< ಯೆಹೆಜ್ಕೇಲನು 15 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,
وَأَوْحَى إِلَيَّ الرَّبُّ بِكَلِمَتِهِ قَائِلاً:١
2 “ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
«يَا ابْنَ آدَمَ، بِمَاذَا يَفْضُلُ عُودُ الْكَرْمِ عَلَى كُلِّ عُودٍ آخَرَ أَوْ عَلَى غُصْنٍ مِنْ أَغْصَانِ شَجَرِ الْغَابَةِ؟٢
3 ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
أَيُؤْخَذُ مِنْهُ قَضِيبٌ لِيُصْنَعَ مِنْهُ شَيْءٌ مَا؟ أَوْ يَخْتَارُونَ مِنْهُ وَتَداً يُعَلَّقُ عَلَيْهِ إِنَاءٌ؟٣
4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?
إِنَّمَا يُطْرَحُ وَقُوداً لِلنَّارِ فَتَلْتَهِمُ النَّارُ طَرَفَيْهِ وَتَجْعَلُ وَسَطَهُ فَحْماً، أَيَصْلُحُ بَعْدُ لِشَيْءٍ؟٤
5 ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?”
فَإِنْ كَانَ وَهُوَ سَلِيمٌ لَمْ يَصْلُحْ لِعَمَلٍ مَا، فَكَمْ بِالأَحْرَى بَعْدَ أَنِ الْتَهَمَتْهُ النِّيرَانُ وَاحْتَرَقَ؟ أَيَصْلُحُ بَعْدُ لِصُنْعِ شَيْءٍ؟٥
6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.
لِذَلِكَ يَقُولُ السَّيِّدُ الرَّبُّ، كَمَا جَعَلْتُ عُودَ الْكَرْمِ مِنْ بَيْنِ أَشْجَارِ الْغَابَةِ وَقُوداً لِلنَّارِ، هَكَذَا أَجْعَلُ أَهْلَ أُورُشَلِيمَ حَطَباً لَهَا.٦
7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
وَأَنْقَلِبُ عَلَيْهِمْ حَتَّى إِذَا خَرَجُوا مِنْ نَارٍ تَلْتَهِمُهُمْ نَارٌ أُخْرَى، فَتُدْرِكُونَ أَنِّي أَنَا الرَّبُّ حِينَ أَنْقَلِبُ عَلَيْكُمْ.٧
8 ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
وَأَجْعَلُ الأَرْضَ مُقْفِرَةً لأَنَّهُمْ خَانُوا عَهْدِي يَقُولُ السَّيِّدُ الرَّبُّ».٨

< ಯೆಹೆಜ್ಕೇಲನು 15 >