< ಯೆಹೆಜ್ಕೇಲನು 14 >

1 ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
इस्राएलाच्या वडीलांपैकी कित्येक माणसे माझ्याकडे आले व माझ्यापुढे बसले
2 ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
नंतर परमेश्वर देवाचा शब्द माझ्याकडे आला की,
3 “ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?
मानवाच्या मुला, या सर्व मानवांनी मूर्तींची उपासना केली व मनात त्यांना जागा दिली, त्यांनी आपल्या दृष्टी समोर पापाला अडखळण ठेवले आहे, अशा पापीष्ट लोकांस मी आपल्याला प्रश्न विचारु देईन?
4 ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.
याकरिता त्यांच्याशी बोल; त्यांना सांग की प्रभू परमेश्वर म्हणतो, इस्राएल घराण्यातील जो कोणी आपल्या हृदयात मूर्ती वागवतो, आपले पापजनक अडखळण आपल्या नेत्रांसमोर ठेवतो आणि संदेष्ट्याकडे येतो, त्यास माझे उत्तर त्याच्या मूर्तींच्या संख्येच्या मानाने मिळेल.
5 ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’
मी इस्राएल घराण्याला परत माघारी आणिन, कारण त्यांच्या मूर्तीपुढे त्यांनी मला अगदी परके केले आहे, असे परमेश्वर देव म्हणतो.
6 “ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.
तथापि इस्राएल घराण्याशी बोल, प्रभू परमेश्वर देव म्हणतो, मूर्तीपुजेपासून मागे फिरा आणि पश्चाताप करा, आपल्या अमंगळ गोष्टीपासून आपले तोंड फिरवा.
7 “‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.
इस्राएलाच्या घराण्यातील प्रत्येकजण आणि इस्राएलात जे मला योग्य तेच आहे आणि ज्यांनी मूर्तीपुजेत अशा पापाचा अडखळण धोंडा आपल्या मनापासून आपल्यात वागवला. आणि माझा शोध घेण्यास भविष्यवक्तांकडे येतात, मी परमेश्वर देव आहे स्वतः त्यांना उत्तर देईन.
8 ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.
माझे मुख त्याच्या पासून लपवीन, त्यांना चिन्ह व लोकांसाठी निंदेचा विषय करीन आणि माझ्या लोकांमधून त्यांना हुसकावून देईन, तेव्हा त्यांन समजेल की मी परमेश्वर देव आहे.
9 “‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.
जर कुणी संदेष्टा भुलथापांनी बोलून संदेश देईल तर समजावे की मीच परमेश्वर देव त्यास भ्रमात पाडून संदेश देण्यास भाग पाडले आहे, त्याच्या विरोधात मी माझा हात उचलीन आणि माझ्या इस्राएलातून त्यांना हुसकून देईन
10 ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.
१०ते त्यांच्या घोर अन्यायाचे फळ भोगतील संदेष्ट्यांचा घोर अन्याय आणि ज्यांनी प्रश्न विचारला ते दोघेही घोर अन्यायाचे फळ भोगतील.
11 ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
११यासाठी इस्राएल घराणे माझ्यापासून परागंदा होणार नाही ते आपल्या पातकामुळे स्वतःला अशुद्ध करणार नाहीत, ते माझे लोक होतील व मी त्यांचा देव होईन, असे परमेश्वर देव म्हणतो.
12 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
१२नंतर परमेश्वर देवाचा शब्द माझ्याकडे आला आणि म्हणाला,
13 “ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.
१३मानवाच्या मुला, एखाद्या देशाने माझ्या विरोधात पाप केले, त्यांच्या विरोधात मी माझा हात उचलेन, त्यांना अन्नाचा तुटवडा पडेल त्यांच्यावर दुष्काळ आणिन त्यांच्यातून मानव व पशू ह्यांना हुसकून देईन.
14 ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
१४जरी देशात नोहा दानीएल आणि ईयोब हे तिघे असेल तरी पुरे ते त्यांच्या धार्मीकतेमुळे वाचतील असे परमेश्वर प्रभू म्हणतो.
15 “ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,
१५जर मी देशात क्रुर हिंस्र पशू पाठविले आणि जमीन नापीक झाली क्रुर पशुमुळे कोणी मनुष्य जाणारे येणार नसल्यामुळे देश निर्जन होईल.
16 ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
१६जरी त्यामध्ये ते तिघे असले तरी त्याचा मुलगा मुलगी ह्यांचा बचाव करु शकणार नाही. मात्र त्याचा स्वतःचा बचाव होईल, मात्र देश ओसाड होईल असे परमेश्वर देव म्हणतो.
17 “ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,
१७जर मी देशा विरुध्द तलवार चालवीली आणि म्हणालो, देशातील दोन्ही मनुष्य आणि पशू नष्ट करीन.
18 ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
१८जरी हे तीन मनुष्य देशात असतील असे परमेश्वर देव म्हणतो, तरी ते त्यांचा मुलगा मुलगी ह्यांचा बचाव करु शकणार नाही, मात्र त्यांच्या जीवाचा बचाव होईल.
19 “ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,
१९जर मी देशावर क्रोध मरी पाठवीली, त्यांचे रक्त सांडल्यामुळे मनुष्य आणि पशू हे नष्ट करीन.
20 ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
२०जरी देशात नोहा, दानीएल आणि ईयोब असले प्रभू परमेश्वर देव म्हणतो, तरी ते त्यांच्या मुलगा मुलगी यांचा बचाव करु शकणार नाही पण ते त्यांच्या धार्मिकतेने स्वतःचा बचाव करतील.
21 “ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?
२१कारण प्रभू परमेश्वर देव असे म्हणतो, मी निश्चित शिक्षा करण्यासाठी चार प्रकारच्या त्रासदायक गोष्टी पाठवणार आहे. दुष्काळ, तलवार, जंगली पशु, मरी ही माझी चार हत्यार यरूशलेमेच्या मनुष्य आणि प्राणी यांना नष्ट करेल, तेव्हा त्यांचा बचाव कसा होईल असे परमेश्वर देव म्हणतो.
22 ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.
२२त्यांच्यामध्ये तरी काही उरलेले राहतील, त्यांच्या मुला मुलींना मी बाहेर आणिन, पाहा ते तुम्हाकडे येतील; तुम्ही त्यांचे मार्ग आणि काम पाहाल; तेव्हा यरूशलेमेवर संकट आणल्याबद्दल त्यांना दिलासा देईन.
23 ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
२३तेव्हा त्यांचे मार्ग आणि कार्य पाहून तुम्हास दिलासा मिळेल, त्यांचे मी जे काही केले ते सगळे मी निरर्थक केले नाही. हे तुम्हास कळेल असे परमेश्वर देव म्हणतो.

< ಯೆಹೆಜ್ಕೇಲನು 14 >