< ವಿಮೋಚನಕಾಂಡ 32 >
1 ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.
၁မောရှေသည်တောင်အောက်သို့မဆင်းဘဲ တောင် ပေါ်တွင်ကြာမြင့်စွာနေသောအခါ၊ လူတို့ သည်အာရုန်ထံသို့စုရုံးရောက်ရှိလာပြီး လျှင်``အကျွန်ုပ်တို့အားအီဂျစ်ပြည်မှထုတ် ဆောင်ခဲ့သောမောရှေအဘယ်သို့ဖြစ်သည် ကို အကျွန်ုပ်တို့မသိရသဖြင့်အကျွန်ုပ်တို့ ကိုရှေ့ဆောင်မည့်ဘုရားတစ်ဆူကိုသွန်း လုပ်ပေးပါလော့'' ဟုတောင်းဆိုကြ၏။
2 ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಮತ್ತು ನಿಮ್ಮ ಪುತ್ರಪುತ್ರಿಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ,” ಎಂದನು.
၂အာရုန်က``သင်တို့၏မယားနှင့်သားသမီး တို့ ဝတ်ဆင်ထားသောရွှေနားတောင်းများကို ချွတ်၍ ငါ့ထံသို့ယူခဲ့ကြလော့'' ဟုဆို လေ၏။-
3 ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
၃သို့ဖြစ်၍လူအပေါင်းတို့သည်မိမိတို့ ၏ရွှေနားတောင်းများကိုချွတ်၍ အာရုန် ထံသို့ယူဆောင်ခဲ့ကြ၏။-
4 ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.
၄အာရုန်သည်နားတောင်းများကိုအရည် ကျိုပြီးလျှင်၊ ရွှေဖြင့်နွားငယ်ပုံသွန်းလုပ် လေ၏။ ထိုနောက်လူအပေါင်းတို့က``ဣသရေလ အမျိုးသားတို့၊ ဤဘုရားသည်သင်တို့အား အီဂျစ်ပြည်မှထုတ်ဆောင်ခဲ့သောငါတို့ ၏ဘုရားဖြစ်သည်'' ဟုဆိုလေ၏။
5 ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.
၅ထိုနောက်အာရုန်သည်ရွှေနွားရုပ်ရှေ့မှာ ပလ္လင် ကိုတည်၍``နက်ဖြန်နေ့တွင်ထာဝရဘုရား အတွက်ပွဲခံရကြမည်'' ဟုကြေညာ၏။-
6 ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.
၆နောက်နေ့နံနက်စောစောတွင်လူအပေါင်းတို့ သည် မီးရှို့ရာယဇ်နှင့်မိတ်သဟာယယဇ်များ ကိုပူဇော်ကြ၏။ ထိုသို့ယဇ်ပူဇော်ကြပြီး နောက်၊ သူတို့သည် စားသောက်မူးယစ်ကြပြီး လျှင်၊ အမျိုးသား၊ အမျိုးသမီးများအပျော် ကူးကြကုန်၏။
7 ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
၇ထာဝရဘုရားကမောရှေအား ``တောင်အောက် သို့အမြန်ဆင်းလော့။ အီဂျစ်ပြည်မှသင်ထုတ် ဆောင်ခဲ့သောသင်၏လူတို့သည်ငါ့ကိုစွန့်ပယ် ကြပြီ။-
8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”
၈သူတို့သည်ငါချမှတ်သောလမ်းစဉ်မှသွေဖည် သွားကြလေပြီ။ ရွှေနွားငယ်ရုပ်ကိုသွန်းလုပ် ပြီးလျှင်၊ ထိုရုပ်တုကိုယဇ်ပူဇော်ရှိခိုးကြ ပြီ။ ထိုဘုရားသည် သူတို့အားအီဂျစ်ပြည် မှထုတ်ဆောင်ခဲ့သောဘုရားဖြစ်ကြောင်း၊ ကြွေးကြော်နေကြပြီ။''-
9 ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,
၉ထာဝရဘုရားက ``ဤသူတို့အလွန် ခေါင်းမာကြောင်းငါသိ၏။-
10 ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು.
၁၀ငါ့ကိုမဆီးတားနှင့်။ ငါသည်အမျက်ထွက်၍ သူတို့ကိုသုတ်သင်ပစ်မည်။ ထိုနောက်သင်နှင့် သင်၏အဆက်အနွယ်တို့ကိုလူမျိုးကြီး ဖြစ်စေမည်'' ဟုမိန့်တော်မူ၏။
11 ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?
၁၁သို့ရာတွင်မောရှေသည် မိမိ၏ဘုရားသခင် ထာဝရဘုရားအားတောင်းပန်လျှောက်ထား သည်မှာ``အို ထာဝရဘုရား၊ ကိုယ်တော်သည် အီဂျစ်ပြည်မှ၊ မဟာတန်ခိုးတော်ဖြင့်ကယ် တင်ခဲ့သောကိုယ်တော်၏လူမျိုးတော်ကို အမျက်ပြင်းစွာထွက်တော်မူမည်လော။-
12 ‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.
၁၂အီဂျစ်အမျိုးသားတို့ကကိုယ်တော်ရှင်သည် ဣသရေလအမျိုးသားတို့ကိုတောင်များ ပေါ်သို့ခေါ်ဆောင်၍၊ အကုန်အစင်ရှင်းလင်း သုတ်သင်ပစ်ရန်အီဂျစ်ပြည်မှထုတ်ဆောင် သွားသည်ဟူ၍ဆိုဖွယ်ရာအကြောင်းရှိ စေရပါမည်လော။ ပြင်းပြသောအမျက် တော်ကိုပြေစေလျက်ကိုယ်တော်၏လူမျိုး တော်အားပေးမည့်အပြစ်ဒဏ်မှလွတ် ငြိမ်းချမ်းသာခွင့်ရစေပါ။-
13 ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.
၁၃ကိုယ်တော်၏ကျွန်အာဗြဟံ၊ ဣဇာက်နှင့် ယာကုပ်တို့ကိုအောက်မေ့သတိရတော်မူ ပါ။ ကိုယ်တော်သည်သူတို့၏အဆက်အနွယ် တို့ကိုမိုးကောင်းကင်ကြယ်များကဲ့သို့ ပွား များစေမည်ဖြစ်ကြောင်းနှင့်ကိုယ်တော်ရှင် ကတိထားတော်မူသော ထိုပြည်အားလုံး ကိုသူတို့၏အဆက်အနွယ်တို့အား ထာဝစဉ်ပိုင်ဆိုင်ရန်ပေးမည်ဖြစ်ကြောင်း ကိုသတိရတော်မူပါ။-''
14 ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.
၁၄ထို့ကြောင့်ထာဝရဘုရားသည်အမျက် တော်ပြေ၍၊ မိမိလူမျိုးတော်အားပေး မည့်အပြစ်ဒဏ်မှလွတ်ငြိမ်းချမ်းသာခွင့် ရစေတော်မူ၏။
15 ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.
၁၅မောရှေသည်မျက်နှာနှစ်ဘက်စလုံးတွင် ပညတ် တော်များကိုအက္ခရာတင်ထားသောကျောက် ပြားနှစ်ချပ်ကိုယူဆောင်လျက်တောင်ပေါ်မှ ဆင်းလာ၏။-
16 ಆ ಹಲಗೆಗಳು ದೇವರ ಕೆಲಸಗಳಾಗಿದ್ದವು. ಆ ಹಲಗೆಗಳ ಮೇಲೆ ಕೆತ್ತಿದ ಬರಹವು ದೇವರದ್ದೇ ಆಗಿತ್ತು.
၁၆ထိုကျောက်ပြားများနှင့်ကျောက်ပြားများပေါ် ရှိအက္ခရာတို့သည် ဘုရားသခင်၏လက်ရာ တော်ဖြစ်သတည်း။
17 ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು.
၁၇ယောရှုသည်လူများ၏ကြွေးကြော်သံကို ကြားရသောအခါ၊ မောရှေအား``စခန်းထဲ ၌တပ်လှန့်သံကိုကြားရပါသည်တကား'' ဟုဆို၏။-
18 ಅದಕ್ಕೆ ಮೋಶೆಯು ಹೀಗೆ ಉತ್ತರಿಸಿದನು: “ಅದು ಜಯಧ್ವನಿಯು ಅಲ್ಲ, ಅಪಜಯದ ಧ್ವನಿಯೂ ಅಲ್ಲ. ಆದರೆ ನನಗೆ ಹಾಡುವ ಧ್ವನಿಯು ಕೇಳಿಸುತ್ತಿದೆ.”
၁၈မောရှေက``ငါကြားရသောအသံသည်၊ စစ် အောင်သံလည်းမဟုတ်၊ စစ်ရှုံးသံလည်းမဟုတ်၊ သီချင်းသံပင်ဖြစ်သည်'' ဟုပြန်ပြော၏။
19 ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.
၁၉မောရှေသည်စခန်းအနီးသို့ရောက်ရှိသော အခါ၊ နွားငယ်ရုပ်ကိုလည်းကောင်း၊ လူများ ကခုန်နေသည်ကိုလည်းကောင်း၊ တွေ့မြင်ရ လျှင်၊ အလွန်အမျက်ထွက်သဖြင့်၊ သူယူ ဆောင်ခဲ့သောကျောက်ပြားများကိုတောင် ခြေရင်း၌ပစ်ချလိုက်ရာအပိုင်းပိုင်းကျိုး ကုန်၏။-
20 ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.
၂၀သူသည်သူတို့လုပ်သောနွားရုပ်ကိုအရည် ကျို၍၊ အမှုန့်ထောင်းပြီးလျှင်၊ အမှုန့်ကိုရေ ပေါ်၌ဖြူးလေ၏။ ထိုနောက်ဣသရေလ အမျိုးသားတို့အားထိုရေကိုသောက်စေ၏။-
21 ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.
၂၁မောရှေကအာရုန်အား``ဤသူတို့သည်သင့် ကြောင့်ထိုမျှလောက်ကြီးလေးသောအပြစ် ကိုပြုမိရန် သူတို့သည်သင့်အားအဘယ် သို့ပြုကြသနည်း'' ဟုမေး၏။
22 ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.
၂၂အာရုန်က``အကျွန်ုပ်ကိုအမျက်မထွက်ပါ နှင့်။ ဤသူတို့သည်မကောင်းမှုကိုပြုရန် မည် မျှလောက်စိတ်ဆန္ဒကြီးကြောင်းကိုယ်တော် သိပါ၏။-
23 ಅವರು ನನಗೆ, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,’ ಎಂದು ಹೇಳಿದರು.
၂၃သူတို့ကအကျွန်ုပ်အား`အီဂျစ်ပြည်မှအကျွန်ုပ် တို့ကိုထုတ်ဆောင်ခဲ့သောမောရှေသေသည်၊ ရှင် သည်ကိုအကျွန်ုပ်တို့မသိရသဖြင့်၊ အကျွန်ုပ် တို့ကိုရှေ့ဆောင်မည့်ဘုရားတစ်ဆူကိုသွန်း လုပ်ပေးပါလော့' ဟုတောင်းဆိုကြပါသည်။-
24 ಆದ್ದರಿಂದ ನಾನು ಅವರಿಗೆ, ‘ಚಿನ್ನ ಇದ್ದವರು ಅದನ್ನು ತರಲಿ,’ ಎಂದೆನು. ಅವರು ಅದನ್ನು ನನಗೆ ಕೊಟ್ಟರು. ಆಗ ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ, ಈ ಕರುವು ಉಂಟಾಯಿತು,” ಎಂದನು.
၂၄အကျွန်ုပ်ကသူတို့အား`သင်တို့၏ရွှေဝတ် တန်ဆာကိုချွတ်၍ငါ့အားပေးလော့' ဟု ပြောပါသည်။ အကျွန်ုပ်သည်သူတို့ထံမှ ရရှိသောရွှေအားမီးထဲသို့ပစ်ချရာ၊ ဤ နွားရုပ်ထွက်လာပါသည်'' ဟုဆိုလေ၏။
25 ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.
၂၅ဣသရေလအမျိုးသားတို့သည်၊ ပတ်ဝန်း ကျင်၌ရန်သူများကဲ့ရဲ့စရာဖြစ်လျက်၊ အာရုန်၏အားပေးမှုဖြင့်စည်းကမ်းမဲ့ ကခုန်မြူးထူးနေသည်ကို၊ မောရှေမြင်ရ၏။-
26 ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು.
၂၆ထို့ကြောင့်သူသည်စခန်းပေါက်ဝတွင်ရပ် လျက်``ထာဝရဘုရား၏ဘက်တော်သားဖြစ် သူတို့၊ ငါ့ထံသို့လာကြလော့'' ဟုအော်ဟစ် ဖိတ်ခေါ်လေ၏။ ထိုအခါလေဝိအမျိုးသား အပေါင်းတို့သည်မောရှေထံသို့စုရုံးလာ ကြသောအခါ၊-
27 ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’” ಎಂದು ಹೇಳಿದನು.
၂၇မောရှေကသူတို့အား``ဣသရေလအမျိုးသား တို့၏ဘုရားသခင်ထာဝရဘုရားက`သင်တို့ တစ်ယောက်စီဋ္ဌားကိုကိုင်စွဲ၍၊ စခန်းတစ်ဘက် မှတစ်ဘက်သို့နေရာအနှံ့အပြားသွားပြီး လျှင်၊ သင်တို့၏ညီအစ်ကို၊ အဆွေခင်ပွန်း၊ အိမ်နီး ချင်းတို့ကိုသတ်လော့' ဟုမိန့်တော်မူသည်'' ဟု ဆင့်ဆိုလေ၏။-
28 ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.
၂၈လေဝိအမျိုးသားတို့သည်မောရှေအမိန့် ပေးသည့်အတိုင်းဆောင်ရွက်သဖြင့်၊ ထိုနေ့ တွင်လူပေါင်းသုံးထောင်ခန့်သေဆုံးလေ၏။-
29 ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.
၂၉ထိုနောက်မောရှေကလေဝိအမျိုးသားတို့ အား``ယနေ့တွင်သင်တို့သည်မိမိ၏သား ရင်းညီအစ်ကိုရင်းတို့ကိုသတ်ခြင်းအား ဖြင့်၊ ထာဝရဘုရား၏အမှုတော်ကိုဆောင် ရန်ယဇ်ပုရောဟိတ်များအဖြစ်မိမိတို့ ကိုယ်ကိုဆက်ကပ်ကြပြီ။ ထို့ကြောင့်ထာဝရ ဘုရားသည်သင်တို့အားကောင်းချီးပေး တော်မူပြီ'' ဟုဆို၏။
30 ಮರುದಿನದಲ್ಲಿ, ಮೋಶೆಯು ಜನರಿಗೆ, “ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ. ಆದ್ದರಿಂದ ನಾನು ಈಗ ಬೆಟ್ಟವನ್ನು ಹತ್ತಿ ಯೆಹೋವ ದೇವರ ಬಳಿಗೆ ಹೋಗುವೆನು. ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬಹುದು,” ಎಂದನು.
၃၀နောက်တစ်နေ့တွင်မောရှေက ဣသရေလ အမျိုးသားတို့အား``သင်တို့သည်ကြီးလေး သောပြစ်မှုကူးလွန်ခဲ့ကြပြီ။ ယခုငါသည် ထာဝရဘုရားရှိတော်မူရာတောင်ပေါ်သို့ တက်မည်။ သင်တို့၏အပြစ်ကိုလွှတ်ရန် ထာဝရ ဘုရားအားတောင်းပန်၍ရကောင်းရလိမ့်မည်'' ဟုဆိုလေ၏။-
31 ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
၃၁မောရှေသည်ထာဝရဘုရားထံတော်သို့ ပြန်လာ၍``ဤသူတို့သည်ကြီးလေးသော ပြစ်မှုကိုကူးလွန်ခဲ့ပါပြီ။ ရွှေဘုရား ကိုသွန်းလုပ်၍ကိုးကွယ်ကြပါ၏။-
32 ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.
၃၂သူတို့၏အပြစ်ကိုလွှတ်တော်မူပါ။ သူတို့၏ အပြစ်ကိုလွှတ်တော်မမူလျှင်၊ ကိုယ်တော်၏လူ မျိုးတော်နာမည်စာရင်းမှအကျွန်ုပ်၏နာမည် ကိုပယ်ဖျက်တော်မူပါ'' ဟုတောင်းပန်လျှောက် ထားလေ၏။
33 ಅದಕ್ಕೆ ಯೆಹೋವ ದೇವರು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
၃၃ထာဝရဘုရားက``ငါ့ကိုပြစ်မှားသူ၏ နာမည်ကိုသာငါ၏စာအုပ်မှပယ်ဖျက်မည်။-
34 ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.
၃၄ယခုသွား၍သင့်အားငါမိန့်မှာပြီးသော အရပ်သို့သူတို့ကိုပို့ဆောင်လော့။ ငါ၏ကောင်း ကင်တမန်သည် သင့်အားလမ်းပြမည်။ သို့ရာ တွင်ဤသူတို့၏အပြစ်အတွက်ငါဒဏ်စီရင် မည့်အချိန်ကျရောက်လာလိမ့်မည်'' ဟုမိန့် တော်မူ၏။
35 ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.
၃၅ထို့ကြောင့်ထာဝရဘုရားသည် ဣသရေလ အမျိုးသားတို့တွင်ကပ်ရောဂါဆိုက်ရောက် စေတော်မူ၏။ အဘယ်ကြောင့်ဆိုသော်သူတို့ သည်အာရုန်အား ရွှေနွားငယ်ရုပ်ကိုသွန်း လုပ်စေသောကြောင့်ဖြစ်သည်။