< ಯೆಹೆಜ್ಕೇಲನು 5 >
1 “ಮನುಷ್ಯಪುತ್ರನೇ, ನೀನು ಹರಿತವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ, ಅದರಿಂದ ನಿನ್ನ ತಲೆಯನ್ನೂ ನಿನ್ನ ಗಡ್ಡವನ್ನೂ ಬೋಳಿಸಿಬಿಟ್ಟು, ಆಮೇಲೆ ಅದನ್ನು ತೂಕ ಮಾಡುವುದಕ್ಕೆ ತಕ್ಕಡಿಯನ್ನು ತೆಗೆದುಕೋ. ಆ ಕೂದಲನ್ನು ಭಾಗ ಮಾಡು.
ऐ आदमज़ाद, तू एक तेज़ तलवार ले और हज्जाम के उस्तरे की तरह उस से अपना सिर और अपनी दाढी मुड़ा और तराज़ू ले और बालों को तौल कर उनके हिस्से बना।
2 ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.
फिर जब घेराव के दिन पूरे हो जाएँ, तो शहर के बीच में उनका एक हिस्सा लेकर आग में जला। और दूसरा हिस्सा लेकर तलवार से इधर उधर बिखेर दे। और तीसरा हिस्सा हवा में उड़ा दे, और मैं तलवार खींच कर उनका पीछा करूँगा।
3 ನೀನು ಅವುಗಳೊಳಗಿಂದ ಕೆಲವು ಕೂದಲನ್ನು ಲೆಕ್ಕದಲ್ಲಿ ತೆಗೆದು, ನಿನ್ನ ಸೆರಗುಗಳಲ್ಲಿ ಕಟ್ಟು,” ಎಂದನು.
और उनमें से थोड़े से बाल गिन कर ले और उनको अपने दामन में बाँध।
4 ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು.
फिर उनमें से कुछ निकाल कर आग में डाल और जला दे; इसमें से एक आग निकलेगी जो इस्राईल के तमाम घराने में फैल जाएगी।
5 “ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ಇದು ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ನಡುವೆ ಇಟ್ಟಿದ್ದೇನೆ.
ख़ुदावन्द ख़ुदा यूँ फ़रमाता है: कि येरूशलेम यही है। मैंने उसे क़ौमों और मम्लुकतों के बीच, जो उसके आस — पास हैं रख्खा है।
6 ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.
लेकिन उसने दीगर क़ौमों से ज़्यादा शरारत कर के मेरे हुक्मों की मुख़ालिफ़त की और मेरे क़ानून को आसपास की मम्लुकतों से ज़्यादा रद्द किया, क्यूँकि उन्होंने मेरे हुक्मों को रद्द किया और मेरे क़ानून की पैरवी न की।
7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ,
इसलिए ख़ुदावन्द ख़ुदा यूँ फ़रमाता है: कि चूँकि तुम अपने आस — पास की क़ौम से बढ़ कर फ़ितना अंगेज़ हो और मेरे क़ानून की पैरवी नहीं की और मेरे हुक्मों पर 'अमल नहीं किया, और अपने आस — पास की क़ौम के क़ानून और हुक्मों पर भी 'अमल नहीं किया;
8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.
इसलिए ख़ुदावन्द ख़ुदा यूँ फ़रमाता है: कि देख, मैं, हाँ मैं ही तेरा मुख़ालिफ़ हूँ और तेरे बीच सब क़ौमों की आँखों के सामने तुझे सज़ा दूँगा।
9 ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ.
और मैं तेरे सब नफ़रती कामों की वजह से तुझमें वही करूँगा, जो मैंने अब तक नहीं किया और कभी न करूँगा।
10 ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
अगर तुझमें बाप बेटे को और बेटा बाप को खा जाएगा, और मैं तुझे सज़ा दूँगा और तेरे बक़िये को हर तरफ़ तितर — बितर करूँगा।
11 ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.
इसलिए ख़ुदावन्द ख़ुदा फ़रमाता है: कि मुझे अपनी हयात की क़सम, चूँकि तूने अपनी तमाम मकरूहात से और अपने नफ़रती कामों से मेरे मक़्दिस को नापाक किया है, इसलिए मैं भी तुझे घटाऊँगा, मेरी आँखें रि'आयत न करेंगी, मैं हरगिज़ रहम न करूँगा।
12 ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.
तेरा एक हिस्सा वबा से मर जाएगा और काल से तेरे अन्दर हलाक हो जाएगा और दूसरा हिस्सा तेरी चारों तरफ़ तलवार से मारा जाएगा, और तीसरे हिस्से को मैं हर तरफ़ तितर बितर करूँगा और तलवार खींच कर उनका पीछा करूँगा।
13 “ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.
“मेरा क़हर यूँ पूरा होगा, तब मेरा ग़ज़ब उन पर धीमा हो जाएगा और मेरी तस्कीन होगी; और जब मैं उन पर अपना क़हर पूरा करूँगा, तब वह जानेंगे कि मुझ ख़ुदावन्द ने अपनी गै़रत से यह सब कुछ फ़रमाया था।
14 “ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳು ಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.
इसके 'अलावा मैं तुझको उन क़ौमों के बीच जो तेरे आस — पास हैं, और उन सब की निगाहों में जो उधर से गुज़र करेंगे वीरान और मलामत की वजह बनाऊँगा।
15 ಹೀಗೆ ನಾನು ಕೋಪದಿಂದಲೂ, ರೋಷದಿಂದಲೂ, ಉಗ್ರಖಂಡನೆಯಿಂದಲೂ ನಿಮ್ಮಲ್ಲಿ ನ್ಯಾಯತೀರ್ಪುಗಳನ್ನು ನಡೆಸುವಾಗ, ನಿಮ್ಮ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ, ದೂಷಣೆಯೂ, ಶಿಕ್ಷೆಯೂ, ಭಯವೂ ಆಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ.
इसलिए जब मैं क़हर — ओ — ग़ज़ब और सख़्त मलामत से तेरे बीच 'अदालत करूँगा, तो तू अपने आसपास की क़ौम के लिए जा — ए — मलामत — ओ — इहानत और मक़ाम — ए — 'इबरत — ओ — हैरत होगी; मैं ख़ुदावन्द ने यह फ़रमाया है।
16 ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
या'नी जब मैं सख़्त सूखे के तीर जो उनकी हलाकत के लिए हैं, उनकी तरफ़ रवाना करूँगा जिनको मैं तुम्हारे हलाक करने के लिए चलाऊँगा, और मैं तुम में सूखे को ज़्यादा करूँगा और तुम्हारी रोटी की लाठी को तोड़ डालूँगा।
17 ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”
और मैं तुम में सूखा और बुरे दरिन्दे भेजूँगा, और वह तुझे बेऔलाद करेंगे; और मेरी और ख़ूँरेज़ी तेरे बीच आएगी मैं तलवार तुझ पर लाऊँगा; मैं ख़ुदावन्द ही ने फ़रमाया है।”