< ಆದಿಕಾಂಡ 18 >

1 ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.
ထာဝရဘုရားသည် မံရေသပိတ်တောနားမှာ၊ အာဗြဟံအား ထင်ရှားတော်မူသည် အကြောင်းအရာဟူ မူကား၊ နေပူသောအချိန်တွင် အာဗြဟံသည် တဲတံခါးဝ၌ ထိုင်လျက်၊
2 ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.
မြော်ကြည့်၍၊ မိမိရှေ့မှာ လူသုံးယောက် ရပ်နေကြသည်ကို မြင်သောအခါ၊ ခရီးဦးကြိုပြုခြင်းငှါ တဲတံခါးဝမှပြေး၍ မြေသို့ ဦးညွတ်ချလျက်၊
3 ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.
အကျွန်ုပ်သခင်၊ ရှေ့တော်၌ အကျွန်ုပ်သည် မျက်နှာရလျှင် ကိုယ်တော်ကျွန်မှလွန်၍မသွားပါနှင့်။
4 ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ, ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ, ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
ရေအနည်းငယ်ကို ယူခဲ့ပါရစေ။ ခြေကို ဆေးပြီး လျှင် သစ်ပင်အောက်၌ လျောင်းနေကြပါလော့။
5 ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.
မုန့်အနည်းငယ်ကိုလည်း ယူခဲ့ပါမည်။ အမော အပန်းပြေသောအခါ သွားကြပါလော့။ ထိုသို့သော ကျေးဇူးတော်ကို ခံစေခြင်းငှါ၊ ကိုယ်တော် ကျွန်ရှိရာသို့ ရောက်ပါပြီဟုဆို၏။ ထိုသူတို့ကလည်း၊ ပြောသည်အတိုင်း ပြုပါလော့ဟုဆိုကြ၏။
6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.
အာဗြဟံသည်လည်း၊ တဲအတွင်း၌ရှိသော စာရာ ဆီသို့ အလျင်အမြန်ဝင်ပြီးလျှင်၊ ဂျုံမုန့်ညက်သုံးစလယ်ကို အသော့ပြင်၍နယ်ပါ။ ပေါင်မုန့်ကို လုပ်ပါဟုဆိုလေ၏။
7 ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.
တဖန်နွားစုသို့ပြေး၍ နုထွားကောင်းမွန်သော နွားသငယ်ကို ယူခဲ့၍၊ လုလင်၌အပ်သဖြင့် မြန်မြန်ပြင်ဆင် စေ၏။
8 ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು.
ထိုနောက် နို့နှင့် နို့စမ်းကို၎င်း၊ ပြင်ဆင်သော နွားသငယ်ကို၎င်း ယူ၍၊ ထိုသူတို့ရှေ့၌ ထည့်ပြီးလျှင်၊ သစ်ပင်အောက်၊ သူတို့အနားမှာရပ်နေ၍၊ သူတို့သည် စားကြ၏။
9 ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.
ပြီးသောအခါ၊ သင်၏ မယားစာရာသည် အဘယ်မှာရှိသနည်းဟု မေးကြလျှင်၊ တဲအတွင်း၌ ရှိပါသည်ဟု ပြန်ပြော၏။
10 ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
၁၀ထိုသူတို့တွင် တပါးကလည်း၊ ဘွားချိန်စေ့သော အခါ၊ ငါသည် သင့်ဆီသို့ ဆက်ဆက်ပြန်လာဦးမည်။ ထိုအခါ သင်၏မယားစာရာသည် သားကိုရလိမ့်မည်ဟု ပြောဆို၏။ ထိုသို့ဆိုသောသူ၏နောက်၌ တံခါးဝအနား မှာ၊ စာရာရှိသောကြောင့် ထိုစကားကိုကြား၏။
11 ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು.
၁၁ထိုအခါ အာဗြဟံနှင့်စာရာသည် အသက် အရွယ်ကြီးရင့်လှပြီ။ စာရာသည် မိန်းမတို့၌ ဥတုရောက်မြဲ ရှိသည့်အတိုင်း မရောက်ပြီ။
12 ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.
၁၂ထိုကြောင့် စာရာက၊ ငါလည်းအိုပြီ၊ ငါ့သခင် လည်းအိုပြီ၊ သို့ဖြစ်၍ ငါသည် ပျော်မွေ့ခြင်းရှိလိမ့်မည် လောဟု ဆိုလျှက်၊ တိတ်ဆိတ်စွာ ရယ်လေ၏။
13 ಆಗ ಯೆಹೋವ ದೇವರು ಅಬ್ರಹಾಮನಿಗೆ, “ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು?
၁၃သင်၏မယားစာရာက၊ အကယ်၍ ငါသည် အိုပြီးမှ၊ သားကို ဘွားလိမ့်မည်လောဟုဆိုလျက်၊ အဘယ် ကြောင့် ရယ်သနည်း။
14 ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.
၁၄ထာဝရဘုရားမတတ်နိုင်သောအမှု တစုံတခု ရှိသလော။ ချိန်းချက်သော ဘွားချိန်စေ့သောအခါ၊ သင့်ဆီသို့ငါပြန်လာ၍၊ စာရာသည် သားကိုရလိမ့်မည်ဟု ထာဝရဘုရားသည် အာဗြဟံအားမိန့်တော်မူ၏။
15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.
၁၅စာရာကလည်း ကျွန်မမရယ်ပါဟု၊ ကြောက်၍ ငြင်းလေ၏။ မဟုတ်ဘူး။ သင်ရယ်ပြီဟုမိန့်တော်မူ၏။
16 ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.
၁၆ထိုလူတို့သည် ထိုအရပ်က ထ၍ သောဒုံမြို့သို့ မျက်နှာပြုလျက် သွားကြ၏။ အာဗြဟံသည်လည်း သူတို့ ကို ပို့ခြင်းငှါ လိုက်လေ၏။
17 ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?
၁၇ထာဝရဘုရားကလည်း၊ ငါပြုမည်အမှုကို အာဗြဟံအား မဘော်မပြဘဲ ဝှက်ထားရမည်လော။
18 ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.
၁၈အာဗြဟံသည် ကြီးမြတ်၍၊ တန်ခိုးနှင့်ပြည့်စုံ သော လူမျိုးဖြစ်လိမ့်မည်။ လူမျိုးအပေါင်းတို့သည် သူ့အားဖြင့် ကောင်းကြီးမင်္ဂလာကို ခံရကြလိမ့်မည်။
19 ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.
၁၉အကြောင်းမူကား၊ သူသည် မိမိနောက်၌ ဖြစ်သော သားများ၊ အိမ်သူများတို့အား ပညတ်မည်အရာ ကို ငါသိ၏။ သူတို့သည်လည်း ထာဝရဘုရား၏ တရား လမ်းသို့ လိုက်၍ ဟုတ်မှန်ဖြောင့်မတ်စွာ ကျင့်ကြလိမ့် မည်။ သို့ဖြစ်၍ ဂတိတော်ရှိသည့်အတိုင်း၊ ထာဝရ ဘုရားသည် အာဗြဟံ၌ပြုရသော အခွင့်ရှိလိမ့်မည်ဟု အကြံတော်ရှိ၏။
20 ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.
၂၀တဖန်ထာဝရဘုရားက၊ သောဒုံမြို့၊ ဂေါမောရ မြို့၌ ကြွေးကြော်သော အသံသည်ကြီး၍၊ အလွန်အပြစ် လေးသောကြောင့်၊
21 ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಆ ಊರಿನವರ ಕೂಗಿನ ಪ್ರಕಾರವೇ, ಅವರು ಮಾಡಿದ್ದಾರೋ, ಇಲ್ಲವೋ, ಎಂದು ನೋಡಿ ತಿಳಿದುಕೊಳ್ಳುವೆನು,” ಎಂದುಕೊಂಡರು.
၂၁ယခုငါသွား၍ ငါ့ရှေ့သို့ရောက်ခဲ့ပြီးသော ကြွေး ကြော်ခြင်းရှိသည်အတိုင်း၊ သူတို့သည် အမှန်ပြုသည် မပြုသည်ကို ငါကြည့်ရှုမည်။ မပြုလျှင် မပြုကြောင်းကို ငါသိမည် ဟု မိန့်တော်မူ၏။
22 ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.
၂၂ထိုသူတို့သည် ထိုအရပ်မှ မျက်နှာလှည့်၍ သောဒုံမြို့သို့သွားကြ၏။ အာဗြံဟံမူကား၊ ထာဝရဘုရား ရှေ့တော်၌ ရပ်နေလျက်ရှိသေး၏။
23 ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?
၂၃ထိုအခါ အာဗြဟံချဉ်းကပ်၍၊ ကိုယ်တော်သည် ဖြောင့်မတ်သော သူတို့ကို၊ မတရားသော သူတို့နှင့်တကွ ဖျက်ဆီးတော်မူမည်လော။
24 ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?
၂၄ထိုမြို့တွင် ဖြောင့်မတ်သောသူငါးဆယ်ရှိလျှင်၊ ဖျက်ဆီးတော်မူမည်လော။ ဖြောင့်မတ်သောသူ ငါးဆယ် ပါသောမြို့ကို သူတို့အတွက် မနှမြောဘဲ ဖျက်ဆီးတော် မူမည်လော။
25 ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.
၂၅ထိုသို့ပြု၍ ဖြောင့်မတ်သော သူတို့ကို မတရား သော သူတို့နှင့်တကွ ကွပ်မျက်ခြင်းအမှုသည် ကိုယ်တော်နှင် ဝေးပါစေသတည်း။ ဖြောင့်မတ်သော သူတို့ကို မတရားသောသူတို့ကဲ့သို့ခံစေသောအမှုသည် ကိုယ်တော်နှင့် ဝေးပါစေသတည်း၊ မြေကြီးလုံးကို စီရင်တော်မူသော သခင်သည်၊ တရားသဖြင့် ပြုတော်မူမည် မဟုတ်လောဟု လျောက်ဆို၏။
26 ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.
၂၆ထာဝရဘုရားကလည်း၊ သောဒုမြို့၌ ဖြောင့်မတ် သောသူငါးဆယ်ကို ငါတွေ့လျှင်၊ သူတို့အတွက် ထိုအရပ် လုံးကို ငါနှမြောမည်ဟု မိန့်တော်မူ၏။
27 ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.
၂၇တဖန်အာဗြဟံက၊ အကျွန်ုပ်သည် မြေမှုန့်နှင့် ပြာသက်သက်ဖြစ်သော်လည်း၊ ဘုရားရှင်ကို ယခုလျှောက် မည်ဟု အားထုတ်ပါ၏။
28 ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.
၂၈ဖြောင့်မတ်သောသူ ငါးဆယ်တို့တွင် ငါးယောက်မပြည့်လျှင်၊ ထိုငါးယောက်မပြည့်သော အတွက်ကြောင့်၊ ထိုမြို့လုံးကို ဖျက်ဆီးတော်မူမည်လောဟု မေးလျှောက်ပြန်သော်၊ ထိုမြို့၌ လေးဆယ့်ငါးယောက်ကို ငါတွေ့လျှင်၊ ငါမဖျက်ဆီးဟု မိန့်တော်မူ၏။
29 ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.
၂၉တဖန်တုံ၊ ထိုမြို့၌ လေးဆယ်ကိုတွေ့ကောင်းတွေ့တော် မူလိမ့်မည်ဟု လျှောက်ဆိုပြန်လျှင်၊ ထိုလေးဆယ်အတွက် ငါမပြုဘဲနေမည်ဟု မိန့်တော်မူ၏။
30 ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.
၃၀တဖန်တုံ၊ အိုဘုရားရှင်၊ စိတ်ရှိတော်မမူပါနှင့်၊ အကျွန်ုပ် လျှောက်ပါရစေ။ ထိုမြို့၌သုံးဆယ်ကို တွေ့ ကောင်းတွေ့တော်မူလိမ့်မည်ဟု လျှောက်ဆိုပြန်လျှင်၊ ထိုမြို့၌ သုံးဆယ်ကိုငါတွေ့လျှင်၊ ငါမပြုဟုမိန့်တော်မူ၏။
31 ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.
၃၁တဖန်တုံ၊ အကျွန်ုပ်သည် ထာဝရဘုရားကို ယခု လျှောက်မည်ဟု အားထုတ်ပါ၏။ ထိုမြို့၌ နှစ်ဆယ်ကို တွေ့ကောင်းတွေ့တော်မူလိမ့်မည်ဟု လျှောက်ဆိုပြန်လျှင်၊ နှစ်ဆယ်အတွက် ငါမဖျက်ဆီးဘဲနေမည်ဟု မိန့်တော်မူ၏။
32 ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.
၃၂အိုဘုရားရှင်၊ စိတ်ရှိတော်မမူပါနှင့်။ သည် တကြိမ် အကျွန်ုပ်လျှောက်ပါရစေဦး။ ထိုမြို့၌ တဆယ်ကို တွေ့ကောင်းတွေ့တော်မူလိမ့်မည်ဟု လျှောက်ဆိုပြန်လျှင်၊ တဆယ်အတွက် ငါမဖျက်ဆီးဘဲနေမည်ဟု မိန့်တော်မူ၏။
33 ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.
၃၃ထာဝရဘုရားသည် အာဗြံဟံနှင့် နှုတ်ဆက်ခြင်း အမှုကုန်စင်ပြီးမှ ကြွသွားတော်မူ၏။ အာဗြံဟံသည် လည်း မိမိနေရာအရပ်သို့ ပြန်လေ၏။

< ಆದಿಕಾಂಡ 18 >