< ಅಪೊಸ್ತಲರ ಕೃತ್ಯಗಳ 3 >

1 ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.
पतरस और यूहन्ना तीसरे पहर प्रार्थना के समय मन्दिर में जा रहे थे।
2 ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.
और लोग एक जन्म के लँगड़े को ला रहे थे, जिसको वे प्रतिदिन मन्दिर के उस द्वार पर जो ‘सुन्दर’ कहलाता है, बैठा देते थे, कि वह मन्दिर में जानेवालों से भीख माँगे।
3 ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು.
जब उसने पतरस और यूहन्ना को मन्दिर में जाते देखा, तो उनसे भीख माँगी।
4 ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.
पतरस ने यूहन्ना के साथ उसकी ओर ध्यान से देखकर कहा, “हमारी ओर देख!”
5 ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು.
अतः वह उनसे कुछ पाने की आशा रखते हुए उनकी ओर ताकने लगा।
6 ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,
तब पतरस ने कहा, “चाँदी और सोना तो मेरे पास है नहीं; परन्तु जो मेरे पास है, वह तुझे देता हूँ; यीशु मसीह नासरी के नाम से चल फिर।”
7 ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.
और उसने उसका दाहिना हाथ पकड़ के उसे उठाया; और तुरन्त उसके पाँवों और टखनों में बल आ गया।
8 ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
और वह उछलकर खड़ा हो गया, और चलने फिरने लगा; और चलता, और कूदता, और परमेश्वर की स्तुति करता हुआ उनके साथ मन्दिर में गया।
9 ಅವನು ನಡೆಯುವುದನ್ನೂ ದೇವರ ಸ್ತೋತ್ರ ಮಾಡುತ್ತಿರುವುದನ್ನೂ ಜನರೆಲ್ಲರೂ ಕಂಡರು.
सब लोगों ने उसे चलते फिरते और परमेश्वर की स्तुति करते देखकर,
10 ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.
१०उसको पहचान लिया कि यह वही है, जो मन्दिर के ‘सुन्दर’ फाटक पर बैठकर भीख माँगा करता था; और उस घटना से जो उसके साथ हुई थी; वे बहुत अचम्भित और चकित हुए।
11 ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.
११जब वह पतरस और यूहन्ना को पकड़े हुए था, तो सब लोग बहुत अचम्भा करते हुए उस ओसारे में जो सुलैमान का कहलाता है, उनके पास दौड़े आए।
12 ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?
१२यह देखकर पतरस ने लोगों से कहा, “हे इस्राएलियों, तुम इस मनुष्य पर क्यों अचम्भा करते हो, और हमारी ओर क्यों इस प्रकार देख रहे हो, कि मानो हमने अपनी सामर्थ्य या भक्ति से इसे चलने फिरने योग्य बना दिया।
13 ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.
१३अब्राहम और इसहाक और याकूब के परमेश्वर, हमारे पूर्वजों के परमेश्वर ने अपने सेवक यीशु की महिमा की, जिसे तुम ने पकड़वा दिया, और जब पिलातुस ने उसे छोड़ देने का विचार किया, तब तुम ने उसके सामने यीशु का तिरस्कार किया।
14 ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.
१४तुम ने उस पवित्र और धर्मी का तिरस्कार किया, और चाहा कि एक हत्यारे को तुम्हारे लिये छोड़ दिया जाए।
15 ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.
१५और तुम ने जीवन के कर्ता को मार डाला, जिसे परमेश्वर ने मरे हुओं में से जिलाया; और इस बात के हम गवाह हैं।
16 ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.
१६और उसी के नाम ने, उस विश्वास के द्वारा जो उसके नाम पर है, इस मनुष्य को जिसे तुम देखते हो और जानते भी हो सामर्थ्य दी है; और निश्चय उसी विश्वास ने जो यीशु के द्वारा है, इसको तुम सब के सामने बिलकुल भला चंगा कर दिया है।
17 “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.
१७“और अब हे भाइयों, मैं जानता हूँ कि यह काम तुम ने अज्ञानता से किया, और वैसा ही तुम्हारे सरदारों ने भी किया।
18 ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.
१८परन्तु जिन बातों को परमेश्वर ने सब भविष्यद्वक्ताओं के मुख से पहले ही बताया था, कि उसका मसीह दुःख उठाएगा; उन्हें उसने इस रीति से पूरा किया।
19 ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
१९इसलिए, मन फिराओ और लौट आओ कि तुम्हारे पाप मिटाएँ जाएँ, जिससे प्रभु के सम्मुख से विश्रान्ति के दिन आएँ।
20 ದೇವರು ನಿಮಗೋಸ್ಕರ ನೇಮಕವಾಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿಕೊಡುವರು.
२०और वह उस यीशु को भेजे जो तुम्हारे लिये पहले ही से मसीह ठहराया गया है।
21 ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು. (aiōn g165)
२१अवश्य है कि वह स्वर्ग में उस समय तक रहे जब तक कि वह सब बातों का सुधार न कर ले जिसकी चर्चा प्राचीनकाल से परमेश्वर ने अपने पवित्र भविष्यद्वक्ताओं के मुख से की है। (aiōn g165)
22 ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.
२२जैसा कि मूसा ने कहा, ‘प्रभु परमेश्वर तुम्हारे भाइयों में से तुम्हारे लिये मुझ जैसा एक भविष्यद्वक्ता उठाएगा, जो कुछ वह तुम से कहे, उसकी सुनना।’
23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’
२३परन्तु प्रत्येक मनुष्य जो उस भविष्यद्वक्ता की न सुने, लोगों में से नाश किया जाएगा।
24 “ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.
२४और शमूएल से लेकर उसके बाद वालों तक जितने भविष्यद्वक्ताओं ने बात कहीं उन सब ने इन दिनों का सन्देश दिया है।
25 ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.
२५तुम भविष्यद्वक्ताओं की सन्तान और उस वाचा के भागी हो, जो परमेश्वर ने तुम्हारे पूर्वजों से बाँधी, जब उसने अब्राहम से कहा, ‘तेरे वंश के द्वारा पृथ्वी के सारे घराने आशीष पाएँगे।’
26 ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”
२६परमेश्वर ने अपने सेवक को उठाकर पहले तुम्हारे पास भेजा, कि तुम में से हर एक को उसकी बुराइयों से फेरकर आशीष दे।”

< ಅಪೊಸ್ತಲರ ಕೃತ್ಯಗಳ 3 >