< ಎಸ್ತೇರಳು 8 >

1 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು.
ထိုနေ့ခြင်းတွင်၊ ရှင်ဘုရင်အာရွှေရုသည် ယုဒ အမျိုး၏ ရန်သူဟာမန်အိမ်ကို မိဖုရားဧသတာအား ပေးတော်မူ၏။ ဧသတာသည် မော်ဒကဲနှင့် အဘယ်သို့ ပေါင်ဘော်တော်သည်ကို ဧသတာလျှောက်သဖြင့်၊ မော်ဒကဲသည် ရှင်ဘုရင်ထံတော်သို့ဝင်ရ၏။
2 ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.
ရှင်ဘုရင်သည်လည်း၊ ဟာမန်လက်မှ နှုတ်သော လက်စွပ်တော်ကို တဖန်ချွတ်၍ မော်ဒကဲအား ပေးတော် မူ၏။ ဧသတာလည်း၊ ဟာမန်အိမ်ကို မော်ဒကဲ၌ အပ် လေ၏။
3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.
တဖန်ဧသတာသည် ရှင်ဘုရင်ခြေတော်ရင်း၌ ပြပ်ဝပ်၍၊ အာဂတ်အမျိုး ဟာမန်ပြုသောအပြစ်၊ ယုဒ အမျိုးတဘက်၌ ကြံစည်သော အကြံအစည်ကို ပယ်တော် မူမည်အကြောင်း၊ မျက်ရည်ကျလျက် တောင်းပန်လေ၏။
4 ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.
ရှင်ဘုရင်သည် ရွှေရာဇလှံတံကို ဧသတာသို့ ကမ်းတော်မူသဖြင့်၊ ဧသတာသည် ထ၍ရှင်ဘုရင် ရှေ့တော်၌ ရပ်လျက်၊
5 ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.
အရှင်မင်းကြီးအလိုတော်ရှိ၍၊ ကျွန်တော်မကို စိတ်နှင့်တွေ့တော်မူလျှင်၎င်း၊ ကျွန်တော်မအမှုသည် ရှေ့တော်၌ လျောက်ပတ်၍ ကိုယ်တော်သည် ကျွန်တော်မ ကိုလည်း ချစ်တော်မူလျှင်၎င်း၊ နိုင်ငံတော်အတိုင်းတိုင်း အပြည်ပြည်တို့၌ရှိသော ယုဒလူတို့ကို ဖျက်ဆီးခြင်းငှါ၊ အာဂတ်အမျိုး ဟမ္မေဒါသသား ဟာမန်စီရင်သောစာကို ပယ်မည်အကြောင်း၊ ထပ်၍ စာရေးစေတော်မူပါ။
6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.
ကျွန်တော်မအမျိုးအပေါ်သို့ ရောက်ရသော ဘေးကို၎င်း၊ ကျွန်တော်မအမျိုးသားချင်းပျက်စီးသော အမှုကို၎င်း၊ ကျွန်တော်မသည် ကြည့်ရှုခြင်းငှါ၊ အဘယ်သို့ တတ်နိုင်ပါအံ့နည်းဟု လျှောက်ဆို၏။
7 ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.
ရှင်ဘုရင် အာရွှေရုကလည်း၊ ဟာမန်သည် ယုဒလူတို့ကို ထိခိုက်သောကြောင့်၊ သူ၏အိမ်ကို ဖိဖုရား ဧသတာအားငါပေးပြီ။ ထိုသူကိုလည်း လည်ဆွဲချတိုင်၌ ကွပ်မျက်စေပြီ။
8 ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.
သို့ရာတွင် ရှင်ဘုရင်လက်စွပ်နှင့် တံဆိပ်ခတ် သော ရှင်ဘုရင် မိန့်တော်စာကို အဘယ်သူမျှ မပယ်ရ သည်ဖြစ်၍၊ စိတ်ရှိသည်အတိုင်း ယုဒလူတို့အဘို့ အမိန့် တော်စာကို တဖန်ရေး၍၊ လက်စွပ်တော်နှင့် တံဆိပ်ခတ် ရမည်ဟု မိဖုရားဧသတာနှင့် ယုဒလူမော်ဒကဲတို့အား မိန့်တော်မူ၏။
9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
ထိုအခါ ဝိဝန်အမည်ရှိသော တတိယလနှစ် ဆယ်သုံးရက်နေ့တွင်၊ စာရေးတော်ကြီးတို့ကိုခေါ်၍၊ အိန္ဒိယပြည်မှ ကုရှပြည်တိုင်အောင် တိုင်းပြည်တရာ နှစ်ဆယ်ခုနစ်ပြည်တို့၌ ရှိသော ယုဒလူ၊ ကိုယ်စားတော် မင်း၊ အပြည်ပြည်အုပ်သော မြို့ဝန်၊ မြို့သူကြီးတို့ကို မော်ဒကဲမှာထားသမျှအတိုင်း၊ ယုဒဘာသာစကားမှစ၍ လူအမျိုးမျိုး ပြောသောစကားအသီး အသီးအားဖြင့်၊
10 ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.
၁၀ရှင်ဘုရင် အာရွှေရု၏ အမိန့်တော်စာကိုရေး၍ ရှင်ဘုရင်လက် စွပ်တော်နှင့် တံဆိပ်ခတ်ပြီးမှ၊ မြင်း၊ လား၊ ကုလားအုပ်၊ မြည်းစီးသော စာပို့လုလင်တို့ဖြင့် ပေးလိုက် လေ၏။
11 ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.
၁၁အမိန့်တော်စာချက်ဟူမူကား၊ အာဒါအမည် ရှိသော ဒွါဒသမလ တဆယ်သုံးရက် တနေ့ခြင်းတွင်၊
12 ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.
၁၂နိုင်ငံတော်အတိုင်းတိုင်း အပြည်ပြည်အမြို့မြို့ ၌ရှိသော ယုဒလူတို့သည် စုဝေး၍၊ မိမိတို့အသက်ကို စောင့်ရသောအခွင့်၊ တိုက်လာသောပြည်သူ၊ စစ်သူရ အပေါင်းတို့ကို မိန်းမသူငယ်နှင့်တကွ သတ်ဖြတ်သုတ် သင်ပယ်ရှင်း၍၊ သူတို့ဥစ္စာကို လုယူ သိမ်းရုံးရသောအခွင့် ကို ရှင်ဘုရင်ပေးတော်မူ၏။
13 ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.
၁၃ဤရွေ့ကား၊ ယုဒလူတို့သည် ထိုနေ့ရက်တွင် ရန်သူတို့ကို ရန်တုံ့ပြုစေခြင်းငှါ၊ အတိုင်းတိုင်း အပြည် ပြည်၌နေသော လူမျိုးအပေါင်းတို့အား ကြော်ရသော အမိန့်တော်စာချက်ဖြစ်သတည်း။
14 ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.
၁၄ထိုအမိန့်တော်စာကို ရှုရှန်နန်းတော်၌ ကြော်ပြီး မှ၊ ရှင်ဘုရင် ကျပ်တည်းစွာ စီရင်သည်အတိုင်း၊ စာပို့ လုလင်တို့သည် အလျင်အမြန် ပြေးသွားကြ၏။
15 ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
၁၅မော်ဒကဲသည်လည်း၊ မင်းမြောက်တန်ဆာ တည်းဟူသော အဝတ်အဖြူအပြာကို ဝတ်ဆင်လျက်၊ ကြီးစွာသော ရွှေသရဖူကို ဆောင်းလျက်၊ ပိတ်ချောနှင့် မောင်းသော အထည်ဖြင့် ပြီးသောဝတ်လုံကို ခြုံလျက်၊ ရှင်ဘုရင်ထံတော်မှ ထွက်သွား၍၊
16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು.
၁၆ရှုရှန်မြို့တော်သည် ဝမ်းမြောက်ရွှင်လန်းခြင်းသို့ ရောက်လေ၏။ ယုဒလူတို့သည်လည်း၊ သက်သာရွှင်လန်း ၍ ဝမ်းမြောက်ခြင်း၊ အသရေထွန်းလင်းခြင်းသို့ ရောက် ကြ၏။
17 ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.
၁၇ရှင်ဘုရင်အမိန့်တော်စာရောက်လေသော အပြည်ပြည်အမြို့မြို့၌၊ ယုဒလူတို့သည် ဝမ်းမြောက် ရွှင်လန်းခြင်း၊ ပွဲခံခြင်း၊ မင်္ဂလာနေ့စောင်းခြင်းကို ပြု၍၊ ပြည်သူပြည်သားအများတို့သည် ယုဒလူတို့ကို ကြောက်ရွံ သောကြောင့် ယုဒဘာသာကို ဝင်ကြ၏။

< ಎಸ್ತೇರಳು 8 >