< ಆಮೋಸನು 7 >

1 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.
ପ୍ରଭୁ ସଦାପ୍ରଭୁ ମୋତେ ଏରୂପ ଦେଖାଇଲେ; ଆଉ ଦେଖ, ବିଳମ୍ବରେ ଉତ୍ପନ୍ନ ତୃଣ ଅଙ୍କୁରିବା ଆରମ୍ଭରେ ସେ ପଙ୍ଗପାଳମାନଙ୍କୁ ଗଢ଼ିଲେ ଓ ଦେଖ, ରାଜାଙ୍କ ତୃଣ କଟାଗଲା ଉତ୍ତାରେ ସେହି ବିଳମ୍ବରେ ଉତ୍ପନ୍ନ ତୃଣ ବଢ଼ୁଥିଲା।
2 ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.
ପୁଣି, ସେହି ପଙ୍ଗପାଳମାନେ ଦେଶର ତୃଣ ଖାଇବାର ଶେଷ କଲା ଉତ୍ତାରେ ମୁଁ କହିଲି, “ହେ ପ୍ରଭୁ, ସଦାପ୍ରଭୁ, ତୁମ୍ଭକୁ ବିନୟ କରୁଅଛି, କ୍ଷମା କର! ଯାକୁବ କିପରି ଠିଆ ହେବ? କାରଣ ସେ ସାନ।”
3 ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.
ସଦାପ୍ରଭୁ ସେ ବିଷୟରେ ଦୁଃଖିତ ହେଲେ; “ଏହା ହେବ ନାହିଁ,” ଏହା ସଦାପ୍ରଭୁ କହନ୍ତି।
4 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
ପ୍ରଭୁ ସଦାପ୍ରଭୁ ମୋତେ ଏହିରୂପେ ଦେଖାଇଲେ; ଆଉ ଦେଖ, ପ୍ରଭୁ ସଦାପ୍ରଭୁ ଅଗ୍ନି ଦ୍ୱାରା ବିବାଦ କରିବା ପାଇଁ ଆହ୍ୱାନ କଲେ; ତହିଁରେ ତାହା ମହାସାଗରକୁ ଗ୍ରାସ କଲା, ଆଉ ଭୂମିକୁ ଗ୍ରାସ କରିଥାʼନ୍ତା।
5 ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.
ଏପରି ସମୟରେ ମୁଁ କହିଲି, “ହେ ପ୍ରଭୁ, ସଦାପ୍ରଭୁ, ବିନୟ କରେ, କ୍ଷାନ୍ତ ହୁଅ; ଯାକୁବ କିପରି ଠିଆ ହେବ? କାରଣ ସେ ସାନ।”
6 ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.
ସଦାପ୍ରଭୁ ସେ ବିଷୟରେ ଦୁଃଖିତ ହେଲେ; “ତାହା ମଧ୍ୟ ହେବ ନାହିଁ,” ପ୍ରଭୁ ସଦାପ୍ରଭୁ ଏହା କହନ୍ତି।
7 ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.
ସେ ମୋତେ ଏରୂପ ଦେଖାଇଲେ; ଆଉ ଦେଖ, ପ୍ରଭୁ ଆପଣା ହସ୍ତରେ ଓଳମ ଘେନି ଓଳମ ଦ୍ୱାରା ନିର୍ମିତ ଏକ କାନ୍ଥ ନିକଟରେ ଠିଆ ହେଲେ।
8 ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.
ପୁଣି, ସଦାପ୍ରଭୁ ମୋତେ ପଚାରିଲେ, “ହେ ଆମୋଷ, ତୁମ୍ଭେ କଅଣ ଦେଖୁଅଛ?” ତହିଁରେ ମୁଁ କହିଲି, “ଗୋଟିଏ ଓଳମ।” ତେବେ ପ୍ରଭୁ କହିଲେ, “ଦେଖ, ଆମ୍ଭେ ଆପଣା ଲୋକ ଇସ୍ରାଏଲ ମଧ୍ୟରେ ଓଳମ ପକାଇବା; ଆମ୍ଭେ ପୁନର୍ବାର ଆଉ ସେମାନଙ୍କୁ ଛାଡ଼ି ଯିବା ନାହିଁ;
9 “ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”
ପୁଣି, ଇସ୍‌ହାକର ଉଚ୍ଚସ୍ଥଳୀସକଳ ଧ୍ୱଂସିତ ହେବ ଓ ଇସ୍ରାଏଲର ଧର୍ମଧାମସକଳ ବିନଷ୍ଟ ହେବ; ଆଉ ଆମ୍ଭେ ଖଡ୍ଗ ଘେନି ଯାରବୀୟାମର ବଂଶ ବିରୁଦ୍ଧରେ ଉଠିବା।”
10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ଯେତେବେଳେ ବେଥେଲ୍‍ର ଯାଜକ ଅମତ୍‍ସୀୟ ଇସ୍ରାଏଲର ରାଜା ଯାରବୀୟାମଙ୍କ ନିକଟକୁ ଏହି କଥା କହି ପଠାଇଲା, “ଇସ୍ରାଏଲ ବଂଶ ମଧ୍ୟରେ ଆମୋଷ ଆପଣଙ୍କ ବିରୁଦ୍ଧରେ ଚକ୍ରାନ୍ତ କରିଅଛନ୍ତି; ଦେଶ ତାଙ୍କର ବାକ୍ୟସବୁ ସହି ପାରୁ ନାହିଁ।
11 ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.”
କାରଣ ଆମୋଷ ଏରୂପ କହୁଅଛନ୍ତି, ‘ଯାରବୀୟାମ ଖଡ୍ଗରେ ହତ ହେବ ଓ ଇସ୍ରାଏଲ ନିଶ୍ଚୟ ଆପଣା ନିଜ ଦେଶରୁ ନିର୍ବାସିତ ହେବ।’”
12 ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
ଆହୁରି, ଅମତ୍‍ସୀୟ ଆମୋଷଙ୍କୁ କହିଲା, “ହେ ଦର୍ଶକ, ତୁମ୍ଭେ ଯାଅ, ଯିହୁଦା ଦେଶକୁ ପଳାଅ, ସେଠାରେ ଭୋଜନ କର ଓ ସେଠାରେ ଭବିଷ୍ୟଦ୍‍ବାକ୍ୟ ପ୍ରଚାର କର;
13 ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.
ମାତ୍ର ବେଥେଲ୍‍ରେ ପୁନର୍ବାର ଆଉ ଭବିଷ୍ୟଦ୍‍ବାକ୍ୟ ପ୍ରଚାର କର ନାହିଁ; କାରଣ ତାହା ରାଜାଙ୍କର ପବିତ୍ର ସ୍ଥାନ ଓ ତାହା ରାଜକୀୟ ଗୃହ ଅଟେ।”
14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.
ତହିଁରେ ଆମୋଷ ଉତ୍ତର କରି ଅମତ୍‍ସୀୟଙ୍କୁ କହିଲେ, “ମୁଁ ଭବିଷ୍ୟଦ୍‍ବକ୍ତା ନ ଥିଲି, କିଅବା କୌଣସି ଭବିଷ୍ୟଦ୍‍ବକ୍ତାଙ୍କ ପୁତ୍ର ନ ଥିଲି; ମାତ୍ର ମୁଁ ଗୋପାଳକ ଓ ଡିମ୍ବିରି ବୃକ୍ଷର କୃଷକ ଥିଲି;
15 ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”
ପୁଣି, ସଦାପ୍ରଭୁ ପଲର ପଶ୍ଚାଦ୍‍ଗମନରୁ ମୋତେ ନେଲେ ଓ ସଦାପ୍ରଭୁ ମୋତେ କହିଲେ, ‘ଯାଅ, ଆମ୍ଭର ଇସ୍ରାଏଲ ଲୋକ ନିକଟରେ ଭବିଷ୍ୟଦ୍‍ବାକ୍ୟ ପ୍ରଚାର କର।’
16 ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.
ଏଥିପାଇଁ ଏବେ ତୁମ୍ଭେ ସଦାପ୍ରଭୁଙ୍କର ବାକ୍ୟ ଶୁଣ; ତୁମ୍ଭେ କହୁଅଛ, ‘ଇସ୍ରାଏଲ ବିରୁଦ୍ଧରେ ଭବିଷ୍ୟଦ୍‍ବାକ୍ୟ ପ୍ରଚାର କର ନାହିଁ ଓ ଇସ୍‌ହାକ ବଂଶ ବିରୁଦ୍ଧରେ ତୁମ୍ଭର ବାକ୍ୟ ବର୍ଷାଅ ନାହିଁ।’
17 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’”
ଏଥିପାଇଁ ସଦାପ୍ରଭୁ ଏହି କଥା କହନ୍ତି; ‘ତୁମ୍ଭର ଭାର୍ଯ୍ୟା ନଗର ମଧ୍ୟରେ ବେଶ୍ୟା ହେବ ଓ ତୁମ୍ଭର ପୁତ୍ରକନ୍ୟାଗଣ ଖଡ୍ଗରେ ପତିତ ହେବେ, ଆଉ ତୁମ୍ଭର ଭୂମି ପରିମାପକ ଦଉଡ଼ି ଦ୍ୱାରା ବିଭାଗ କରାଯିବ; ପୁଣି, ତୁମ୍ଭେ ନିଜେ ଅଶୁଚି ଦେଶରେ ମରିବ, ଆଉ ଇସ୍ରାଏଲ ନିଶ୍ଚୟ ଆପଣା ଦେଶରୁ ନିର୍ବାସିତ ହେବ।’”

< ಆಮೋಸನು 7 >