< ಯೆಶಾಯನು 29 >
1 ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ.
१हाय, अरीएल, अरीएल, हाय उस नगर पर जिसमें दाऊद छावनी किए हुए रहा! वर्ष पर वर्ष जोड़ते जाओ, उत्सव के पर्व अपने-अपने समय पर मनाते जाओ।
2 ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.
२तो भी मैं तो अरीएल को सकेती में डालूँगा, वहाँ रोना पीटना रहेगा, और वह मेरी दृष्टि में सचमुच अरीएल सा ठहरेगा।
3 ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
३मैं चारों ओर तेरे विरुद्ध छावनी करके तुझे कोटों से घेर लूँगा, और तेरे विरुद्ध गढ़ भी बनाऊँगा।
4 ಆಗ ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ. ನಿನ್ನ ನುಡಿಯು ಧೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು. ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರುವುದು. ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
४तब तू गिराकर भूमि में डाला जाएगा, और धूल पर से बोलेगा, और तेरी बात भूमि से धीमी-धीमी सुनाई देगी; तेरा बोल भूमि पर से प्रेत का सा होगा, और तू धूल से गुनगुनाकर बोलेगा।
5 ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.
५तब तेरे परदेशी बैरियों की भीड़ सूक्ष्म धूल के समान, और उन भयानक लोगों की भीड़ भूसे के समान उड़ाई जाएगी।
6 ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.
६सेनाओं का यहोवा अचानक बादल गरजाता, भूमि को कँपाता, और महाध्वनि करता, बवण्डर और आँधी चलाता, और नाश करनेवाली अग्नि भड़काता हुआ उसके पास आएगा।
7 ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.
७और जातियों की सारी भीड़ जो अरीएल से युद्ध करेगी, और जितने लोग उसके और उसके गढ़ के विरुद्ध लड़ेंगे और उसको सकेती में डालेंगे, वे सब रात के देखे हुए स्वप्न के समान ठहरेंगे।
8 ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚೆತ್ತಾಗ ಪ್ರಾಣ ತುಂಬಿದ ಹಾಗೆಯೂ, ಬಾಯಾರಿದವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚರವಾದಾಗ ಬಲಹೀನನಾಗಿದ್ದು, ಪ್ರಾಣ ಆಶಿಸುವ ಹಾಗೆಯೇ ಚೀಯೋನ್ ಪರ್ವತಕ್ಕೆ ವಿರೋಧವಾಗಿ ಯುದ್ಧಮಾಡುವ ಎಲ್ಲಾ ಜನಾಂಗಗಳ ಸಮೂಹವಿರುವುದು.
८और जैसा कोई भूखा स्वप्न में तो देखता है कि वह खा रहा है, परन्तु जागकर देखता है कि उसका पेट भूखा ही है, या कोई प्यासा स्वप्न में देखें की वह पी रहा है, परन्तु जागकर देखता है कि उसका गला सूखा जाता है और वह प्यासा मर रहा है; वैसी ही उन सब जातियों की भीड़ की दशा होगी जो सिय्योन पर्वत से युद्ध करेंगी।
9 ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ.
९ठहर जाओ और चकित हो! भोग-विलास करो और अंधे हो जाओ! वे मतवाले तो हैं, परन्तु दाखमधु से नहीं, वे डगमगाते तो हैं, परन्तु मदिरा पीने से नहीं!
10 ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.
१०यहोवा ने तुम को भारी नींद में डाल दिया है और उसने तुम्हारी नबीरूपी आँखों को बन्द कर दिया है और तुम्हारे दर्शीरूपी सिरों पर परदा डाला है।
11 ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು.
११इसलिए सारे दर्शन तुम्हारे लिये एक लपेटी और मुहरबन्द की हुई पुस्तक की बातों के समान हैं, जिसे कोई पढ़े-लिखे मनुष्य को यह कहकर दे, “इसे पढ़”, और वह कहे, “मैं नहीं पढ़ सकता क्योंकि इस पर मुहरबन्द की हुई है।”
12 ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು ನನಗೆ ಓದಲು ಬರುವುದಿಲ್ಲ ಅನ್ನುವನು.
१२तब वही पुस्तक अनपढ़ को यह कहकर दी जाए, “इसे पढ़,” और वह कहे, “मैं तो अनपढ़ हूँ।”
13 ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
१३प्रभु ने कहा, “ये लोग जो मुँह से मेरा आदर करते हुए समीप आते परन्तु अपना मन मुझसे दूर रखते हैं, और जो केवल मनुष्यों की आज्ञा सुन सुनकर मेरा भय मानते हैं,
14 ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”
१४इस कारण सुन, मैं इनके साथ अद्भुत काम वरन् अति अद्भुत और अचम्भे का काम करूँगा; तब इनके बुद्धिमानों की बुद्धि नष्ट होगी, और इनके प्रवीणों की प्रवीणता जाती रहेगी।”
15 ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!
१५हाय उन पर जो अपनी युक्ति को यहोवा से छिपाने का बड़ा यत्न करते, और अपने काम अंधेरे में करके कहते हैं, “हमको कौन देखता है? हमको कौन जानता है?”
16 ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು, ಕುಂಬಾರನು ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು! ಉಂಟುಮಾಡಿದವನಿಗೆ ಉಂಟುಮಾಡಿದ್ದು, “ನೀನು ನನ್ನನ್ನು ಉಂಟುಮಾಡಲಿಲ್ಲ,” ಎಂತಲೂ, ಮಡಕೆ ಕುಂಬಾರನಿಗೆ, “ನಿನಗೆ ಏನೂ ಗೊತ್ತಿಲ್ಲ,” ಎಂತಲೂ ಹೇಳಬಹುದೇ?
१६तुम्हारी कैसी उलटी समझ है! क्या कुम्हार मिट्टी के तुल्य गिना जाएगा? क्या बनाई हुई वस्तु अपने कर्ता के विषय कहे “उसने मुझे नहीं बनाया,” या रची हुई वस्तु अपने रचनेवाले के विषय कहे, “वह कुछ समझ नहीं रखता?”
17 ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?
१७क्या अब थोड़े ही दिनों के बीतने पर लबानोन फिर फलदाई बारी न बन जाएगा, और फलदाई बारी जंगल न गिनी जाएगी?
18 ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.
१८उस समय बहरे पुस्तक की बातें सुनने लगेंगे, और अंधे जिन्हें अभी कुछ नहीं सूझता, वे देखने लगेंगे।
19 ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.
१९नम्र लोग यहोवा के कारण फिर आनन्दित होंगे, और दरिद्र मनुष्य इस्राएल के पवित्र के कारण मगन होंगे।
20 ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ.
२०क्योंकि उपद्रवी फिर न रहेंगे और ठट्ठा करनेवालों का अन्त होगा, और जो अनर्थ करने के लिये जागते रहते हैं,
21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.
२१जो मनुष्यों को बातों में फँसाते हैं, और जो सभा में उलाहना देते उनके लिये फंदा लगाते, और धर्म को व्यर्थ बात के द्वारा बिगाड़ देते हैं, वे सब मिट जाएँगे।
22 ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ.
२२इस कारण अब्राहम का छुड़ानेवाला यहोवा, याकूब के घराने के विषय यह कहता है, “याकूब को फिर लज्जित होना न पड़ेगा, उसका मुख फिर नीचा न होगा।
23 ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.
२३क्योंकि जब उसके सन्तान मेरा काम देखेंगे, जो मैं उनके बीच में करूँगा, तब वे मेरे नाम को पवित्र ठहराएँगे, वे याकूब के पवित्र को पवित्र मानेंगे, और इस्राएल के परमेश्वर का अति भय मानेंगे।
24 ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗೊಣಗುಟ್ಟುವವರು ಬೋಧನೆ ಕಲಿಯುವರು.”
२४उस समय जिनका मन भटका हो वे बुद्धि प्राप्त करेंगे, और जो कुड़कुड़ाते हैं वह शिक्षा ग्रहण करेंगे।”