< ಅಪೊಸ್ತಲರ ಕೃತ್ಯಗಳ 2 >
1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.
यहूदियों के पेन्तेकॉस्त पर्व के दिन, जब शिष्य एक स्थान पर इकट्ठा थे,
2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
सहसा आकाश से तेज आंधी जैसी आवाज उस कमरे में फैल गई, जहां वे सब बैठे थे.
3 ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.
तब उनके सामने ऐसी ज्वाला प्रकट हुई जिसका आकार जीभ के समान था, जो अलग होकर उनमें से प्रत्येक व्यक्ति पर जाकर ठहरती गई.
4 ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
वे सभी पवित्र आत्मा से भरकर पवित्र आत्मा द्वारा दी गई अन्य भाषाओं में बातें करने लगे.
5 ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.
उस समय आकाश के नीचे के हर एक देश से आए श्रद्धालु यहूदी येरूशलेम में ही ठहरे हुए थे.
6 ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.
इस कोलाहल को सुनकर वहां भीड़ इकट्ठा हो गईं. वे सभी आश्चर्यचकित हो गए क्योंकि वे सभी हर एक को अपनी निज भाषा में बातें करते हुए सुन रहे थे.
7 ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?
अचंभित हो वे एक दूसरे से पूछ रहे थे, “क्या ये सभी गलीलवासी नहीं हैं?
8 ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ?
तब यह क्या हो रहा है, जो हममें से हर एक विदेशी इन्हें हमारी अपनी-अपनी मातृभाषा में बातें करते हुए सुन रहा है!
9 ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,
पारथी, मादी, इलामी और मेसोपोतामियावासि, यहूदिया तथा कप्पादोकिया, पोन्तॉस तथा आसिया,
10 ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.
फ़्रिजिया, पम्फ़ूलिया, मिस्र, और लिबियावासी, जो क्रेते के आस-पास है; रोमी के रहनेवाले यहूदी तथा दीक्षित यहूदी,
11 ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.
क्रेती तथा अरबी, सभी अपनी-अपनी मातृभाषा में इनके मुख से परमेश्वर के पराक्रम के विषय में सुन रहे हैं!”
12 ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.
चकित और घबराकर वे एक दूसरे से पूछ रहे थे, “यह क्या हो रहा है?”
13 ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು.
किंतु कुछ अन्य ठट्ठा कर कह रहे थे, “इन्होंने कुछ अधिक मधु ही पी रखी है.”
14 ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.
तब ग्यारह के साथ पेतरॉस ने खड़े होकर ऊंचे शब्द में कहना प्रारंभ किया: “यहूदियावासियों तथा येरूशलेम वासियों, आपके लिए इस विषय को समझना अत्यंत आवश्यक है; इसलिये मेरी बातों को ध्यानपूर्वक सुनिए:
15 ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!
जैसा आप समझ रहे हैं, ये व्यक्ति नशे में नहीं हैं क्योंकि यह दिन का तीसरा ही घंटा है!
16 ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:
वस्तुत, यह योएल भविष्यवक्ता द्वारा की गई इस भविष्यवाणी की पूर्ति है:
17 “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
“‘यह परमेश्वर की आवाज है, मैं अपना आत्मा सब लोगों पर उंडेलूंगा. तुम्हारे बेटे और बेटियां भविष्यवाणी करेंगे, तुम्हारे बुज़ुर्ग लोग स्वप्न देखेंगे, तुम्हारे जवान दर्शन देखेंगे.
18 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು.
मैं उन दिनों में अपने दास, और दासियों, पर अपना आत्मा उंडेल दूंगा, और वे भविष्यवाणी करेंगे.
19 ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
मैं ऊपर आकाश में अद्भुत चमत्कार और नीचे पृथ्वी पर लहू, आग और धुएं के बादल के अद्भुत चिह्न दिखाऊंगा.
20 ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
प्रभु के उस वैभवशाली और वर्णनीय दिन के पूर्व सूर्य अंधेरा और चंद्रमा लहू समान हो जाएगा.
21 ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’
तथा हर एक, जो प्रभु को पुकारेगा, उद्धार प्राप्त करेगा.’
22 “ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.
“इस्राएली प्रियजन, ध्यान से सुनिए! नाज़रेथवासी मसीह येशु को, जिन्हें आप जानते हैं, जिन्हें परमेश्वर ने आपके मध्य सामर्थ्य के कामों, चमत्कारों तथा चिह्नों के द्वारा प्रकट किया,
23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.
परमेश्वर की निर्धारित योजना तथा पूर्व ज्ञान में आपके हाथों में अधर्मियों की सहायता से सौंप दिया गया कि उन्हें क्रूस-मृत्युदंड दिया जाए;
24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.
किंतु परमेश्वर ने उन्हें मृत्यु के दर्द से छुड़ाकर मरे हुओं में से जीवित कर दिया क्योंकि यह असंभव था कि मृत्यु उन्हें अपने बंधन में रख सके.
25 ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.
दावीद ने उनके विषय में कहा था: “मैं सर्वदा प्रभु को निहारता रहा क्योंकि वह मेरी दायीं ओर हैं, कि मैं लड़खड़ा न जाऊं.
26 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.
इसलिये मेरा हृदय आनंदित और मेरी जीभ मगन हुई; इसके अलावा मेरा शरीर भी आशा में बना रहेगा,
27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. (Hadēs )
क्योंकि आप न तो मेरी आत्मा को अधोलोक में छोड़ेंगे और न अपने पवित्र जन के शव को सड़ने देंगे. (Hadēs )
28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’
आपने मुझ पर जीवन का मार्ग प्रकट कर दिया. आप मुझे अपनी उपस्थिति में आनंद से भर देंगे.
29 “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.
“प्रियजन, पूर्वज दावीद के विषय में यह बिलकुल सच है कि उनकी मृत्यु हुई तथा उनके शव को कब्र में भी रखा गया. वह कब्र आज भी वहीं है.
30 ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.
इसलिये उनके भविष्यवक्ता होने के कारण तथा इसलिये भी कि उन्हें यह मालूम था कि परमेश्वर ने शपथ ली थी कि उन्हीं का एक वंशज सिंहासन पर बैठाया जाएगा,
31 ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ (Hadēs )
होनेवाली घटनाओं को साफ़-साफ़ देखते हुए दावीद ने मसीह येशु के पुनरुत्थान का वर्णन किया कि मसीह येशु न तो अधोलोक में छोड़ दिए गए और न ही उनके शव को सड़न ने स्पर्श किया. (Hadēs )
32 ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.
इन्हीं मसीह येशु को परमेश्वर ने मरे हुओं में से उठाकर जीवित किया. हम इस सच्चाई के प्रत्यक्ष साक्षी हैं.
33 ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.
परमेश्वर की दायीं ओर सर्वोच्च पद पर बैठकर, पिता से प्राप्त पवित्र आत्मा लेकर उन्होंने हम पर उंडेल दिया, जो आप स्वयं देख और सुन रहे हैं.
34 ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು
यद्यपि दावीद उस समय स्वर्ग नहीं पहुंचे थे तौभी उन्होंने स्वयं कहा था, “‘प्रभु ने मेरे प्रभु से कहा: “मेरी दायीं ओर बैठे रहो
35 ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.”’
मैं तुम्हारे शत्रुओं को तुम्हारे अधीन करूंगा.”’
36 “ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.
“इसलिये सारा इस्राएल निश्चित रूप से यह जान ले कि इन्हीं येशु को, जिन्हें तुम लोगों ने क्रूसित किया परमेश्वर ने प्रभु और मसीह पद से सम्मानित किया.”
37 ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.
इस बात ने उनके हृदयों को छेद दिया. उन्होंने पेतरॉस और शेष प्रेरितों से जानना चाहा, “प्रियजन, अब हमारे लिए क्या करना सही है?”
38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
पेतरॉस ने उत्तर दिया, “पश्चाताप कीजिए तथा आप में से हर एक मसीह येशु के नाम में पाप क्षमा का बपतिस्मा ले—आपको दान के रूप में पवित्र आत्मा मिलेगा;
39 ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.
क्योंकि यह प्रतिज्ञा आपके, आपकी संतान और उन सबके लिए भी है, जो अभी दूर-दूर हैं तथा परमेश्वर जिनको अपने पास बुलाने पर हैं.”
40 ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.
पेतरॉस ने अनेक तर्क प्रस्तुत करते हुए उनसे विनती की, “स्वयं को इस टेढ़ी पीढ़ी से बचाए रखिए.”
41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.
जितनों ने पेतरॉस के प्रवचन को स्वीकार किया, उन्होंने बपतिस्मा लिया. उस दिन लगभग तीन हज़ार व्यक्ति उनमें शामिल हो गए.
42 ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,
वे सभी लगातार प्रेरितों की शिक्षा के प्रति समर्पित होकर, पारस्परिक संगति, प्रभु-भोज की क्रिया और प्रार्थना में लीन रहने लगे.
43 ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.
प्रेरितों द्वारा किए जा रहे अद्भुत काम तथा अद्भुत चिह्न सभी के लिए आश्चर्य का विषय बन गए थे.
44 ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.
मसीह के सभी विश्वासी घनिष्ठ एकता में रहने लगे तथा उनकी सब वस्तुओं पर सबका एक सा अधिकार था.
45 ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.
वे अपनी संपत्ति बेचकर, जिनके पास कम थी उनमें बांटने लगे.
46 ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.
हर रोज़ वे मंदिर के आंगन में एक मन हो नियमित रूप से इकट्ठा होते, भोजन के लिए एक दूसरे के घर में निर्मल भाव से आनंदपूर्वक सामूहिक रूप से भोजन करते
47 ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.
तथा परमेश्वर का गुणगान करते थे. वे सभी की प्रसन्नता के भागी थे. परमेश्वर इनमें दिन-प्रतिदिन उनको मिलाते जा रहे थे, जो उद्धार प्राप्त कर रहे थे.