< ಹಗ್ಗಾಯನು 2 >
1 ಏಳನೆಯ ತಿಂಗಳಿನ, ಇಪ್ಪತ್ತೊಂದನೆಯ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:
१दारयावेश राजाच्या कारकीर्दीच्या दुसऱ्या वर्षाच्या सातव्या महिन्याच्या एकविसाव्या दिवशी हाग्गय संदेष्ट्याच्या द्वारे परमेश्वराचे वचन आले आणि म्हणाले,
2 “ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.
२यहूदाचा राज्यपाल आणि शल्तीएलाचा मुलगा जरुब्बाबेल आणि मुख्य याजक यहोसादाकाचा मुलगा यहोशवा आणि उरलेल्या लोकांशी तू बोल. म्हण,
3 ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ?
३ज्याने हे मंदिर त्याच्या पहिल्या वैभवात पाहिले, असा कोण तुम्हामध्ये उरला आहे? आणि आता तुम्हास हे कसे दिसते? हे तुमच्या नजरेत काहीच नसल्यासारखे नाही काय?
4 ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
४परमेश्वर असे म्हणतो, आता, हे जरुब्बाबेला बलवान हो! आणि हे मुख्य याजका, यहोसादाकाच्या मुला, यहोशवा, बलवान हो; आणि या देशाच्या सर्व लोकांनो, बलवान व्हा. असे परमेश्वर म्हणतो. आणि काम करा, कारण मी तुम्हाबरोबर आहे! असे सेनाधीश परमेश्वर म्हणतो.
5 ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.
५तुम्ही जेव्हा मिसरातून बाहेर आला तेव्हा जे वचन बोलून मी तुमच्याबरोबर करार स्थापित केला, त्याप्रमाणे मी तुम्हासोबत आहे आणि माझा आत्मा तुमच्यात राहत आहे, घाबरू नका!
6 “ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.
६कारण सेनाधीश परमेश्वर असे म्हणतो, अगदी थोड्या वेळात मी पुन्हा एकदा आकाश आणि पृथ्वी, समुद्र आणि कोरडी जमीन हालवून सोडीन.
7 ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
७आणि मी प्रत्येक राष्ट्रांना हालवून सोडीन, आणि प्रत्येक राष्ट्र त्यांच्या मोलवान वस्तू माझ्याकडे घेऊन येतील, आणि मी हे मंदिर वैभवाने भरून टाकीन! असे सेनाधीश परमेश्वर म्हणतो.
8 ‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
८रुपे माझे आहे, सोने माझे आहे! असे सेनाधीश परमेश्वर म्हणतो.
9 ‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”
९या मंदिराचे शेवटचे वैभव ह्याच्या पूर्वीच्या वैभवापेक्षा अधिक मोठे होईल, असे सेनाधीश परमेश्वर म्हणतो, आणि मी या स्थळास शांती देईन, असे सेनाधीश परमेश्वर म्हणतो.
10 ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು:
१०दारयावेश याच्या कारकिर्दीच्या दुसऱ्या वर्षीच्या नवव्या महिन्याच्या चोविसाव्या दिवशी हाग्गय संदेष्ट्याच्याद्वारे परमेश्वराचे वचन आले,
11 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ,
११सेनाधीश परमेश्वर असे म्हणतो, आता तू याजकांना नियमशास्त्राविषयी विचार आणि म्हण,
12 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.
१२जर कोणी आपल्या वस्त्राच्या पदरातून समर्पित मांस नेतो. त्याच्या पदराने भाकरीला, किंवा कालवणाला, द्रक्षरस किंवा तेल, किंवा इतर अन्नाला स्पर्श झाला, तर या सर्व वस्तू पवित्र होतील का? याजकांनी उत्तर दिले, “नाही.”
13 ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.
१३मग हाग्गय म्हणाला, “जर प्रेताला स्पर्श केल्यामुळे, कोणी अशुद्ध झालेला यापैकी कशासही स्पर्श केला, तर ते अशुद्ध होईल का?” याजक म्हणाले, “हो! तेसुध्दा अशुद्ध होईल.”
14 ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.
१४मग हाग्गयाने उत्तर दिले आणि म्हणाला, परमेश्वर म्हणतो, तसे हे लोक व तसे हे राष्ट्र माझ्यासमोर आहे, तसे त्यांचे हाताचे प्रत्येक काम आहे, तेथे ते जे अर्पण करतात ते अशुद्ध आहे.
15 “ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
१५तर आता आमच्या पूर्वी परमेश्वराच्या मंदिराचा दगडावर दगड ठेवण्याच्या पूर्वीची पद्धत कशी होती याचा विचार करा.
16 ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.
१६त्या दिवसात जर कोणी वीस मापे धान्याच्या राशीजवळ आला तर त्याच्या हाती दहा मापेच लागत. द्राक्षकुंडातून पन्नास पात्रे भरून काढावयास गेला तर त्यास फक्त वीसच मिळत होते.
17 ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.
१७मी तुम्हास आणि तुमच्या हातच्या सर्व कामावर पाठवलेले रोग आणि बुरशी यांनी पीडले पण तुम्ही माझ्याकडे फिरला नाहीत, असे परमेश्वर म्हणतो.
18 ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.
१८“आजच्या पूर्वीची स्थिती कशी होती याचा विचार करा. नवव्या महिन्याच्या चोविसाव्या दिवसापासून ज्या दिवशी परमेश्वराच्या मंदिराचा पाया घातला त्या दिवसापासून स्थिती कशी होईल याचा विचार करा.
19 ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.
१९कोठारात अजून बीज आहे काय? द्राक्षवेल, अंजीराचे झाड, डाळिंब, आणि जैतून झाड ह्यांनी काही उत्पन्न दिले नाही! पण या दिवसापासून मी तुम्हास आशीर्वाद देईन!”
20 ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು, ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ, ಹಗ್ಗಾಯನಿಗೆ ಬಂದಿತು.
२०मग महिन्याच्या चोविसाव्या दिवशी, हाग्गयाकडे परमेश्वराचे वचन दुसऱ्यांदा आले आणि म्हणाले,
21 ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.
२१यहूदाचा राज्यपाल जरुब्बाबेलाशी बोल व सांग, मी आकाश आणि पृथ्वी हालवीन.
22 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.
२२मी राज्यांचे सिंहासन उलथवून टाकीन आणि राष्ट्रांचे बळ नष्ट करीन! मी त्यांच्या रथांना व सारथ्यांना उलथून टाकीन. त्यांचे घोडे व सारथी खाली पडतील, कारण प्रत्येकजण आपल्या भावाच्या तलवारीने पडेल.
23 “ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”
२३सेनाधीश परमेश्वर म्हणतो, त्यादिवशी हे शल्तीएलाच्या मुला, जरुब्बाबेला, माझ्या सेवकाप्रमाणे मी तुला घेईन, असे परमेश्वर म्हणतो. मी तुला मुद्रांकित अंगठीप्रमाणे करीन, कारण मी तुला निवडले आहे! असे सेनाधीश परमेश्वर म्हणतो.