< ಪ್ರಸಂಗಿ 12 >
1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.
তোমার যৌবনকালে তোমার সৃষ্টিকর্তাকে স্মরণ করো, দুঃখের দিনগুলি আসার আগে আর সেই বছর সকল কাছে আসার সময় তুমি যখন বলবে, “এই সবে আমার কোনো আনন্দ নেই”—
2 ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.
তখন সূর্য ও আলো আর চাঁদ ও তারা যখন অন্ধকার হবে, আর বৃষ্টির পরে মেঘ ফিরে আসে;
3 ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
সেদিনে বাড়ির রক্ষাকারীরা কাঁপবে, আর শক্তিশালী লোকেরা নত হবে, যারা পেষণ করে তারা অল্প সংখ্যক বলে কাজ ছেড়ে দেবে। আর যারা জানালার ভিতর থেকে দেখে তাদের দৃষ্টি অস্পষ্ট হবে;
4 ಬೀದಿ ಬಾಗಿಲುಗಳು ಮುಚ್ಚಿರುವುವು, ಅರೆಯುವ ಶಬ್ದವು ಕಡಿಮೆಯಾಗುವುದು; ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. ಮುಂಜಾನೆಯ ಗಾನಸ್ವರ ಮಂದವಾಗುವುದು.
যখন রাস্তার দিকের দরজা বন্ধ হয়ে যাবে আর জাঁতার আওয়াজ কমে যাবে; যখন পাখির আওয়াজে লোকে উঠবে, কিন্তু তাদের সব গান ক্ষীণ হয়ে যাবে;
5 ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.
যখন লোকেরা উঁচু জায়গাকে আর রাস্তার বিপদকে ভয় পাবে; যখন কাঠবাদাম গাছে ফুল ফুটবে আর ফড়িং টেনে টেনে হাঁটবে এবং বাসনা আর উত্তেজিত হবে না। তখন লোকে তাদের অনন্তকালের বাড়িতে চলে যাবে আর বিলাপকারীরা পথে পথে ঘুরবে।
6 ಬೆಳ್ಳಿಯಂತ ಸರ ಕಿತ್ತುಹೋಗುವುದು, ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. ಬಾವಿಯ ರಾಟೆ ಮುರಿಯುವುದು.
রুপোর তার ছিঁড়ে যাওয়ার আগে, কিংবা সোনার পাত্র ভেঙে যাওয়ার আগে; ফোয়ারার কাছে কলশি চুরমার করার আগে, কিংবা কুয়োর জল তোলার চাকা ভেঙে যাওয়ার আগে—তাকে স্মরণ করো।
7 ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.
আর ধুলো মাটিতেই ফিরে যাবে যেখান থেকে সে এসেছে, এবং আত্মা যাঁর দান, সেই ঈশ্বরের কাছেই ফিরে যাবে।
8 “ವ್ಯರ್ಥ, ವ್ಯರ್ಥವೇ! ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ.
উপদেশক বললেন, “অসার! অসার! সবকিছুই অসার!”
9 ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.
উপদেশক নিজেই কেবল জ্ঞানবান ছিলেন না, কিন্তু তিনি লোকদের জ্ঞান শিক্ষা দিয়েছেন। তিনি চিন্তা করে ও পরীক্ষা করে অনেক প্রবাদ সাজিয়েছেন।
10 ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು.
উপদেশক উপযুক্ত শব্দের খোঁজ করেছেন, আর তিনি যা লিখেছেন তা খাঁটি ও সত্যিকথা।
11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.
জ্ঞানবান লোকদের কথা রাখালের অঙ্কুশের মতো, তাদের কথাগুলি একত্র করলে মনে হয় যেন সেগুলি সব শক্ত করে গাঁথা পেরেক—যা একজন রাখাল বলেছেন।
12 ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ.
হে আমার সন্তান, এর সঙ্গে কিছু যোগ করা হচ্ছে কি না সেই বিষয় সতর্ক থেকো। বই লেখার শেষ নেই আর অনেক পড়াশোনায় শরীর ক্লান্ত হয়।
13 ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.
এখন সবকিছু তো শোনা হল; তবে শেষ কথা এই যে ঈশ্বরকে ভয় করো এবং তাঁর আজ্ঞাসকল পালন করো, কেননা এটাই সমস্ত মানুষের কর্তব্য।
14 ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.
কারণ ঈশ্বর প্রত্যেকটি কাজের বিচার করবেন, এমনকি সমস্ত গুপ্ত বিষয়, তা ভালো হোক বা মন্দ হোক।