< ಆಮೋಸನು 8 >

1 ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.
כה הראני אדני יהוה והנה כלוב קיץ
2 ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.
ויאמר מה אתה ראה עמוס ואמר כלוב קיץ ויאמר יהוה אלי בא הקץ אל עמי ישראל--לא אוסיף עוד עבור לו
3 “ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”
והילילו שירות היכל ביום ההוא--נאם אדני יהוה רב הפגר בכל מקום השליך הס
4 ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.
שמעו זאת השאפים אביון ולשבית ענוי (עניי) ארץ
5 ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,
לאמר מתי יעבר החדש ונשבירה שבר והשבת ונפתחה בר--להקטין איפה ולהגדיל שקל ולעות מאזני מרמה
6 ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”
לקנות בכסף דלים ואביון בעבור נעלים ומפל בר נשביר
7 ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.
נשבע יהוה בגאון יעקב אם אשכח לנצח כל מעשיהם
8 “ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.
העל זאת לא תרגז הארץ ואבל כל יושב בה ועלתה כאר כלה ונגרשה ונשקה (ונשקעה) כיאור מצרים
9 “ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.
והיה ביום ההוא נאם אדני יהוה והבאתי השמש בצהרים והחשכתי לארץ ביום אור
10 ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.
והפכתי חגיכם לאבל וכל שיריכם לקינה והעליתי על כל מתנים שק ועל כל ראש קרחה ושמתיה כאבל יחיד ואחריתה כיום מר
11 ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.
הנה ימים באים נאם אדני יהוה והשלחתי רעב בארץ לא רעב ללחם ולא צמא למים--כי אם לשמע את דברי יהוה
12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.
ונעו מים עד ים ומצפון ועד מזרח ישוטטו לבקש את דבר יהוה ולא ימצאו
13 “ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.
ביום ההוא תתעלפנה הבתולת היפות והבחורים--בצמא
14 ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”
הנשבעים באשמת שמרון ואמרו חי אלהיך דן וחי דרך באר שבע ונפלו ולא יקומו עוד

< ಆಮೋಸನು 8 >