< ಆಮೋಸನು 5 >

1 ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:
इस्राएलाचे घराणे हो, हे वचन जे विलापासारखे आहे, असे तुमच्याकडे आणतो ते ऐका.
2 “ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”
इस्राएलाची कुमारिका पडली आहे; ती पुन्हा कधीही उठणार नाही; तिला एकटीलाच सोडून दिले आहे, तिला उठवणारा कोणीही नाही.
3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”
परमेश्वर असे म्हणतो, “ज्या शहरातून हजार निघाले त्यामध्ये फक्त शंभर उरतील आणि ज्यातून शंभर असत त्यामध्ये इस्राएलाच्या घराण्याला दहा उरतील.”
4 ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.
परमेश्वर इस्राएलाच्या घराण्याला असे म्हणतो, “मला शोधा म्हणजे तुम्ही जिवंत रहाल.”
5 ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”
पण बेथेलास शरण जाऊ नका; गिल्गालला जाऊ नका; सीमा ओलांडून खाली बैर-शेबालाही जाऊ नका. गिलगालमधील लोकांस कैदी म्हणून नेले जाईल, आणि बेथेल नाहीसे होईल.
6 ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
परमेश्वरास शोधा म्हणजे तुम्ही जिवंत रहाल, नाहीतर तो अग्नीसारखा योसेफाच्या घरावर पडेल आणि ते भस्मसात होऊन जाईल आणि त्यास विझवायला बेथेलमधे कोणी नसणार.
7 ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.
जे तुम्ही न्यायाला कडूपणामध्ये बदलता आणि न्यायीपण धुळीस मिळवता,
8 ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.
ते तुम्ही, ज्याने कृत्तिका व मृगशीर्ष ही नक्षत्रे बनवली, तोच दिवसाचे परिवर्तन काळोख्या रात्रीत करतो; आणि दिवसास रात्रीने अंधकारमय करतो; समुद्रातील पाण्याला बोलावून पृथ्वीच्या पाठीवर ओततो, त्याचे नाव “परमेश्वर” आहे.
9 ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ ಮತ್ತು ಕೋಟೆಯ ನಗರವನ್ನು ವಿನಾಶಪಡಿಸುತ್ತಾರೆ.
तो बलवानावर एकाएकी नाश आणतो म्हणून किल्ल्यांवर नाश येतो.
10 ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.
१०जे त्यांना वेशींवर सरळ करु ईच्छीतात, त्यांचा ते द्वेष करतात, आणि जे सत्य बोलतात त्यांचा ते तिरस्कार करतात.
11 ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.
११तुम्ही गरिबांना तुडवीता, आणि त्याच्याकडून गव्हाचा खंड वसूल करता. जरी तुम्ही कोरीव दगडांची घरे बांधली, पण त्यामध्ये तुम्ही रहाणार नाही. तुमच्या द्राक्षाच्या सुंदर बागा आहेत, पण त्यापासून निघणारा द्राक्षरस तुम्ही पिणार नाही.
12 ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.
१२कारण मला तुमच्या पुष्कळ पापांची माहिती आहे, आणि तुम्ही खरोखरच खूप वाईट कृत्ये केली आहेत. तुम्ही लाच घेता, धार्मिकाला त्रास देता, आणि वेशींत गरिबांचा न्याय विपरीत करता.
13 ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.
१३त्यावेळी, सुज्ञ गप्प बसतील, कारण ती वाईट वेळ असेल.
14 ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
१४तुम्ही जगावे म्हणून जे उत्तम आहे त्याचा शोध करा, वाईटाला शोधू नका. म्हणजे जसे तुम्ही म्हणता, त्याप्रमाणे सर्वशक्तिमान परमेश्वर देव खरोखरच तुमच्याबरोबर येईल.
15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.
१५वाईटाचा द्वेष करा व चांगुलपणावर प्रेम करा, नगराच्या वेशीत न्याय स्थापित करा. मग कदाचित सर्वशक्तिमान परमेश्वर देव, योसेफाच्या वाचलेल्या वंशजांवर कृपा करील.
16 ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.
१६यास्तव सेनाधीश परमेश्वर देव, प्रभू असे म्हणतो, “सर्व चव्हाट्यावर रडणे असेल, आणि गल्लोगल्ली लोक हाय हाय करतील, आणि ते शेतकऱ्याला शोक करायला आणि विलाप करण्यात चतुर असलेल्यांना आक्रोश करायला बोलवून आणतील.
17 ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
१७द्राक्षमळ्यांत लोक रडत असतील, कारण मी तुमच्यामध्ये फिरत जाईन.” असे परमेश्वर म्हणतो.
18 ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.
१८जे परमेश्वराच्या न्यायाच्या दिवसाची इच्छा धरतात त्यांना हाय हाय! तुम्हास तो दिवस का बरे पहावयाचा आहे? तो अंधार आहे, उजेड नाही.
19 ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.
१९जणू काय एखादा मनुष्य सिंहापासून दूर पळून गेला आणि अस्वलाने त्यास गाठले, अथवा घरात जाऊन त्याने भिंतीवर हात ठेवला आणि त्यास साप चावाला.
20 ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.
२०परमेश्वराचा दिवस प्रकाश न होता अंधार होणार नाही काय? प्रकाशाचा एक किरण नसलेला व त्यामध्ये काही तेज नाही असा असेल.
21 ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.
२१“मला तुमच्या सणांचा तिरस्कार वाटतो, मी ते मान्य करणार नाही. तुमच्या धार्मिक सभा मला आवडत नाहीत.
22 ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.
२२तुम्ही मला होमार्पणे व अन्नार्पणे जरी दिलीत, तरी मी ती स्वीकारणार नाही, शांत्यर्पणात, तुम्ही दिलेल्या पुष्ट प्राण्यांकडे मी पाहणारसुध्दा नाही.
23 ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.
२३तुमच्या गाण्यांच्या कोलाहल येथून दूर न्या, तुमच्या वीणांचा आवज मी ऐकणार नाही.
24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
२४तर जलांप्रमाणे न्याय व न्यायीपण अविरतपणे वाहणाऱ्या प्रवाहाप्रमाणे वाहो.
25 ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?
२५इस्राएल, वाळवंटात, चाळीस वर्षे तू मला यज्ञ व दाने अर्पणे करत होता काय?
26 ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.
२६तुम्ही तर आपल्या राजाचा डेरा व तुमच्या मूर्तीचा देव्हारा, आपणासाठी केलेला तुमच्या देवाचा तारा, ही वाहून न्याल.
27 ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.
२७म्हणून मी तुम्हास कैदी म्हणून दिमिष्काच्या पलीकडे घालवीन.” असे परमेश्वर म्हणतो. सेनाधीश देव हे त्याचे नाव आहे.

< ಆಮೋಸನು 5 >