< ಸಮುವೇಲನು - ದ್ವಿತೀಯ ಭಾಗ 21 >

1 ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.
दावीदाच्या कारकिर्दीत एकदा दुष्काळ पडला. हा दुष्काळ तीन वर्षे टिकला तेव्हा दावीदाने परमेश्वराची प्रार्थना केली परमेश्वराने सांगितले, “शौल आणि त्याचे खुनी रक्तपिपासू घराणे यावेळच्या दुष्काळाला जबाबदार आहेत. शौलने गिबोन्यांना मारले म्हणून हा दुष्काळ पडला.”
2 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.
गिबोनी म्हणजे इस्राएली नव्हेत ते अमोरी होत इस्राएलींनी त्यांना दुखापत न करण्याचे वचन दिले होते. तरी शौलाने गिबोन्यांच्या वधाचा प्रयत्न केला. इस्राएली आणि यहूदा लोकांविषयीच्या अति उत्साहामुळे त्याने तसे केले गिबोन्यांना एकत्र बोलावून राजा दावीदाने त्यांच्याशी बोलणे केले.
3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.
दावीद त्यांना म्हणाला, “तुमच्यासाठी मी काय करू? इस्राएलाचा कलंक पुसला जाईल आणि तुम्ही या परमेश्वराच्या प्रजेला आशीर्वाद द्याल यासाठी मी काय करू शकतो?”
4 ಆಗ ಗಿಬ್ಯೋನ್ಯರು ಅವನಿಗೆ, “ಸೌಲನ ಕೈಯಿಂದಲಾದರೂ, ಅವನ ಮನೆಯವರ ಕೈಯಿಂದಲಾದರೂ, ನಮಗೆ ಬೆಳ್ಳಿಯಾದರೂ, ಬಂಗಾರವಾದರೂ ಬೇಡ. ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕಬೇಕೆಂಬುದು ನಮಗೆ ಅಗತ್ಯವಿಲ್ಲ,” ಎಂದರು. ಆಗ ಅವನು, “ನೀವು ನನಗೆ ಏನು ಹೇಳುತ್ತೀರೋ, ನಾನು ನಿಮಗೆ ಮಾಡುವೆನು,” ಎಂದನು.
तेव्हा गिबोनी दावीदाला म्हणाला, “शौलाच्या घराण्याने जे केले त्याची सोन्यारुप्याने भरपाई होऊ शकत नाही. पण त्यासाठी इस्राएलींना जिवे मारण्याचाही आम्हास हक्क नाही.” दावीद म्हणाला, “ठीक तर तुमच्यासाठी मी आता काय करावे?”
5 ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ,
ते राजाला म्हणाले, “ज्या मनुष्याने आमचा नाश केला व इस्राएली प्रदेशात राहणाऱ्या आमच्या सर्व लोकांचा नाश करण्याचे ज्याने योजिले होते
6 ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.
त्या शौलाच्या वंशातले सात मुले आमच्या हवाली कर. शौलाला परमेश्वराने राजा म्हणून निवडले होते. म्हणून शौलाच्या गिबा डोंगरावर त्याच्या मुलांना आम्ही देवासमक्षच फाशी देऊ.” राजा दावीद म्हणाला, “मला हे मान्य आहे. त्यांना मी तुमच्या हवाली करतो.”
7 ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ,
पण योनाथानाचा मुलगा मफीबोशेथ याला राजाने अभय दिले. योनाथान हा शौलाचा मुलगा. पण दावीदाने त्यास त्याच्या कुटुंबियांच्या सुरक्षिततेचे परमेश्वरास स्मरून वचन दिले होते, म्हणून मफीबोशेथला राजाने इजा पोचू दिली नाही.
8 ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರು ಮಕ್ಕಳಾದ ಅರ್ಮೋನಿಯನ್ನೂ, ಮತ್ತೊಬ್ಬ ಮೆಫೀಬೋಶೆತನನ್ನೂ, ಸೌಲನ ಮಗಳಾಗಿರುವ ಮೇರಬಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರಿಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡಿದುಕೊಂಡು,
अरमोनी आणि मफीबोशेथ हे शौलाला अय्याची कन्या रिस्पा या पत्नीपासून झालेली अपत्य शौलला मीखल नावाची कन्याही होती. अद्रीएलशी तिचे लग्न झाले होते. महोलाथी येथील बर्जिल्ल्याचा हा पुत्र. या दांपत्याची पाच मुलेही दावीदाने ताब्यात घेतली.
9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.
या सात जणांना त्याने गिबोन्यांच्या स्वाधीन केले. गिबोन्यांनी त्यांना गिबा डोंगरावर परमेश्वरासमोर फाशी दिली. ते सातजण एकदमच प्राणाला मुकले त्यांना ठार केले गेले ते दिवस हंगामाच्या सुरुवातीचे होते. जवाच्या पिकाच्या सुरुवातीचा तो वसंतातील काळ होता.
10 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.
१०अय्याची कन्या रिस्पा हिने शोकाकुल होऊन एक मोठे कापड त्या गिबाच्या खडकावर अंथरले. तेव्हापासून पावसास सुरुवात होईपर्यंत ते तसेच राहू दिले. रिस्पाने रात्रंदिवस त्या मृत देहांची निगराणी केली. दिवसा पक्ष्यांनी आणि रात्री जंगली जनावरांनी त्याचे लचके तोडू नयेत म्हणून राखण केली.
11 ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು.
११शौलाची उपपत्नी व अय्याची कन्या रिस्पा काय करत आहे ते लोकांनी दावीदाच्या कानावर घातले.
12 ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು.
१२तेव्हा दावीदाने याबेश गिलाद मधील लोकांकडून शौल आणि योनाथान यांच्या अस्थी आणवल्या शौल आणि योनाथान यांचा गिलबोवा येथे वध झाल्यावर याबोश गिलादाच्या लोकांनी त्या नेल्या होत्या. बेथ-शान मधील भिंतीवर पलिष्ट्यांनी या दोघांचे देह टांगले होते. पण बेथशानच्या लोकांनी येऊन भरवस्तीतील ती प्रेते चोरून नेली.
13 ದಾವೀದನು ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ಅವರಿಂದ ತೆಗೆದುಕೊಂಡನು.
१३याबेश-गिलाद मधून शौल आणि त्याचा पुत्र योनाथान या दोघांच्या अस्थी दावीदाने आणल्या. तसेच त्या फाशी दिल्या गेलेल्या सात जणांचे मृतदेहही आणले.
14 ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು.
१४शौल आणि योनाथानाच्या अस्थी त्यांनी बन्यामीन प्रदेशातील सेला येथे पुरल्या. शौलाचे वडील कीश यांच्या कबरीत त्या पुरल्या राजाच्या आज्ञे बरहुकूम लोकांनी हे सर्व केले. तेव्हा देवाने लोकांची प्रार्थना ऐकली आणि तिला त्याने प्रतिसाद दिला.
15 ಫಿಲಿಷ್ಟಿಯರು ತಿರುಗಿ ಇಸ್ರಾಯೇಲರ ಮೇಲೆ ಯುದ್ಧಮಾಡಿದರು. ಆಗ ದಾವೀದನು ತನ್ನ ಜನರೊಂದಿಗೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿದನು. ದಾವೀದನು ದಣಿದು ಹೋದನು.
१५पलिष्ट्यांनी पुन्हा इस्राएलीशी युध्द पुकारले तेव्हा दावीद आपल्या लोकांबरोबर पलिष्ट्यांशी युध्द करायला निघाला. पण यावेळी दावीद फार थकून गेला.
16 ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.
१६त्यावेळी तेथे रेफाई वंशातला इशबी-बनोब हा एक बलाढ्य मनुष्य होता. त्याच्या भाल्याचे वजनच तिनशे शेकेल पितळ होते. त्याच्याजवळ नवी कोरी तलवार होती. दावीदाला मारायचा त्याने प्रयत्न केला.
17 ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.
१७पण सरुवेचा मुलगा अबीशय याने या पलिष्ट्याला मारले आणि दावीदाचे प्राण वाचवले. तेव्हा दावीदाबरोबरच्या लोकांनी दावीदाला शपथ घालून सांगितले, “तुम्ही आता लढाईवर येऊ नये. नाहीतर इस्राएल एका मोठ्या नेत्याला मुकेल.”
18 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಮತ್ತೊಂದು ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.
१८यानंतर गोब येथे पलिष्ट्यांशी आणखी एकदा लढाई झाली. तेव्हा हूशाथी सिब्बखय याने रेफाई वंशातील सफ याचा वध केला.
19 ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.
१९गोब येथेच पुन्हा पलिष्ट्यांशी युध्द झाले. तेव्हा बेथलहेमचा यारे ओरगीम याचा मुलगा एलहानान याने गथचा गल्याथ याला ठार केले. विणकराच्या तुरीएवढा त्याचा भाला होता.
20 ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.
२०गथ येथे आणखी एक युध्द झाले. तेथे एक धिप्पाड पुरुष होता. त्याच्या हातापायांना सहा सहा, म्हणजे एकंदर चोवीस बोटे होती. हा ही रेफाई वंशातला होता.
21 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
२१त्याने इस्राएलाला आव्हान दिले पण योनाथानाने या मनुष्याचे प्राण घेतले. हा योनाथान म्हणजे दावीदाचा भाऊ शिमी याचा मुलगा.
22 ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.
२२ही माणसे गथ येथील रेफाई वंशातील होती. दावीद आणि त्याचे लोक यांनी त्यांना ठार केले.

< ಸಮುವೇಲನು - ದ್ವಿತೀಯ ಭಾಗ 21 >