< ಅಪೊಸ್ತಲರ ಕೃತ್ಯಗಳ 16 >

1 ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.
वह दरबे और लुस्त्रा नगर भी गए. वहां तिमोथियॉस नामक एक शिष्य थे जिनकी माता यहूदी मसीही शिष्या; परंतु पिता यूनानी थे.
2 ಲುಸ್ತ್ರ ಹಾಗೂ ಇಕೋನ್ಯಗಳಲ್ಲಿದ್ದ ಸಹೋದರರು ತಿಮೊಥೆಯನ ಬಗ್ಗೆ ಒಳ್ಳೆಯ ಸಾಕ್ಷಿ ಹೇಳುತ್ತಿದ್ದರು.
तिमोथियॉस इकोनियॉन और लुस्त्रा नगरों के शिष्यों में सम्मानित थे.
3 ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.
पौलॉस की इच्छा तिमोथियॉस को अपने साथी के रूप में साथ रखने की थी, इसलिये पौलॉस ने उनका ख़तना किया क्योंकि वहां के यहूदी यह जानते थे कि तिमोथियॉस के पिता यूनानी हैं.
4 ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.
वे नगर-नगर यात्रा करते हुए शिष्यों को वे सभी आज्ञा सौंपते जाते थे, जो येरूशलेम में प्रेरितों और पुरनियों द्वारा ठहराई गयी थी.
5 ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು.
इसलिये कलीसिया प्रतिदिन विश्वास में स्थिर होती गई तथा उनकी संख्या में प्रतिदिन बढ़ोतरी होती गई.
6 ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.
वे फ़्रिजिया तथा गलातिया क्षेत्रों में से होते हुए आगे बढ़ गए. पवित्र आत्मा की आज्ञा थी कि वे आसिया क्षेत्र में परमेश्वर के वचन का प्रचार न करें
7 ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.
मूसिया नगर पहुंचने पर उन्होंने बिथुनिया नगर जाने का विचार किया किंतु मसीह येशु के आत्मा ने उन्हें इसकी आज्ञा नहीं दी.
8 ಆದ್ದರಿಂದ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
इसलिये मूसिया नगर से निकलकर वे त्रोऑस नगर पहुंचे.
9 ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.
रात में पौलॉस ने एक दर्शन देखा: एक मकेदोनियावासी उनसे दुःखी शब्द में विनती कर रहा था, “मकेदोनिया क्षेत्र में आकर हमारी सहायता कीजिए!”
10 ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.
पौलॉस द्वारा इस दर्शन देखते ही यह जानकर कि परमेश्वर ने हमें उन्हें सुसमाचार प्रचार करने के लिए बुलाया है; हमने तुरंत मकेदोनिया क्षेत्र जाने की योजना बनाई.
11 ನಾವು ನೌಕೆ ಹತ್ತಿ ತ್ರೋವದಿಂದ ನೇರವಾಗಿ ಸಮೊಥ್ರಾಕೆಗೆ ಹೊರಟೆವು. ಮರುದಿನ ನೆಯಾಪೊಲಿಗೆ ತಲುಪಿದೆವು.
त्रोऑस नगर से हम सीधे जलमार्ग द्वारा सामोथ्रेसिया टापू पहुंचे और दूसरे दिन नियापोलिस नगर
12 ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.
और वहां से फ़िलिप्पॉय नगर, जो मकेदोनिया प्रदेश का एक प्रधान नगर तथा रोमी बस्ती है. हम यहां कुछ दिन ठहर गए.
13 ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.
शब्बाथ पर हम नगर द्वार से निकलकर प्रार्थना के लिए निर्धारित स्थान की खोज में नदी तट पर चले गए. हम वहां इकट्ठी हुई स्त्रियों से वार्तालाप करते हुए बैठ गए.
14 ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.
वहां थुआतेइरा नगर निवासी लुदिया नामक एक स्त्री थी, जो परमेश्वर की आराधक थी. वह बैंगनी रंग के वस्त्रों की व्यापारी थी. उसने हमारा वार्तालाप सुना और प्रभु ने पौलॉस द्वारा दी जा रही शिक्षा के प्रति उसका हृदय खोल दिया.
15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.
जब उसने और उसके रिश्तेदारों ने बपतिस्मा ले लिया तब उसने हमको अपने यहां आमंत्रित करते हुए कहा, “यदि आप यह मानते हैं कि मैं प्रभु के प्रति विश्वासयोग्य हूं, तो आकर मेरे घर में रहिए.” उसने हमें विनती स्वीकार करने पर विवश कर दिया.
16 ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.
एक दिन प्रार्थना स्थल की ओर जाते हुए मार्ग में हमारी भेंट एक युवा दासी से हुई, जिसमें एक ऐसी दुष्टात्मा थी, जिसकी सहायता से वह भविष्य प्रकट कर देती थी. वह अपने स्वामियों की बहुत आय का साधन बन गई थी.
17 ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.
यह दासी पौलॉस और हमारे पीछे-पीछे यह चिल्लाती हुए चलने लगी, “ये लोग परम प्रधान परमेश्वर के दास हैं, जो तुम पर उद्धार का मार्ग प्रकट कर रहे हैं.”
18 ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.
अनेक दिनों तक वह यही करती रही. अंत में झुंझला कर पौलॉस पीछे मुड़े और उसके अंदर समाई दुष्टात्मा से बोले, “मसीह येशु के नाम में मैं तुझे आज्ञा देता हूं, निकल जा उसमें से!” तुरंत ही वह दुष्टात्मा उसे छोड़कर चली गई.
19 ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.
जब उसके स्वामियों को यह मालूम हुआ कि उनकी आय की आशा जाती रही, वे पौलॉस और सीलास को पकड़कर नगर चौक में प्रधान न्यायाधीशों के सामने ले गए
20 ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.
और उनसे कहने लगे, “इन यहूदियों ने नगर में उत्पात मचा रखा है.
21 ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು.
ये लोग ऐसी प्रथाओं का प्रचार कर रहे हैं जिन्हें स्वीकार करना या पालन करना हम रोमी नागरिकों के नियमानुसार नहीं है.”
22 ಪೌಲ, ಸೀಲರಿಗೆ ವಿರೋಧವಾಗಿ ಜನಸಮೂಹವೆಲ್ಲಾ ಕೂಡಿಕೊಂಡಿತು. ನ್ಯಾಯಾಧಿಪತಿಗಳು ಪೌಲ, ಸೀಲರ ಬಟ್ಟೆಗಳನ್ನು ಕಿತ್ತುಹಾಕಿಸಿ ಛಡಿಗಳಿಂದ ಹೊಡೆಯಬೇಕೆಂದು ಆಜ್ಞಾಪಿಸಿದರು.
इस पर सारी भीड़ उनके विरुद्ध हो गई और प्रधान हाकिमों ने उनके वस्त्र फाड़ डाले और उन्हें बेंत लगाने की आज्ञा दी.
23 ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು.
उन पर अनेक कठोर प्रहारों के बाद उन्हें कारागार में डाल दिया गया और कारागार-शासक को उन्हें कठोर सुरक्षा में रखने का निर्देश दिया.
24 ಇಂಥಾ ಆಜ್ಞೆಯನ್ನು ಪಡೆದು, ಅವನು ಸೆರೆಮನೆಯ ಒಳಕೋಣೆಯಲ್ಲಿ ಅವರನ್ನು ಹಾಕಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಂಧಿಸಿದರು.
इस आदेश पर कारागार-शासक ने उन्हें भीतरी कक्ष में डालकर उनके पैरों को लकड़ी की बेड़ियों में जकड़ दिया.
25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.
लगभग आधी रात के समय पौलॉस और सीलास प्रार्थना कर रहे थे तथा परमेश्वर की स्तुति में भजन गा रहे थे. उनके साथी कैदी उनकी सुन रहे थे.
26 ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.
अचानक ऐसा बड़ा भूकंप आया कि कारागार की नींव हिल गई, तुरंत सभी द्वार खुल गए और सभी बंदियों की बेड़ियां टूट गईं.
27 ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
नींद से जागने पर कारागार-शासक ने सभी द्वार खुले पाए. यह सोचकर कि सारे कैदी भाग चुके हैं, वह तलवार से अपने प्राणों का अंत करने जा ही रहा था;
28 ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು.
तब पौलॉस ने ऊंचे शब्द में उससे कहा, “स्वयं को कोई हानि न पहुंचाइए, हम सब यहीं हैं!”
29 ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು.
कारागार-शासक रोशनी का इंतजाम करने के लिए आज्ञा देते हुए भीतर दौड़ गया और भय से कांपते हुए पौलॉस और सीलास के चरणों में गिर पड़ा.
30 ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.
इसके बाद उन्हें बाहर लाकर उसने उनसे प्रश्न किया, “श्रीमन, मुझे क्या करना चाहिए कि मुझे उद्धार प्राप्‍त हो?”
31 “ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.
उन्होंने उत्तर दिया, “प्रभु येशु मसीह में विश्वास कीजिए, आपको उद्धार प्राप्‍त होगा—आपको तथा आपके परिवार को.”
32 ಆಮೇಲೆ ಅವರು ಅವನಿಗೂ ಅವನ ಮನೆಯವರೆಲ್ಲರಿಗೂ ಕರ್ತ ಯೇಸುವಿನ ಸುವಾರ್ತೆಯನ್ನು ತಿಳಿಸಿದರು.
तब उन्होंने कारागार-शासक और उसके सारे परिवार को प्रभु के वचन की शिक्षा दी.
33 ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.
कारागार-शासक ने रात में उसी समय उनके घावों को धोया. बिना देर किए उसने और उसके परिवार ने बपतिस्मा लिया.
34 ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.
इसके बाद वह उन्हें अपने घर ले आया और उन्हें भोजन कराया. परमेश्वर में सपरिवार विश्वास करके वे सभी बहुत आनंदित थे.
35 ಬೆಳಗಾದ ತರುವಾಯ ನ್ಯಾಯಾಧಿಪತಿಗಳು ತಮ್ಮ ಅಧಿಕಾರಿಗಳನ್ನು ಸೆರೆಮನೆಯ ಅಧಿಕಾರಿಯ ಬಳಿಗೆ ಕಳುಹಿಸಿ, “ಆ ಮನುಷ್ಯರನ್ನು ಬಿಡುಗಡೆಮಾಡು,” ಎಂದು ತಿಳಿಸಿದರು.
अगले दिन प्रधान हाकिमों ने अपने अधिकारियों द्वारा यह आज्ञा भेजी, “उन व्यक्तियों को छोड़ दो.”
36 ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು.
कारागार-शासक ने इस आज्ञा की सूचना पौलॉस को देते हुए कहा, “प्रधान न्यायाधीशों ने आपको छोड़ देने की आज्ञा दी है. इसलिये आप शांतिपूर्वक यहां से विदा हो सकते हैं.”
37 ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.
पौलॉस ने उन्हें उत्तर दिया, “उन्होंने हमें बिना किसी मुकद्दमे के सबके सामने पिटवाया, जबकि हम रोमी नागरिक हैं, फिर हमें कारागार में भी डाल दिया और अब वे हमें चुपचाप बाहर भेजना चाह रहे हैं! बिलकुल नहीं! स्वयं उन्हीं को यहां आने दीजिए, वे ही हमें यहां से बाहर छोड़ देंगे.”
38 ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು.
उन अधिकारियों ने यह सब प्रधान न्यायाधीशों को जा बताया. यह मालूम होने पर कि पौलॉस तथा सीलास रोमी नागरिक हैं वे बहुत ही डर गए.
39 ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
तब वे स्वयं आकर पौलॉस तथा सीलास को मनाने लगे और उन्हें कारागार से बाहर लाकर उनसे नगर से चले जाने की विनती करते रहे.
40 ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.
तब पौलॉस तथा सीलास कारागार से निकलकर लुदिया के घर गए. वहां भाई बहिनों से भेंट कर उन्हें प्रोत्साहित करते हुए वे वहां से विदा हो गए.

< ಅಪೊಸ್ತಲರ ಕೃತ್ಯಗಳ 16 >