< ಆದಿಕಾಂಡ 14 >

1 ಶಿನಾರಿನ ಅರಸ ಅಮ್ರಾಫೆಲನು ಎಲ್ಲಸಾರಿನ ಅರಸ ಅರಿಯೋಕನು, ಏಲಾಮಿನ ಅರಸ ಕೆದೊರ್ಲಗೋಮರನು, ಗೋಯಿಮದ ಅರಸ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನೆಂದರೆ:
त्यानंतर शिनाराचा राजा अम्राफेल, एल्लासाराचा राजा अर्योक, एलामाचा राजा कदार्लागोमर आणि गोयिमाचा राजा तिदाल यांच्या दिवसात असे झाले की,
2 ಇವರು ಸೊದೋಮಿನ ಅರಸ ಬೆರಗನೂ ಗೊಮೋರದ ಅರಸ ಬಿರ್ಶಗನೂ ಅದ್ಮಾಹದ ಅರಸ ಶಿನಾಬನಿಗೂ ಚೆಬೋಯಿಮಿನ ಅರಸ ಶೆಮೇಬರನಿಗೂ ಬೆಲಗಿನ ಅಂದರೆ, ಚೋಗರದ ಅರಸನಿಗೂ ವಿರೋಧವಾಗಿ ಯುದ್ಧಮಾಡಿದರು.
त्यांनी सदोमाचा राजा बेरा, गमोराचा राजा बिर्शा, अदमाचा राजा शिनाब, सबोयिमाचा राजा शमेबर आणि बेला ज्याला सोअर म्हणतात त्याच्या राजांशी युद्ध केले.
3 ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.
नंतर हे पाच राजे सिद्दीम खोऱ्यात एकत्र जमले. या खोऱ्याला क्षार समुद्र असेही म्हणतात.
4 ಅವರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಸೇವೆಮಾಡಿ, ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.
त्यांनी बारा वर्षे कदार्लागोमरची सेवा केली होती, परंतु तेराव्या वर्षी त्यांनी त्याच्या विरूद्ध बंड केले.
5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,
त्यानंतर चौदाव्या वर्षी कदार्लागोमर व त्याच्या बरोबरचे राजे आले आणि त्यांनी अष्टरोथ-कर्णईम येथे रेफाईम लोकांस, हाम येथे जूजीम लोकांस, शावेह किर्याथाईम येथे एमीम या लोकांस मारले.
6 ಅವರ ಬೆಟ್ಟವಾದ ಸೇಯೀರನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸಮೀಪವಾದ ಏಲ್ಪಾರಾನಿನವರೆಗೂ ಅವರನ್ನು ಸೋಲಿಸಿದರು.
आणि होरी यांना त्यांच्या सेईर डोंगराळ प्रदेशात जे एल पारान रान आहे तेथपर्यंत त्यांनी जाऊन मारले.
7 ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.
नंतर ते मागे फिरून एन-मिशपात म्हणजे कादेश येथे आले. आणि त्यांनी सर्व अमालेकी देशाचा आणि तसेच हससोन-तामार येथे राहणाऱ्या अमोरी लोकांचाही पराभव केला.
8 ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,
नंतर सदोमाचा राजा, गमोराचा राजा, अदमाचा राजा, सबोयिमाचा राजा आणि बेला म्हणजे सोअराचा राजा ह्यांनी लढाईची तयारी केली.
9 ಏಲಾಮಿನ ಅರಸ ಕೆದೊರ್ಲಗೋಮರನಿಗೂ ಗೋಯಿಮದ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸ ಅಮ್ರಾಫೆಲನಿಗೂ ಎಲ್ಲಸಾರಿನ ಅರಸ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಹೀಗೆ ನಾಲ್ವರು ಅರಸರಿಗೆ ವಿರೋಧವಾಗಿ ಐದು ಮಂದಿ ಅರಸರು ಎದುರಿಸಿದರು.
एलामाचा राजा कदार्लागोमर, गोयिमाचा राजा तिदाल, शिनाराचा राजा अम्राफेल आणि एल्लासाराचा राजा अर्योक यांच्या विरूद्ध ते लढले. हे चार राजे पाच राजांविरूद्ध लढले.
10 ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
१०सिद्दीम खोऱ्यात पूर्ण डांबराने भरलेले खड्डे होते आणि सदोम व गमोराचे राजे पळून जाताना त्यामध्ये पडले, जे राहिले ते डोंगराकडे पळून गेले.
11 ಆಗ ಅವರು ಸೊದೋಮ್, ಗೊಮೋರಗಳ ಎಲ್ಲಾ ಸಂಪತ್ತನ್ನೂ, ಅವರ ಎಲ್ಲಾ ಆಹಾರ ಪದಾರ್ಥಗಳನ್ನೂ ತೆಗೆದುಕೊಂಡು ಹೊರಟು ಹೋದರು.
११अशा रीतीने शत्रूंनी सदोम व गमोरा नगराच्या सर्व वस्तू आणि त्यांचा सर्व अन्नसाठा लुटून घेऊन माघारी गेले.
12 ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗ ಲೋಟನನ್ನು ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
१२ते गेले तेव्हा त्यांनी अब्रामाच्या भावाचा मुलगा लोट जो सदोमात राहत होता, त्यालासुद्धा त्याच्या सर्व मालमत्तेसह नेले.
13 ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
१३तेथून पळून आलेल्या एकाने अब्राम इब्रीला हे सांगितले. तो तर अष्कोल व आनेर ह्यांचा भाऊ मम्रे अमोरी याच्या एलोन झाडांजवळ राहत होता आणि ते सर्व अब्रामाचे सहकारी होते.
14 ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.
१४जेव्हा अब्रामाने ऐकले की, त्याच्या नातेवाइकांना शत्रूंनी पकडून नेले आहे तेव्हा त्याने आपल्या घरी जन्मलेली, लढाईचे शिक्षण घेतलेली तीनशे अठरा माणसे घेऊन सरळ दान नगरापर्यंत शत्रूंचा पाठलाग केला.
15 ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು.
१५त्याने रात्री त्याचे लोक त्यांच्याविरुद्ध विभागले आणि त्यांच्यावर हल्ला केला आणि दिमिष्काच्या डावीकडे होबापर्यंत त्यांचा पाठलाग केला.
16 ಆಸ್ತಿಯನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಬಂಧುವಾದ ಲೋಟನನ್ನೂ, ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತೆಗೆದುಕೊಂಡು ಬಂದನು.
१६अब्रामाने सगळी मालमत्ता आणि त्याचा नातेवाइक लोट आणि त्याच्या वस्तू, त्याचप्रमाणे स्त्रिया आणि इतर लोक यांना परत आणले.
17 ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.
१७मग कदार्लागोमर व त्याच्याबरोबरचे राजे यांचा पराभव केल्यावर अब्राम परत आला तेव्हा सदोमाचा राजा शावेच्या खोऱ्यात त्यास भेटायला बाहेर आला. या खोऱ्याला राजाचे खोरे असे म्हणतात.
18 ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು.
१८देवाचा याजक असलेला शालेमाचा राजा मलकीसदेक भाकर व द्राक्षरस घेऊन अब्रामाला भेटण्यास आला. हा परात्पर देवाचा याजक होता.
19 ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.
१९त्याने अब्रामाला आशीर्वाद देऊन म्हटले, “अब्रामा, आकाश व पृथ्वी यांचा उत्पन्नकर्ता परात्पर देव तुला आशीर्वाद देवो.
20 ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.
२०परात्पर देव ज्याने तुझे शत्रू तुझ्या हाती दिले तो धन्यवादित असो.” तेव्हा अब्रामाने त्यास सर्वाचा दहावा भाग दिला.
21 ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿಕೊಂಡು ಬಂದ ಜನರನ್ನು ನನಗೆ ಕೊಡು. ಸಂಪತ್ತನ್ನು ನೀನು ತೆಗೆದುಕೋ,” ಎಂದನು.
२१सदोमाचा राजा अब्रामास म्हणाला, “मला फक्त माझे लोक द्या आणि तुमच्यासाठी वस्तू घ्या.”
22 ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ.
२२अब्राम सदोमाच्या राजाला म्हणाला, “आकाश व पृथ्वीचा उत्पन्नकर्ता परमेश्वर परात्पर देव याच्यासमोर आपला हात उंचावून मी वचन देतो की,
23 ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು.
२३तुझा दोरा, चपलेचा बंध, किंवा जे तुझे आहे त्यातून मी काहीच घेणार नाही, नाहीतर तू म्हणशील, ‘अब्रामाला मी धनवान केले.’
24 ನನ್ನ ಆಳುಗಳು ಊಟಮಾಡಿದ್ದು ಸಾಕು. ನನ್ನ ಸಂಗಡ ಬಂದ ಆನೇರ, ಎಷ್ಕೋಲ್ ಮತ್ತು ಮಮ್ರೆ ಎಂಬ ಈ ಜನರ ಪಾಲನ್ನು ಬಿಟ್ಟು ನಾನು ಏನನ್ನೂ ತೆಗೆದುಕೊಳ್ಳುವುದಿಲ್ಲ. ಇವರು ತಮ್ಮ ಪಾಲನ್ನು ತೆಗೆದುಕೊಳ್ಳಲಿ,” ಎಂದನು.
२४माझ्या या तरुणांनी जे अन्न खाल्ले आहे तेवढे पुरे. आनेर, अष्कोल व मम्रे हे जे पुरुष माझ्याबरोबर गेले त्यांना आपापला वाटा घेऊ द्या.”

< ಆದಿಕಾಂಡ 14 >