< ಪ್ರಸಂಗಿ 2 >

1 “ಈಗ ಬಾ, ಯಾವುದು ಒಳ್ಳೆಯದು ಎಂಬುದನ್ನು ಸುಖಭೋಗಗಳಿಂದ ನಿನ್ನನ್ನು ಪರೀಕ್ಷಿಸುವೆನು,” ಎಂದು ನನ್ನ ಮನಸ್ಸಿನಲ್ಲಿ ಹೇಳಿಕೊಂಡೆ. ಆದರೆ ಅದೂ ಕೂಡ ವ್ಯರ್ಥವಾದದ್ದೆಂದು ರುಜುವಾತಾಯಿತು.
मी आपल्या मनात म्हटले, “आता ये, मी आनंदाद्वारे तुझी पारख करतो. म्हणून आनंदाचा उपभोग घे पण पाहा, हे सुद्धा केवळ तात्पुरत्या हवेच्या झुळकेसारखे आहे.”
2 “ನಗುವುದು ಮೂರ್ಖತನ, ಸುಖಭೋಗ ಏನನ್ನು ಸಾಧಿಸುತ್ತದೆ,” ಎಂದು ಹೇಳಿಕೊಂಡೆ.
मी हास्याविषयी म्हटले, ते वेडेपण आहे. आणि आनंदाविषयी म्हटले, त्याचा काय उपयोग आहे?
3 ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.
जे मनुष्यास चांगले, जे त्यांनी आकाशाखाली आपल्या आयुष्याचे सर्व दिवस करावे ते मी शोधून पाहीपर्यंत माझे मन मला ज्ञानाच्या योगाने वाट दाखवीत घेऊन जात असताही, मी आपली इच्छा द्राक्षरसाने कशी पुरी करावी आणि मूर्खपणाच्या आचारांचे अवलंबन कसे करता येईल याचा मी आपल्या मनाशी शोध केला.
4 ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.
नंतर मी महान गोष्टी करायला सुरुवात केली. मी स्वतःसाठी घरे बांधली, आणि स्वत: साठी द्राक्षाचे मळे लावले.
5 ನಾನು ಉದ್ಯಾನವನಗಳನ್ನೂ, ತೋಟಗಳನ್ನೂ ಮಾಡಿಕೊಂಡು, ಅವುಗಳಲ್ಲಿ ಸಕಲ ವಿಧವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
मी बागा लावल्या आणि मोठमोठे बगीचे केले. मी सर्व प्रकारची फळझाडे त्यामध्ये लावली.
6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕೆ ನಾನು ಜಲಾಶಯಗಳನ್ನು ಮಾಡಿಕೊಂಡೆನು.
झाडे लावलेल्या वनास पाणी पुरवावे म्हणून मी आपणासाठी तलाव निर्माण केले.
7 ನನಗೆ ದಾಸ, ದಾಸಿಯರನ್ನು ಕೊಂಡುಕೊಂಡೆನು. ನನ್ನ ಮನೆಯಲ್ಲಿ ಜನಿಸಿದ ಇತರ ಗುಲಾಮರು ಸಹ ಇದ್ದರು. ನನಗಿಂತ ಮುಂಚೆ ಯೆರೂಸಲೇಮಿನಲ್ಲಿ, ಇದ್ದವರೆಲ್ಲರಿಗಿಂತಲೂ ಹೆಚ್ಚಾಗಿ ಬಹಳ ಸಂಪತ್ತು ಉಳ್ಳವನಾಗಿ ಹೆಚ್ಚು ದನಕುರಿಗಳ ಮಂದೆಗಳನ್ನು ಹೊಂದಿದೆನು.
मी पुरुष आणि स्त्री गुलाम विकत घेतले. माझ्या महालातही गुलामांचा जन्म झाला. माझ्यापूर्वी यरूशलेमेत राज्य केलेल्या कोणाही राजाजवळ नव्हते एवढे अधिक गुरांचे आणि शेरडामेंढरांच्या कळपाचे मोठे धन मजजवळ होते.
8 ನಾನು ಬೆಳ್ಳಿಬಂಗಾರಗಳನ್ನು, ಅರಸರ ಮತ್ತು ಪ್ರಾಂತಗಳ ವಿಶೇಷ ಸಂಪತ್ತನ್ನು ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗವಿಲಾಸಕ್ಕಾಗಿ ಅನೇಕ ಉಪಪತ್ನಿಯರನ್ನು ಸಂಪಾದಿಸಿಕೊಂಡೆನು.
मी माझ्यासाठी सोने आणि चांदी, राजे व राष्ट्रे यांच्या संपत्तीचा संग्रह केला. माझ्यासाठी गाणे म्हणणारे स्त्री-पुरुष माझ्याजवळ होते आणि मानवजातीस आनंदीत करणारे सर्व होते जसे पुष्कळ स्त्रिया ठेवल्या.
9 ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಹೆಚ್ಚು ಅಭಿವೃದ್ಧಿಹೊಂದಿ, ಶ್ರೀಮಂತನಾದೆನು. ಇದೆಲ್ಲದರಲ್ಲಿ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.
जे माझ्यापूर्वी यरूशलेमेत होते त्या सर्वापेक्षा अधिक धनवान व महान झालो आणि माझे ज्ञान माझ्याबरोबर कायम राहिले.
10 ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.
१०जे काही माझ्या डोळ्यांनी इच्छिले, ते मी त्यांच्यापासून वेगळे केले नाही. मी माझे मन कोणत्याही आनंदापासून आवरले नाही, कारण माझ्या सर्व कष्टांमुळे माझे मन आनंदीत होत असे; आणि माझ्या सर्व परिश्रमाचे फळ आनंद हेच होते.
11 ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ.
११नंतर मी आपल्या हाताने केलेली सर्व कामे जी मी पार पाडली होती, आणि कार्य साधायला मी जे श्रम केले होते त्याकडे पाहिले, परंतु पुन्हा सर्वकाही व्यर्थ होते आणि वायफळ प्रयत्न करणे असे होते; भूतलावर त्यामध्ये तेथे काही लाभ नाही.
12 ಅನಂತರ ಜ್ಞಾನವನ್ನೂ ಮನಗುಂದುವಿಕೆಯನ್ನೂ ಮೂಡತೆಯನ್ನೂ ಮತ್ತೆ ಯೋಚಿಸುವುದಕ್ಕೆ ನಾನು ತಿರುಗಿಕೊಂಡೆನು. ಈಗಾಗಲೇ ಮಾಡಿದ್ದನ್ನು ಬಿಟ್ಟು, ಅರಸನ ತರುವಾಯ ಬರುವವನು ಹೊಸದಾಗಿ ಏನು ಮಾಡಬಲ್ಲನು?
१२मग मी ज्ञान, वेडेपणा व मूर्खपणा याकडे लक्ष देण्यास वळलो. कारण जो राजा आल्यानंतर त्याच्या मागून येणारा राजा काय करील? जे काही त्याने यापूर्वी केले तेच तो करणार.
13 ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
१३नंतर मला समजायला लागले जसा अंधारापेक्षा प्रकाश जितका उत्तम आहे तसे मूर्खतेपेक्षा ज्ञान हितकारक आहे.
14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ ನಾನು ಗ್ರಹಿಸಿಕೊಂಡೆನು.
१४ज्ञानी मनुष्य काय करतो हे त्याचे डोळे पाहत असतात, पण मूर्ख अंधारात चालतो, असे असून सर्वांची एक सारखीच गती असते. असेही मी समजलो.
15 ಆಗ ನಾನು ನನ್ನ ಮನಸ್ಸಿನಲ್ಲಿ, “ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುತ್ತದೆ. ನಾನು ಜ್ಞಾನಿಯಾಗುವುದರಿಂದ ಲಾಭವೇನು?” “ಇದು ಸಹ ವ್ಯರ್ಥವೇ,” ಎಂದುಕೊಂಡೆನು.
१५मग मी आपल्या मनात म्हणालो, मूर्खाविषयी जे काय घडते, ते माझ्याही बाबतीत घडेल, मग जर मी फार ज्ञानी झालो तरी त्याच्यात काय फरक पडेल? मी आपल्या मनात अनुमान काढले, हे सुद्धा व्यर्थच आहे.
16 ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ಬಹಳ ದಿನಗಳವರೆಗೆ ಜ್ಞಾಪಕಮಾಡಿಕೊಳ್ಳುವುದಿಲ್ಲ. ಇವರಿಬ್ಬರನ್ನೂ ಮರೆತುಹೋದ ದಿನಗಳು ಈಗಾಗಲೇ ಬಂದಿವೆ. ಮೂಢನಂತೆ ಜ್ಞಾನಿಯೂ ಸಹ ಸಾಯಲೇಬೇಕು.
१६मूर्खाप्रमाणेच ज्ञान्याची आठवण सर्वकाळपर्यंत राहणार नाही. कारण पुढे येणाऱ्या दिवसात सर्वकाही अगदी विसरून जातील म्हणून शहाणा मनुष्य मूर्खासारखाच मरतो.
17 ಸೂರ್ಯನ ಕೆಳಗೆ ನಡೆಯುವ ಕಾರ್ಯವು ನನಗೆ ದುಃಖಕರವಾಗಿ ತೋರಿತು. ಆದಕಾರಣ ನಾನು ನನ್ನ ಜೀವನವನ್ನು ಹಗೆ ಮಾಡಿದೆನು. ಗಾಳಿಯನ್ನು ಬೆನ್ನಟ್ಟುವಂತೆ ಎಲ್ಲವೂ ವ್ಯರ್ಥವಾಗಿದೆ.
१७यामुळे मला जीवनाचा तिरस्कार वाटला. जे काम भूतलावर करण्यात येते त्याचे मला वाईट वाटले. सर्व गोष्टी व्यर्थ आहेत आणि वायफळ प्रयत्न करण्यासारखे आहेत.
18 ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು.
१८माझे अपार कष्ट, जे मी भूतलावर केले त्याचा मी तिरस्कार करू लागलो. कारण जो मनुष्य माझ्यामागून येईल त्याच्याकडे ते सोडून मला जावे लागणार.
19 ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ತೋರ್ಪಡಿಸಿಕೊಂಡದರ ಮೇಲೆಯೂ ಅವನು ಆಳುವನು. ಇದು ವ್ಯರ್ಥವೇ.
१९आणि तो मनुष्य शहाणा असेल की मूर्ख असेल कोणाला माहित? परंतु माझे सर्व श्रम, जे मी भूतलावर केले आहेत आणि ज्यात मी आपणास ज्ञान दाखवले आहे, त्यावर तो अधिकार चालवील. हेही व्यर्थ आहे.
20 ಆದ್ದರಿಂದ ಸೂರ್ಯನ ಕೆಳಗೆ ಪ್ರಯಾಸಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ, ನನ್ನ ಹೃದಯವು ನಿರಾಶೆಗೊಳ್ಳಲು ಪ್ರಾರಂಭಿಸಿತು.
२०म्हणून जे माझे श्रम भूतलावर केले होते त्याविषयी माझे मन निराश झाले.
21 ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ.
२१कारण ज्याचे श्रम ज्ञानाने, विद्येने आणि कौशल्याने होतात असा मनुष्य कोण आहे? तरी त्यासाठी ज्याने काही श्रम केले नाहीत त्याच्या वाट्यास ते ठेऊन सोडून जावे हेही व्यर्थच आहे आणि मोठी शोकांतिका आहे.
22 ಸೂರ್ಯನ ಕೆಳಗೆ ತಾನು ಪ್ರಯಾಸಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
२२कारण मनुष्य सूर्याच्या खाली जे सर्व श्रम करतो आणि आपल्या मनाने जे प्रयत्न करतो त्याकडून त्यास काय फायदा होतो?
23 ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ.
२३कारण मनुष्याच्या कामाचा प्रत्येक दिवस दुःखदायक आणि तणावपूर्ण असतो. रात्रीदेखील त्याच्या मनास विसावा मिळत नाही. हेही वायफळच आहे.
24 ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
२४मनुष्याने खावे, प्यावे आणि श्रम करून आपल्या जिवास सुख द्यावे यापेक्षा त्यास काहीही उत्तम नाही. हे ही देवाच्या हातून घडते असे मी पाहिले.
25 ದೇವರಿಲ್ಲದೆ ಯಾರಿಗೆ ಊಟ ದೊರಕಿತು? ದೇವರಿಲ್ಲದೆ ಯಾರು ಸುಖಾನುಭವ ಹೊಂದುವರು?
२५कारण माझ्यापेक्षा कोण उत्तम भोजन करील अथवा कोण देवापासून वेगळे राहून कोणत्या प्रकारचा सुखाचा उपभोग घेईल?
26 ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.
२६जो मनुष्य देवासमोर चांगला आहे त्यास तो ज्ञान, विद्या आणि आनंद देतो. परंतु तो पाप्याला कष्ट देतो, अशासाठी की त्याने संग्रह करावा व साठवून ठेवावे आणि जो देवासमोर चांगला आहे त्यास ते द्यावे. हेही व्यर्थ आणि वायफळ प्रयत्न करण्यासारखे आहे.

< ಪ್ರಸಂಗಿ 2 >