< ಆಮೋಸನು 5 >

1 ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:
ऐ इस्राईल के ख़ान्दान, इस कलाम को जिससे मैं तुम पर नौहा करता हूँ, सुनो:
2 “ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”
“इस्राईल की कुँवारी गिर पड़ी, वह फिर न उठेगी; वह अपनी ज़मीन पर पड़ी है, उसको उठाने वाला कोई नहीं।”
3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”
क्यूँकि ख़ुदावन्द ख़ुदा यूँ फ़रमाता है कि “इस्राईल के घराने के लिए, जिस शहर से एक हज़ार निकलते थे, उसमें एक सौ रह जाएँगे; और जिससे एक सौ निकलते थे, उसमें दस रह जाएँगे।”
4 ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.
क्यूँकि ख़ुदावन्द इस्राईल के घराने से यूँ फ़रमाता है कि “तुम मेरे तालिब हो और ज़िन्दा रहो;
5 ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”
लेकिन बैतएल के तालिब न हो, और जिल्जाल में दाख़िल न हो, और बैरसबा' को न जाओ, क्यूँकि जिल्जाल ग़ुलामी में जाएगा और बैतएल नाचीज़ होगा।”
6 ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
तुम ख़ुदावन्द के तालिब हो और ज़िन्दा रहो, ऐसा न हो कि वह यूसुफ़ के घराने में आग की तरह भड़के और उसे खा जाए और बैतएल में उसे बुझाने वाला कोई न हो।
7 ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.
ऐ 'अदालत को नागदौना बनाने वालों, और सदाक़त को ख़ाक में मिलाने वालों!
8 ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.
वही सुरैया और जब्बार सितारों का ख़ालिक़ है जो मौत के साये को मतला' — ए — नूर, और रोज़ — ए — रोशन को शब — ए — दैजूर बना देता है, और समन्दर के पानी को बुलाता और इस ज़मीन पर फैलाता है, जिसका नाम ख़ुदावन्द है;
9 ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ ಮತ್ತು ಕೋಟೆಯ ನಗರವನ್ನು ವಿನಾಶಪಡಿಸುತ್ತಾರೆ.
वह जो ज़बरदस्तों पर नागहानी हलाकत लाता है, जिससे क़िलों' पर तबाही आती है।
10 ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.
वह फाटक में मलामत करने वालों से कीना रखते हैं, और रास्तगो से नफ़रत करते हैं।
11 ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.
इसलिए चूँकि तुम ग़रीबों को पायमाल करते हो और ज़ुल्म करके उनसे गेहूँ छीन लेते हो, इसलिए जो तराशे हुए पत्थरों के मकान तुम ने बनाए उनमें न बसोगे, और जो नफ़ीस ताकिस्तान तुम ने लगाए उनकी मय न पियोगे।
12 ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.
क्यूँकि मैं तुम्हारी बेशुमार ख़ताओं और तुम्हारे बड़े — बड़े गुनाहों से आगाह हूँ तुम सादिक़ों को सताते और रिश्वत लेते हो, और फाटक में ग़रीबों की हक़तलफ़ी करते हो।
13 ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.
इसलिए इन दिनों में पेशबीन ख़ामोश हो रहेंगे क्यूँकि ये बुरा वक़्त है।
14 ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
बुराई के नहीं बल्कि नेकी के तालिब हो, ताकि ज़िन्दा रहो और ख़ुदावन्द रब्ब — उल — अफ़वाज तुम्हारे साथ रहेगा, जैसा कि तुम कहते हो।
15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.
बुराई से 'अदावत और नेकी से मुहब्बत रख्खो, और फाटक में 'अदालत को क़ायम करो; शायद ख़ुदावन्द रब्ब — उल — अफ़वाज बनी यूसुफ़ के बक़िये पर रहम करे।
16 ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.
इसलिए ख़ुदावन्द ख़ुदा रब्ब — उल — अफ़वाज यूँ फ़रमाता है कि: सब बाज़ारों में नौहा होगा, और सब गलियों में अफ़सोस अफ़सोस कहेंगे; और किसानों को मातम के लिए, और उनको जो नौहागरी में महारत रखते हैं नौहे के लिए बुलाएँगे;
17 ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
और सब ताकिस्तानों में मातम होगा, क्यूँकि मैं तुझमें से होकर गुज़रूँगा, ख़ुदावन्द फ़रमाता है।
18 ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.
तुम पर अफ़सोस जो ख़ुदावन्द के दिन की आरज़ू करते हो! तुम ख़ुदावन्द के दिन की आरजू क्यूँ करते हो? वह तो तारीकी का दिन है, रोशनी का नहीं;
19 ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.
जैसे कोई शेर — ए — बबर से भागे और रीछ उसे मिले, या घर में जाकर अपना हाथ दीवार पर रख्खे और उसे साँप काट ले।
20 ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.
क्या ख़ुदावन्द का दिन तारीकी न होगा? उसमें रोशनी न होगी, बल्कि सख़्त ज़ुल्मत होगी और नूर मुतलक़ न होगा।
21 ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.
मैं तुम्हारी 'ईदों को मकरूह जानता, और उनसे नफ़रत रखता हूँ; और मैं तुम्हारी पाक महफ़िलों से भी ख़ुश न हूँगा।
22 ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.
और अगरचे तुम मेरे सामने सोख़्तनी और नज़्र की क़ुर्बानियाँ पेश करोगे तोभी मैं उनको क़ुबूल न करूँगा; और तुम्हारे फ़र्बा जानवरों की शुक्राने की क़ुर्बानियों को ख़ातिर में न लाऊँगा।
23 ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.
तू अपने सरोद का शोर मेरे सामने से दूर कर, क्यूँकि मैं तेरे रबाब की आवाज़ न सुनूँगा।
24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
लेकिन 'अदालत को पानी की तरह और सदाक़त को बड़ी नहर की तरह जारी रख।
25 ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?
ऐ बनी — इस्राईल, क्या तुम चालीस बरस तक वीराने में, मेरे सामने ज़बीहे और नज़्र की क़ुर्बानियाँ पेश करते रहे?
26 ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.
तुम तो मिल्कूम का खे़मा और कीवान के बुत, जो तुम ने अपने लिए बनाए, उठाए फिरते थे,
27 ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.
इसलिए ख़ुदावन्द जिसका नाम रब्ब — उल — अफ़वाज है फ़रमाता है, मैं तुम को दमिश्क़ से भी आगे ग़ुलामी में भेजूँगा।

< ಆಮೋಸನು 5 >