< ದಾನಿಯೇಲನು 6 >

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.
שְׁפַר֙ קֳדָ֣ם דָּרְיָ֔וֶשׁ וַהֲקִים֙ עַל־מַלְכוּתָ֔א לַאֲחַשְׁדַּרְפְּנַיָּ֖א מְאָ֣ה וְעֶשְׂרִ֑ין דִּ֥י לֶהֱוֺ֖ן בְּכָל־מַלְכוּתָֽא׃
2 ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.
וְעֵ֤לָּא מִנְּהוֹן֙ סָרְכִ֣ין תְּלָתָ֔א דִּ֥י דָנִיֵּ֖אל חַֽד־מִנְּה֑וֹן דִּֽי־לֶהֱוֺ֞ן אֲחַשְׁדַּרְפְּנַיָּ֣א אִלֵּ֗ין יָהֲבִ֤ין לְהוֹן֙ טַעְמָ֔א וּמַלְכָּ֖א לָֽא־לֶהֱוֵ֥א נָזִֽק׃
3 ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
אֱדַ֙יִן֙ דָּנִיֵּ֣אל דְּנָ֔ה הֲוָ֣א מִתְנַצַּ֔ח עַל־סָרְכַיָּ֖א וַאֲחַשְׁדַּרְפְּנַיָּ֑א כָּל־קֳבֵ֗ל דִּ֣י ר֤וּחַ יַתִּירָא֙ בֵּ֔הּ וּמַלְכָּ֣א עֲשִׁ֔ית לַהֲקָמוּתֵ֖הּ עַל־כָּל־מַלְכוּתָֽא׃
4 ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
אֱדַ֨יִן סָֽרְכַיָּ֜א וַאֲחַשְׁדַּרְפְּנַיָּ֗א הֲו֨וֹ בָעַ֧יִן עִלָּ֛ה לְהַשְׁכָּחָ֥ה לְדָנִיֵּ֖אל מִצַּ֣ד מַלְכוּתָ֑א וְכָל־עִלָּ֨ה וּשְׁחִיתָ֜ה לָא־יָכְלִ֣ין לְהַשְׁכָּחָ֗ה כָּל־קֳבֵל֙ דִּֽי־מְהֵימַ֣ן ה֔וּא וְכָל־שָׁלוּ֙ וּשְׁחִיתָ֔ה לָ֥א הִשְׁתְּכַ֖חַת עֲלֽוֹהִי׃
5 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.
אֱ֠דַיִן גֻּבְרַיָּ֤א אִלֵּךְ֙ אָֽמְרִ֔ין דִּ֣י לָ֧א נְהַשְׁכַּ֛ח לְדָנִיֵּ֥אל דְּנָ֖ה כָּל־עִלָּ֑א לָהֵ֕ן הַשְׁכַּ֥חְנָֽה עֲל֖וֹהִי בְּדָ֥ת אֱלָהֵֽהּ׃ ס
6 ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
אֱ֠דַיִן סָרְכַיָּ֤א וַאֲחַשְׁדַּרְפְּנַיָּא֙ אִלֵּ֔ן הַרְגִּ֖שׁוּ עַל־מַלְכָּ֑א וְכֵן֙ אָמְרִ֣ין לֵ֔הּ דָּרְיָ֥וֶשׁ מַלְכָּ֖א לְעָלְמִ֥ין חֱיִֽי׃
7 ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.
אִתְיָעַ֜טוּ כֹּ֣ל ׀ סָרְכֵ֣י מַלְכוּתָ֗א סִגְנַיָּ֤א וַֽאֲחַשְׁדַּרְפְּנַיָּא֙ הַדָּֽבְרַיָּ֣א וּפַחֲוָתָ֔א לְקַיָּמָ֤ה קְיָם֙ מַלְכָּ֔א וּלְתַקָּפָ֖ה אֱסָ֑ר דִּ֣י כָל־דִּֽי־יִבְעֵ֣ה בָ֠עוּ מִן־כָּל־אֱלָ֨הּ וֶֽאֱנָ֜שׁ עַד־יוֹמִ֣ין תְּלָתִ֗ין לָהֵן֙ מִנָּ֣ךְ מַלְכָּ֔א יִתְרְמֵ֕א לְגֹ֖ב אַרְיָוָתָֽא׃
8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.
כְּעַ֣ן מַלְכָּ֔א תְּקִ֥ים אֱסָרָ֖א וְתִרְשֻׁ֣ם כְּתָבָ֑א דִּ֣י לָ֧א לְהַשְׁנָיָ֛ה כְּדָת־מָדַ֥י וּפָרַ֖ס דִּי־לָ֥א תֶעְדֵּֽא׃
9 ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.
כָּל־קֳבֵ֖ל דְּנָ֑ה מַלְכָּא֙ דָּֽרְיָ֔וֶשׁ רְשַׁ֥ם כְּתָבָ֖א וֶאֱסָרָֽא׃
10 ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.
וְ֠דָנִיֵּאל כְּדִ֨י יְדַ֜ע דִּֽי־רְשִׁ֤ים כְּתָבָא֙ עַ֣ל לְבַיְתֵ֔הּ וְכַוִּ֨ין פְּתִיחָ֥ן לֵהּ֙ בְּעִלִּיתֵ֔הּ נֶ֖גֶד יְרוּשְׁלֶ֑ם וְזִמְנִין֩ תְּלָתָ֨ה בְיוֹמָ֜א ה֣וּא ׀ בָּרֵ֣ךְ עַל־בִּרְכ֗וֹהִי וּמְצַלֵּ֤א וּמוֹדֵא֙ קֳדָ֣ם אֱלָהֵ֔הּ כָּל־קֳבֵל֙ דִּֽי־הֲוָ֣א עָבֵ֔ד מִן־קַדְמַ֖ת דְּנָֽה׃ ס
11 ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.
אֱ֠דַיִן גֻּבְרַיָּ֤א אִלֵּךְ֙ הַרְגִּ֔שׁוּ וְהַשְׁכַּ֖חוּ לְדָנִיֵּ֑אל בָּעֵ֥א וּמִתְחַנַּ֖ן קֳדָ֥ם אֱלָהֵֽהּ׃
12 ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.
בֵּ֠אדַיִן קְרִ֨יבוּ וְאָמְרִ֥ין קֳדָם־מַלְכָּא֮ עַל־אֱסָ֣ר מַלְכָּא֒ הֲלָ֧א אֱסָ֣ר רְשַׁ֗מְתָּ דִּ֣י כָל־אֱנָ֡שׁ דִּֽי־יִבְעֵה֩ מִן־כָּל־אֱלָ֨הּ וֶֽאֱנָ֜שׁ עַד־יוֹמִ֣ין תְּלָתִ֗ין לָהֵן֙ מִנָּ֣ךְ מַלְכָּ֔א יִתְרְמֵ֕א לְג֖וֹב אַרְיָותָ֑א עָנֵ֨ה מַלְכָּ֜א וְאָמַ֗ר יַצִּיבָ֧א מִלְּתָ֛א כְּדָת־מָדַ֥י וּפָרַ֖ס דִּי־לָ֥א תֶעְדֵּֽא׃
13 ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.
בֵּ֠אדַיִן עֲנ֣וֹ וְאָמְרִין֮ קֳדָ֣ם מַלְכָּא֒ דִּ֣י דָנִיֵּ֡אל דִּי֩ מִן־בְּנֵ֨י גָלוּתָ֜א דִּ֣י יְה֗וּד לָא־שָׂ֨ם עליך מַלְכָּא֙ טְעֵ֔ם וְעַל־אֱסָרָ֖א דִּ֣י רְשַׁ֑מְתָּ וְזִמְנִ֤ין תְּלָתָה֙ בְּיוֹמָ֔א בָּעֵ֖א בָּעוּתֵֽהּ׃
14 ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.
אֱדַ֨יִן מַלְכָּ֜א כְּדִ֧י מִלְּתָ֣א שְׁמַ֗ע שַׂגִּיא֙ בְּאֵ֣שׁ עֲל֔וֹהִי וְעַ֧ל דָּנִיֵּ֛אל שָׂ֥ם בָּ֖ל לְשֵׁיזָבוּתֵ֑הּ וְעַד֙ מֶֽעָלֵ֣י שִׁמְשָׁ֔א הֲוָ֥א מִשְׁתַּדַּ֖ר לְהַצָּלוּתֵֽהּ׃
15 ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.
בֵּאדַ֙יִן֙ גֻּבְרַיָּ֣א אִלֵּ֔ךְ הַרְגִּ֖שׁוּ עַל־מַלְכָּ֑א וְאָמְרִ֣ין לְמַלְכָּ֗א דַּ֤ע מַלְכָּא֙ דִּֽי־דָת֙ לְמָדַ֣י וּפָרַ֔ס דִּֽי־כָל־אֱסָ֥ר וּקְיָ֛ם דִּֽי־מַלְכָּ֥א יְהָקֵ֖ים לָ֥א לְהַשְׁנָיָֽה׃
16 ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.
בֵּאדַ֜יִן מַלְכָּ֣א אֲמַ֗ר וְהַיְתִיו֙ לְדָ֣נִיֵּ֔אל וּרְמ֕וֹ לְגֻבָּ֖א דִּ֣י אַרְיָוָתָ֑א עָנֵ֤ה מַלְכָּא֙ וְאָמַ֣ר לְדָנִיֵּ֔אל אֱלָהָ֗ךְ דִּ֣י אנתה פָּֽלַֽח־לֵהּ֙ בִּתְדִירָ֔א ה֖וּא יְשֵׁיזְבִנָּֽךְ׃
17 ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.
וְהֵיתָ֙יִת֙ אֶ֣בֶן חֲדָ֔ה וְשֻׂמַ֖ת עַל־פֻּ֣ם גֻּבָּ֑א וְחַתְמַ֨הּ מַלְכָּ֜א בְּעִזְקְתֵ֗הּ וּבְעִזְקָת֙ רַבְרְבָנ֔וֹהִי דִּ֛י לָא־תִשְׁנֵ֥א צְב֖וּ בְּדָנִיֵּֽאל׃
18 ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.
אֱ֠דַיִן אֲזַ֨ל מַלְכָּ֤א לְהֵֽיכְלֵהּ֙ וּבָ֣ת טְוָ֔ת וְדַחֲוָ֖ן לָא־הַנְעֵ֣ל קָֽדָמ֑וֹהִי וְשִׁנְתֵּ֖הּ נַדַּ֥ת עֲלֽוֹהִי׃
19 ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
בֵּאדַ֣יִן מַלְכָּ֔א בִּשְׁפַּרְפָּרָ֖א יְק֣וּם בְּנָגְהָ֑א וּבְהִ֨תְבְּהָלָ֔ה לְגֻבָּ֥א דִֽי־אַרְיָוָתָ֖א אֲזַֽל׃
20 ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.
וּכְמִקְרְבֵ֣הּ לְגֻבָּ֔א לְדָ֣נִיֵּ֔אל בְּקָ֥ל עֲצִ֖יב זְעִ֑ק עָנֵ֨ה מַלְכָּ֜א וְאָמַ֣ר לְדָנִיֵּ֗אל דָּֽנִיֵּאל֙ עֲבֵד֙ אֱלָהָ֣א חַיָּ֔א אֱלָהָ֗ךְ דִּ֣י אנתה פָּֽלַֽח־לֵהּ֙ בִּתְדִירָ֔א הַיְכִ֥ל לְשֵׁיזָבוּתָ֖ךְ מִן־אַרְיָוָתָֽא ׃
21 ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
אֱדַ֙יִן֙ דָּנִיֶּ֔אל עִם־מַלְכָּ֖א מַלִּ֑ל מַלְכָּ֖א לְעָלְמִ֥ין חֱיִֽי׃
22 ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.
אֱלָהִ֞י שְׁלַ֣ח מַלְאֲכֵ֗הּ וּֽסֲגַ֛ר פֻּ֥ם אַרְיָוָתָ֖א וְלָ֣א חַבְּל֑וּנִי כָּל־קֳבֵ֗ל דִּ֤י קָֽדָמ֙וֹהִי֙ זָכוּ֙ הִשְׁתְּכַ֣חַת לִ֔י וְאַ֤ף קדמיך מַלְכָּ֔א חֲבוּלָ֖ה לָ֥א עַבְדֵֽת׃
23 ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.
בֵּאדַ֣יִן מַלְכָּ֗א שַׂגִּיא֙ טְאֵ֣ב עֲל֔וֹהִי וּלְדָ֣נִיֵּ֔אל אֲמַ֖ר לְהַנְסָקָ֣ה מִן־גֻּבָּ֑א וְהֻסַּ֨ק דָּנִיֵּ֜אל מִן־גֻּבָּ֗א וְכָל־חֲבָל֙ לָא־הִשְׁתְּכַ֣ח בֵּ֔הּ דִּ֖י הֵימִ֥ן בֵּאלָהֵֽהּ׃
24 ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.
וַאֲמַ֣ר מַלְכָּ֗א וְהַיְתִ֞יו גֻּבְרַיָּ֤א אִלֵּךְ֙ דִּֽי־אֲכַ֤לוּ קַרְצ֙וֹהִי֙ דִּ֣י דָֽנִיֵּ֔אל וּלְגֹ֤ב אַרְיָוָתָא֙ רְמ֔וֹ אִנּ֖וּן בְּנֵיה֣וֹן וּנְשֵׁיה֑וֹן וְלָֽא־מְט֞וֹ לְאַרְעִ֣ית גֻּבָּ֗א עַ֠ד דִּֽי־שְׁלִ֤טֽוּ בְהוֹן֙ אַרְיָ֣וָתָ֔א וְכָל־גַּרְמֵיה֖וֹן הַדִּֽקוּ׃
25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.
בֵּאדַ֜יִן דָּרְיָ֣וֶשׁ מַלְכָּ֗א כְּ֠תַב לְֽכָל־עַֽמְמַיָּ֞א אֻמַיָּ֧א וְלִשָּׁנַיָּ֛א דִּֽי־דארין בְּכָל־אַרְעָ֖א שְׁלָמְכ֥וֹן יִשְׂגֵּֽא׃
26 “ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ.
מִן־קֳדָמַי֮ שִׂ֣ים טְעֵם֒ דִּ֣י ׀ בְּכָל־שָׁלְטָ֣ן מַלְכוּתִ֗י לֶהֱוֺ֤ן זאעין וְדָ֣חֲלִ֔ין מִן־קֳדָ֖ם אֱלָהֵ֣הּ דִּי־דָֽנִיֵּ֑אל דִּי־ה֣וּא ׀ אֱלָהָ֣א חַיָּ֗א וְקַיָּם֙ לְעָ֣לְמִ֔ין וּמַלְכוּתֵהּ֙ דִּֽי־לָ֣א תִתְחַבַּ֔ל וְשָׁלְטָנֵ֖הּ עַד־סוֹפָֽא׃
27 ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು,
מְשֵׁיזִ֣ב וּמַצִּ֗ל וְעָבֵד֙ אָתִ֣ין וְתִמְהִ֔ין בִּשְׁמַיָּ֖א וּבְאַרְעָ֑א דִּ֚י שֵׁיזִ֣יב לְדָֽנִיֵּ֔אל מִן־יַ֖ד אַרְיָוָתָֽא׃
28 ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.
וְדָנִיֵּ֣אל דְּנָ֔ה הַצְלַ֖ח בְּמַלְכ֣וּת דָּרְיָ֑וֶשׁ וּבְמַלְכ֖וּת כּ֥וֹרֶשׁ פרסיא׃ פ

< ದಾನಿಯೇಲನು 6 >