< ಆದಿಕಾಂಡ 3 >
1 ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.
परमप्रभु परमेश्वरले बनाउनुभएका सबै जङ्गली पशुहरूमध्ये सर्पचाहिँ बढी धूर्त थियो । त्यसले स्त्रीलाई भन्यो, “के परमेश्वरले साँच्चै नै तिमीहरूलाई बगैँचाको कुनै रुखको फल नखानू भनी भन्नुभएको छ?”
2 ಆಗ ಸ್ತ್ರೀಯು ಸರ್ಪಕ್ಕೆ, “ತೋಟದ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.
स्त्रीले सर्पलाई भनिन्, “हामीले बगैँचाका रुखहरूका सबै फल खान सक्छौँ,
3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.
तर बगैँचाको बिचमा भएको रुखको फलको विषयमा भने, परमेश्वरले भन्नुभएको छ, ‘तिमीहरूले त्यो नखानू, न त तिमीहरूले त्यो छुनू, नत्रता तिमीहरू मर्नेछौ ।’”
4 ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
सर्पले स्त्रीलाई भन्यो, “निश्चय नै तिमीहरू मर्नेछैनौ ।
5 ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.
किनभने परमेश्वर जान्नुहुन्छ, कि जुन दिन तिमीहरू त्यो खान्छौ तिमीहरूका आँखा खुल्नेछन्, र असल र खराबको ज्ञान पाएर तिमीहरू परमेश्वरजस्तै हुनेछौ ।”
6 ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.
जब स्त्रीले त्यो रुखको फल खानमा असल, र हेर्नमा रहरलाग्दो, अनि बुद्धि प्राप्त गर्नलाई त्यसको चाह गर्नुपर्ने रहेछ भनेर देखिन्, तिनले त्यसका केही फलहरू टिपिन् र खाइन् । त्यसपछि तिनले केही आफूसँगै भएका आफ्ना पतिलाई पनि दिइन्, र उनले पनि त्यो खाए ।
7 ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.
तब तिनीहरू दुवैका आँखा खुले, र तिनीहरू नाङ्गै रहेछन् भनेर थाहा पाए । तिनीहरूले अञ्जीरका पातहरू गाँसेर आफ्ना निम्ति वस्त्र बनाए ।
8 ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.
अनि साँझपख जब तिनीहरूले परमप्रभु परमेश्वर बगैँचामा हिँडिरहनुभएको आवाज सुने, तब मानिस र उनकी पत्नी बगैँचाका रुखहरूबिच परमप्रभु परमेश्वरको नजरबाट लुके।
9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.
परमप्रभु परमेश्वरले मानिसलाई बोलाउनुभयो, “तँ कहाँ छस्?”
10 ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.
मानिसले भन्यो, “मैले बगैँचामा तपाईंको आवाज सुनेँ, र म डराएँ किनकि म नाङ्गै थिएँ । यसैकारण म लुकेँ ।”
11 ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.
परमेश्वरले भन्नुभयो, “तँ नाङ्गै थिइस् भनेर तँलाई कसले भन्यो? के मैले तँलाई नखानू भनेर आज्ञा गरेको रुखको फल तैँले खाइस्?”
12 ಅದಕ್ಕೆ ಮನುಷ್ಯನು, “ನೀನು ನನ್ನ ಸಂಗಡ ಇರಿಸಿದ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು. ನಾನು ತಿಂದೆನು,” ಎಂದು ಹೇಳಿದನು.
मानिसले भन्यो, “तपाईंले मसँगै रहनलाई दिनुभएको स्त्रीले मलाई त्यस रुखको फल दिई, र मैले त्यो खाएँ ।”
13 ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.
परमप्रभु परमेश्वरले स्त्रीलाई भन्नुभयो, “तैँले यो के गरिस्?” स्त्रीले भनिन्, “सर्पले मलाई छल गर्यो, र मैले खाएँ ।”
14 ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ.
परमप्रभु परमेश्वरले सर्पलाई भन्नुभयो, “तैँले यसो गरेको हुनाले सबै पाल्तु पशुहरू र जङ्गली जनावरहरूमा केवल तँ श्रापित हुनेछस् । तँ तेरो पेटद्वारा हिँड्नेछस्, र तेरो जीवनभरि नै तैँले माटो खानेछस् ।
15 ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”
तेरो र स्त्रीबिच, अनि तेरो सन्तान र स्त्रीको सन्तानबिच म दुश्मनी हालिदिनेछु । त्यसले तेरो शिर कुल्चनेछ, र तैँले त्यसको कुर्कुच्चा डस्नेछस् ।”
16 ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”
उहाँले स्त्रीलाई भन्नुभयो, “म तेरो प्रसव-वेदना ज्यादै बढाइदिनेछु; तैँले पीडामा नै बालक जन्माउनेछस् । तेरो इच्छा तेरो पतिको लागि हुनेछ, तर त्यसले तँलाई आफ्नो अधीनमा राख्नेछ ।”
17 ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.
आदमलाई उहाँले भन्नुभयो, “तैँले तेरी पत्नीको कुरा सुनेको, र मैले तँलाई नखानू भनेको रुखको फल तैँले खाएको हुनाले, तेरो कारण यो भूमि श्रापित भएको छ । तेरो जीवनभरि नै तैँले यस भूमिमाथि कडा परिश्रम गरेर खानेछस् ।
18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.
त्यसले तेरो निम्ति काँढा र सिउँडीहरू उमार्नेछ, र तैँले खेतका बिरुवाहरू खानेछस् ।
19 ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”
तँ माटोमा नफर्कुन्जेल, तैँले आफ्नो परिश्रमको पसिना बगाएर भोजन खानेछस्, किनकि तँ माटैबाट निकालिएको थिइस् । तँ माटै होस्, र माटोमा नै फर्किजानेछस् ।”
20 ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.
मानिसले आफ्नी पत्नीको नाम हव्वा राख्यो किनकि तिनी सबै जीवित प्राणीकी आमा हुन् ।
21 ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.
परमप्रभु परमेश्वरले आदम र उनकी पत्नीका निम्ति छालाका लुगा बनाई तिनीहरूलाई पहिराइदिनुभयो ।
22 ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.
परमप्रभु परमेश्वरले भन्नुभयो, “असल र खराबको ज्ञान पाएर मानिस हामीजस्तै भएको छ । यसैकारण अब त्यसलाई आफ्नो हात पसारेर जीवनको रुखको फल खान दिनुहुँदैन नत्रता त्यो सधैँभरि जीवित रहला ।”
23 ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.
त्यसैकारण जुन भूमिबाट त्यो निकालिएको थियो त्यही भूमिमा खेतीपाती गर्न परमप्रभु परमेश्वरले त्यसलाई अदनको बगैँचाबाट निकालिदिनुभयो ।
24 ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.
परमेश्वरले मानिसलाई बगैँचाबाट निकालिदिनुभएपछि जीवनको रुखतर्फको मार्गमा पहरा दिन उहाँले अदनको बगैँचाको पूर्वमा करूबहरू र चारैदिशातर्फ घुमिरहने ज्वालामय तरवार राखिदिनुभयो ।