< ಸಮುವೇಲನು - ದ್ವಿತೀಯ ಭಾಗ 11 >
1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
जब वसन्त काल में राजा लोग युद्ध करने निकलते थे, दावीद ने योआब, उनके अधीनस्थ अधिकारियों और सारे इस्राएली सेना को युद्ध के लिए भेज दिया. उन्होंने अम्मोनियों का नाश कर दिया और रब्बाह पर अधिकार कर लिया. मगर दावीद येरूशलेम में ही रह गए थे.
2 ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.
एक दिन, शाम के समय में, जब दावीद अपने बिछौने से उठकर राजमहल की छत पर टहल रहे थे, वहां से उन्हें स्नान करती हुई एक स्त्री दिखाई दी. वह स्त्री बहुत ही सुंदर थी.
3 ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.
दावीद ने किसी को भेजकर यह मालूम करवाया कि वह स्त्री कौन थी. उन्हें सूचित किया गया, “वह एलियाम, की पुत्री बैथशेबा है; हित्ती उरियाह की पत्नी.”
4 ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.
दावीद ने दूतों को भेजकर उसे बुलवा लिया. (इस समय वह अपने स्त्री-धर्म से शुद्ध हो चुकी थी.) वह दावीद के पास आ गई, और दावीद ने उसके साथ संबंध बनाया. इसके बाद वह अपने घर लौट गई.
5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.
वह गर्भवती हो गई. उसने दावीद को यह संदेश भेजा, “मैं गर्भवती हो गई हूं.”
6 ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.
यह मालूम होने पर दावीद ने योआब को यह संदेश भेजा, “हित्ती उरियाह को यहां भेज दो.” योआब ने उरियाह को दावीद के पास भेज दिया.
7 ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.
जब उरियाह दावीद के सामने उपस्थित हुआ. दावीद ने उससे योआब का हाल-चाल मालूम किया, सैनिकों और युद्ध की स्थिति भी मालूम की.
8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.
उसके बाद दावीद ने उरियाह को आदेश दिया, “अब तुम अपने घर चले जाओ.” राजा की ओर से उसके पीछे-पीछे उसके लिए उपहार भी भेजा गया.
9 ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.
मगर उरियाह राजमहल के द्वार के निकट ही उसके स्वामी के सभी सेवकों के सोने के स्थान पर सो गया, और वह अपने घर नहीं गया.
10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.
जब दावीद को यह बताया गया, “उरियाह तो अपने घर गया ही नहीं.” दावीद ने उरियाह से पूछा, “तुम यात्रा से लौटे हो, तो तुम अपने घर क्यों नहीं गए?”
11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.
उरियाह ने उन्हें उत्तर दिया, “संदूक, इस्राएल और यहूदिया की सेना मैदान में तंबू में ठहरे हुए हैं, और योआब मेरे स्वामी और मेरे स्वामी के सैनिक मैदान में शिविर डाले हुए हैं, तब क्या यह मेरे लिए सही है कि मैं अपने घर जाऊं, और खा-पीकर अपनी पत्नी के साथ सो जाऊं? आपकी और आपके प्राणों की शपथ, मुझसे वह सब हो ही नहीं सकता!”
12 ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.
यह सुन दावीद ने उससे कहा, “आज भी यहां ठहरो, मैं तुम्हें कल विदा कर दूंगा.” तब उरियाह येरूशलेम में एक दिन और ठहर गया.
13 ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.
तब दावीद ने उसे आमंत्रित किया. उसने दावीद के साथ भोजन किया और दावीद उसे मदोन्मत होने तक दाखमधु पिलाई. संध्याकाल में उरियाह वहां से निकलकर अपने स्वामी के सेवकों के लिए निर्धारित स्थान पर अपने बिछौने पर जाकर सो गया, मगर अपने घर नहीं गया.
14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.
प्रातः दावीद ने योआब को एक पत्र लिखा और उसे उरियाह के ही हाथ से भेज दिया.
15 ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.
दावीद ने पत्र में लिखा था, “उरियाह को ऐसे मोर्चे पर भेज दो, जहां युद्ध सबसे तेज हो और फिर उसे वहां अकेला छोड़ पीछे हट जाना, कि उस पर शत्रुओं का वार हो और वहीं उसकी मृत्यु हो जाए.”
16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.
जब योआब नगर पर घेरा डाल रहे थे, उन्हें मालूम था कि किस स्थान पर शत्रु के सबसे अधिक बलवान सैनिक युद्ध कर रहे थे, तब उन्होंने उरियाह को उसी स्थान पर युद्ध करने के लिए आदेश दिया.
17 ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.
नगर के शूर योद्धा योआब से युद्ध करने निकल आए. दावीद के कुछ सैनिक इस हमले से घात किए गए, हित्ती उरियाह भी इसमें मारा गया.
18 ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ:
योआब ने दावीद को युद्ध का विस्तृत समाचार भेज दिया.
19 “ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,
योआब ने दूत को ये विशेष निर्देश दिए, “जब तुम राजा को युद्ध का विस्तृत लेखा दे चुको,
20 ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?
तब यदि राजा गुस्सा होते दिखे और यदि वह तुमसे पूछे, ‘तुम लोग युद्ध करते हुए नगर के इतने निकट क्यों जा पहुंचे थे? क्या तुम्हें इतनी भी बुद्धि न थी कि वे लोग तुम पर शहरपनाह से बाण चलाएंगे?
21 ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.
येरूब-बाशेथ का पुत्र अबीमेलेक किसके वार से मारा गया था? क्या, एक स्त्री ने ही उस पर शहरपनाह से चक्की का ऊपरी पाट नहीं फेंका था और वह तेबेज़ में इसी प्रकार मारा नहीं गया था? तुम लोग शहरपनाह के इतने निकट गए ही क्यों?’ तब तुम्हें उत्तर देना होगा, ‘महाराज, इसी में आपके सेवक हित्ती उरियाह की भी मृत्यु हो गई है.’”
22 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.
तब दूत चला गया. उसने आकर दावीद को वह सब सुना दिया, जिसे सुनाने का आदेश उसे योआब ने दिया था.
23 ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.
दूत ने दावीद से कहा, “शत्रु सैनिक हम पर प्रबल हो गए थे. वे हम पर हमला करने मैदान तक आ गए, मगर हमने उन्हें नगर प्रवेश तक धकेल दिया.
24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.
इसके बाद धनुर्धारियों ने शहरपनाह से हमारी सेना पर बाणों की बौछार कर दी. राजा के कुछ सैनिक इसमें मारे गए. उन्हीं में आपका सेवक हित्ती उरियाह भी था.”
25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.
दावीद ने दूत को यह आदेश दिया, “तुम्हें जाकर योआब से यह कहना होगा: ‘तुम इस बात से उदास न होना, क्योंकि तलवार तो किसी को आज मारती है तो किसी को कल. इस नगर पर अपना हमला और अधिक प्रबल कर दो कि, नगर नष्ट कर दिया जाए,’ तुम यह कहकर योआब को प्रोत्साहित कर देना.”
26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.
जब उरियाह की पत्नी को यह मालूम हुआ कि उसके पति की मृत्यु हो गई है, वह अपने पति के लिए रोने लगी.
27 ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.
जब विलाप के लिए निर्धारित अवधि पूरी हो गई, दावीद ने उसे अपने पास बुलवा लिया कि वह उसकी पत्नी बन जाए. मगर दावीद के इस काम ने याहवेह को अप्रसन्न कर दिया.