< ಎಸ್ತೇರಳು 2 >

1 ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತವಾಗಿ ಅವನು ವಷ್ಟಿಯನ್ನೂ ಅವಳನ್ನೂ, ಅವಳ ವರ್ತನೆಯನ್ನೂ, ಅವಳಿಗೆ ವಿರೋಧವಾಗಿ ತಾನು ನೀಡಿದ ತೀರ್ಪನ್ನೂ ಜ್ಞಾಪಿಸಿಕೊಂಡನು.
जब यह सब पूरा हो चुका, राजा अहषवेरोष का क्रोध ठंडा हो गया, उसने वश्ती के उस आचरण का स्मरण किया तथा यह भी, कि वश्ती के विरुद्ध कैसी राजाज्ञा प्रभावी की जा चुकी थी.
2 ಆಗ ಅರಸನ ಸೇವೆ ಮಾಡುವ ದಾಸರು ಅವನಿಗೆ, “ಅರಸನಿಗೋಸ್ಕರ ರೂಪವತಿಯಾದ ಕನ್ಯೆಯರನ್ನು ಹುಡುಕಲಿ.
राजा के अधिकारियों ने राजा के सामने प्रस्ताव रखा, “राजा के लिए रूपवान, युवा कुंवारियों की खोज की जाएं.
3 ರೂಪವತಿಯಾರಾದ ಸಮಸ್ತ ಕನ್ಯೆಯರು ರಾಜಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿಕಾರಿಗಳಾದ ಹೇಗೈ ಎಂಬವನ ವಶಕ್ಕೆ ಒಪ್ಪಿಸಲಿ. ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರಿಗಳನ್ನು ನೇಮಿಸಲಿ. ಹೇಗೈ ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು ಕೊಡಲಿ.
साम्राज्य के हर एक राज्य में राजा मुखियाओं को नियुक्त करें, कि वे राजधानी शूशन में हर एक रूपवान, युवा, कुंवारियों को एकत्र करें. उन्हें राजा के खोजा हेगाइ के संरक्षण निवास में रखा जाए, जो समस्त स्त्रियों के लिए प्रबंधक था. इन सभी कुंवारियों को सुंदर बनाने वाली वस्तुएं दी जाएं.
4 ಅರಸನ ದೃಷ್ಟಿಗೆ ಮೆಚ್ಚಿಗೆಯಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ,” ಎಂದನು. ಆ ಮಾತು ಅರಸನಿಗೆ ಸರಿಕಂಡುಬಂದದ್ದರಿಂದ ಅದೇ ಪ್ರಕಾರ ಮಾಡಿದನು.
तब वह युवती, जो राजा को उत्तम लगे, वह वश्ती के स्थान पर रानी हो जाए.” राजा को यह प्रस्ताव अच्छा लगा और उसने यही किया.
5 ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
शूशन गढ़नगर में एक यहूदी निवास करता था, जिसका नाम था, मोरदकय, वह बिन्यामिन का वंश का था वह याईर का पुत्र था, जो शिमेई का, जो कीश का पुत्र था.
6 ಅವನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೆರೆಯಾಗಿ ತಂದ ಯೆಹೂದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಒಬ್ಬನಾಗಿದ್ದನು.
वह यहूदिया के राजा यकोनियाह के साथ येरूशलेम से अन्य बंदियों के साथ बंधुआई में गया हुआ था, जिन्हें बाबेल के राजा नबूकदनेज्ज़र ने बंदी बनाकर ले गया था.
7 ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.
मोरदकय हदास्साह का पालन पोषण कर रहा था. हदास्साह एस्तेर नाम से भी जानी जाती थी. वह मोरदकय के चाचा की पुत्री थी उसके माता-पिता जीवित नहीं थे. यह युवती सुंदर और रूपवती थी. जब उसके माता-पिता की मृत्यु हुई, मोरदिकय ने उसे अपनी ही पुत्री सदृश अपना लिया था.
8 ಅರಸನ ಮಾತನ್ನು ಮತ್ತು ಅವನ ಕಟ್ಟಳೆಯನ್ನು ಕೇಳಿದ ತರುವಾಯ ಶೂಷನಿನ ಅರಮನೆಯಲ್ಲಿ ಹೇಗೈಯನ ವಶಕ್ಕೆ ಅನೇಕ ಕನ್ಯೆಯರನ್ನು ಒಪ್ಪಿಸಲಾಯಿತು. ಎಸ್ತೇರಳು ಸಹ ಅರಸನ ಅರಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಜವಾಬ್ದಾರಿಕೆಯ ಕೋಣೆಯಲ್ಲಿ ಇದ್ದಳು.
उसके बाद का घटनाक्रम इस प्रकार है: जब राजा की राजाज्ञा सर्वत्र सुना दी गयी, अनेक युवतियां गढ़नगर शूशन हेगाइ के संरक्षण एकत्र कर दी गई थी. एस्तेर को भी राजमहल में हेगाइ के संरक्षण में दिया गया, जो युवतियों का प्रभारी था.
9 ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
हेगाइ को एस्तेर प्रिय लगी और उसे हेगाइ की कृपा प्राप्‍त हो गयी. हेगाइ ने तुरंत एस्तेर की सौंदर्य प्रसाधन एवं भोजन वस्तु का प्रबंध कर दिया. इसके अलावा उसने एस्तेर के लिए राजमहल की सात सर्वोत्तम परिचारिकाएं रखी. एस्तेर एवं इन दासियों को निवास स्थान के सर्वोत्तम क्षेत्र में रख दिया.
10 ಆದರೆ ಎಸ್ತೇರಳು ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ತಿಳಿಸಲಿಲ್ಲ. ಏಕೆಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
एस्तेर ने मोरदकय के संदेश के अनुसार अपनी जाति एवं पृष्ठभूमि की बातें गुप्‍त रखी थी.
11 ಆದರೆ ಎಸ್ತೇರಳ ಕ್ಷೇಮವನ್ನೂ, ಅವಳಿಗೆ ಆಗುವಂಥಾದ್ದನ್ನೂ ತಿಳಿದುಕೊಳ್ಳುವುದಕ್ಕೆ ಮೊರ್ದೆಕೈ ಪ್ರತಿದಿನವೂ ಸ್ತ್ರೀಯರಿದ್ದ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.
प्रतिदिन मोरदकय रानी महल के आंगन के सामने आया जाया करता था कि उसे एस्तेर की गतिविधियों की जानकारी रहें.
12 ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಸುಗಂಧ ತೈಲದಿಂದಲೂ ಆರು ತಿಂಗಳು ಸೌಂದರ್ಯವರ್ಧಕ ಸಾಧನಗಳಿಂದಲೂ ಕನ್ಯೆಯರ ಲೇಪನಕಾಲದ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇರೋಷನ ಬಳಿಗೆ ಪ್ರತಿಯೊಬ್ಬ ಕನ್ಯೆಯು ಹೋಗಲು ಅವರವರ ಸರದಿ ಬರುತ್ತಿತ್ತು.
स्त्रियों के लिए निर्धारित नियम के अनुसार जब हर एक नवयुवती राजा अहषवेरोष के सामने जाने के लिए बारह महीनों का निर्धारित काल पूर्ण कर लेती—हर एक की सुंदरता को संवारने के क्रम में छः माह गन्धरस का तेल लगाया जाता था और छः महीने उबटन लगाया जाता था, तब हर एक को बारी-बारी से राजा के सामने लाया जाता था.
13 ಈ ಪ್ರಕಾರ ಕನ್ಯೆಯು ಅರಸನ ಬಳಿಗೆ ಪ್ರವೇಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಅರಮನೆಗೆ ಹೋಗಲು ಅವಳು ಏನು ಬೇಡುವಳೋ ಅದು ಅವಳಿಗೆ ಒದಗಿಸಲಾಗುತ್ತಿತ್ತು.
नवयुवतियां इस प्रक्रिया से राजा के सामने प्रस्तुत की जाती थी: रानी निवास में से राजमहल में ले जाने के लिए कोई भी उपयुक्त वस्तु दे दी जाती थी.
14 ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು.
सायंकाल में नवयुवतियां कक्ष में प्रवेश करती थी तथा प्रातःकाल में वह एक अन्य रानी निवास में पहुंच जाती थी. यह शाअसगाज़ के संरक्षण में हो जातीं थी. यदि राजा उससे प्रसन्‍न न होता, तो वह लड़की फिर कभी राजा के पास न जाती, और यदि राजा उससे प्रसन्‍न होता तो उसे राजा नाम लेकर वापस बुलाता था.
15 ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.
जब मोरदकय के चाचा अबीहाइल की पुत्री एस्तेर की बारी आई, जिसका मोरदकय ने अपनी ही पुत्री सदृश पालन पोषण किया था, वह राजा की उपस्थिति में प्रस्तुत हुई. उसने राजा के खोजा हेगाइ द्वारा, जो स्त्रियों का प्रभारी था, दिये परामर्श के अतिरिक्त अपने लिए कुछ भी याचना नहीं की. जिस किसी ने एस्तेर को देखा, हर एक को वह सुंदर लगी.
16 ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.
तब दसवें माह में, अर्थात् तेबिथ माह में राजा अहषवेरोष के शासन के सातवें वर्ष में एस्तेर को राजा अहषवेरोष के राजमहल में लाया गया.
17 ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.
एस्तेर सभी अन्य युवतियों की अपेक्षा में राजा को प्रिय लगी, उसे अन्य सभी कुंवारियों की अपेक्षा राजा की अधिक कृपा एवं अनुग्रह प्राप्‍त हो गया, इतना, कि राजा ने उसके सिर पर राजकीय मुकुट रखकर उसे वश्ती के स्थान पर रानी घोषित कर दिया.
18 ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
इस अवसर पर राजा ने एक भव्य भोज आयोजित किया, जिसे नाम दिया गया एस्तेर का भोज, इसमें उसके सभी शासक एवं अधिकारी आमंत्रित थे. इसके अतिरिक्त समस्त साम्राज्य में अवकाश घोषित किया तथा राजा के कोष में से उपहार भी वितरित किए गए.
19 ಕನ್ಯೆಯರನ್ನು ಎರಡನೆಯ ಸಾರಿ ಕೂಡಿಸುವಾಗ, ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
जब कुंवारी नवयुवतियां फिर से एकत्रित हो गई, मोरदकय उस समय राजमहल परिसर के फाटक पर ही बैठा हुआ था.
20 ಎಸ್ತೇರಳು ಮೊರ್ದೆಕೈಯು ತನಗೆ ಆಜ್ಞಾಪಿಸಿದ ಹಾಗೆ ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ಯಾರಿಗೂ ತಿಳಿಸಿರಲಿಲ್ಲ. ಏಕೆಂದರೆ ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಆಕೆ ಅವನ ಆಜ್ಞೆಯನ್ನು ಕೈಕೊಂಡು ನಡೆದಂತೆಯೇ ಈಗಲೂ ಅವನ ಆಜ್ಞೆಯನ್ನು ಪಾಲಿಸುತ್ತಿದ್ದಳು.
अब तक एस्तेर ने अपनी जाति एवं कुल के बारे में पृष्ठभूमि प्रकट नहीं की थी, जैसा मोरदकय ने उसे आदेश दिया था, क्योंकि एस्तेर वही करती थी, जो मोरदकाय उसे आदेश देता था. ठीक जैसा वह उस समय करती थी, जब वह उसके संरक्षण में थी.
21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.
उन्हीं दिनों में जब मोरदकय राजमहल परिसर के द्वार पर बैठा करता था, राजा के द्वारपालों में से दो, बिगथान तथा तेरेश किसी कारण राजा अहषवेरोष पर नाराज हो गए और उसकी हत्या की युक्ति करने लगे.
22 ಈ ಕಾರ್ಯವು ಮೊರ್ದೆಕೈಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು. ಎಸ್ತೇರಳು ಮೊರ್ದೆಕೈಯ ಹೆಸರನ್ನು ಅರಸನಿಗೆ ಹೇಳಿ ಆ ಒಳಸಂಚಿನ ಬಗ್ಗೆ ತಿಳಿಸಿದಳು.
इस षड़्‍यंत्र के बारे में मोरदकय को मालूम हो गया. इसकी सूचना उसने रानी एस्तेर को दे दी और मोरदकय की ओर से एस्तेर ने राजा को सूचित किया.
23 ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು.
जब इस षड़्‍यंत्र की खोजबीन की गई और इस बात का पता चला, उन दोनों को मृत्यु दंड पर लटका दिया गया. इसका उल्लेख राजा के सामने ही इतिहास ग्रंथ में लिख लिया.

< ಎಸ್ತೇರಳು 2 >