< ಆಮೋಸನು 7 >
1 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.
परमप्रभु परमेश्वरले मलाई यो कुरा देखाउनुभयो । हेर, बसन्त ऋतुको बाली मौलाउनै लाग्दा, उहाँले सलहको बथान तयार गर्नुभयो, अनि हेर, योचाहिं राजाको कटनी पछिको बाली थियो ।
2 ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.
जब तिनीहरूले भूमिको बालीनाली खाएर सके, अनि त्यसपछि मैले भनें, “परमप्रभु परमेश्वर, कृपया क्षमा गर्नुहोस् । याकूब कसरी बाँच्नेछ? किनकि त्यो त धेरै सानो छ ।”
3 ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.
परमप्रभु यस विषयमा नरम हुनुभयो । उहाँले भन्नुभयो, “यस्तो हुनेछैन ।”
4 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
अनि परमप्रभु परमेश्वरले मलाई यस्तो देखाउनुभयोः हेर, परमप्रभु परमेश्वरले न्याय गर्नलाई आगो बोलाउनुभयो । त्यसले पृथ्वीमुनिको गहिरो विशाल पानीलाई सुकायो र त्यसले जमिनलाई पनि भष्म पार्न सक्थ्यो ।
5 ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.
तर मैले भनें, “परमप्रभु परमेश्वर, कृपया रोक्नुहोस् । याकूब कसरी बाँच्नेछ? किनकि त्यो त धेरै सानो छ ।”
6 ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.
परमप्रभु यस विषयमा नरम हुनुभयो । परमप्रभु परमेश्वरले भन्नुभयो, “यो पनि हुनेछैन ।”
7 ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.
उहाँले मलाई यो कुरा देखाउनुभयोः हेर, परमप्रभु हातमा साहुल लिएर एउटा पर्खालको छेउमा उभिनुभयो ।
8 ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.
परमप्रभुले मलाई भन्नुभयो, “आमोस, तैंले के देखिस्?” मैले भनें, “एउटा साहुल ।” परमप्रभुले भन्नुभयो, “हेर, इस्राएलका मेरा मानिसहरूका बिचमा म एउटा साहुल राख्नेछु । म तिनीहरूलाई अब बाँकी छोड्नेछैनँ ।
9 “ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”
इसहाकका उच्च ठाउँहरू नष्ट पारिनेछन्, इस्राएलका पवित्र स्थानहरू तहस-नहस पारिनेछन्, र म तरवार लिएर यारोबामको घरानाको विरुद्ध खडा हुनेछु ।”
10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
तब बेथेलका पुजारी अमस्याहले इस्राएलका राजा यारोबामलाई यो सन्देश पठाएः “इस्राएलको घरानाको बिचमा आमोसले तपाईंको विरुद्धमा षड्यन्त्र रचेको छ । यस देशले त्यसका सबै बोली सहन सक्दैन ।
11 ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.”
किनकि आमोसले यसो भन्यो, ‘यारोबाम तरवारद्वारा मर्नेछ, र इस्राएल निश्चय नै आफ्नो देशबाट टाढा निर्वासनमा जानेछ ।’”
12 ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
अमस्याहले आमोसलाई भने, “ए दर्शी, दौडेर यहूदाको देशमा जाऊ, र त्यहाँ रोटी खाऊ अनि अगमवाणी गर ।
13 ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.
तर यहाँ बेथेलमा अरू धेरै अगमवाणी नगर, किनकि यो राजाको पवित्र-स्थान र एउटा राजकीय घराना हो ।”
14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.
अनि आमोसले अमस्याहलाई भने, “म अगमवक्ता होइनँ, न त अगमवक्ताका छोरा हुँ । म त एउटा गोठालो हुँ, र म त अन्जीरका रूखहरूको रेखदेख गर्छु ।
15 ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”
तर परमप्रभुले मलाई बगालको हेरचाह गर्नबाट पर लानुभयो र मलाई भन्नुभयो, ‘जा, मेरा मानिस, इस्राएलको निम्ति अगमवाणी गर ।’
16 ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.
अब परमप्रभुको वचन सुन । तिमी भन्छौ, ‘इस्राएलको विरुद्धमा अगमवाणी नगर, र इसहाकको घरानाको विरुद्धमा नबोल ।’
17 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’”
यसकारण परमप्रभु यसो भन्नुहुन्छ, ‘तेरी पत्नी सहरमा वेश्या हुनेछे, तेरा छोराहरू र तेरा छोरीहरू तरवारद्वारा मारिनेछन्, तेरो देश नापिनेछ र विभाजन गरिनेछ, तँ एउटा अशुद्ध देशमा मर्नेछस्, र इस्राएल निश्चय नै आफ्नो देशबाट निर्वासनमा जानेछ ।’”