< ಯೆಶಾಯನು 17 >

1 ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.
दमेशेक के विरोध में एक भविष्यवाणी: दमेशेक एक नगर न रहकर खंडहरों का एक ढेर बन जाएगा.
2 ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ, ಅವು ಯಾರ ಹೆದರಿಕೆಯೂ ಇಲ್ಲದೆ ಮಲಗುವ ಮಂದೆಗಳಿಗೆ ಸ್ಥಳವಾಗುವುವು.
अरोअर के नगर उजाड़ कर दिए गए हैं वहां पशु चरेंगे और आराम करेंगे और उन्हें भगाने वाला कोई नहीं होगा.
3 ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
एफ्राईम के गढ़ गुम हो जाएंगे, दमेशेक के राज्य में कोई नहीं बचेगा; यह सर्वशक्तिमान याहवेह की यह वाणी है.
4 ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.
“उस दिन याकोब का वैभव कम हो जाएगा; और उसका शरीर कमजोर हो जाएगा.
5 ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ, ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವುದು.
और ऐसा होगा जैसा फसल काटकर बालों को बांधे, या रेफाइम नामक तराई में सिला बीनता हो.
6 ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.
जैतून के पेड़ को झाड़ने पर कुछ फल नीचे रह जाते हैं, उसी प्रकार इसमें भी बीनने के लिए कुछ बच जाएगा,” यह याहवेह, इस्राएल के परमेश्वर की वाणी है.
7 ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.
उस दिन मनुष्य अपने सृष्टिकर्ता की ओर अपनी आंखें उठाएंगे और उनकी दृष्टि इस्राएल के उस पवित्र की ओर होगी.
8 ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.
वह अपनी बनाई हुई धूप वेदी और अशेरा नामक मूर्ति या सूर्य को न देखेगा.
9 ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.
उस समय उनके गढ़वाले नगर, घने बंजर भूमि हो जाएंगे अथवा जो इस्राएल के डर से छोड़ दिए गए हो, उन्हें नष्ट कर दिया जाएगा.
10 ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,
क्योंकि तुम अपने उद्धारकर्ता परमेश्वर को भूल गए; और अपनी चट्टान को याद नहीं किया, इसलिये तब चाहे तुम अच्छे पौधे और किसी अनजान के लिए दाख की बारी लगाओ,
11 ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿ ಮತ್ತು ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆಯುವಂತೆ ಮಾಡಿದರೂ, ರೋಗದ ಹಾಗೂ ಗುಣಪಡಿಸಲಾರದ ಬೇನೆಯ ದಿನದಲ್ಲಿ ನಿನ್ನ ಸುಗ್ಗಿ ಏನೂ ಇರುವುದಿಲ್ಲ.
उगाने के बाद तुम इसे बढ़ा भी लो और जो बीज तुमने लगाया और उसमें कोपल निकल आये, किंतु दुःख और तकलीफ़ के कारण उपज की कोई खुशी नहीं प्राप्‍त होगी.
12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!
हाय देश-देश के बहुत से लोगों का कैसा अपमान हो रहा है— वे समुद्र की लहरों के समान उठते हैं! और प्रचंड धारा के समान दहाड़ते हैं!
13 ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.
जैसे पहाडों से भूसी और धूल उड़कर फैलती है, वैसे ही राज्य-राज्य के लोग बाढ़ में बहते हुए बिखर जाएंगे.
14 ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
शाम को तो घबराहट होती है! परंतु सुबह वे गायब हो जाते हैं! यह उनके लिए है जिन्होंने हमें लूटा है, और इससे भी ज्यादा उनके लिए जिन्होंने हमें सताया है.

< ಯೆಶಾಯನು 17 >