< ಸಮುವೇಲನು - ದ್ವಿತೀಯ ಭಾಗ 10 >

1 ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.
ထိုနောက် အမ္မုန်ရှင်ဘုရင်သည် သေ၍ သားတော်ဟာနုန်သည် ခမည်းတော်အရာ၌ နန်းထိုင်၏။
2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.
ဒါဝိဒ်ကလည်း၊ ဟာနုန်အဘနာဟတ်သည် ငါ့အား ကျေးဇူးပြုသောကြောင့်၊ သူ၏သား၌ ကျေးဇူးပြုမည်ဟုဆိုလျက်၊ သူ၏အဘသေရာတွင် နှစ်သိမ့်စေခြင်းငှါ ကျွန်တို့ကို စေလွှတ်၍၊ ဒါဝိဒ်၏ကျွန်တို့သည် အမ္မုန်ပြည်သို့ရောက်ကြ၏။
3 ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.
အမ္မုန်အမျိုး မှူးမတ်တို့သည် မိမိတို့အရှင် ဟာနုန်ထံသို့ဝင်၍၊ ဒါဝိဒ်သည် စိတ်တော်ကို နှစ်သိမ့်စေ သော သူတို့ကိုစေလွှတ်ရာတွင် ခမည်းတော်ကို ရိုသေစွာပြုသည်ဟု ထင်မှတ်တော်မူသလော။ မြို့တော်ကိုစစ်ဆေးစူစမ်း၍ ဖျက်ဆီးခြင်း ငှာသာသူ၏ကျွန်တို့ကိုစေလွှတ်သည် မဟုတ်လောဟု လျှောက်ကြ သော်။
4 ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
ဟာနုန်သည် ဒါဝိဒ်၏ကျွန်တို့ကို ယူပြီးလျှင်၊ မုတ်ဆိတ်တခြမ်းကိုရိတ်၍ အဝတ်ကိုတင်ပါးတိုင်အောင် ဖြတ်ပြီးမှ လွှတ်လိုက်လေ၏။
5 ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು.
ထိုသိတင်းကို ဒါဝိဒ်သည်ကြားသောအခါ၊ ထိုလူတို့သည် အလွန်ရှက်သောကြောင့် သူတို့ကို ဆီးကြိုစေခြင်းငှါ စေလွှတ်၍၊ သင်တို့သည် မုတ်ဆိတ်မရှည်မှီတိုင်အောင် ယေရိခေါမြို့မှာ နေကြလော့။ ထိုနောက်မှပြန်လာကြလော့ဟု မှာထားတော်မူ၏။
6 ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
အမ္မုန်အမျိုးသားတို့က၊ ငါတို့သည်ဒါဝိဒ်ရှေ့မှာ စက်ဆုပ်ရွံရှာဘွယ် ဖြစ်လိမ့်မည်ဟု သိလျှင်၊ လူကို စေလွှတ်၍ ဗက်ရဟောဘမြို့နှင့် ဇောဘမြို့၌နေသော ရှုရိလူခြေသည် သူရဲနှစ်သောင်း၊ မာခမင်းကြီး၏ လူ တထောင်၊ တောဘမြို့သား တသောင်းနှစ်ထောင်တို့ကို ငှားကြ၏။
7 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
ထိုသိတင်းကို ဒါဝိဒ်သည်ကြားလျှင် ယွာဘနှင့် ခွန်အားကြီးသောသူရဲအလုံးအရင်းအပေါင်းကို စေလွှတ် ၏။
8 ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
အမ္မုန်အမျိုးသားတို့သည် ထွက်၍မြို့တံခါးဝမှာ စစ်ခင်းကျင်းကြ၏။ ဇောဘမြို့၊ ရဟောဘမြို့၊ တောဘ မြို့မှလာသော ရှုရိလူနှင့် မာခါမင်းကြီး၏ လူတို့သည် လွင်ပြင်၌ တခြားစီနေကြ၏။
9 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
ယွာဘသည်လည်း၊ ရှေ့၌၎င်း၊ နောက်၌၎င်း စစ်မျက်နှာနှစ်ဘက်ရှိသည်ကိုမြင်လျှင်၊ ဣသရေလလူတို့ တွင် သန်မြန်သောသူရှိသမျှတို့ကို ရွေးကောက်၍ ရှုရိလူ တို့ တဘက်၌စစ်ခင်းကျင်း၏။
10 ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
၁၀ကြွင်းသောသူတို့ကို အမ္မုန်အမျိုးသားတို့တဘက်၌ စစ်ခင်းကျင်း စေခြင်းငှါ၊ ညီအဘိရှဲလက်သို့ အပ်လျက်၊
11 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
၁၁ရှုရိလူတို့သည် ငါ့ကိုနိုင်လျှင် ငါအားကူရမည်။ အမ္မုန်အမျိုးသားတို့သည် သင့်ကိုနိုင်လျှင် သင့်အား ငါကူမည်။
12 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
၁၂ရဲရင့်သောစိတ်ရှိ၍ ငါတို့လူမျိုး၊ ငါတို့ဘုရားသခင့်မြို့ရွာတို့အဘို့ အားထုတ်၍ တိုက်ကြကုန်အံ့။ ထာဝရဘုရားသည် အလိုတော်ရှိသည် အတိုင်းစီရင်တော် မူစေသတည်းဟု ဆိုပြီးမှ၊
13 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
၁၃သူ၌ပါသောလူများနှင့်တကွ ရှုရိလူတို့ကို စစ်တိုက်ခြင်းငှါ ချဉ်းသွားသောအခါ၊ ရှုရိလူတို့သည် ပြေးကြ၏။
14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.
၁၄ရှုရိလူတို့ပြေးသည်ကို အမ္မုန်အမျိုးသားတို့သည် မြင်လျှင်၊ သူတို့သည်လည်း အဘိရှဲရှေ့မှာပြေး၍ မြို့ထဲသို့ ဝင်ကြ၏။ ယွာဘသည်လည်း အမ္မုန်ပြည်မှ ထွက်၍ ယေရုရှလင်မြို့သို့ ပြန်သွားလေ၏။
15 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.
၁၅ရှုရိလူတို့သည် ဣသရေလအမျိုးသားရှေ့မှာ မိမိတို့ရှုံးသည်ကို သိမြင်လျှင် တဖန်စည်းဝေးကြ၏။
16 ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
၁၆ဟာဒဒေဇာမင်းသည်လည်း စေလွှတ်၍၊ မြစ်တဘက်၌နေသော ရှုရိလူတို့ကိုခေါ်သဖြင့်၊ သူတို့သည် ဟေလံမြို့သို့ရောက်လာကြ၏။ ဟာဒဒေဇာခန့်ထားသော ဗိုလ်ချုပ်မင်းရှောဗက်သည်လည်း အုပ်ရ၏။
17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.
၁၇ထိုသိတင်းကိုကြားလျှင်၊ ဒါဝိဒ်သည် ဣသရေလအမျိုးသားအပေါင်းတို့ကို စုဝေးစေ၍၊ ယော်ဒန်မြစ် ကို ကူးသဖြင့် ဟေလံမြို့သို့ ရောက်လေ၏။ ရှုရိလူတို့သည် ဒါဝိဒ်တဘက်၌ စစ်ခင်းကျင်း၍ တိုက်သောအခါ၊
18 ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.
၁၈ဣသရေလအမျိုးသားရှေ့မှာ ပြေးကြ၏။ ဒါဝိဒ်သည်လည်း ရှုရိမြင်းရထားစီးသူရဲခုနစ်ထောင်၊ ခြေသည် သူရဲလေးသောင်းတို့ကို သတ်၍၊ ဗိုလ်ချုပ်မင်းရှောဗက် ကိုလည်း ထိခိုက်သဖြင့် သူသည် ထိုအရပ်၌ သေ၏။
19 ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.
၁၉ဟာဒဒေဇာ၌ ကျွန်ခံသောမင်းကြီးအပေါင်းတို့သည် ဣသရေလအမျိုးနှင့် မိဿဟာယဖွဲ့၍ ကျွန်ခံ ကြ၏။ ထိုသို့ ရှုရိလူတို့သည် နောက်တဖန် အမ္မုန်အမျိုးသားတို့ကို စစ်မကူဝံ့ကြ။

< ಸಮುವೇಲನು - ದ್ವಿತೀಯ ಭಾಗ 10 >