< ಅಪೊಸ್ತಲರ ಕೃತ್ಯಗಳ 28 >

1 ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.
जब हम बच निकल्यो, त पता चल्यो कि यो द्वीप माल्टा कहलावय हय।
2 ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.
उत को निवासियों न हम पर अनोखी कृपा करी; कहालीकि बरसात को वजह ठंडी होती, येकोलायी उन्न आगी सिलगाय क हम सब ख रुकायो।
3 ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.
जब पौलुस न लकड़ियो को गट्ठा जमा कर क् आगी पर रख्यो, त एक सांप आच पा क निकल्यो अऊर ओको हाथ सी लपट गयो।
4 ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
जब उन निवासियों न सांप ख ओको हाथ सी लपट्यो हुयो देख्यो, त आपस म कह्यो, “सचमुच यो आदमी हत्यारों हय कि यानेकि समुन्दर सी बच गयो, तब भी न्याय न जीन्दो रहन नहीं दियो।”
5 ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.
तब ओन सांप ख आगी म झटकार दियो, अऊर ओख कुछ हानि नहीं पहुंची।
6 ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.
पर हि रस्ता देखत होतो कि ऊ सूज जायेंन यां एकाएक गिर क् मर जायेंन, पर जब हि बहुत देर तक देखत रह्यो अऊर देख्यो कि ओख कुछ भी नहीं भयो, त अपनो बिचार बदल क कह्यो, “यो त कोयी देवता आय।”
7 ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು.
ऊ जागा को आस पास ऊ द्वीप को मुखिया पुबलियुस की जमीन होती। ओन हम्ख अपनो घर लिजाय क तीन दिन संगी को जसो मेहमानी करी।
8 ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.
पुबलियुस को बाप बुखार अऊर पेचीस सी बीमार पड़्यो होतो। येकोलायी पौलुस न ओको जवर घर म जाय क प्रार्थना करी अऊर ओको पर हाथ रख क ओख चंगो करयो।
9 ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.
जब असो भयो त ऊ द्वीप को बाकी बीमार आयो अऊर अच्छो करयो गयो।
10 ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.
उन्न हमरो बहुत आदर करयो, अऊर जब हम चलन लग्यो त जो कुछ हमरो लायी जरूरी होतो, जहाज पर रख दियो।
11 ಮೂರು ತಿಂಗಳ ಸಮಯ ದಾಟಿದ ತರುವಾಯ ಆ ದ್ವೀಪದಲ್ಲಿ ಚಳಿಗಾಲ ಕಳೆದ ಮೇಲೆ ಒಂದು ನೌಕೆಯನ್ನು ಹತ್ತಿ ಹೊರಟೆವು. ಅದು ಅಶ್ವಿನಿ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಒಂದು ನೌಕೆಯಾಗಿತ್ತು.
तीन महीना को बाद हम सिकन्दरियां को एक जहाज पर चल निकल्यो, जो ऊ द्वीप म ठन्डी को समय तक रह्यो होतो, अऊर जेको चिन्ह दियुसकूरी होतो।
12 ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.
सुरकूसा म लंगर डाल क हम तीन दिन उतच रह्यो।
13 ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು.
उत सी हम घुम क रेगियुम म आयो; अऊर एक दिन को बाद दक्षिनी हवा चली, तब हम दूसरों दिन पुतियुली म आयो।
14 ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.
उत हम ख भाऊ मिल्यो, अऊर उन्को आग्रह सी हम उन्को इत सात दिन तक रह्यो; अऊर यो रीति सी हम रोम ख चल्यो।
15 ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.
उत सी भाऊ हमरो समाचार सुन क अप्पियुस को चौक अऊर तीन–सराये तक हम सी मुलाखात करन ख निकल आयो, जिन्ख देख क पौलुस न परमेश्वर को धन्यवाद करयो अऊर हिम्मत बान्ध्यो।
16 ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.
जब हम रोम म पहुंच्यो, त पौलुस ख एक सैनिक को संग जो ओकी रखवाली करत होतो, अकेलो रहन की आज्ञा मिल गयी।
17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.
तीन दिन को बाद ओन यहूदियों को मुख्य लोगों ख बुलायो, अऊर जब हि जमा भयो त उन्को सी कह्यो, “हे भाऊ, मय न अपनो लोगों को या बापदादों को व्यवहार को विरोध म कुछ भी नहीं करयो, तब भी बन्दी बनाय क यरूशलेम सी रोमियों को हाथ सौंप्यो गयो।
18 ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.
उन्न मोख जांच क छोड़ देनो चाह्यो, कहालीकि मोरो म मृत्यु दण्ड को लायक कोयी दोष नहीं होतो।
19 ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ.
पर जब यहूदी येको विरोध म बोलन लग्यो, त मोख कैसर को दुवा देनो पड़्यो: यो नहीं कि मोख अपनो लोगों पर कोयी दोष लगानो होतो।
20 ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.
येकोलायी मय न तुम ख बुलायो हय कि तुम सी मिलूं अऊर बातचीत करू; कहालीकि इस्राएल की आशा लायी मय या संकली सी जकड़्यो हुयो हय।”
21 ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.
उन्न ओको सी कह्यो, “न हम न तोरो बारे म यहूदियों सी चिट्ठियां पायी, अऊर नहीं भाऊ म सी कोयी न आय क तोरो बारे म कुछ बतायो अऊर नहीं बुरो कह्यो।
22 ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.
पर तोरो बिचार का हय? उच हम तोरो सी सुननो चाहवय हंय, कहालीकि हम जानजे हंय कि हर जागा यो राय को विरोध म लोग बाते करय हंय।”
23 ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.
तब उन्न ओको लायी एक दिन ठहरायो, अऊर बहुत सो लोग ओको इत जमा भयो, अऊर ऊ परमेश्वर को राज्य की गवाही देतो हुयो, अऊर मूसा की व्यवस्था अऊर भविष्यवक्तावों की किताबों सी यीशु को बारे म समझाय समझाय क भुन्सारो सी शाम तक वर्नन करतो रह्यो।
24 ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.
तब कुछ न उन बातों ख मान लियो, अऊर कुछ न विश्वास नहीं करयो।
25 ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:
जब हि आपस म एक राय नहीं भयो, त पौलुस की या बात को कहन पर चली गयो: “पवित्र आत्मा न यशायाह भविष्यवक्ता को द्वारा तुम्हरो बापदादों सी ठीकच कह्यो,”
26 “‘ಈ ಜನರ ಬಳಿಗೆ ಹೋಗಿ ಹೇಳು, “ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.”
जाय क हि लोगों सी कह्य, कि सुनतो त रहो, पर नहीं समझो, अऊर देखत त रहो, पर नहीं बुझ सको;
27 ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ, ಕಿವಿಗಳಿಂದ ಕೇಳಿಸಿಕೊಂಡು, ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.
कहालीकि हि लोगों को मन मोटो अऊर उन्को कान भारी भय गयो हंय, अऊर उन्न अपनी आंखी बन्द करी हंय, असो नहीं होय कि हि कभी आंखी सी देखे अऊर कानो सी सुने अऊर मन सी समझेंन अऊर फिरेंन, अऊर मय उन्ख चंगो करू।
28 “ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.
“येकोलायी तुम जानो कि परमेश्वर को यो उद्धार की कथा गैरयहूदियों को जवर भेज्यो गयी हय, अऊर हि सुनेंन!”
29 ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.
जब ओन यो कह्यो त यहूदी आपस म बहुत विवाद करन लग्यो अऊर उत सी चली गयो।
30 ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.
ऊ पूरो दोय साल अपनो किराया को घर म रह्यो,
31 ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.
अऊर जो ओको जवर आवत होतो, उन सब सी मिलतो रह्यो अऊर बिना रोक–टोक बहुत निडर होय क परमेश्वर को राज्य को प्रचार करतो अऊर प्रभु यीशु मसीह की बाते सिखातो रह्यो।

< ಅಪೊಸ್ತಲರ ಕೃತ್ಯಗಳ 28 >