< ಅರಸುಗಳು - ದ್ವಿತೀಯ ಭಾಗ 9 >

1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.
तब एलीशा भविष्यद्वक्ता ने भविष्यद्वक्ताओं के दल में से एक को बुलाकर उससे कहा, “कमर बाँध, और हाथ में तेल की यह कुप्पी लेकर गिलाद के रामोत को जा।
2 ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,
और वहाँ पहुँचकर येहू को जो यहोशापात का पुत्र और निमशी का पोता है, ढूँढ़ लेना; तब भीतर जा, उसको खड़ा कराकर उसके भाइयों से अलग एक भीतर कोठरी में ले जाना।
3 ಎಣ್ಣೆಯ ಪಾತ್ರೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನಿಗೆ, ‘ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂಬುದಾಗಿ ಹೇಳು. ಅನಂತರ ಕದವನ್ನು ತೆರೆದು ತಡಮಾಡದೆ ಓಡಿಹೋಗು,” ಎಂದನು.
तब तेल की यह कुप्पी लेकर तेल को उसके सिर पर यह कहकर डालना, ‘यहोवा यह कहता है, कि मैं इस्राएल का राजा होने के लिये तेरा अभिषेक कर देता हूँ।’ तब द्वार खोलकर भागना, विलम्ब न करना।”
4 ಹಾಗೆಯೇ ಯೌವನಸ್ಥನಾದ ಪ್ರವಾದಿಯು ಗಿಲ್ಯಾದಿನ ರಾಮೋತಿಗೆ ಹೋದನು.
अतः वह जवान भविष्यद्वक्ता गिलाद के रामोत को गया।
5 ಅವನು ಅಲ್ಲಿ ಸೇರಿದಾಗ, ಅಲ್ಲಿ ಯೇಹುವು ಮತ್ತು ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು, “ಅಧಿಪತಿಯೇ, ನಿನಗೊಂದು ಮಾತು ಹೇಳುವುದಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಅಧಿಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.
वहाँ पहुँचकर उसने क्या देखा, कि सेनापति बैठे हुए हैं; तब उसने कहा, “हे सेनापति, मुझे तुझ से कुछ कहना है।” येहू ने पूछा, “हम सभी में किस से?” उसने कहा, “हे सेनापति, तुझी से!”
6 ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.
तब वह उठकर घर में गया; और उसने यह कहकर उसके सिर पर तेल डाला, “इस्राएल का परमेश्वर यहोवा यह कहता है, मैं अपनी प्रजा इस्राएल पर राजा होने के लिये तेरा अभिषेक कर देता हूँ।
7 ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.
तो तू अपने स्वामी अहाब के घराने को मार डालना, जिससे मुझे अपने दास भविष्यद्वक्ताओं के वरन् अपने सब दासों के खून का जो ईजेबेल ने बहाया, बदला मिले।
8 ಅಹಾಬನ ಮನೆಯೆಲ್ಲಾ ನಾಶವಾಗುವುದು. ಇಸ್ರಾಯೇಲಿನಲ್ಲಿ ಉಳಿದಿರುವ ಅಹಾಬನ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮರಾಗಲಿ ಎಲ್ಲರನ್ನೂ ತೆಗೆದುಹಾಕುವೆನು.
क्योंकि अहाब का समस्त घराना नाश हो जाएगा, और मैं अहाब के वंश के हर एक लड़के को और इस्राएल में के क्या बन्दी, क्या स्वाधीन, हर एक का नाश कर डालूँगा।
9 ಅಹಾಬನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು.
और मैं अहाब का घराना नबात के पुत्र यारोबाम का सा, और अहिय्याह के पुत्र बाशा का सा कर दूँगा।
10 ಇದಲ್ಲದೆ ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳನ್ನು ತಿಂದುಬಿಡುವುವು; ಅವಳ ಶವವನ್ನು ಸಮಾಧಿಮಾಡಲು ಯಾವನೂ ಇರುವುದಿಲ್ಲ,” ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
१०और ईजेबेल को यिज्रेल की भूमि में कुत्ते खाएँगे, और उसको मिट्टी देनेवाला कोई न होगा।” तब वह द्वार खोलकर भाग गया।
11 ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.
११तब येहू अपने स्वामी के कर्मचारियों के पास निकल आया, और एक ने उससे पूछा, “क्या कुशल है, वह बावला क्यों तेरे पास आया था?” उसने उनसे कहा, “तुम को मालूम होगा कि वह कौन है और उससे क्या बातचीत हुई।”
12 ಅದಕ್ಕವರು, “ಅದು ಸುಳ್ಳು, ದಯಮಾಡಿ ನಮಗೆ ತಿಳಿಸು,” ಎಂದರು. ಆದ್ದರಿಂದ ಅವನು, “ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆಂಬುದಾಗಿ ಯೆಹೋವ ದೇವರು ಹೇಳುತ್ತಾರೆಂದು ಹೀಗೆ ನನಗೆ ಹೇಳಿದನು,” ಎಂದನು.
१२उन्होंने कहा, “झूठ है, हमें बता दे।” उसने कहा, “उसने मुझसे कहा तो बहुत, परन्तु मतलब यह है ‘यहोवा यह कहता है कि मैं इस्राएल का राजा होने के लिये तेरा अभिषेक कर देता हूँ।’”
13 ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.
१३तब उन्होंने झट अपना-अपना वस्त्र उतार कर उसके नीचे सीढ़ी ही पर बिछाया, और नरसिंगे फूँककर कहने लगे, “येहू राजा है।”
14 ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.
१४यह येहू जो निमशी का पोता और यहोशापात का पुत्र था, उसने योराम से राजद्रोह की युक्ति की। (योराम तो सारे इस्राएल समेत अराम के राजा हजाएल के कारण गिलाद के रामोत की रक्षा कर रहा था;
15 ಆದರೆ ಅರಸನಾದ ಯೋರಾಮನು ಅರಾಮಿನ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ, ಅರಾಮ್ಯರು ತನ್ನನ್ನು ಹೊಡೆದ ಗಾಯವನ್ನು ಸ್ವಸ್ಥಮಾಡಿಕೊಳ್ಳುವ ನಿಮಿತ್ತ ಇಜ್ರೆಯೇಲಿಗೆ ಹೋಗಿದ್ದನು. ಆಗ ಯೇಹುವು, “ನಿಮಗೆ ಮನಸ್ಸಿದ್ದರೆ ಇದನ್ನು ಇಜ್ರೆಯೇಲಿಗೆ ಹೋಗಿ ತಿಳಿಸಲು ಪಟ್ಟಣದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ,” ಎಂದನು.
१५परन्तु राजा योराम आप अपने घाव का जो अराम के राजा हजाएल से युद्ध करने के समय उसको अरामियों से लगे थे, उनका इलाज कराने के लिये यिज्रेल को लौट गया था।) तब येहू ने कहा, “यदि तुम्हारा ऐसा मन हो, तो इस नगर में से कोई निकलकर यिज्रेल में सुनाने को न जाने पाए।”
16 ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
१६तब येहू रथ पर चढ़कर, यिज्रेल को चला जहाँ योराम पड़ा हुआ था; और यहूदा का राजा अहज्याह योराम के देखने को वहाँ आया था।
17 ಇಜ್ರೆಯೇಲ್ ಪಟ್ಟಣದ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕೆ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.
१७यिज्रेल के गुम्मट पर, जो पहरुआ खड़ा था, उसने येहू के संग आते हुए दल को देखकर कहा, “मुझे एक दल दिखता है;” योराम ने कहा, “एक सवार को बुलाकर उन लोगों से मिलने को भेज और वह उनसे पूछे, ‘क्या कुशल है?’”
18 ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು.
१८तब एक सवार उससे मिलने को गया, और उससे कहा, “राजा पूछता है, ‘क्या कुशल है?’” येहू ने कहा, “कुशल से तेरा क्या काम? हटकर मेरे पीछे चल।” तब पहरुए ने कहा, “वह दूत उनके पास पहुँचा तो था, परन्तु लौटकर नहीं आया।”
19 ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.
१९तब उसने दूसरा सवार भेजा, और उसने उनके पास पहुँचकर कहा, “राजा पूछता है, ‘क्या कुशल है?’” येहू ने कहा, “कुशल से तेरा क्या काम? हटकर मेरे पीछे चल।”
20 ಆಗ ಕಾವಲುಗಾರನು, “ಇವನೂ ಅವರ ಬಳಿಗೆ ಹೋಗಿ ತಿರುಗಿ ಬರಲಿಲ್ಲ. ಇದಲ್ಲದೆ ರಥವನ್ನು ಓಡಿಸುವುದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ, ಏಕೆಂದರೆ ಅವನು ಹುಚ್ಚನಂತೆ ಓಡಿಸುತ್ತಿದ್ದಾನೆ,” ಎಂದನು.
२०तब पहरुए ने कहा, “वह भी उनके पास पहुँचा तो था, परन्तु लौटकर नहीं आया। हाँकना निमशी के पोते येहू का सा है; वह तो पागलों के समान हाँकता है।”
21 ಯೋರಾಮನು, “ನನ್ನ ರಥವನ್ನು ಸಿದ್ಧಮಾಡು,” ಎಂದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ, ಯೆಹೂದದ ಅರಸನಾದ ಅಹಜ್ಯನೂ ಹೊರಟು, ಅವರವರು ತಮ್ಮ ತಮ್ಮ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು, ಇಜ್ರೆಯೇಲಿನವನಾದ ನಾಬೋತನಿಗೆ ಸಂಬಂಧಿಸಿದ ಸ್ಥಳದಲ್ಲಿ ಅವನನ್ನು ಸಂಧಿಸಿದರು.
२१योराम ने कहा, “मेरा रथ जुतवा।” जब उसका रथ जुत गया, तब इस्राएल का राजा योराम और यहूदा का राजा अहज्याह, दोनों अपने-अपने रथ पर चढ़कर निकल गए, और येहू से मिलने को बाहर जाकर यिज्रेल नाबोत की भूमि में उससे भेंट की।
22 ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.
२२येहू को देखते ही योराम ने पूछा, “हे येहू क्या कुशल है,” येहू ने उत्तर दिया, “जब तक तेरी माता ईजेबेल छिनालपन और टोना करती रहे, तब तक कुशल कहाँ?”
23 ಆಗ ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ದ್ರೋಹ!” ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
२३तब योराम रास फेर के, और अहज्याह से यह कहकर भागा, “हे अहज्याह विश्वासघात है, भाग चल।”
24 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.
२४तब येहू ने धनुष को कान तक खींचकर योराम के कंधों के बीच ऐसा तीर मारा, कि वह उसका हृदय फोड़कर निकल गया, और वह अपने रथ में झुककर गिर पड़ा।
25 ಆಗ ಯೇಹುವು ತನ್ನ ಅಧಿಪತಿಯಾದ ಬಿದ್ಕಾರನಿಗೆ, “ನೀನು ಅವನನ್ನು ತೆಗೆದುಕೊಂಡುಹೋಗಿ ಇಜ್ರೆಯೇಲಿನವನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ಏಕೆಂದರೆ ನಾನೂ, ನೀನೂ ಅವನ ತಂದೆಯಾದ ಅಹಾಬನ ಹಿಂದೆ ರಥವನ್ನು ಏರಿಕೊಂಡು ಹೋಗುತ್ತಿರುವಾಗ, ಯೆಹೋವ ದೇವರು ಈ ಪ್ರವಾದನೆಯನ್ನು ಅವನ ಬಗ್ಗೆ ತಿಳಿಸಿದರೆಂದು ಜ್ಞಾಪಕಮಾಡಿಕೋ.
२५तब येहू ने बिदकर नामक अपने एक सरदार से कहा, “उसे उठाकर यिज्रेली नाबोत की भूमि में फेंक दे; स्मरण तो कर, कि जब मैं और तू, हम दोनों एक संग सवार होकर उसके पिता अहाब के पीछे-पीछे चल रहे थे तब यहोवा ने उससे यह भारी वचन कहलवाया था,
26 ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.
२६‘यहोवा की यह वाणी है, कि नाबोत और उसके पुत्रों का जो खून हुआ, उसे मैंने देखा है, और यहोवा की यह वाणी है, कि मैं उसी भूमि में तुझे बदला दूँगा।’ तो अब यहोवा के उस वचन के अनुसार इसे उठाकर उसी भूमि में फेंक दे।”
27 ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
२७यह देखकर यहूदा का राजा अहज्याह बारी के भवन के मार्ग से भाग चला। और येहू ने उसका पीछा करके कहा, “उसे भी रथ ही पर मारो;” तो वह भी यिबलाम के पास की गूर की चढ़ाई पर मारा गया, और मगिद्दो तक भागकर मर गया।
28 ಅವನ ಸೇವಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ, ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು.
२८तब उसके कर्मचारियों ने उसे रथ पर यरूशलेम को पहुँचाकर दाऊदपुर में उसके पुरखाओं के बीच मिट्टी दी।
29 ಅಹಾಬನ ಮಗ ಯೋರಾಮನ ಹನ್ನೊಂದನೆಯ ವರ್ಷದಲ್ಲಿ ಅಹಜ್ಯನು ಯೆಹೂದದ ಅರಸನಾಗಿದ್ದನು.
२९अहज्याह तो अहाब के पुत्र योराम के राज्य के ग्यारहवें वर्ष में यहूदा पर राज्य करने लगा था।
30 ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.
३०जब येहू यिज्रेल को आया, तब ईजेबेल यह सुन अपनी आँखों में सुरमा लगा, अपना सिर संवारकर, खिड़की में से झाँकने लगी।
31 ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು.
३१जब येहू फाटक में होकर आ रहा था तब उसने कहा, “हे अपने स्वामी के घात करनेवाले जिम्री, क्या कुशल है?”
32 ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.
३२तब उसने खिड़की की ओर मुँह उठाकर पूछा, “मेरी ओर कौन है? कौन?” इस पर दो तीन खोजों ने उसकी ओर झाँका।
33 ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.
३३तब उसने कहा, “उसे नीचे गिरा दो।” अतः उन्होंने उसको नीचे गिरा दिया, और उसके लहू के कुछ छींटे दीवार पर और कुछ घोड़ों पर पड़े, और उन्होंने उसको पाँव से लताड़ दिया।
34 ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.
३४तब वह भीतर जाकर खाने-पीने लगा; और कहा, “जाओ उस श्रापित स्त्री को देख लो, और उसे मिट्टी दो; वह तो राजा की बेटी है।”
35 ಅವರು ಅವಳನ್ನು ಹೂಳಿಡಲು ಹೋದಾಗ, ಅವಳ ತಲೆ ಬುರುಡೆಯೂ, ಕಾಲುಗಳೂ, ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಆದ್ದರಿಂದ ಅವರು ತಿರುಗಿಬಂದು ಅವನಿಗೆ ತಿಳಿಸಿದರು.
३५जब वे उसे मिट्टी देने गए, तब उसकी खोपड़ी पाँवों और हथेलियों को छोड़कर उसका और कुछ न पाया।
36 ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.
३६अतः उन्होंने लौटकर उससे कह दिया; तब उसने कहा, “यह यहोवा का वह वचन है, जो उसने अपने दास तिशबी एलिय्याह से कहलवाया था, कि ईजेबेल का माँस यिज्रेल की भूमि में कुत्ते खाएँगे।
37 ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.
३७और ईजेबेल का शव यिज्रेल की भूमि पर खाद के समान पड़ा रहेगा, यहाँ तक कि कोई न कहेगा, ‘यह ईजेबेल है।’”

< ಅರಸುಗಳು - ದ್ವಿತೀಯ ಭಾಗ 9 >