< ಆಮೋಸನು 1 >

1 ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.
तक़ू'अ के चरवाहों में से 'आमूस का कलाम, जो उस पर शाह — ए — यहूदाह उज़्ज़ियाह और शाह — ए — इस्राईल युरब'आम — बिन — यूआस के दिनों में इस्राईल के बारे में भौंचाल से दो साल पहले ख़्वाब में नाज़िल हुआ।
2 ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”
उसने कहा: “ख़ुदावन्द सिय्यून से नारा मारेगा और येरूशलेम से आवाज़ बलन्द करेगा; और चरवाहों की चरागाहें मातम करेंगी, और कर्मिल की चोटी सूख जायेगी।”
3 ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.
ख़ुदावन्द यूँ फ़रमाता है कि “दमिश्क़ के तीन बल्कि चार गुनाहों की वजह से मैं उसको बेसज़ा न छोड़ूँगा, क्यूँकि उन्होंने जिलआद को ख़लीहान में दाउने के आहनी औज़ार से रौंद डाला है।
4 ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.
और मैं हज़ाएल के घराने में आग भेजूँगा, जो बिन — हदद के क़स्रों को खा जाएगी।
5 ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.
और मैं दमिश्क़ का अड़बंगा तोड़ूँगा और वादी — ए — आवन के बाशिंदों और बैत — 'अदन के फ़रमाँरवाँ को काट डालूँगा और अराम के लोग ग़ुलाम होकर क़ीर को जाएँगे, ख़ुदावन्द फ़रमाता है।
6 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.
ख़ुदावन्द यूँ फ़रमाता है, कि ग़ज़्ज़ा के तीन बल्कि चार गुनाहों की वजह से मैं उसको बेसज़ा न छोड़ूँगा, क्यूँकि वह सब लोगों को ग़ुलाम करके ले गए ताकि उनको अदोम के हवाले करें।
7 ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.
इसलिए मैं ग़ज़्ज़ा की शहरपनाह पर आग भेजूँगा, जो उसके क़स्रों को खा जाएगी।
8 ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
और अशदूद के बाशिन्दों और अस्क़लोन के फ़रमाँरवाँ को काट डलूँगा और अक़रून पर हाथ चलाऊँगा और फ़िलिस्तियों के बाक़ी लोग बर्बाद हो जायेंगे। ख़ुदावन्द ख़ुदा फ़रमाता है।
9 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.
ख़ुदावन्द यूँ फ़रमाता है, कि सूर के तीन बल्कि चार गुनाहों की वजह से मैं उसको बेसज़ा न छोड़ूँगा, क्यूँकि उन्होंने सब लोगों को अदोम के हवाले किया और बिरादराना 'अहद को याद न किया।
10 ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”
इसलिए मैं सूर की शहरपनाह पर आग भेजूँगा, जो उसके क़स्रों को खा जाएगी।”
11 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.
ख़ुदावन्द यूँ फ़रमाता है, कि अदोम के तीन बल्कि चार गुनाहों की वजह से मैं उसको बेसज़ा न छोड़ूँगा, क्यूँकि उसने तलवार लेकर अपने भाई को दौड़ाया और रहमदिली को छोड़ दिया और उसका क़हर हमेशा फाड़ता रहा और उसका ग़ज़ब ख़त्म न हुआ।
12 ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”
इसलिए मैं तेमान पर आग भेजूँगा, और वह बुसराह के क़स्रों को खा जाएगी।
13 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.
ख़ुदावन्द यूँ फ़रमाता है कि बनी 'अम्मोन के तीन बल्कि चार गुनाहों की वजह से मैं उसको बेसज़ा न छोडूँगा, क्यूँकि उन्होंने अपनी हुदूद को बढ़ाने के लिए जिलआद की बारदार 'औरतों के पेट चाक किए।
14 ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.
इसलिए मैं रब्बा की शहरपनाह पर आग भड़काऊँगा, जो उसके क़स्रों को लड़ाई के दिन ललकार और आँधी के दिन गिर्दबाद के साथ खा जाएगी;
15 ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ.
और उनका बादशाह बल्कि वह अपने हाकिमों के साथ ग़ुलाम होकर जाएगा, ख़ुदावन्द फ़रमाता है।

< ಆಮೋಸನು 1 >