< ಸಮುವೇಲನು - ದ್ವಿತೀಯ ಭಾಗ 8 >

1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2 ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.
ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.
ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
7 ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.
ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.
ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.
9 ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,
ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10 ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.
೧೦ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
11 ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.
೧೧ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
12 ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.
೧೨ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.
೧೩ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
14 ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
೧೪ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
15 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.
೧೫ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
16 ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.
೧೬ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
17 ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.
೧೭ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.
೧೮ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.

< ಸಮುವೇಲನು - ದ್ವಿತೀಯ ಭಾಗ 8 >