< ಎಸ್ತೇರಳು 1 >
1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.
राजा अहषवेरोष के शासनकाल में, जिसका साम्राज्य हिंद देश से कूश तक 127 राज्यों तक विस्तीर्ण था,
2 ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ
जब वह राजधानी शूशन में अपने राज सिंहासन पर विराजमान था,
3 ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.
अपने शासनकाल के तीसरे वर्ष में उसने अपने समस्त अधिकारियों एवं कर्मचारियों के लिए एक विशिष्ट उत्सव का आयोजन किया. फारस एवं मेदिया के सेनापति, सारे सांसद एवं राज्यपाल इस भोज में उसके साथ शामिल हुए.
4 ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.
यह भोज 180 दिन चलता रहा, जिसमें राजा ने अपना राजसी वैभव, समृद्धि एवं संपत्ति का प्रदर्शन किया.
5 ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
जब इस काल का अंत हुआ, राजा ने राजधानी शूशन में उपस्थित समस्त प्रजा के लिए; चाहे वह सामान्य हो अथवा विशिष्ट, राजमहल के उद्यान के आंगन में सात दिनों का एक विशेष भोज आयोजित किया.
6 ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.
इस स्थल को सफेद तथा बैंगनी वस्त्रों का उत्कृष्ट सन के पर्दे बैंजनी डोरियों द्वारा चांदी की छड़ों से लटकाकर सजाया गया था. ये छड़ें संगमरमर के स्तंभों पर लगी थी. वहां सोना एवं चांदी के आसन सजाए गए थे इस स्थल को संगमरमर के खंभों, अमूल्य रत्नों तथा अमूल्य पत्थरों से गढ़ा गया था.
7 ಇದಲ್ಲದೆ ನಾನಾ ವಿಧವಾದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವನ್ನು ಧಾರಾಳವಾಗಿ ಕುಡಿಯಲು ಕೊಟ್ಟರು.
दाखमधु सोने के विभिन्न प्रकार के बर्तनों में परोसी जा रही थी. राजकीय दाखमधु राजा के बड़े भंडार में से बहुतायत से परोसी जा रही थी.
8 ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.
पेय परोसने के विषय में आज्ञा थी कि किसी को इसके पीने के लिए मजबूर न किया जाए क्योंकि राजा ने राज कर्मचारियों को यह आज्ञा दी थी कि वे वही करें जैसा हर एक बुलाए गए लोग चाहते है.
9 ಇದಲ್ಲದೆ ರಾಣಿಯಾದ ವಷ್ಟಿ ಅರಸನಾದ ಅಹಷ್ವೇರೋಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
रानी वश्ती ने भी राजमहल की स्त्रियों के लिये अहषवेरोष के राजमहल में भोज दिया था.
10 ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.
सातवें दिन जब राजा दाखमधु से मस्त था उसने महूमान बिज़था हरबोना बिगथा अबगथा ज़ेथर तथा करकस नामक सात खोजों को
आदेश दिया कि रानी वश्ती को राजा के सामने उसके राजसी मुकुट के साथ प्रस्तुत किया जाए, शासकों एवं समस्त उपस्थित अतिथियों के सामने उसके सौंदर्य का प्रदर्शन करे, रानी वश्ती अति सुंदर थी.
12 ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.
किंतु रानी वश्ती ने खोजों द्वारा दिए गए राजा के इस आदेश को अस्वीकार कर दिया. इस पर राजा क्रोधित हो उठा, क्रोध उसके अंदर भड़कने लगा.
13 ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.
तब राजा अपने समय के अनुसार अपने उन ज्ञानियों से बोला जो न्यायशास्त्र एवं नियम के विशेषज्ञ थे
14 ಅರಸನಿಗೆ ಬಹು ಹತ್ತಿರವಾಗಿದ್ದ ಪಾರಸಿಯ ಮತ್ತು ಮೇದ್ಯ ದೇಶಗಳ ಏಳುಮಂದಿ ಪ್ರಧಾನರಾದ ಕರ್ಷೇನಾ, ಶೆತಾರ್, ಅದ್ಮಾತಾ, ತಾರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಇವರ ಸಂಗಡ ಮಾತನಾಡಿದನು. ರಾಜ್ಯದಲ್ಲಿ ಇವರು ಅರಸನ ಬಳಿಗೆ ಹೋಗಲು ವಿಶೇಷ ಅನುಮತಿಪಡೆದ ಅತ್ಯಂತ ಶ್ರೇಷ್ಠರಾಗಿದ್ದರು.
इन ऊंचे पदों पर थे: करषना, शेतार, अदमाता, तरशीश, मेरेस, मरसेना, तथा ममूकान. ये सात फारस तथा मेदिया के ऐसे प्रधान थे जो साम्राज्य में ज़रूरी थे, उनके लिए राजा की उपस्थिति में प्रवेश आसान था.
15 ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು.
राजा ने इनसे पूछा, “नियम के अनुसार अब रानी वश्ती के साथ क्या किया जाना सही होगा, क्योंकि उसने खोजों द्वारा दी गई राजा अहषवेरोष की आज्ञा नहीं मानी है?”
16 ಮೆಮೂಕಾನನು ಅರಸನ ಮುಂದೆಯೂ ಪ್ರಧಾನರ ಮುಂದೆಯೂ, “ವಷ್ಟಿ ರಾಣಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ಸಮಸ್ತ ಶ್ರೇಷ್ಠರಿಗೂ ಸಮಸ್ತ ಜನರಿಗೂ ಅಪರಾಧಮಾಡಿದ್ದಾಳೆ.
ममूकान ने राजा एवं अधिकारियों के सामने साफ किया, “रानी वश्ती का यह काम राजा के विरुद्ध अपराध है, मतलब यह समस्त अधिकारियों, राजा अहषवेरोष के राज्यों के समस्त लोगों के विरुद्ध एक बड़ा अपराध है.
17 ರಾಣಿಯ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬರುವುದು. ‘ಅರಸನಾದ ಅಹಷ್ವೇರೋಷನು ವಷ್ಟಿರಾಣಿಯನ್ನು ತನ್ನ ಮುಂದೆ ಬರಲು ಹೇಳಿ ಕಳುಹಿಸಿದನು. ಆದರೆ ಅವಳು ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಅವರು ತಮ್ಮ ಗಂಡಂದಿರನ್ನೂ ತಿರಸ್ಕರಿಸುವರು.
क्योंकि रानी के इस काम की सूचना समस्त स्त्रियों को मिल जाएगी, जिसका परिणाम यह होगा, वे सभी अपने-अपने पतियों के प्रति घृणा के साथ व्यवहार करेंगी, क्योंकि तब वे यह विचार करने लगेंगी, ‘राजा अहषवेरोष का आदेश था कि रानी वश्ती उनके सामने लायी जाए, किंतु वह उनके सामने नहीं आई.’
18 ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ರಾಣಿಯರೆಲ್ಲರೂ ಈ ಹೊತ್ತು ಅರಸನ ಶ್ರೇಷ್ಠರಿಗೂ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವುದು.
फारस एवं मेदिया की स्त्रियों ने आज रानी के जिस व्यवहार के विषय में सुन लिया है, राजा के हाकिमो से वैसा ही व्यवहार करेंगी. इससे उनमें बहुत घृणा एवं क्रोध उत्पन्न हो जाएगा.
19 “ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.
“यदि राजा को यह उपयुक्त लगे, वह एक राजाज्ञा प्रसारित कर दें जिसे फारस एवं मेदिया के नियमों में लिख दिया जाए कि कभी इस नियम को बदला न जा सके, कि अब कभी भी रानी वश्ती राजा अहषवेरोष की उपस्थिति में प्रवेश न करे, तब रानी वश्ती का राजकीय पद किसी अन्य को जो वश्ती से अधिक योग्य हैं उसे प्रदान कर दें
20 ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು.
जब राजा के द्वारा प्रसारित आज्ञा उनके संपूर्ण साम्राज्य में सुनाई जाएगी तब सब स्त्रियां अपने पतियों का आदर करने लगेंगी, विशेष अथवा सामान्य, सभी अपने-अपने पतियों का सम्मान करने लगेंगी.”
21 ಈ ಮಾತು ಅರಸನಿಗೂ ಶ್ರೇಷ್ಠರಿಗೂ ಸರಿಯೆಂದು ತೋರಿತು. ಆದುದರಿಂದ ಅರಸನು ಮೆಮೂಕಾನ್ ಮಾತಿನಂತೆಯೇ ಮಾಡಿದನು.
राजा एवं शासकों के लिए यह परामर्श स्वीकार्य था, तब राजा ने ममूकान के प्रस्ताव के अनुरूप ही कार्य पूरा किया.
22 ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.
तब उसने राजा के समस्त राज्यों में पत्र प्रेषित किए, हर एक राज्य में उसी की अक्षर के अनुरूप तथा हर एक जाति को उसी की भाषा में कि अपने-अपने परिवार में हर एक पुरुष घर का मुखिया हो तथा वह अपने जाति की भाषा बोला करे.