< ವಿಮೋಚನಕಾಂಡ 23 >

1 “ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.
खोटी अफवा पसरवू नकोस; दुष्टाच्या हातात हात घालून अन्यायी साक्षी होऊ नकोस.
2 “ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.
दुष्टाई करण्याकरता पुष्कळ जणांना तू अनुसरू नकोस, आणि तू पुष्कळ जणांच्या मागे लागून वादात न्याय विपरीत करण्यास बोलू नकोस.
3 ಬಡವನಿಗೂ ವ್ಯಾಜ್ಯದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
एखाद्या गरीब मनुष्याचा न्याय होताना, त्याची बाजू खरी असल्याशिवाय त्याचा पक्ष घेऊ नकोस.
4 “ನೀವು ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ, ಅದು ನಿಮಗೆ ಸಿಕ್ಕಿದರೆ ನೀವು ಅದನ್ನು ಖಂಡಿತವಾಗಿ ತಿರುಗಿ ಅವನಿಗೆ ತಂದುಕೊಡಬೇಕು.
आपल्या शत्रूचा हरवलेला बैल किंवा एखादे गाढव मोकाट फिरताना दिसले तर त्यास वळवून ते त्याच्याकडे नेऊन सोड.
5 ನಿಮ್ಮನ್ನು ಹಗೆ ಮಾಡುವವನ ಕತ್ತೆಯು ತನ್ನ ಹೊರೆಯ ಕೆಳಗೆ ಬಿದ್ದಿರುವುದನ್ನು ನೀವು ಕಂಡಾಗ, ಅವನಿಗೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದಿದ್ದರೂ ನೀವು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
तुझ्या शत्रूचे गाढव जास्त ओझ्याखाली दबून पडलेले दिसले तर तू त्यास सोडून जाऊ नकोस, तू अवश्य त्याच्याबरोबर राहून ते सोड.
6 “ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ತಪ್ಪಿಸಿ ತೀರ್ಪುಕೊಡಬಾರದು.
तू आपल्या गरीबाच्या वादात त्याचा योग्य न्याय विपरीत होऊ देऊ नकोस;
7 ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.
कोणावरही खोटे दोषारोप करू नकोस; एखाद्या निष्पाप वा निरपराधी ह्यांचा वध करू नकोस. कारण दुष्टाला मी नीतिमान ठरवणार नाही.
8 “ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
लाच देण्याचा प्रयत्न करील, तर ती तू मुळीच घेऊ नकोस; लाच घेऊ नको कारण लाच डोळसास आंधळे करते; आणि नीतिमानांच्या म्हणण्याचा विपरीत न्याय करते.
9 “ಪರದೇಶಿಯರನ್ನು ಪೀಡಿಸಬಾರದು. ಏಕೆಂದರೆ ಈಜಿಪ್ಟ್ ದೇಶದಲ್ಲಿ ನೀವೂ ಪರದೇಶಿಗಳಾದ್ದಿರಷ್ಟೇ, ಅಂಥವರ ಮನೋವ್ಯಥೆಯನ್ನು ನಿಮಗೆ ತಿಳಿದಿದೆ.
परक्याला कधीही छळू नकोस, कारण त्याच्या मनोभावनेची तुम्हास चांगली माहिती आहे; कारण तुम्ही देखील एके काळी मिसर देशात परके होता.
10 “ಆರು ವರ್ಷ ನಿಮ್ಮ ಭೂಮಿಗೆ ಬೀಜ ಹಾಕಿ, ಅದರ ಬೆಳೆಯನ್ನು ಕೂಡಿಸಬೇಕು.
१०सहा वर्षे आपल्या जमिनीची पेरणी कर; आणि तिचे उत्पन्न साठीव.
11 ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು.
११परंतु सातव्या वर्षी जमीन पडीक राहू दे. त्या वर्षी शेतात काहीही पेरू नये. जर शेतात काही उगवले तर ते गरीबांना घेऊ द्या; व राहिलेले वनपशूंना खाऊ द्या; तुमचे द्राक्षमळे व जैतूनाची वने यांच्या बाबतीतही असेच करावे.
12 “ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.
१२तुम्ही सहा दिवस काम करावे, व सातव्या दिवशी विसावा घ्यावा; त्यामुळे तुमच्या गुलामांना व इतर उपऱ्यांनाही विसावा मिळेल व त्यांना ताजेतवाने वाटेल; तुमच्या बैलांना व गाढवानांही विसावा मिळेल.
13 “ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.
१३मी जे काही सांगितले ते सर्व नियम कटाक्षाने पाळावेत; इतर देवांचे नांव देखील घेऊ नका; ते तुमच्या तोंडाने उच्चारू नका.
14 “ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.
१४वर्षातून तीनदा तू माझ्यासाठी उत्सव करून सण पाळ.
15 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.
१५बेखमीर भाकरीचा सण पाळ; त्यामध्ये सात दिवस खमीर न घातलेली भाकर तुम्ही खावी; हा सण तुम्ही अबीब महिन्यात पाळावा, कारण याच महिन्यात तुम्ही मिसरमधून बाहेर निघून आला; कोणी रिकाम्या हाताने माझ्यासमोर येऊ नये.
16 “ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.
१६शेतात पेरलेल्या पहिल्या पिकाच्या कापणीचा सण पाळावा. वर्षाच्या अखेरीस तू आपल्या श्रमाच्या फळांचा संग्रह करशील तेव्हा संग्रहाचा सण पाळावा.
17 “ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
१७वर्षातून तीनदा तुझ्या सर्व पुरुषांनी प्रभू परमेश्वरासमोर यावे.
18 “ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.
१८तुम्ही यज्ञपशूचे रक्त मला अर्पण करावयाचे वेळी खमीर घातलेल्या भाकरीसोबत अर्पण करू नये; आणि मला अर्पण केलेल्या यज्ञपशूची चरबी दुसऱ्या दिवसापर्यंत राहू देऊ नये.
19 “ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
१९आपल्या जमिनीच्या प्रथम उपजातील सर्वोत्तम भाग आपला देव परमेश्वर ह्याच्या मंदिरात आणावा. करडू त्याच्या आईच्या दुधात शिजवू नये.
20 “ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
२०पाहा, वाटेने तुला सांभाळण्याकरता आणि मी तयार केलेल्या स्थानात तुला पोचविण्याकरता मी एक दूत तुझ्यापुढे पाठवत आहे.
21 ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.
२१त्याच्यासमोर सावधगिरीने राहा आणि त्याचे म्हणणे ऐक, आज्ञा पाळ आणि त्याच्यामागे चाल; त्याच्याविरुध्द बंड करू नकोस. कारण तो तुम्हास क्षमा करणार नाही; कारण त्याच्या ठायी माझे नाव आहे.
22 ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.
२२जर तू त्याची वाणी खरोखर ऐकशील व मी सांगतो ते सर्व करशील तर मी तुम्हाबरोबर राहीन; मी तुमच्या सर्व शत्रूंचा शत्रू व विरोधकांचा विरोधक होईन.
23 ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
२३देव म्हणाला, माझा दूत तुमच्यापुढे चालून अमोरी, हित्ती, परिज्जी, कनानी, हिव्वी व यबूसी या लोकांकडे तुला नेईल आणि मी त्यांचा नाश करीन.
24 ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.
२४परंतु या सर्व लोकांच्या देवाला तू नमन करू नकोस; त्यांची सेवा करू नकोस, त्यांना जमीनदोस्त करावेस; आणि त्यांच्या स्तंभाचे तुकडे तुकडे करावेस.
25 ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.
२५तू आपला देव परमेश्वर याचीच उपासना करावीस; म्हणजे तो तुझ्या अन्नपाण्यास बरकत देईल. मी तुमच्यामधून रोगराई दूर करीन.
26 ಗರ್ಭ ಸ್ರಾವವಾಗಲಿ, ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವುದಿಲ್ಲ. ನಾನು ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ಅನುಗ್ರಹಿಸುವೆನು.
२६तुझ्या देशात कोणाचा गर्भपात होणार नाही आणि कोणीही वांझ असणार नाही; मी तुला दीर्घायुषी करीन.
27 “ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.
२७ज्या ज्या लोकांच्या विरूद्ध तू जाशील त्यांना मी आधीच दहशत घालून त्यांची फसगत करीन. आणि तुझ्या सर्व शत्रूंना तुला पाठ दाखवयास लावीन.
28 ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.
२८मी तुझ्यापुढे गांधीलमाशा पाठवीन; त्या हिव्वी, कनानी, व हित्ती ह्यांना तुझ्यापुढून पळावयास लावतील.
29 ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
२९मी त्यांना एका वर्षातच घालवून देणार नाही; कारण मी तसे केले तर देश एकदम ओस पडेल आणि मग वनपशूंची वाढ होऊन ते तुला त्रास देतील.
30 ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿಸಿಕೊಳ್ಳುವವರೆಗೆ ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.
३०तुमची संख्या वाढून तू देशाचा ताबा घेशील तोपर्यंत मी हळूहळू तुझ्यापुढून त्यांना घालवून देईन.
31 “ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.
३१“मी तांबड्या समुद्रापासून पलिष्ट्यांच्या समुद्रापर्यंत आणि रानापासून ते फरात नदीपर्यंत मी तुझ्या देशाची सीमा करीन. तेथे राहणाऱ्या लोकांस मी तुझ्या हाती देईन व तू त्या सर्वांना तेथून घालवून द्याल.
32 ಅವರ ಸಂಗಡ, ಅವರ ದೇವರುಗಳ ಸಂಗಡ ಯಾವ ಒಡಂಬಡಿಕೆಯನ್ನು ಮಾಡಿಕೊಳ್ಳಬಾರದು.
३२तू त्याच्याशी किंवा त्यांच्या देवांशी कोणताही करार करू नकोस.
33 ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.”
३३तू त्यांना तुझ्या देशात राहू देऊ नकोस; तू जर त्यांना तुझ्यामध्ये राहू देशील तर ते पुढे तुला सापळ्यासारखे अडकविणारे होतील, ते तुला माझ्याविरूद्ध पाप करायला लावतील व तू त्यांच्या देवांची उपासना करण्यास सुरुवात करशील.”

< ವಿಮೋಚನಕಾಂಡ 23 >