သည်ကို သိမြင်ကြသလော။ ထိုတမန် ရောက်သောအခါ၊ တံခါးကိုပိတ်၍၊ တံခါးနားမှာသူ့ကို ဆီးတားကြလော့။ သူ့နောက်မှာသူ့သခင် ခြေသံမမြည် သလောဟု၊
33 ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.
၃၃အသက်ကြီးသူတို့အား ပြောစဉ်တွင်၊ ထိုတမန် သည် ရောက်လာ၏။ ရှင်ဘုရင်ကိုယ်တိုင် ရောက်လျှင်၊ ဤအမှုသည် ထာဝရဘုရားစီရင်သော အမှုဖြစ်၏။ ထာဝရဘုရားကျေးဇူးကို အဘယ်ကြောင့် မြော်လင့် ရသေးသနည်းဟုဆိုသော်၊

< ಅರಸುಗಳು - ದ್ವಿತೀಯ ಭಾಗ 6 >