< ಹೋಶೇಯನು 10 >

1 ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.
ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.
2 ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.
ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.
3 ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.
ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.
4 ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
5 ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.
ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.
6 ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.
ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.
7 ಸಮಾರ್ಯ ಹಾಗು ಅದರ ಅರಸನು ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು.
ಸಮಾರ್ಯ ಹಾಗು ಅದರ ಅರಸನು ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು.
8 ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.
ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.
9 ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.
ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.
10 ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು. ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು, ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.
ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು. ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು, ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.
11 ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ. ಅದು ತುಳಿಯುವುದನ್ನು ಇಷ್ಟಪಡುತ್ತದೆ. ಆದರೆ ನಾನು ಅದರ ಸುಂದರವಾದ ಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ. ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು. ಯೆಹೂದ ಉಳುವನು. ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ. ಅದು ತುಳಿಯುವುದನ್ನು ಇಷ್ಟಪಡುತ್ತದೆ. ಆದರೆ ನಾನು ಅದರ ಸುಂದರವಾದ ಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ. ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು. ಯೆಹೂದ ಉಳುವನು. ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
12 ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.
ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.
13 ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.
ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.
14 ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ
ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ
15 ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ ಬೇತೇಲಿಗೆ ಸಂಭವಿಸುವುದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.
ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ ಬೇತೇಲಿಗೆ ಸಂಭವಿಸುವುದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.

< ಹೋಶೇಯನು 10 >