< ಎಸ್ತೇರಳು 9 >
1 ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.
Ní ọjọ́ kẹtàlá oṣù kejìlá, oṣù Addari, tí ó yẹ kí a mú àṣẹ tí ọba pa wá sí ìmúṣẹ. Ní ọjọ́ yìí ni ọ̀tá àwọn Júù rò pé àwọn yóò borí i wọn, ṣùgbọ́n nísinsin yìí a ti yìí padà, àwọn Júù sì na ọwọ́ agbára tó ga lórí àwọn tí ó kórìíra wọn.
2 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
Àwọn Júù péjọ ní àwọn ìlú u wọn ní gbogbo agbègbè ọba Ahaswerusi láti kọlu àwọn tó ń wá ìparun wọn. Kò sí ẹnikẹ́ni tí ó lè dojúkọ wọ́n, nítorí gbogbo àwọn ènìyàn ìlú tókù ń bẹ̀rù u wọn.
3 ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.
Gbogbo àwọn ọlọ́lá ìgbèríko, àwọn alákòóso, àwọn baálẹ̀ àti àwọn onídàájọ́ ọba ran àwọn Júù lọ́wọ́, nítorí wọ́n bẹ̀rù u Mordekai.
4 ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.
Mordekai sì jẹ́ ẹni pàtàkì ní ààfin ọba, òkìkí rẹ̀ sì tàn jákèjádò àwọn ìgbèríko, ó sì ní agbára kún agbára.
5 ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
Àwọn Júù sì gé gbogbo àwọn ọ̀tá a wọn lulẹ̀ pẹ̀lú idà, wọ́n pa wọ́n, wọ́n sì run wọ́n, wọ́n sì ṣe ohun tí ó wù wọ́n sí àwọn tí ó kórìíra wọn.
6 ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.
Ní ilé ìṣọ́ ti Susa, àwọn Júù pa ẹ̀ẹ́dẹ́gbẹ̀ta ọkùnrin run.
7 ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,
Wọ́n sì tún pa Parṣandata, Dalfoni, Aspata,
8 ಪೊರಾತನು, ಅದಲ್ಯನು, ಅರಿದಾತನು,
Porata, Adalia, Aridata,
9 ಪರ್ಮಷ್ಟನು, ಅರಿಸಾಯನು, ಅರಿದಾಯನು, ವೈಜಾತನು ಎಂಬವರನ್ನು ಕೊಂದರು.
Parmaṣta, Arisai, Aridai àti Faisata.
10 ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
Àwọn ọmọkùnrin mẹ́wẹ̀ẹ̀wá tí wọ́n jẹ́ ọmọ Hamani, ọmọ Hammedata, ọ̀tá àwọn Júù. Ṣùgbọ́n wọn kò fi ọwọ́ wọn lé ìkógun un wọn.
11 ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.
Ní ọjọ́ náà gan an ni a mú iye àwọn tí a pa ní ilé ìṣọ́ ti Susa wá fún ọba.
12 ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.
Ọba sì sọ fún Esteri ayaba pé, “Àwọn Júù ti pa ẹ̀ẹ́dẹ́gbẹ̀ta ọkùnrin àti àwọn ọmọkùnrin mẹ́wẹ̀ẹ̀wá tí i ṣe ọmọ Hamani ní ilé ìṣọ́ Susa run. Kí ni wọ́n ṣe ní gbogbo ìgbèríko ọba tókù? Báyìí kí ni ẹ̀bẹ̀ rẹ? A ó fi fún ọ. Kí ni ìbéèrè rẹ? A ó sì tún fi fún ọ.”
13 ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.
Esteri sì dáhùn pé, “Bí ó bá tẹ́ ọba lọ́rùn, fún àwọn Júù tí ó wà ní Susa ní àṣẹ láti ṣe gẹ́gẹ́ bí wọ́n ti ṣe ní òní kí wọn ṣe bákan náà ní ọ̀la, kí a sì so àwọn ọmọkùnrin Hamani mẹ́wẹ̀ẹ̀wá náà rọ̀ sórí igi.”
14 ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.
Nítorí náà ọba pàṣẹ pé kí a ṣe bẹ́ẹ̀. A sì gbé àṣẹ kan jáde ní Susa, wọ́n sì so àwọn ọmọkùnrin mẹ́wẹ̀ẹ̀wá Hamani kọ́.
15 ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
Àwọn Júù tí ó wà ní Susa sì péjọ ní ọjọ́ kẹrìnlá oṣù Addari, wọ́n sì pa ọ̀ọ́dúnrún ọkùnrin ní Susa, ṣùgbọ́n wọn kò fi ọwọ́ wọn lé ìkógun un wọn.
16 ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
Lákokò yìí, àwọn tókù nínú àwọn Júù tí wọ́n wà ní agbègbè ọba náà tún kó ara wọn jọ láti dáàbò bo ara wọn kí wọn sì sinmi lọ́wọ́ àwọn ọ̀tá a wọn. Wọ́n sì pa ẹgbàá mẹ́tàdínlógójì ó lé ẹgbẹ̀rin àwọn tí ó kórìíra wọn ṣùgbọ́n wọn kò fi ọwọ́ wọn lé ìkógun un wọn.
17 ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
Èyí ṣẹlẹ̀ ní ọjọ́ kẹtàlá oṣù Addari, wọ́n sì sinmi ní ọjọ́ kẹrìnlá, wọ́n sì ṣe ọjọ́ náà ní ọjọ́ àsè àti ayọ̀.
18 ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
Àwọn Júù tí ó wà ní Susa, kó ara wọn jọ ní ọjọ́ kẹtàlá àti ọjọ́ kẹrìnlá, nígbà tí ó sì di ọjọ́ kẹ́ẹ̀dógún wọ́n sinmi wọ́n sì ṣe ọjọ́ náà ní ọjọ́ àsè àti ayọ̀.
19 ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.
Nítorí náà ni àwọn Júù tí wọ́n ń gbé ní ìletò ṣe pa ọjọ́ kẹrìnlá oṣù Addari mọ́ gẹ́gẹ́ bí ọjọ́ ayọ̀ àti ọjọ́ àsè, ọjọ́ tí wọ́n ń fún ara wọn ní ẹ̀bùn.
20 ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.
Mordekai ṣe àkọsílẹ̀ àwọn ìṣẹ̀lẹ̀ wọ̀nyí, ó sì kọ ìwé ránṣẹ́ sí gbogbo àwọn Júù jákèjádò àgbáyé ọba Ahaswerusi, tí ó wà ní tòsí àti àwọn tí ó wà ní jìnnà réré,
21 ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.
láti lè máa ṣe àjọyọ̀ ní ọjọ́ kẹrìnlá àti ọjọ́ kẹ́ẹ̀dógún oṣù Addari ní ọdọọdún.
22 ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.
gẹ́gẹ́ bí àkókò tí àwọn Júù gba ìsinmi kúrò lọ́wọ́ àwọn ọ̀tá a wọn, àti bí oṣù tí ìbànújẹ́ ẹ wọn yí padà di ayọ̀ àti tí ọjọ́ ọ̀fọ̀ wọn di ọjọ́ àjọyọ̀. Ó kọ ọ́ sí wọn láti máa pa ọjọ́ náà mọ́ gẹ́gẹ́ bí ọjọ́ àsè àti ọjọ́ ayọ̀ kí wọn sì máa fi oúnjẹ fún ara wọn, kí wọn sì máa fi ẹ̀bùn fún àwọn aláìní.
23 ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.
Bẹ́ẹ̀ ni àwọn Júù gbà láti máa ṣe àjọyọ̀ tí wọ́n ti bẹ̀rẹ̀, wọ́n ń ṣe bí Mordekai ti kọ̀wé sí wọn.
24 ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು.
Nítorí Hamani ọmọ Hammedata, ará Agagi, ọ̀tá gbogbo àwọn Júù, ti gbèrò sí àwọn Júù láti pa wọ́n run, ó sì ti di puri (èyí tí í ṣe ìbò) fún ìsọdahoro àti ìparun wọn.
25 ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;
Ṣùgbọ́n nígbà tí Esteri sọ nípa ìṣọ̀tẹ̀ náà fún ọba, ó kọ̀wé àṣẹ kan jáde pé kí ète búburú tí Hamani ti pa sí àwọn Júù kí ó padà sí orí òun fúnra rẹ̀, àti pé kí a gbé òun àti àwọn ọmọkùnrin rẹ̀ kọ́ sórí igi.
26 ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ
(Nítorí náà a pe àwọn ọjọ́ wọ̀nyí ní Purimu, láti ara ọ̀rọ̀ puri). Nítorí ohun gbogbo tí a kọ sínú ìwé yìí àti nítorí ohun tí wọ́n ti rí àti ohun tí ó ti ṣẹlẹ̀ sí wọn,
27 ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.
àwọn Júù fi lélẹ̀, wọ́n sì gbà á gẹ́gẹ́ bí ìlànà fún ara wọn àti fún irú àwọn ọmọ wọn àti gbogbo àwọn tí ó darapọ̀ mọ́ wọn, kò sì ní kúrò, wọn yóò sì máa pa àwọn ọjọ́ méjèèjì yìí mọ́ ní gbogbo ọdún, gẹ́gẹ́ bí a ti kọ ọ́ àti àkókò tí a yàn.
28 ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.
A gbọdọ̀ máa ṣe ìrántí àwọn ọjọ́ wọ̀nyí kí a sì máa pa wọ́n mọ́ ní ìrandíran ní gbogbo ìdílé, àti ní gbogbo ìgbèríko àti ní gbogbo ìlú. A gbọdọ̀ máa ṣe àwọn ọjọ́ Purimu wọ̀nyí ní àárín àwọn Júù, bẹ́ẹ̀ ni kò gbọdọ̀ di ohun ìgbàgbé láàrín irú àwọn ọmọ wọn.
29 ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.
Bẹ́ẹ̀ ni Esteri ayaba, ọmọbìnrin Abihaili, pẹ̀lú Mordekai ará a Júù, kọ̀wé pẹ̀lú àṣẹ láti fi ìdí ìwé kejì nípa Purimu yìí múlẹ̀.
30 ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.
Mordekai sì kọ ìwé ránṣẹ́ sí gbogbo àwọn Júù, sí ìgbèríko mẹ́tàdínláàádóje ní ilẹ̀ ọba Ahaswerusi ní ọ̀rọ̀ àlàáfíà àti òtítọ́.
31 ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.
Láti fi ìdí àwọn ọjọ́ ọ Purimu yìí múlẹ̀ ní àkókò tí wọ́n yàn, gẹ́gẹ́ bí Mordekai ará Juda, àti Esteri ayaba ti pa á láṣẹ fún wọn, àti bí wọ́n ṣe fi lélẹ̀ fún ara wọn àti irú àwọn ọmọ wọn ní ìbámu pẹ̀lú àkókò àwẹ̀ àti ẹkún wọn.
32 ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.
Àṣẹ Esteri sì fi ìdí ìlànà Purimu wọ̀nyí múlẹ̀, a sì kọ ọ́ sínú ìwé àkọsílẹ̀.