< ಯೆಹೆಜ್ಕೇಲನು 28 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
नंतर परमेश्वराचे वचन मजकडे आले आणि म्हणाले,
2 “ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.
“मानवाच्या मुला, सोरेच्या राज्यकर्त्याला सांग, प्रभू परमेश्वर असे म्हणतो, तुझे हृदय गर्विष्ठ आहे. तू म्हणाला मी देव आहे. मी समुद्राच्या हृदयामध्ये देवाच्या आसनावर बसलो आहे. जरी तू मानव आहेस व देव नाही, तरी तू आपले हृदय देवाच्या हृदयासारखे करतो.
3 ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.
तू स्वत: ला दानीएलापेक्षा बुद्धिमान समजतोस आणि कोणतेही रहस्य तुला आश्चर्यचकित करीत नाही.
4 ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
तू तुझ्या शहाणपणाने व अकलेने स्वत: ला संपन्न केले आहेस आणि तुझ्या खजिन्यात तू चांदी सोने संपादन केले आहेस.
5 ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.
तुझ्या मोठ्या शहाणपणाने आणि व्यापाराने तू तुझी संपत्ती वाढवली, म्हणून तुझे हृदय संपत्तीमुळे गर्विष्ठ झाले आहे.
6 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನೀನು ದೇವರಂತೆ ಬುದ್ಧಿವಂತನು ಎಂದು ಭಾವಿಸಿಕೊಂಡಿರುವೆ;
म्हणून प्रभू परमेश्वर म्हणतो, कारण तू आपले हृदय देवाच्या हृदयासारखे केले आहे,
7 ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.
मी परक्यांना तुझ्याविरूद्ध आणीन, दुसऱ्या राष्ट्रांतून भयंकर माणसे आणीन. आणि ते तुझ्या शहाणपणाच्या सुंदरतेवर आपल्या तलवारी उपसतील आणि ते तुझे वैभव भ्रष्ट करतील.
8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.
ते तुला खाचेत पाठवतील आणि तू समुद्राच्या हृदयामध्ये मरण पावलेल्या वधलेल्यांच्या मरणाने मरशील.
9 ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;
तू आपल्या वधणाऱ्यासमोर, मी देव आहे. असे खचित म्हणशील काय? ज्या कोणी तुला भोसकले त्यांच्या हाती तू आहेस तो तू देव नव्हे व मानव आहेस.
10 ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’”
१०परक्यांच्या हातून बेसुंतीच्या मरणाने मरशील कारण मी हे बोललो आहे. असे प्रभू परमेश्वर म्हणतो.”
11 ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು,
११परमेश्वराचे वचन पुन्हा मजकडे आले व म्हणाले,
12 “ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
१२“मानवाच्या मुला, सोरेच्या राजाविषयी ओरडून विलाप कर आणि त्यास सांग, प्रभू परमेश्वर असे म्हणतो, तू परीपूर्णतेची प्रतीकृतीच आहेस, तू ज्ञानपूर्ण आणि सुंदरतेत परिपूर्ण आहेस.
13 ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
१३देवाची बाग एदेनमध्ये तू होतास. प्रत्येक मौल्यवान खड्यांनी तू आच्छादलेला होतास. अलाक, पुष्कराज, हिरे, लसणा, गोमेद, यास्फे, नीलमणी, पाचू, माणिक, सोने अशी सर्व प्रकारची जवाहीर तुझ्या अंगभर होती, तुला निर्माण केले त्याच दिवशी तुला घालण्यासाठी ते तयार केले होते.
14 ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.
१४मी तुला देवाच्या पर्वतावर एक अभिषिक्त करुब म्हणून मानवजातीच्या रक्षणासाठी ठेवले. तू अग्नीप्रमाणे धगधगणाऱ्या पाषाणांतून इकडेतिकडे चालत होतास.
15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
१५मी तुला निर्मिले, त्या दिवसापासून तुझ्यामध्ये अन्याय सापडेपर्यंत तू आपल्या मार्गात परिपूर्ण होतास.
16 ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
१६तुझा व्यापार खूप मोठा असल्यामुळे तू बलात्काराने भरला आहे, तू पाप केले आहे म्हणून मी तुला भ्रष्ट समजून देवाच्या पर्वतावरुन फेकून दिले आणि हे पाखर घालणाऱ्या करुबा, मी तुला अग्नीप्रमाणे धगधगणाऱ्या पाषाणातून, काढून मी तुला नष्ट केले आहे.
17 ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.
१७तुझ्या सौंदर्यांने तुझे हृदय गर्विष्ठ बनले. तुझ्या वैभवामुळे तू तुझ्या ज्ञानाचा नाश करून घेतला आहे. मी तुला खाली जमिनीवर फेकले आहे. राजांनी तुझे जाहीर प्रदर्शन पाहावे यासाठी मी तुला त्यांच्यापुढे ठेवले.
18 ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.
१८तुझ्या खूप पापांमुळे आणि व्यापारातील अप्रामाणिकपणामुळे, तू आपले पवित्र स्थान अपवित्र केलेस. म्हणून मी तुझ्यामधून अग्नी काढला आहे, त्याने तुला खाऊन टाकले आहे. जे कोणी पाहतात त्या सर्वांच्यादेखत मी पृथ्वीवर तुझी राख केली आहे.
19 ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’”
१९लोकांमध्ये जे तुला ओळखतात ते सर्व तुझ्याविषयी विस्मित होतील, तू भय असा होशील व पुन्हा कधी असणार नाहीस.”
20 ಯೆಹೋವ ದೇವರ ವಾಕ್ಯವು ನನಗೆ ಬಂದಿತು,
२०मग मजकडे परमेश्वराचे वचन आले व म्हणाले,
21 “ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
२१“मानवाच्या मुला, सीदोनेविरूद्ध आपले तोंड कर व तिच्याविरूद्ध भविष्य सांग.
22 ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.
२२सांग, प्रभू परमेश्वर असे म्हणतो, पाहा! हे सीदोने, मी तुझ्याविरूद्ध आहे. कारण मी तुझ्यामध्ये गौरविला जाईन म्हणून मी तिला न्यायाने शिक्षा करीन व तिच्यात मला पवित्र मानले म्हणजे, त्यांना समजेल की, मी परमेश्वर आहे.
23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.
२३मी तिच्यात मरी पाठवीन आणि तिच्या रस्त्यात रक्त पाठवीन आणि तलवार तुमच्याविरुध्द सर्व बाजूंनी येईल तेव्हा घायाळ झालेले तुम्हामध्ये पडतील मग त्यांना समजेल की, मी प्रभू परमेश्वर आहे.
24 “‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.
२४नंतर इस्राएलाच्या घराण्याच्या सभोवतालचे जे सर्व तिला तुच्छ मानत असत त्यांच्यातून कोणीही त्यांना बोचणारी काटेरी झुडुपे किंवा वेदनादायक काटे असे उरणार नाहीत, म्हणून त्यांना समजून येईल की, मीच प्रभू परमेश्वर आहे.
25 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.
२५प्रभू परमेश्वर असे म्हणतो, मी इस्राएल घराणे ज्या ज्या राष्ट्रांत विखुरविले आहे, त्यांतून मी त्यास एकत्र आणीन आणि मग मी त्या विधर्मी राष्ट्रांच्या देखत त्याच्याठायी पवित्र ठरेन; मग मी जो देश आपला सेवक याकोब याला दिला त्यामध्ये ते राहतील.
26 ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’”
२६मग ते त्या भूमीवर सुरक्षितपणे राहतील आणि ते घरे बांधतील व द्राक्षमळे लावतील. त्यांचा तिरस्कार करणाऱ्या सभोवतालच्या राष्ट्रांना मी शिक्षा करीन. मग ते निर्भयपणे राहतील. म्हणून त्यांना समजेल की, मी परमेश्वर त्यांचा देव आहे.”

< ಯೆಹೆಜ್ಕೇಲನು 28 >