< ಎಸ್ತೇರಳು 8 >
1 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು.
၁ထိုနေ့၌ပင်လျှင်ဇေရဇ်မင်းသည်ယုဒ အမျိုးသားတို့၏ရန်သူဟာမန်ပိုင်သည့် အိမ်ရာပစ္စည်းမှန်သမျှကို မိဖုရားဧသတာ အားပေးတော်မူ၏။ ဧသတာကမိမိသည် မော်ဒကဲနှင့်ဆွေမျိုးတော်စပ်ကြောင်းကို မင်းကြီးအားလျှောက်ထားသဖြင့် မော်ဒကဲ သည်ထိုနေ့မှအစပြု၍မင်းကြီး၏ရှေ့ တော်သို့ဝင်ခွင့်ရရှိလေသည်။-
2 ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.
၂မင်းကြီးသည်ဟာမန်၏ထံမှပြန်သိမ်းသည့် တံဆိပ်လက်စွပ်တော်ကိုချွတ်၍မော်ဒကဲ အားပေးတော်မူ၏။ ဧသတာသည်လည်း ဟာမန်၏အိမ်ရာပစ္စည်းများကိုမော်ဒကဲ အားအုပ်ထိန်းစေ၏။
3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.
၃ထိုနောက်ဧသတာသည်မင်းကြီး၏ခြေ တော်ရင်းတွင်ပျပ်ဝပ်လျက်ငိုယိုကာ ယုဒ အမျိုးသားတို့အားကွပ်မျက်ရန်အတွက် အာဂတ်မှဆင်းသက်သူဟာမန်ကြံစည် ခဲ့သည့်ဘေးအန္တရာယ်ဆိုးကိုတားဆီး ပေးတော်မူရန်တောင်းပန်လေသည်။-
4 ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.
၄မင်းကြီးသည်သူ့အားရွှေရာဇလှံတံ ကိုကမ်းပေးတော်မူသဖြင့် ဧသတာ သည်ထ၍ရပ်ပြီးလျှင်၊-
5 ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.
၅``အရှင်မင်းကြီးသဘောတူတော်မူလျှင် လည်းကောင်း၊ ကျွန်တော်မကိုစိတ်တော်နှင့် တွေ့တော်မူလျှင်လည်းကောင်း၊ လျောက်ပတ် သည်ဟုယူဆတော်မူလျှင်လည်းကောင်း အင်ပါယာနိုင်ငံတော်အတွင်းရှိယုဒ အမျိုးသားအပေါင်းတို့အားကွပ်မျက် ရန်အာဂတ် မှဆင်းသက်သူဟမ္မေဒါသ၏သားဟာမန် စီရင်ခဲ့သည့်အမိန့်စာများကိုပယ်ဖျက် သည့်အမိန့်ကြေငြာချက်ကိုထုတ်ပြန် တော်မူပါ။-
6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.
၆ကျွန်တော်မ၏အမျိုးသားချင်းများသည် ဤဘေးအန္တရာယ်ဆိုးနှင့်ကြုံတွေ့ရလျက် ကျွန်တော်မ၏ဆွေမျိုးအရင်းအချာများ သည်လည်းအသတ်ခံကြရပါမူကျွန်တော် မသည်အဘယ်သို့ရှုစိမ့်နိုင်ပါအံ့နည်း'' ဟုလျှောက်လေ၏။
7 ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.
၇ထိုအခါဇေရဇ်မင်းသည်ဧသတာနှင့် ယုဒအမျိုးသားမော်ဒကဲအား``ငါသည် ဟာမန်အားယုဒအမျိုးသားများကို သတ်ဖြတ်ရန်ကြံစည်သည့်အတွက်လည်ဆွဲ တိုင်၌ကွပ်မျက်စေခဲ့ပြီ။ သူ၏အိမ်ရာပစ္စည်း များကိုလည်းဧသတာအားပေးခဲ့ပြီ။-
8 ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.
၈သို့ရာတွင်ဘုရင့်အမည်ဖြင့်ရေး၍လက်စွပ် တော်တံဆိပ်ခတ်နှိပ်ထားသည့်အမိန့်တော် စာကိုမူမဖျက်မပယ်နိုင်။ သို့သော်လည်း သင်တို့အလိုရှိသည့်အတိုင်းယုဒအမျိုး သားများထံသို့ငါ၏နာမည်ဖြင့်စာရေး ၍ဘုရင့်လက်စွပ်တော်တံဆိပ်ကိုခတ်နှိပ် လော့'' ဟုမိန့်တော်မူ၏။
9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
၉ဤသို့ဖြစ်ပျက်သည်မှာသိဝန်ခေါ်တတိယ လ၊ နှစ်ဆယ့်သုံးရက်နေ့၌ဖြစ်၏။ မော်ဒကဲ သည်မင်းကြီး၏အတွင်းဝန်များကိုခေါ် ယူကာယုဒအမျိုးသားတို့ထံသို့လည်း ကောင်း၊ အိန္ဒိယပြည်မှအဲသရောပိပြည် တိုင်အောင်တစ်ရာ့နှစ်ဆယ့်ခုနစ်ပြည်နယ် ရှိဘုရင်ခံများ၊ အုပ်ချုပ်ရေးမှူးများ နှင့်မင်းအရာရှိများထံသို့အမှာစာ များရေးသားရန်နှုတ်တိုက်ချပေးလေ သည်။ ထိုစာများကိုပြည်နယ်အသီးသီး တွင်အသုံးပြုသည့်ဘာသာစကား များဖြင့်လည်းကောင်း၊ ယုဒအမျိုးသား တို့အတွက်ယုဒဘာသာဖြင့်လည်း ကောင်းရေးသားထားသတည်း။-
10 ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.
၁၀မော်ဒကဲသည်ထိုစာတို့ကိုဇေရဇ်မင်း၏ အမည်ဖြင့်ရေးလျက် ဘုရင့်လက်စွပ်တော် တံဆိပ်ခတ်နှိပ်ပြီးလျှင်စာပို့လုလင်တို့ အား ဘုရင့်မြင်းဇောင်းမှလျင်မြန်သည့် မြင်းများဖြင့်သွားရောက်ပေးပို့စေ၏။
11 ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.
၁၁ထိုအမိန့်စာများတွင်မင်းကြီးသည်ယုဒ အမျိုးသားတို့အား မိမိတို့၏အသက် ဘေးကိုကာကွယ်ရန်အတွက်စုရုံးခွင့်ပြု တော်မူကြောင်းပါရှိလေသည်။ မည်သည့် ပြည်နယ်၌မဆိုယုဒယောကျာ်းနှင့်ဇနီး သားသမီးများကိုလက်နက်စွဲကိုင်တိုက် ခိုက်လာသောအဘယ်လူမျိုးကိုမဆို ပြန်လည်တိုက်ခိုက်နိုင်ခွင့်ရှိကြ၏။ သူ တို့အားတစ်ယောက်မကျန်သတ်ဖြတ် ပြီးလျှင်သူတို့၏ပစ္စည်းများကိုလုယူ နိုင်လေသည်။-
12 ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.
၁၂ထိုအမိန့်တော်သည်ပေရသိအင်ပါယာ နိုင်ငံတစ်ဝှန်းလုံး၌ယုဒအမျိုးသား တို့အား သတ်ဖြတ်ရန်သတ်မှတ်ထားသည့် အာဒါခေါ်ဒွါဒသမလဆယ့်သုံးရက် နေ့မှအစပြု၍အတည်ဖြစ်စေရမည်။-
13 ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.
၁၃ထိုနေ့ကျရောက်လာသောအခါယုဒအမျိုး သားတို့သည်ရန်သူများအားလက်စားချေ ရန်အသင့်ရှိနိုင်ကြစေရန် ထိုအမိန့်တော် ကိုဥပဒေအဖြစ်ပြဋ္ဌာန်းကာပြည်နယ် တိုင်းတွင်လူအပေါင်းတို့အားကြေညာရန် ဖြစ်သည်။-
14 ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.
၁၄သို့ဖြစ်၍မြင်းစီးစာပို့လုလင်တို့သည်မင်း ကြီး၏အမိန့်တော်အရ ဘုရင့်မြင်းတော် များကိုစီး၍ခရီးပြင်းနှင်ကြကုန်၏။ မြို့ တော်ရှုရှန်၌လည်းထိုအမိန့်ကိုကြေညာ ကြလေသည်။
15 ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
၁၅မော်ဒကဲသည်မင်းမြောက်တန်ဆာတည်းဟူ သောဝတ်လဲအဖြူနှင့်အပြာကိုလည်းကောင်း၊ ခရမ်းရောင်ပိတ်ချောဝတ်လုံကိုလည်းကောင်း ဝတ်ဆင်ကာခန့်ညားသည်ရွှေသရဖူကို ဆောင်း၍ နန်းတော်မှထွက်ခွာသွားလေသည်။ ထိုအခါရှုရှန်မြို့တစ်မြို့လုံးသည်သြဘာ သံများ၊ ရွှင်လန်းဝမ်းမြောက်စွာကြွေးကြော် သံများနှင့်ဆူညံသွား၏။-
16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು.
၁၆ယုဒအမျိုးသားတို့သည်စိတ်သက်သာ ရွှင်လန်းဝမ်းမြောက်လျက်အသရေမြင့် လာကြ၏။-
17 ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.
၁၇မင်းကြီး၏အမိန့်ကြေညာချက်ရောက်ရှိ သည့်ပြည်နယ်နှင့်မြို့အပေါင်းတို့တွင် ယုဒအမျိုးသားတို့သည် ဝမ်းမြောက်စွာ စားသောက်လျက်ပျော်ပွဲရွှင်ပွဲများကို ကျင်းပကြကုန်၏။ အခြားအမျိုးသား အမြောက်အမြားသည်ယုဒအမျိုး သားတို့ကိုကြောက်သောကြောင့်ယုဒ ဘာသာသို့ကူးပြောင်းလာကြလေ သည်။