< ದಾನಿಯೇಲನು 2 >

1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.
नबुखद्नेस्सर राजाच्या कारर्कीदीच्या दुसऱ्या वर्षी त्यास स्वप्न पडले तो बेचैन झाला आणि झोपू शकला नाही.
2 ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
तेव्हा राजाने फर्मान काढला की, जादूगार आणि ज्योतिषी जाणणारे तसेच मांत्रिक आणि ज्ञानी लोक ह्यांनी यावे आणि राजाला ते स्वप्न सांगावे, म्हणून ते राजासमोर हजर झाले.
3 ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.
राजा त्यांना म्हणाला, “मला एक स्वप्न पडले आहे आणि त्याचा अर्थ जाणण्यास माझे मन व्याकूळ झाले आहे.”
4 ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.
तेव्हा ज्ञानी लोक राजाशी आरामी भाषेत बोलले “महाराज चिरायू असा! तुमच्या सेवकांना तुमचे स्वप्न सांगा आणि आम्ही त्याचा अर्थ तुम्हास प्रगट करू!”
5 ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
राजाने खास्दी लोकांस उत्तर दिले, “हा ठराव होऊन चुकला आहे जर तुम्ही मला स्वप्न आणि त्याचा अर्थ सांगणार नाही तर तुमच्या शरीराचे तुकडे केले जातील आणि तुमच्या घरांचे उकिरडे केले जातील.
6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.
पण जर तुम्ही मला स्वप्न आणि त्याचा अर्थ सांगाल तर तुम्हास माझ्याकडून भेट, पारितोषिक आणि मोठा मान मिळेल. यास्तव तुम्ही मला स्वप्न व त्याचा अर्थ सांगा.”
7 ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.
ते पुन्हा त्यास म्हणाले, “महाराजांनी आपल्या सेवकांस स्वप्न सांगावे म्हणजे आम्ही त्याचा अर्थ सांगू.”
8 ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.
राजाने उत्तर दिले, “मला ठाऊक आहे तुम्ही वेळ काढत आहात; पाहिजे कारण तुम्हास ठाऊक आहे की, माझा ठराव झालेला आहे.
9 ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.
पण जर तुम्ही मला स्वप्न सांगितले नाही तर तुमच्यासाठी एकच शिक्षा आहे. म्हणून माझे मन बदलत नाही तोपर्यंत तुम्ही खोट्या आणि फसव्या गोष्टी सहमत करून मला सांगाव्या असे तुमचे ठरले आहे. म्हणून मला स्वप्न सांगा म्हणजे मला समजेल तुम्ही त्याचा उलगडा करु शकता.”
10 ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
१०खास्दी लोकांनी राजास उत्तर केले, “या जगात असा कोणताच मनुष्य नाही जो राजाची ही मागणी पूर्ण करेल असा कोणताच महान आणि प्रतापी राजा नाही ज्याने असे मागणे ज्योतिषी, भुतविद्या जाणणारे आणि ज्ञानी लोकांस केली असेल.
11 ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”
११महाराज जी गोष्ट मागतात ती कठीण आहे आणि देवाशिवाय कोणीही नाही जो हे सांगेल कारण देव मानवात राहत नाही.”
12 ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.
१२हे ऐकून राजा रागाने संतापला आणि त्याने आज्ञा केली की, बाबेलमध्ये जे ज्ञानाविषयी ओळखले जातात त्यांचा नाश करण्यात यावा.
13 ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
१३हे फर्मान निघाले म्हणून जे त्यांच्या ज्ञानासाठी ओळखले जात होते त्यास मरणास सामोरे जावे लागणार होते, आणि लोक दानीएल आणि त्यांच्या मित्रांना शोधू लागले यासाठी की, त्यांचा घात करावा.
14 ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.
१४तेव्हा दानीएलाने अंगरक्षकांचा प्रधान अर्योक जो, बाबेलातील ज्ञानांचा घात करायला निघाला होता, त्यास दुरदर्शीपणाने आणि विचारपूर्वक म्हणाला.
15 ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು.
१५दानीएल राजाच्या सेनापतीला म्हणाला, “राजाकडून हा असा तातडीचा हुकूम का निघाला?” तेव्हा अर्योकने दानीएलास काय घडले ते सांगितले.
16 ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
१६मग दानीएलाने आत जाऊन राजास विनंती केली की, “त्याला समय द्यावा म्हणजे त्यास महाराजाला त्याच्या स्वप्नाचा उलगडा सांगता येईल.”
17 ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
१७तेव्हा दानीएललाने आपल्या घरात जाऊन आपले सोबती हनन्या, मीशाएल व अजऱ्या यांना ती गोष्ट कळवली,
18 ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
१८त्याने त्यांना विनंती केली की, या रहस्याविषयी स्वर्गीय देवाने दया करावी असे त्यांनी देवाजवळ मागावे म्हणजे बाबेलाच्या इतर ज्ञान्यांसोबत त्याचा आणि त्याच्या सहकाऱ्यांचा घात होऊ नये.
19 ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,
१९त्या रात्री दानीएलास दृष्टांताद्वारे, या रहस्याचा उलगडा झाला. त्यानंतर त्याने स्वर्गीय देवाचे स्तवन केले.
20 ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.
२०आणि तो म्हणाला, “देवाच्या नामाचे सदासर्वदा स्तवन होवो, कारण ज्ञान आणि सामर्थ्य त्याचे आहे.”
21 ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.
२१तो समय आणि ऋतु बदलतो, तो राजास काढतो आणि दुसऱ्यास सिंहासनावर बसवून राजे करतो; तो ज्ञान्यास आणि विवेकवंतास शहाणपण देतो.
22 ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.
२२तो गुढ आणि गहन गोष्टी प्रगट करतो, कारण अंधारात काय आहे हे तो जाणतो, आणि प्रकाश त्यामध्ये वसतो.
23 ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”
२३माझ्या पूर्वजाच्या देवा, मी तुझे आभार मानतो आणि तुझे स्तवन करतो, कारण तू मला ज्ञान आणि सामर्थ्य दिले; आणि जे आम्ही तुझ्याजवळ मागितले ते सर्व तू आता मला कळवले आहे म्हणून मी तुझे उपकार मानतो व तुझी स्तुती करतो, कारण तू राजाची गोष्ट आम्हास कळविली आहे.
24 ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.
२४हे सगळे झाल्यानंतर दानीएल ज्याची नेमणूक राजाने बाबेलाच्या सर्व ज्ञानी लोकांचा वध करण्यास ज्याची नेमणूक केली होती त्या अर्योकाकडे जाऊन म्हणाला, “बाबेलाच्या ज्ञानी लोकांस ठार करु नको, तर मला राजासमोर घेऊन जा म्हणजे मी त्यास स्वप्न आणि त्याचा अर्थ सांगेन.”
25 ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.
२५नंतर अर्योकाने दानीएलास लवकर राजासमोर नेऊन म्हटले, “यहूदाच्या बंदीवानात मला एक मनुष्य सापडला आहे जो राज्याच्या स्वप्नाचा अर्थ सांगेल.”
26 ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.
२६राजाने बेल्टशस्सर नाव दिलेल्या दानीएलास म्हटले, “माझे स्वप्न आणि त्याचा अर्थ सांगण्यास तू कुशल आहेस काय?”
27 ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
२७दानीएलाने राजास उत्तर दिले, “राजाचे गुढ प्रकट करण्याची कुशलता, ज्ञानी, व भुतविद्या जाणणारे, जादूगार किंवा ज्योतिषी त्यांच्याकडे नाही.
28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.
२८तथापी, एक देव आहे जो स्वर्गात राहतो तो रहस्य प्रगट करतो आणि त्याने भविष्यात होणारी घटना राजा नबुखद्नेस्सर आपणास कळविली आहे. तुम्ही आपल्या बिछान्यात पडले असता तुमचे स्वप्न आणि दृष्टांत तो असा.
29 “ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.
२९आपण जसे बिछान्यात पडून विचार करत होता तेव्हा आपल्या मनात हे रहस्य प्रगट करणाऱ्याने आपणास पुढे होणारी घटना कळविली.
30 ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.
३०आता माझी गोष्ट, ती अशी की; हे रहस्य मला उलगडते ते यामुळे नाही की मी इतर मनुष्यांपेक्षा अधिक ज्ञानी आहे, तर हे रहस्य यासाठी उलगडले की, राजा आपण याचा अर्थ समजावा व जो आपल्या मनातील गहन विचार समजावे.
31 “ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.
३१राजा आपण, आपल्या डोळ्यापुढे एक मोठा पुतळा पाहिला हा पुतळा शक्तीशाली आणि तेजोमय असा तुमच्यासमोर उभा राहिला, त्याचे तेज भयावह होते.
32 ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,
३२त्या पुतळ्याचे डोके उत्तम सोन्याचे होते, त्याची छाती व हात चांदीचे होते, त्यांचा मधला भाग आणि मांडया पितळेच्या.
33 ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.
३३आणि त्याचे पाय लोखंडाचे होते त्याची पावले काही भाग लोखंडाची आणि काही भाग मातीची होती.
34 ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.
३४तुम्ही वर पाहत होता तेव्हा कोणा मनुष्याचा हात लागल्यावाचून एक दगड छेदला गेला आणि त्याने त्या पुतळ्याच्या लोखंडाच्या व मातीच्या पावलांवर आदळून त्यांचे तुकडे तुकडे केले.
35 ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
३५त्यानंतर लोखंड, माती, पितळ, चांदी आणि सोने यांचे एकाच वेळी तुकडे झाले आणि ते उन्हाळ्यातील खेळ्यातल्या भुश्याप्रमाणे झाले. वारा त्यांना घेऊन गेला आणि त्यांचा मागमूस राहिला नाही. पण तो दगड जो पुतळयावर आदळला होता त्यांचा मोठा पर्वत होऊन त्याने सर्व पृथ्वी व्यापली.
36 “ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.
३६हे आपले स्वप्न आहे राजा, आता आम्ही त्याचा उलगडा सांगतो.
37 ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.
३७राजा आपण, राजाधिराज आहात ज्यास स्वर्गाच्या देवाने राज्य, सामर्थ्य, बल आणि सन्मान दिला आहे.
38 ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.
३८त्याने तुम्हास त्या जागा दिल्या जिथे माणसे राहतात. त्याने तुमच्या आधीन वनपशू आणि आकाशातील पक्षी केले आहेत आणि तुम्हास त्याचा शासक बनविले आहे, तुम्ही त्या पुतळ्याचे सुवर्ण मस्तक आहात.
39 “ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.
३९आपल्यानंतर आपणापेक्षा कनिष्ठ असे राज्य उदयास येईल, आणि पितळेचे असे तिसरे राज्य सर्व पृथ्वीवर सत्ता करतील.
40 ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.
४०तेथे चौथे राज्य असेल जे लोखंडासारखे मजबूत लोखंड तुकडे करतो हे त्यांचे तुकडे करून त्यांचा भुगा करील.
41 ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.
४१जसे आपण पाहिले की, पावले आणि बोटे काही भाग भाजलेल्या मातीचा आणि काही भाग लोखंडाचा होता, म्हणून हे राज्य विभागलेले राहील, काही भागात लोखंडाची मजबुती राहील तसेच जसे आपण लोखंड मातीत मिसळलेला पाहिले.
42 ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.
४२जशी पायांची बोटे अंशत: लोखंडाची आणि अंशत: मातीची बनली होती तसे ते राज्य असेल अंशत: बळकट आणि अंशत: ठिसूळ असे होईल.
43 ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ.
४३जसे आपण पाहिले लोखंड मऊ माती सोबत मिसळले होते, तसे लोक मिसळलेले राहतील, जसे लोखंड व माती एक होत नाही तसे हे लोकही एकत्र राहणार नाही.
44 “ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.
४४त्या राजाच्या दिवसात स्वर्गीय देव एका राज्याची स्थापना करील, त्याचा कधीही नाश होणार नाही, त्यास कोणी जिंकणार नाही ते तर सर्व राज्याचे तुकडे करून त्या सर्वांचा नाश करील व ते सर्व काळ टिकेल.
45 ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.
४५आपण जसे पाहिले कोणी मनुष्याचा हात न लागता एक दगड पर्वतांवरून तुटून पडला त्याने लोखंड, पितळे, माती, चांदी आणि सोने यांचे तुकडे केले, त्या महान परमेश्वराने राजा पुढे होणाऱ्या घटना कळविल्या आहेत. हे स्वप्न सत्य असून त्याचा हा विश्वसनीय उलगडा आहे.”
46 ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.
४६राजा नबुखद्नेस्सराने पालथे पडून दानीएलास साष्टांग दंडवत घातले आणि आज्ञा केली की त्यास अर्पण करून धूप दाखवा.
47 ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.
४७राजा दानीएलास म्हणाला, “खरोखर तुझा देव सर्व देवांचा देव आहे, राजांचा राजा आहे, तो जो रहस्यांचा उलगडा करतो, म्हणून तुला हे रहस्या प्रगट करता आले आहे.”
48 ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.
४८नंतर राजाने दानीएलास मोठा सन्मान आणि अद्भुत भेटवस्तू दिल्या. त्यास अवघ्या बाबेलातील परगण्याची सत्ता दिली आणि दानीएल बाबेलाच्या सर्व ज्ञानी लोकांचा मुख्य प्रशासक झाला.
49 ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.
४९दानीएलाने राजास केलेल्या विनंतीवरुन, राजाने शद्रुख, मेशख आणि अबेदनगो ह्यास बाबेलाच्या प्रांताचे प्रशासक नेमले पण दानीएल राजदरबारीच राहिला.

< ದಾನಿಯೇಲನು 2 >