< ಆದಿಕಾಂಡ 32 >
1 ಅನಂತರ ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ, ದೇವದೂತರು ಅವನ ಎದುರಿಗೆ ಬಂದರು.
౧యాకోబు తన దారిలో వెళ్తూ ఉండగా దేవదూతలు అతనికి ఎదురయ్యారు.
2 ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
౨యాకోబు వారిని చూసి “ఇది దేవుని సేన” అని చెప్పి ఆ చోటికి మహనయీము అని పేరు పెట్టాడు.
3 ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
౩యాకోబు ఎదోము ప్రాంతంలో, అంటే శేయీరు దేశంలో ఉన్న తన సోదరుడు ఏశావు దగ్గరికి తనకు ముందుగా దూతలను పంపి,
4 ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.
౪“మీరు నా ప్రభువైన ఏశావుతో, ‘ఇంతవరకూ నేను లాబాను దగ్గర నివసించాను.
5 ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.
౫నాకు పశువులూ గాడిదలూ మందలూ దాసదాసీజనమూ ఉన్నారు. నీ అనుగ్రహం నాపైనఉండాలని నా ప్రభువుకు తెలపడానికి పంపాను అని నీ సేవకుడైన యాకోబు అన్నాడు’ అని చెప్పండి” అని వారికి ఆజ్ఞాపించాడు.
6 ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.
౬ఆ దూతలు యాకోబు దగ్గరికి తిరిగివచ్చి “మేము నీ సోదరుడైన ఏశావు దగ్గరికి వెళ్ళాం, అతడు నాలుగు వందల మందితో నీకు ఎదురు వస్తున్నాడు” అని చెప్పారు.
7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
౭అప్పుడు యాకోబు చాలా భయపడి, హతాశుడై,
8 ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.
౮“ఏశావు ఒక గుంపు మీదికి వచ్చి దాన్ని హతం చేస్తే మిగిలిన గుంపు తప్పించుకుని పోవచ్చు” అనుకుని, తనతో ఉన్న ప్రజలనూ మందలనూ పశువులనూ ఒంటెలనూ రెండు గుంపులు చేశాడు.
9 ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,
౯అప్పుడు యాకోబు “నా తండ్రి అబ్రాహాము దేవా, నా తండ్రి ఇస్సాకు దేవా, ‘నీ దేశానికీ, నీ బంధువుల దగ్గరికీ తిరిగి వెళ్ళు, నీకు మేలు చేస్తాను’ అని నాతో చెప్పిన యెహోవా,
10 ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.
౧౦నువ్వు నీ సేవకుడికి చేసిన ఉపకారాలన్నిటికీ నమ్మకత్వమంతటికీ నేను పాత్రుణ్ణి కాను. ఎందుకంటే, కేవలం ఈ నా చేతి కర్రతో ఈ యొర్దాను దాటాను. ఇప్పుడు నేను రెండు గుంపులయ్యాను.
11 ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.
౧౧నా సోదరుడు ఏశావు చేతి నుండి దయచేసి నన్ను తప్పించు. అతడు వచ్చి పిల్లలనీ వారి తల్లులనూ నన్నూ చంపుతాడేమో అని భయపడుతున్నాను.
12 ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.
౧౨నాతో, ‘నేను నీకు తోడై తప్పకుండా మేలు చేస్తూ వారి సంఖ్యను బట్టి లెక్కించలేని సముద్రపు ఇసకలాగా నీ సంతానాన్ని విస్తరింపజేస్తాను’ అని నువ్వు సెలవిచ్చావు కదా” అన్నాడు.
13 ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
౧౩అతడు అక్కడ ఆ రాత్రి గడిపి తాను సంపాదించిన దానిలో తన అన్న ఏశావు కోసం ఒక కానుకను సిద్ధం చేశాడు.
14 ಅವು ಯಾವುವೆಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು,
౧౪అతడు రెండువందల మేకలూ ఇరవై మేక పోతులూ రెండువందల గొర్రెలూ ఇరవై పొట్టేళ్ళూ
15 ಹಾಲು ಕೊಡುವ ಮೂವತ್ತು ಒಂಟೆಗಳು, ಅವುಗಳ ಮರಿಗಳು, ನಲವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಗಂಡುಕತ್ತೆಗಳು,
౧౫ముప్ఫై పాడి ఒంటెలూ వాటి పిల్లలూ నలభై ఆవులూ పది ఆబోతులూ ఇరవై ఆడ గాడిదలూ పది గాడిద పిల్లలూ తీసుకు మందమందను వేరు వేరుగా ఉంచాడు.
16 ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು.
౧౬వాటిని అతడు తన దాసులకు అప్పగించి “మీరు మంద మందకు మధ్య ఖాళీ ఉంచి నాకంటే ముందుగా నడవండి” అని వారితో చెప్పాడు.
17 ಅವನು ಮೊದಲನೆಯವನಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಕಡೆಯವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವ ಇವೆಲ್ಲ ಯಾರವು?’ ಎಂದು ಕೇಳಿದರೆ,
౧౭వారిలో మొదటివాడితో “నా సోదరుడు ఏశావు నీకు ఎదురుగా వచ్చి, ‘నీవెవరి వాడివి? ఎక్కడికి వెళ్తున్నావు? నీ ముందు ఉన్నవి ఎవరివి?’ అని నిన్ను అడిగితే
18 ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.
౧౮నువ్వు, ‘ఇవి నీ సేవకుడైన యాకోబువి, ఇది నా ప్రభువైన ఏశావు కోసం అతడు పంపిన కానుక. అదిగో అతడు మా వెనక వస్తున్నాడు’ అని చెప్పు” అని ఆజ్ఞాపించాడు.
19 ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
౧౯“నేను ముందుగా పంపుతున్న కానుకల వలన అతనిని శాంతింపజేసిన తరువాత నేను అతనికి కనబడతాను. అప్పుడతడు ఒకవేళ నా పైన దయ చూపుతాడేమో.
20 ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.
౨౦కాబట్టి మీరు ఏశావును చూసి, ‘ఇదిగో నీ సేవకుడైన యాకోబు మా వెనకాలే వస్తున్నాడు’ అని చెప్పాలి” అని వారికి చెప్పాడు. రెండవ గుంపుకు, మూడవ గుంపుకు, మందల వెంబడి వెళ్ళిన వారికందరికీ అతడు ఇదే విధంగా ఆజ్ఞాపించాడు.
21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.
౨౧అతడు ఆ కానుకను తనకు ముందుగా పంపి తాను గుంపులో ఆ రాత్రి నిలిచిపోయాడు.
22 ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.
౨౨ఆ రాత్రి అతడు లేచి తన ఇద్దరు భార్యలనూ తన ఇద్దరు దాసీలనీ తన పదకొండు మంది పిల్లలనూ తీసుకు యబ్బోకు రేవు దాటిపోయాడు.
23 ಅವನು ಅವರನ್ನು ಕರೆದುಕೊಂಡು ಹೊಳೆ ದಂಡೆಯನ್ನು ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
౨౩యాకోబు వారిని ఆ యేరు దాటించి తనకు కలిగిందంతా వారితో పంపేశాడు.
24 ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.
౨౪యాకోబు ఒక్కడు మిగిలి పోయాడు. ఒక మనిషి తెల్లవారేదాకా అతనితో పెనుగులాడాడు.
25 ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.
౨౫తాను గెలవకపోవడం చూసి అతడు యాకోబు తొడ గూటి మీద కొట్టాడు. అప్పుడు ఆయనతో పెనుగులాడ్డం వలన యాకోబు తొడ గూడు జారిపోయింది.
26 ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.
౨౬ఆయన “తెల్లవారుతున్నది, నన్ను పోనియ్యి” అన్నప్పుడు, యాకోబు “నువ్వు నన్ను ఆశీర్వదిస్తేనే గాని నిన్ను పోనియ్యను” అన్నాడు.
27 ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.
౨౭ఆయన “నీ పేరేమిటి?” అని అడిగాడు. అతడు “యాకోబు” అని చెప్పాడు.
28 ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.
౨౮అప్పుడాయన “నువ్వు దేవునితో, మనుషులతో పోరాడి గెలిచావు. కాబట్టి ఇక ముందు నీ పేరు ఇశ్రాయేలు, యాకోబు కాదు” అని చెప్పాడు.
29 ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.
౨౯అప్పుడు యాకోబు “దయచేసి నీ పేరు చెప్పు” అన్నాడు. అందుకాయన “నా పేరు ఎందుకు అడుగుతావు?” అని చెప్పి అక్కడ అతణ్ణి ఆశీర్వదించాడు.
30 ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
౩౦యాకోబు “నేను ముఖాముఖిగా దేవుణ్ణి చూశాను. అయినా నా ప్రాణం నిలిచింది” అని ఆ స్థలానికి “పెనూయేలు” అని పేరు పెట్టాడు.
31 ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
౩౧అతడు పెనూయేలు నుండి బయలుదేరి నప్పుడు సూర్యోదయం అయ్యింది. అతడు తొడ కుంటుతూ నడిచాడు.
32 ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.
౩౨ఆయన యాకోబు తొడగూటి మీది తుంటినరంపై కొట్టి గూడు వసిలేలా చేసాడు కాబట్టి ఈనాటి వరకూ ఇశ్రాయేలీయులు తొడ గూటి మీద ఉన్న తుంటినరాన్ని తినరు.