< ಸಮುವೇಲನು - ದ್ವಿತೀಯ ಭಾಗ 13 >

1 ಕಾಲಾಂತರದಲ್ಲಿ ದಾವೀದನ ಮಗ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸುಂದರಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗ ಅಮ್ನೋನನು ಪ್ರೀತಿಮಾಡಿದನು.
दावीद के अबशालोम नामक पुत्र की अत्यंत रूपवती बहन थी, जिसका नाम तामार था. अम्मोन नामक दावीद के अन्य पुत्र को तामार से प्रेम हो गया.
2 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
अम्मोन अपनी बहन के कारण इतना अधिक निराश हो गया कि वह रोगी रहने लगा. उसके साथ कुछ करना अम्मोन को कठिन जान पड़ता था. तामार अब तक कुंवारी थी.
3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು.
दावीद के भाई सिमअह का योनादाब नामक पुत्र था, जो अम्मोन का मित्र था. वह एक चतुर व्यक्ति था.
4 ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.
उसने अम्मोन से कहा, “ओ राजा के सपूत, तुम दिन-प्रतिदिन ऐसे मुरझाए हुए मुंह के क्यों हुए जा रहे हो? मुझे बताओ, हुआ क्या है?” अम्मोन ने उसे उत्तर दिया, “मुझे मेरे भाई अबशालोम की बहन तामार से प्रेम हो गया है.”
5 ಆಗ ಯೋನಾದಾಬನು ಅವನಿಗೆ, “ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವುದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ, ‘ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು. ನಾನು ಅವಳ ಕೈಯಿಂದ ಉಣ್ಣುವ ಹಾಗೆ, ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ, ನನಗೆ ಆಹಾರ ಕೊಡಲಿ,’ ಎಂದು ಹೇಳು,” ಎಂದನು.
योनादाब ने उससे कहा, “ऐसा करो, जाकर अपने बिछौने पर सो जाओ मानो तुम रोगी हो. जब तुम्हारे पिता तुम्हें देखने आएं तो उनसे कहना, ‘मेरी बहन तामार को भेज दीजिए कि वह यही आकर मेरे देखते हुए भोजन तैयार करे कि मैं उसकी के हाथ से भोजन करूं.’”
6 ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು.
तब अम्मोन ऐसे सो गया मानो वह रोगी था. जब राजा उसे देखने आए, अम्मोन ने राजा से कहा, “कृपया मेरी बहन तामार को भेज दीजिए कि वह यहां आकर मेरे सामने मेरे लिए भोजन बनाए, कि मैं उसी के हाथ से भोजन कर सकूं.”
7 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ, “ನೀನು ನಿನ್ನ ಸಹೋದರ ಅಮ್ನೋನನ ಮನೆಗೆ ಹೋಗಿ, ಅವನಿಗೆ ಅಡಿಗೆಯನ್ನು ಮಾಡಿ ಇಡು,” ಎಂದನು.
तब दावीद ने तामार के घर पर यह संदेश भेजा, “अपने भाई अम्मोन के घर पर चली जाओ और उसके लिए भोजन तैयार कर दो.”
8 ಹಾಗೆಯೇ ತಾಮಾರಳು ತನ್ನ ಸಹೋದರ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದು ಕಲಸಿ, ಅವನ ಕಣ್ಣು ಮುಂದೆ ನಾದಿ, ಭಕ್ಷ್ಯಗಳನ್ನು ಮಾಡಿ,
तब तामार अपने भाई अम्मोन के घर पर चली गई, जहां वह लेटा हुआ था. उसने वहां आटा गूंधा और उसके देखते हुए रोटियां बनाई.
9 ಪಾತ್ರೆ ತೆಗೆದುಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು, “ನಾನು ಉಣ್ಣುವುದಿಲ್ಲ,” ಎಂದು ಹೇಳಿ, “ನನ್ನ ಬಳಿಯಿಂದ ಎಲ್ಲಾ ಮನುಷ್ಯರನ್ನು ಕಳುಹಿಸಿಬಿಡಿರಿ,” ಎಂದನು. ಹಾಗೆಯೇ ಎಲ್ಲರು ಅವನನ್ನು ಬಿಟ್ಟುಹೋದರು.
इसके बाद उसने बर्तन में से भोजन निकालकर अम्मोन को परोस दिया, मगर अम्मोन ने खाना न चाहा. उसने आदेश दिया, “अन्य सभी व्यक्ति उस कमरे से बाहर भेज दिए जाएं.” तब सभी वहां से बाहर चले गए.
10 ಆಗ ಅಮ್ನೋನನು, “ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿಯೊಳಗೆ ತನ್ನ ಸಹೋದರನಾದ ಅಮ್ಮೋನನ ಬಳಿಗೆ ತೆಗೆದುಕೊಂಡು ಬಂದಳು.
तब अम्मोन ने तामार से कहा, “भोजन यहां इस कमरे में लाया जाए, कि मैं तुम्हारे हाथ से भोजन कर सकूं.” तब तामार अपने द्वारा तैयार किया हुआ भोजन अपने भाई अम्मोन के निकट ले गई.
11 ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ, ಅವನು ಅವಳನ್ನು ಹಿಡಿದು ಅವಳಿಗೆ, “ನನ್ನ ಸಹೋದರಿಯೇ, ನನ್ನ ಸಂಗಡ ಮಲಗು ಬಾ,” ಎಂದನು.
जैसे ही वह उसके भोजन उसके निकट लेकर गई, अम्मोन ने उसे पकड़ लिया और उससे कहा, “मेरी बहन, आओ, मेरे साथ सोओ.”
12 ಅದಕ್ಕವಳು, “ನನ್ನ ಸಹೋದರನೇ, ಬೇಡ. ನನ್ನನ್ನು ಒತ್ತಾಯ ಮಾಡಬೇಡ. ಏಕೆಂದರೆ ಇಸ್ರಾಯೇಲಿನಲ್ಲಿ ಇಂಥ ಕಾರ್ಯ ಮಾಡಕೂಡದು. ಇಂಥ ದುಷ್ಟತನದ ಕೆಲಸ ಮಾಡಬೇಡ.
उसने उत्तर दिया, “नहीं, मेरे भाई! मुझे विवश न करो! इस्राएल राष्ट्र में ऐसा नहीं किया जाता; मत करो यह अनाचार!
13 ಈ ಅವಮಾನವನ್ನು ಮರೆಮಾಡುವುದು ಹೇಗೆ? ನೀನು ಇಸ್ರಾಯೇಲಿನಲ್ಲಿ ದುಷ್ಟ ಮೂರ್ಖರೊಳಗೆ ಒಬ್ಬನಾಗಿ ಇರುವೆ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು. ಏಕೆಂದರೆ ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ,” ಎಂದಳು.
और फिर मेरे विषय में विचार करो. मैं इस लज्जा को कैसे धोती फिरूंगी? और अपने विषय में भी विचार करो. तुम तो इस्राएल में दुष्ट मूर्ख के रूप में कुख्यात हो जाओगे. सही होगा कि तुम इस विषय में राजा से आग्रह करो. वह मेरे विषय में तुम्हारा आग्रह अस्वीकार न करेंगे.”
14 ಆದರೆ ಅವನು ಅವಳ ಮಾತನ್ನು ಕೇಳಲಿಲ್ಲ. ಅಮ್ನೋನನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಅವನು ಬಲಾತ್ಕಾರದಿಂದ ಅವಳ ಮೇಲೆ ಅತ್ಯಾಚಾರಮಾಡಿದನು.
मगर अम्मोन ने उसकी एक न सुनी. तामार की अपेक्षा बलवान होने के कारण वह उस पर प्रबल हो गया, और उसने उसके साथ बलात्कार किया.
15 ಅನಂತರ ಅಮ್ನೋನನು ಅವಳನ್ನು ಅತ್ಯಂತ ಹಗೆ ಮಾಡಿದನು. ಅವಳನ್ನು ಹಗೆ ಮಾಡುವ ಮೊದಲು ಮಾಡಿದ ಪ್ರೀತಿಗಿಂತ ಅದು ಅಧಿಕವಾಗಿತ್ತು. ಆದ್ದರಿಂದ, ಅಮ್ನೋನನು ಅವಳಿಗೆ, “ಎದ್ದು ಹೋಗು,” ಎಂದನು.
इसके होते ही अम्मोन तामार के प्रति ऐसी घृणा से भर गया, जो बहुत बड़ी घृणा थी. उसकी यह घृणा उसके प्रति उसके प्रेम से कहीं अधिक भयंकर थी. तब अम्मोन ने तामार से कहा, “चलो उठो और निकल जाओ यहां से!”
16 ಆಗ ಅವಳು ಅವನಿಗೆ, “ಬೇಡ! ನನಗೆ ಮಾಡಿದ ಆ ಕೆಟ್ಟತನಕ್ಕಿಂತ, ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಅಧಿಕ ಅನ್ಯಾಯವಾಗಿದೆ,” ಎಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ
मगर तामार ने उससे कहा, “नहीं, मेरे भाई, तुम्हारा मुझे इस प्रकार भेजना मेरे साथ किए गए इस कुकर्म से भी ज्यादा गलत बात होगी.” मगर अम्मोन ने उसकी एक न सुनी.
17 ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಸೇವಕನನ್ನು ಕರೆದು, “ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ, ಅವಳ ಹಿಂದೆ ಬಾಗಿಲು ಮುಚ್ಚಿ ಭದ್ರಪಡಿಸು,” ಎಂದನು.
उसने अपने युवा सेवक को बुलाकर उसे आदेश दिया, “इसी समय इस स्त्री को मेरी उपस्थिति से दूर ले जाओ, और फिर यह द्वार बंद कर दो.”
18 ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು.
तामार एक लंबा वस्त्र धारण किए हुए थी. इस वस्त्र में लंबी बांहें थी. राजा की कुंवारी कन्याएं इसी प्रकार का वस्त्र पहना करती थी. उस सेवक ने उसे कमरे से बाहर निकालकर द्वार बंद कर दिया.
19 ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.
तामार ने अपने सिर पर भस्म डाल अपने लंबी बांह युक्त वस्त्र को फाड़ दिया, जिसे उसने इस समय पहना था. वह इस स्थिति में अपने मस्तक पर हाथ रखे हुए उच्च स्वर में रोती हुई लौट गई.
20 ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು.
तामार के भाई अबशालोम ने उससे पूछा, “क्या, तुम अपने भाई अम्मोन के यहां से आ रही हो? मेरी बहन, अब शांत हो जाओ. वह भाई है तुम्हारा. इसे अपने हृदय से निकाल दो.” तब तामार अपने भाई अबशालोम के आवास में असहाय स्त्री होकर रहने लगी.
21 ಅರಸನಾದ ದಾವೀದನು ಇವುಗಳನ್ನೆಲ್ಲಾ ಕೇಳಿದಾಗ ಬಹು ಕೋಪಗೊಂಡನು.
इस घटना का समाचार सुनकर राजा दावीद बहुत क्रुद्ध हो गए.
22 ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
अबशालोम ने अम्मोन से भला-बुरा कुछ भी न कहा. अम्मोन ने उसकी बहन को भ्रष्‍ट किया था, इसलिए अबशालोम अम्मोन से घृणा करने लगा.
23 ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
इस घटना के बाद दो वर्ष पूर्ण होने पर अबशालोम ने राजा के सारे पुत्रों को बाल-हाज़ोर नामक स्थान पर आमंत्रित किया. यह स्थान एफ्राईम के निकट था. यहीं अबशालोम के भेड़ के ऊन कतरनेवाले चुने गए थे.
24 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು.
अबशालोम ने राजा के निकट जाकर उनसे विनती की, “कृपा कर सुनिए: आपके सेवक ने भेड़ के ऊन कतरनेवाले चुने हैं. कृपया महाराज और उनके सेवक मेरे साथ वहां पधारे.”
25 ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.
मगर राजा ने अबशालोम को उत्तर दिया, “नहीं मेरे पुत्र, हम सबका वहां जाना सही न होगा. हम सब तुम्हारे लिए बोझ बन जाएंगे.” अबशालोम विनती करता रहा मगर राजा मना करते रहे. हां, राजा ने अबशालोम को आशीर्वाद अवश्य दिया.
26 ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.
इस स्थिति में अबशालोम ने अपने पिता से कहा, “अच्छा, यदि आप नहीं जा सकते तो हमारे साथ मेरे भाई अम्मोन को ही जाने दे.” इस पर राजा ने प्रश्न किया, “क्यों? वह क्यों जाएगा तुम्हारे साथ?”
27 ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
मगर जब अबशालोम विनती करता ही रहा, दावीद ने अम्मोन और सारे राजपुत्रों को उसके साथ जाने की आज्ञा दे दी.
28 ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.
अबशालोम ने अपने सेवकों को आदेश दे रखा था, “देखते रहना! जब अम्मोन दाखमधु से नशे में हो जाए, और जब मैं तुम्हें आदेश दूं, ‘अम्मोन पर वार करो,’ तब तुम उसे घात कर देना. ज़रा भी न झिझकना. स्वयं मैं तुम्हें यह आदेश दे रहा हूं; साहस बनाए रखना और वीरता दिखाना.”
29 ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
अबशालोम के सेवकों ने इस आदेश का पूरा-पूरा पालन किया. वह होते ही सभी राजपुत्र अपने-अपने घोड़ों पर सवार हो भाग गए.
30 ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು.
जब वे सब मार्ग में ही थे, दावीद को यह समाचार इस प्रकार भेजा गया: “अबशालोम ने सभी राजपुत्रों का संहार कर दिया है; एक भी जीवित शेष न रहा है.”
31 ಆಗ ಅರಸನು ಎದ್ದು, ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲು ನಿಂತರು.
यह सुनकर राजा ने शोक में अपने वस्त्र फाड़ दिए, और उठकर भूमि पर जा लेटे. उनके निकट सभी सेवकों ने भी अपने वस्त्र फाड़ दिए.
32 ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು.
मगर दावीद के भाई सिमअह के पुत्र योनादाब ने आश्वासन दिया, “मेरे प्रभु, यह न मान लें कि उन्होंने सारे युवा राजपुत्रों का संहार कर दिया है. वध मात्र अम्मोन का ही किया गया है. इसका निश्चय अबशालोम ने उसी दिन कर लिया था, जिस दिन अम्मोन ने अपनी बहन तामार से बलात्कार किया था.
33 ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು.
मेरे स्वामी महाराज, इस विचार से उदास न हों, कि सारे राजपुत्रों का संहार किया जा चुका है, क्योंकि सिर्फ अम्मोन का ही संहार किया गया है.”
34 ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು.
इसी बीच अबशालोम वहां से भाग निकला. वहां नियुक्त युवा पहरेदार ने दृष्टि की, तो देखा कि उसके पीछे के मार्ग से पर्वत की एक ओर से अनेक लोग चले आ रहे थे.
35 ಆಗ ಯೋನಾದಾಬನು ಅರಸನಿಗೆ, “ಅರಸನ ಪುತ್ರರು ಬರುತ್ತಿದ್ದಾರೆ. ನಿಮ್ಮ ಸೇವಕನು ಹೇಳಿದ ಹಾಗೆಯೇ ಆಯಿತು,” ಎಂದನು.
योनादाब ने राजा से कहा, “देखिए राजपुत्र लौट आए हैं! ठीक वैसा ही हुआ है, जैसे आपके सेवक ने आपको कहा था.”
36 ಅವನು ಮಾತನಾಡಿ ತೀರಿಸಿದಾಗ, ಅರಸನ ಪುತ್ರರು ಬಂದು ಸ್ವರವೆತ್ತಿ ಅತ್ತರು. ಅರಸನೂ, ಅವನ ಸಮಸ್ತ ಸೇವಕರೂ ಮಹಾಧ್ವನಿಯಿಂದ ಅತ್ತರು.
वह यह कह ही रहा था, कि राजपुत्र आ पहुंचे और ऊंची आवाज में रोने लगे. उनके साथ राजा और सारे सेवक भी फूट-फूटकर रोने लगे.
37 ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
इस समय अबशालोम कूच करके गेशूर के राजा अम्मीहूद के पुत्र तालमाई की शरण में जा पहुंचा. राजा दावीद अपने पुत्र के लिए हर रोज़ रोते रहे.
38 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿಹೋಗಿ ಅಲ್ಲಿ ಮೂರು ವರ್ಷ ಇದ್ದನು.
अबशालोम भागकर गेशूर नामक स्थान पर गया और वहां तीन साल तक रहता रहा.
39 ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.
राजा दावीद का हृदय अबशालोम से मिलने के लिए व्याकुल रहता था. अब उन्हें अम्मोन मृत्यु के विषय में शांति प्राप्‍त हो चुकी थी.

< ಸಮುವೇಲನು - ದ್ವಿತೀಯ ಭಾಗ 13 >