< ಯೆಹೆಜ್ಕೇಲನು 7 >

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:
וַיְהִי דְבַר־יְהֹוָה אֵלַי לֵאמֹֽר׃
2 “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!
וְאַתָּה בֶן־אָדָם כֹּֽה־אָמַר אֲדֹנָי יֱהֹוִה לְאַדְמַת יִשְׂרָאֵל קֵץ בָּא הַקֵּץ עַל־[אַרְבַּע] (ארבעת) כַּנְפוֹת הָאָֽרֶץ׃
3 ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.
עַתָּה הַקֵּץ עָלַיִךְ וְשִׁלַּחְתִּי אַפִּי בָּךְ וּשְׁפַטְתִּיךְ כִּדְרָכָיִךְ וְנָתַתִּי עָלַיִךְ אֵת כׇּל־תּוֹעֲבוֹתָֽיִךְ׃
4 ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’
וְלֹא־תָחוֹס עֵינִי עָלַיִךְ וְלֹא אֶחְמוֹל כִּי דְרָכַיִךְ עָלַיִךְ אֶתֵּן וְתוֹעֲבוֹתַיִךְ בְּתוֹכֵךְ תִּֽהְיֶיןָ וִידַעְתֶּם כִּי־אֲנִי יְהֹוָֽה׃
5 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.
כֹּה אָמַר אֲדֹנָי יֱהֹוִה רָעָה אַחַת רָעָה הִנֵּה בָאָֽה׃
6 ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.
קֵץ בָּא בָּא הַקֵּץ הֵקִיץ אֵלָיִךְ הִנֵּה בָּאָֽה׃
7 ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.
בָּאָה הַצְּפִירָה אֵלֶיךָ יוֹשֵׁב הָאָרֶץ בָּא הָעֵת קָרוֹב הַיּוֹם מְהוּמָה וְלֹא־הֵד הָרִֽים׃
8 ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.
עַתָּה מִקָּרוֹב אֶשְׁפּוֹךְ חֲמָתִי עָלַיִךְ וְכִלֵּיתִי אַפִּי בָּךְ וּשְׁפַטְתִּיךְ כִּדְרָכָיִךְ וְנָתַתִּי עָלַיִךְ אֵת כׇּל־תּוֹעֲבוֹתָֽיִךְ׃
9 ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.
וְלֹא־תָחוֹס עֵינִי וְלֹא אֶחְמוֹל כִּדְרָכַיִךְ עָלַיִךְ אֶתֵּן וְתוֹעֲבוֹתַיִךְ בְּתוֹכֵךְ תִּהְיֶיןָ וִידַעְתֶּם כִּי אֲנִי יְהֹוָה מַכֶּֽה׃
10 “‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,
הִנֵּה הַיּוֹם הִנֵּה בָאָה יָֽצְאָה הַצְּפִרָה צָץ הַמַּטֶּה פָּרַח הַזָּדֽוֹן׃
11 ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.
הֶֽחָמָס ׀ קָם לְמַטֵּה־רֶשַׁע לֹא־מֵהֶם וְלֹא מֵהֲמוֹנָם וְלֹא מֶהֱמֵהֶם וְלֹא־נֹהַּ בָּהֶֽם׃
12 ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.
בָּא הָעֵת הִגִּיעַ הַיּוֹם הַקּוֹנֶה אַל־יִשְׂמָח וְהַמֹּכֵר אַל־יִתְאַבָּל כִּי חָרוֹן אֶל־כׇּל־הֲמוֹנָֽהּ׃
13 ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.
כִּי הַמֹּכֵר אֶל־הַמִּמְכָּר לֹא יָשׁוּב וְעוֹד בַּחַיִּים חַיָּתָם כִּֽי־חָזוֹן אֶל־כׇּל־הֲמוֹנָהּ לֹא יָשׁוּב וְאִישׁ בַּעֲוֺנוֹ חַיָּתוֹ לֹא יִתְחַזָּֽקוּ׃
14 “‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.
תָּקְעוּ בַתָּקוֹעַ וְהָכִין הַכֹּל וְאֵין הֹלֵךְ לַמִּלְחָמָה כִּי חֲרוֹנִי אֶל־כׇּל־הֲמוֹנָֽהּ׃
15 ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.
הַחֶרֶב בַּחוּץ וְהַדֶּבֶר וְהָרָעָב מִבָּיִת אֲשֶׁר בַּשָּׂדֶה בַּחֶרֶב יָמוּת וַאֲשֶׁר בָּעִיר רָעָב וָדֶבֶר יֹאכְלֶֽנּוּ׃
16 ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.
וּפָֽלְטוּ פְּלִיטֵיהֶם וְהָיוּ אֶל־הֶהָרִים כְּיוֹנֵי הַגֵּאָיוֹת כֻּלָּם הֹמוֹת אִישׁ בַּעֲוֺנֽוֹ׃
17 ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.
כׇּל־הַיָּדַיִם תִּרְפֶּינָה וְכׇל־בִּרְכַּיִם תֵּלַכְנָה מָּֽיִם׃
18 ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.
וְחָגְרוּ שַׂקִּים וְכִסְּתָה אוֹתָם פַּלָּצוּת וְאֶל כׇּל־פָּנִים בּוּשָׁה וּבְכׇל־רָאשֵׁיהֶם קׇרְחָֽה׃
19 “‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.
כַּסְפָּם בַּחוּצוֹת יַשְׁלִיכוּ וּזְהָבָם לְנִדָּה יִֽהְיֶה כַּסְפָּם וּזְהָבָם לֹא־יוּכַל לְהַצִּילָם בְּיוֹם עֶבְרַת יְהֹוָה נַפְשָׁם לֹא יְשַׂבֵּעוּ וּמֵעֵיהֶם לֹא יְמַלֵּאוּ כִּֽי־מִכְשׁוֹל עֲוֺנָם הָיָֽה׃
20 ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
וּצְבִי עֶדְיוֹ לְגָאוֹן שָׂמָהוּ וְצַלְמֵי תוֹעֲבֹתָם שִׁקּוּצֵיהֶם עָשׂוּ בוֹ עַל־כֵּן נְתַתִּיו לָהֶם לְנִדָּֽה׃
21 ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.
וּנְתַתִּיו בְּיַֽד־הַזָּרִים לָבַז וּלְרִשְׁעֵי הָאָרֶץ לְשָׁלָל (וחללוה) [וְחִלְּלֽוּהוּ]׃
22 ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.
וַהֲסִבּוֹתִי פָנַי מֵהֶם וְחִלְּלוּ אֶת־צְפוּנִי וּבָאוּ־בָהּ פָּרִיצִים וְחִלְּלֽוּהָ׃
23 “‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
עֲשֵׂה הָרַתּוֹק כִּי הָאָרֶץ מָֽלְאָה מִשְׁפַּט דָּמִים וְהָעִיר מָלְאָה חָמָֽס׃
24 ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.
וְהֵֽבֵאתִי רָעֵי גוֹיִם וְיָרְשׁוּ אֶת־בָּתֵּיהֶם וְהִשְׁבַּתִּי גְּאוֹן עַזִּים וְנִחֲלוּ מְקַֽדְשֵׁיהֶֽם׃
25 ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.
קְפָדָה־בָא וּבִקְשׁוּ שָׁלוֹם וָאָֽיִן׃
26 ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.
הֹוָה עַל־הֹוָה תָּבוֹא וּשְׁמֻעָה אֶל־שְׁמוּעָה תִּֽהְיֶה וּבִקְשׁוּ חָזוֹן מִנָּבִיא וְתוֹרָה תֹּאבַד מִכֹּהֵן וְעֵצָה מִזְּקֵנִֽים׃
27 ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”
הַמֶּלֶךְ יִתְאַבָּל וְנָשִׂיא יִלְבַּשׁ שְׁמָמָה וִידֵי עַם־הָאָרֶץ תִּבָּהַלְנָה מִדַּרְכָּם אֶעֱשֶׂה אֹתָם וּבְמִשְׁפְּטֵיהֶם אֶשְׁפְּטֵם וְיָדְעוּ כִּֽי־אֲנִי יְהֹוָֽה׃

< ಯೆಹೆಜ್ಕೇಲನು 7 >