< ಪ್ರಸಂಗಿ 3 >
1 ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.
ସବୁ ବିଷୟର ଉଚିତ ସମୟ ଅଛି ଓ ଆକାଶ ତଳେ ସବୁ ଉଦ୍ଦେଶ୍ୟର ଉଚିତ ସମୟ ଅଛି;
2 ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.
ଜନ୍ମ ହେବାର ସମୟ ଓ ମରିବାର ସମୟ; ରୋପିବାର ସମୟ, ଯାହା ରୋପିତ ହେଲା, ତାହା ଉପାଡ଼ିବାର ସମୟ;
3 ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.
ବଧ କରିବାର ସମୟ ଓ ସୁସ୍ଥ କରିବାର ସମୟ; ଭାଙ୍ଗିବାର ସମୟ ଓ ନିର୍ମାଣ କରିବାର ସମୟ,
4 ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.
ରୋଦନ କରିବାର ସମୟ ଓ ହସିବାର ସମୟ; ବିଳାପ କରିବାର ସମୟ ଓ ନୃତ୍ୟ କରିବାର ସମୟ;
5 ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.
ପ୍ରସ୍ତର ପକାଇବାର ସମୟ ଓ ପ୍ରସ୍ତର ସଂଗ୍ରହ କରିବାର ସମୟ; ଆଲିଙ୍ଗନ କରିବାର ସମୟ ଓ ଆଲିଙ୍ଗନରୁ ନିବୃତ୍ତ ହେବାର ସମୟ,
6 ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.
ଅନ୍ଵେଷଣ କରିବାର ସମୟ ଓ ହଜାଇବାର ସମୟ; ରଖିବାର ସମୟ ଓ ପକାଇ ଦେବାର ସମୟ;
7 ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.
ଚିରିବାର ସମୟ ଓ ସିଲେଇ କରିବାର ସମୟ; ନୀରବ ରହିବାର ସମୟ ଓ କଥା କହିବାର ସମୟ;
8 ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ.
ପ୍ରେମ କରିବାର ସମୟ ଓ ଘୃଣା କରିବାର ସମୟ; ଯୁଦ୍ଧର ସମୟ ଓ ଶାନ୍ତିର ସମୟ ଅଛି।
9 ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ?
କର୍ମକାରୀ ବ୍ୟକ୍ତିର ଆପଣା ପରିଶ୍ରମରେ କି ଲାଭ?
10 ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ.
ପରମେଶ୍ୱର ମନୁଷ୍ୟ-ସନ୍ତାନଗଣକୁ ବ୍ୟସ୍ତ ହେବା ପାଇଁ ଯେଉଁ କାର୍ଯ୍ୟ ଦେଇଅଛନ୍ତି, ତାହା ମୁଁ ଦେଖିଅଛି।
11 ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.
ସେ ପ୍ରତ୍ୟେକ ବିଷୟକୁ ତାହାର ସମୟରେ ଶୋଭିତ କରିଅଛନ୍ତି; ମଧ୍ୟ ସେ ସେମାନଙ୍କ ହୃଦୟରେ ଅନନ୍ତକାଳ ରଖିଅଛନ୍ତି; ତଥାପି ପରମେଶ୍ୱର ପ୍ରଥମଠାରୁ ଶେଷ ପର୍ଯ୍ୟନ୍ତ ଯେଉଁ କାର୍ଯ୍ୟ କରିଅଛନ୍ତି, ମନୁଷ୍ୟ ତହିଁର ତତ୍ତ୍ୱ ପାଇ ପାରେ ନାହିଁ।
12 ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.
ମୁଁ ଜାଣେ ଯେ, ଯାବଜ୍ଜୀବନ ଆନନ୍ଦ ଓ ସୁକର୍ମ କରିବା ଅପେକ୍ଷା ସେମାନଙ୍କର ଆଉ କୌଣସି ମଙ୍ଗଳ ବିଷୟ ନାହିଁ।
13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.
ଆହୁରି, ପ୍ରତ୍ୟେକ ମନୁଷ୍ୟ ଭୋଜନପାନ କରି ଆପଣା ସକଳ ପରିଶ୍ରମରେ ସୁଖଭୋଗ କରିବ, ଏହା ପରମେଶ୍ୱରଙ୍କ ଦାନ।
14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.
ମୁଁ ଜାଣେ ଯେ, ପରମେଶ୍ୱର ଯାହା କିଛି କରନ୍ତି, ତାହା ଅନନ୍ତକାଳସ୍ଥାୟୀ; ତାହା ବଢ଼ାଯାଇ ନ ପାରେ, କିଅବା ତାହା ଊଣା କରାଯାଇ ନ ପାରେ; ଆଉ ମନୁଷ୍ୟମାନେ ପରମେଶ୍ୱରଙ୍କ ସମ୍ମୁଖରେ ଭୀତ ହେବା ପାଇଁ ସେ ତାହା କରିଅଛନ୍ତି।
15 ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು.
ଯାହା ଅଛି, ତାହା ଥିଲା; ପୁଣି, ଯାହା ହେବ, ତାହା ହିଁ ଥିଲା; ଆଉ, ଯାହା ଗତ ହୋଇଅଛି, ପରମେଶ୍ୱର ତାହା ପୁନର୍ବାର ଅନ୍ଵେଷଣ କରନ୍ତି।
16 ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.
ଆହୁରି, ମୁଁ ସୂର୍ଯ୍ୟ ତଳେ ବିଚାର ସ୍ଥାନରେ ଦେଖିଲି, ସେଠାରେ ଦୁଷ୍ଟତା ଅଛି, ପୁଣି ଧର୍ମସ୍ଥାନରେ ଦେଖିଲି, ସେଠାରେ ହେଁ ଦୁଷ୍ଟତା ଅଛି।
17 ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”
ମୁଁ ମନେ ମନେ କହିଲି, “ପରମେଶ୍ୱର ଧାର୍ମିକ ଓ ଦୁଷ୍ଟର ବିଚାର କରିବେ; କାରଣ ପ୍ରତ୍ୟେକ ମନସ୍କାମନା ଓ ପ୍ରତ୍ୟେକ କାର୍ଯ୍ୟ ପାଇଁ ସମୟ ଅଛି।”
18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.
ମୁଁ ମନେ ମନେ କହିଲି, “ପରମେଶ୍ୱର ଯେପରି ମନୁଷ୍ୟ ସନ୍ତାନମାନଙ୍କୁ ପରୀକ୍ଷା କରିବେ ଓ ସେମାନେ ନିଜେ ଯେ କେବଳ ପଶୁ ତୁଲ୍ୟ, ଏହା ଯେପରି ସେମାନେ ଦେଖିବେ, ଏଥିପାଇଁ ସେମାନଙ୍କ ସକାଶୁ ଏହା ହେଉଅଛି।”
19 ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.
କାରଣ ମନୁଷ୍ୟ-ସନ୍ତାନଗଣ ପ୍ରତି ଯାହା ଘଟେ, ପଶୁମାନଙ୍କ ପ୍ରତି ତାହା ଘଟେ; ସମସ୍ତଙ୍କ ପ୍ରତି ହିଁ ଏକରୂପ ଘଟଣା ଘଟେ; ଏ ଯେପରି ମରେ, ସେ ସେପରି ମରେ; ପୁଣି, ସମସ୍ତଙ୍କ ପ୍ରାଣବାୟୁ ଏକ; ଆଉ, ପଶୁଠାରୁ ମନୁଷ୍ୟର କୌଣସି ପ୍ରାଧାନ୍ୟ ନାହିଁ; କାରଣ ସବୁ ଅସାର।
20 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.
ସମସ୍ତେ ଏକ ସ୍ଥାନକୁ ଯାଆନ୍ତି; ସମସ୍ତେ ଧୂଳିରୁ ଉତ୍ପନ୍ନ ଓ ସମସ୍ତେ ପୁନର୍ବାର ଧୂଳିରେ ଲୀନ ହୁଅନ୍ତି।
21 ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”
ମନୁଷ୍ୟର ଆତ୍ମା ଊର୍ଦ୍ଧ୍ୱଗାମୀ ଓ ପଶୁର ଆତ୍ମା ପୃଥିବୀର ଅଧୋଗାମୀ ହୁଏ ବୋଲି କିଏ ଜାଣେ?
22 ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
ଏହେତୁ ମନୁଷ୍ୟ ସ୍ୱକର୍ମରେ ଆନନ୍ଦ କରିବା ଅପେକ୍ଷା ଆଉ ତାହାର କିଛି ଅଧିକ ମଙ୍ଗଳ ନାହିଁ ବୋଲି ମୁଁ ଦେଖିଲି; କାରଣ ଏହା ହିଁ ତାହାର ଅଧିକାର; ଆଉ, ତାହା ପରେ ଯାହା ଘଟିବ, ତାହା ଦେଖିବା ପାଇଁ କିଏ ତାହାକୁ ଫେରାଇ ଆଣି ପାରେ?