< ದಾನಿಯೇಲನು 5 >

1 ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.
राजा बैलशत्सर ने अपने एक हजार प्रभावशाली लोगों को एक बड़ा भोज दिया और उनके साथ दाखमधु पी.
2 ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.
जब बैलशत्सर दाखमधु पी रहा था, तब उसने आदेश दिया कि जो सोने और चांदी के प्याले उसके पिता नबूकदनेज्ज़र ने येरूशलेम के मंदिर से लाए थे, उन्हें लाया जाए, ताकि राजा, उसके प्रभावशाली लोग, राजा की पत्नियां और उसकी उपपत्नियां दाखमधु पीने के लिए उनका उपयोग कर सकें.
3 ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
इसलिये येरूशलेम के परमेश्वर के मंदिर से निकालकर लाए गए सोने के प्याले लाये गये, और राजा और उसके प्रभावशाली लोग, उसकी पत्नियों और उपपत्नियों ने उनमें दाखमधु पान किया.
4 ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.
वे दाखमधु पीकर सोने और चांदी, कांसा, लोहा, लकड़ी और पत्थर के देवताओं की स्तुति करने लगे.
5 ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
तब अचानक एक मानव हाथ की उंगलियां प्रकट हुईं और राजमहल में दीवट के पास दीवार के पलस्तर पर कुछ लिखने लगीं. लिखते हुए उस हाथ पर राजा की दृष्टि पड़ी.
6 ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
उसे देखकर राजा के चेहरे का रंग उड़ गया और वह इतना डर गया कि उसके पैर ढीले हो गए और कांपने से उसके घुटने एक दूसरे से टकराने लगे.
7 ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.
तब राजा ने तांत्रिक, ज्योतिषी और दैवीय शक्तिवालों को बुलवाया और उसने बाबेल के उन बुद्धिमान लोगों से कहा, “जो कोई इस लिखावट को पढ़ेगा और उसका अर्थ मुझे बताएगा, उसे राजसी वस्त्र पहनाया जाएगा और उसके गले में सोने की माला पहनाई जाएगी, और उसे राज्य में तीसरे नंबर का उच्च पदस्थ शासक बनाया जाएगा.”
8 ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.
तब राजा के सब बुद्धिमान लोग आए, पर वे उस दीवार पर लिखी बात को पढ़ न सके और न ही वे राजा को उसका अर्थ बता सके.
9 ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.
इससे राजा बैलशत्सर और भयभीत हो गया और उसका चेहरे का रंग और उड़ गया. इससे उसके प्रभावशाली लोग भी परेशान हो गए.
10 ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!
राजा एवं उसके प्रभावशाली लोगों की आवाज सुनकर, रानी भोज के कक्ष में आई और कहने लगी, “राजा चिरंजीवी हों! आप चिंता न करें! और आपके चेहरे का रंग न उड़े!
11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
आपके राज्य में एक ऐसा व्यक्ति है, जिसमें पवित्र देवताओं की आत्मा रहती है. आपके पिता के समय में इस व्यक्ति में देवताओं के समान समझ-बूझ, बुद्धि और ज्ञान पायी गई थी. आपके पिता, राजा नबूकदनेज्ज़र ने उसे जादूगरों, तांत्रिकों, ज्योंतिषियों और दैवीय शक्तिवालों का मुखिया नियुक्त किया था.
12 ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.
उसने ऐसा किया क्योंकि दानिएल नामक यह व्यक्ति के पास, जिसे राजा बैलशत्सर नाम से पुकारते थे, तेज दिमाग और ज्ञान और समझ थी, और उसमें स्वप्नों का अर्थ बताने, पहेलियों को समझाने और कठिन समस्याओं का हल निकालने की योग्यता पायी गई थी. इसलिये दानिएल को बुलवा लीजिए, और वह आपको लिखावट का अर्थ बता देगा.”
13 ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
तब दानिएल को राजा के सामने लाया गया, और राजा ने उससे कहा, “क्या तुम दानिएल हो, और उनमें से एक हो, जिन्हें मेरे पिता, राजा ने यहूदाह से बंधुआई में लाया था?
14 ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
मैंने सुना है कि तुममें देवताओं की आत्मा रहती है और यह भी कि तुममें समझ-बूझ, बुद्धि और असाधारण ज्ञान है.
15 ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
बुद्धिमान और तांत्रिक लोग इस लिखावट को पढ़ने और इसका अर्थ बताने के लिये मेरे पास लाये गए, पर वे इसको समझा न सके.
16 ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
मैंने सुना है कि तुममें अर्थ बताने और कठिन समस्याओं का हल निकालने की योग्यता है. यदि तुम इस लेख को पढ़कर इसका अर्थ मुझे बता सके, तो तुम्हें राजसी कपड़े पहनाए जाएंगे और तुम्हारे गले में सोने की माला पहनाई जाएगी, और तुम्हें तीसरा उच्च पदस्थ शासक बनाया जाएगा.”
17 ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.
तब दानिएल ने राजा को उत्तर दिया, “आप अपने उपहारों को अपने पास रखें और अपने पुरस्कारों को किसी और को दे दें. फिर भी मैं यह लिखावट राजा के लिये पढ़ूंगा और उसको इसका अर्थ भी बताऊंगा.
18 “ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.
“हे महाराज, सर्वोच्च परमेश्वर ने आपके पिता नबूकदनेज्ज़र को राजसत्ता, महानता, महिमा और वैभव दिया.
19 ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.
क्योंकि परमेश्वर ने उसे ऊंचा पद दिया था, इसलिये सारी जाति और हर भाषा के लोग आपके पिता से डरते थे और उनका भय मानते थे. जिन्हें वह प्राण-दंड देना चाहता, उन्हें वह प्राण-दंड देता; जिन्हें वह छोड़ना चाहता, उन्हें वह छोड़ देता; जिन्हें वह ऊंचा पद देना चाहता, उन्हें वह ऊंचा पद देता; और जिन्हें वह नीचा दिखाना चाहता, उन्हें वह नीचा दिखाता.
20 ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.
पर जब घमंड से उसका मन फूल गया और उसका हृदय कठोर हो गया, तो उसे राज सिंहासन से हटा दिया गया और उसकी प्रतिष्ठा छीन ली गई.
21 ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.
उसे लोगों के बीच से भगा दिया गया और उसे एक जानवर का मन दिया गया; वह जंगली गधों के साथ रहता था और बैल की तरह घांस खाता था; और उसका शरीर आकाश के ओस से भीगता था, यह तब तक होता रहा, जब तक कि उसने यह न मान लिया कि पृथ्वी पर सब राज्यों के ऊपर सर्वोच्च परमेश्वर ही परम प्रधान हैं और वे जिसे चाहते हैं उसे उन राज्यों पर शासक ठहराते हैं.
22 “ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ
“पर हे बैलशत्सर, उनके बेटे होकर भी आपने अपने आपको नम्र नहीं किया, यद्यपि आप यह सब जानते थे.
23 ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.
वरन आपने अपने आपको स्वर्ग के प्रभु से भी बड़ा बना लिया है. आपने उनके मंदिर से प्यालों को अपने पास मंगा लिया, और आप और आपके प्रभावशाली लोगों ने, आपकी पत्नियों और आपकी उपपत्नियों ने उनमें दाखमधु पिया है. आपने चांदी, सोना, कांसा, लोहा, लकड़ी और पत्थर के देवताओं की महिमा किया है, जो न तो देख सकते हैं, न सुन सकते है, और न ही समझ सकते हैं. पर आपने उस परमेश्वर का आदर नहीं किया, जिनके हाथ में आपका जीवन और आपके सारे क्रियाकलाप हैं.
24 ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ.
इसलिये परमेश्वर ने यह हाथ भेजा, जिसने यह लेख लिखा है.
25 “ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್.
“यह वह लेख है जिसे लिखा गया था: मने, मने, तकेल, फरसीन
26 “ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.
“इन शब्दों का अर्थ इस प्रकार है: “मने: परमेश्वर आपके राज्य करने के दिनों की गिनती कर चुके हैं और इसका अंत आ चुका है.
27 “ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.
“तकेल: आप तराजू पर तौले जा चुके हैं और आपको हल्का पाया गया है.
28 “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.
“फरसीन: आपके राज्य को बांट दिया गया है और मेदियों तथा फ़ारसियों को दे दिया गया है.”
29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.
तब बैलशत्सर की आज्ञा से दानिएल को राजसी कपड़े पहनाए गए, उसके गले में सोने की एक माला पहनाईं गई, और राज्य में तीसरे उच्च पदस्थ शासक के रूप में उसकी घोषणा की गई.
30 ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.
उसी रात, कसदियों का राजा, बैलशत्सर मार डाला गया,
31 ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.
और इसके बाद दारयावेश, जो मेदिया था, बासठ साल के उम्र में उस राज्य का राजा बना.

< ದಾನಿಯೇಲನು 5 >