< ಎಸ್ತೇರಳು 8 >

1 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು.
त्याच दिवशी अहश्वेरोश राजाने यहूद्यांचा शत्रू असलेल्या हामानाच्या मालकीची सर्व मालमत्ता राणी एस्तेरला दिली. आणि मर्दखय राजाकडे आला कारण त्याचे एस्तेरशी काय नाते आहे ते तिने राजाला सांगितले.
2 ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.
राजाला आपली मुद्रा हामानाकडून परत मिळाली होती. ती आपल्या बोटातून काढून राजाने मर्दखयाला दिली. मग एस्तेरने मर्दखयाला हामानाच्या मालमत्तेचा प्रमुख नेमले.
3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.
एस्तेर मग राजाशी पुन्हा बोलली. ती त्याच्या पाया पडून रडू लागली. अगागी हामानाने यहूद्यांचा नायनाट करण्याची आखलेली दुष्ट योजना राजाने रद्द करावी म्हणून त्यास विनंती करु लागली.
4 ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.
मग राजाने आपला सोन्याचा राजदंड एस्तेरपुढे केला; एस्तेर उठली आणि राजापुढे उभी राहिली.
5 ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.
ती म्हणाली, “जर राजाच्या मर्जीस आल्यास, आणि मजवर तुमची कृपादृष्टी झाली असल्यास, जर राजाला ही गोष्ट योग्य वाटली आणि त्यांच्या दृष्टीने मी त्यास आवडले तर हम्मदाथा अगागी याचा पुत्र हामान याने सर्व प्रांतातील यहूद्यांचा नायनाट करण्याचे पाठवलेले पत्रे रद्द करणारा आदेश लिहावा.
6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.
कारण माझ्या लोकांवर आलेली आपत्ती पाहून मी कशी सहन करू? माझ्या नातेवाईकांचा नाश मी कसा सहन करू शकेन?”
7 ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.
राजा अहश्वेरोशाने राणी एस्तेर आणि मर्दखय यहूदी यांना उत्तर दिले. राजा त्यांना म्हणाला, “हे, पहा, हामान यहूद्यांविरुध्द होता म्हणून त्याची मालमत्ता मी एस्तेरला दिली आणि माझ्या शिपायांनी त्यास फाशी दिले आहे. कारण तो यहूद्यांवर हल्ला करणार होता.
8 ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.
आता राजाच्या नावाने यहूद्यांविषयी दुसरा आदेश लिहा आणि मग त्या हुकमावर राजाची मोहर उमटवा. कारण राजाच्या नावाने लिहिलेले लेख आणि त्यावर झालेली राजाची मोहर कोणालाही रद्द करता येत नाही.”
9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
राजाच्या लेखकांना ताबडतोब बोलवण्यात आले, तिसऱ्या म्हणजे शिवान महिन्याच्या तेविसाव्या दिवशी हे झाले. सर्व यहूदी आणि भारतापासून कूशपर्यंतच्या एकशेंसत्तावीस प्रांतांमधील अधिपती, अधिकारी आणि सरदार यांना उद्देशून मर्दखयाने दिलेले यहूदयांविषयी असलेले सर्व आदेश त्या लेखकांनी लिहून काढले. प्रत्येक प्रांताच्या भाषेत ते लिहिण्यात आले. प्रत्येक भाषिक गटाच्या भाषेत त्यांचा अनुवाद करण्यात आला. यहूद्यांच्या भाषेत आणि त्यांच्या लिपीत ते आदेश लिहिले गेले.
10 ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.
१०मर्दखयाने राजा अहश्वेरोशाच्या नावाने पत्रे लिहून त्यावर राजाची मोहर करून ती राजाच्या तबेल्यात वाढलेल्या सरकारी वेगवान घोडे, यांच्या स्वारांबरोबर पाठवले.
11 ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.
११राजाने त्या पत्रात सर्व नगरातील यहूद्यांनी एकत्र जमावे आणि स्वसंरक्षणासाठी उभे रहावे; त्यांना जे लोक व प्रांत उपद्रव करतील, त्यांच्या सर्व सैन्याचा, स्त्रियांचा, मुलांचाही नाश करावा व त्यांना ठार मारावे व त्यांना नाहीसे करावे, त्यांची लूट करून घ्यावी.
12 ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.
१२अहश्वेरोश राजाच्या सर्व प्रांतांत एकाच दिवशी, बाराव्या महिन्याच्या म्हणजे अदार महिन्याच्या, तेराव्या दिवशी यहूद्यांवर कारवाई करायची असे ठरले होते.
13 ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.
१३जो लेख हुकूम म्हणून प्रत्येक प्रांतात द्यायचा होता त्याची प्रत सर्व लोकांस जाहीर झाली, की यहूद्यांनी त्या दिवशी शत्रूचा सूड उगवण्यासाठी तयार रहावे.
14 ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.
१४राजाच्या घोड्यांवर स्वार होऊन जासूद तातडीने निघाले. ते वेळ न गमावता जायला निघाले. राजाचा हाच आदेश शूशन राजधानीतही दिला गेला.
15 ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
१५मर्दखय राजाकडून निघाला. त्याने राजाकडचा विशेष पोषाख घातला होता. त्याची वस्त्रे निळया आणि पांढऱ्या रंगाची होती. मोठा सोन्याचा मुकुट त्याने घातला होता. तलम सणाचा जांभळा झगा त्याने वर चढवला होता. शूशन नगरामध्ये आनंदाने जयघोष करण्यात आला.
16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು.
१६यहूद्यांच्या दृष्टीने ती पर्वणी होती. त्यामुळे त्यादिवशी जल्लोषाचे वातावरण होते.
17 ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.
१७ज्या प्रांतात आणि ज्या नगरात राजाची आज्ञा पोहोचली तिथे यहूद्यांमध्ये आनंद झाला आणि त्यांनी भोजनसमारंभ करून शुभदिन म्हणून पाळला. त्या देशाचे बरेच लोकही यहूदी झाले. कारण त्यांना यहूद्यांची भीती वाटू लागली.

< ಎಸ್ತೇರಳು 8 >