< ಯೆಶಾಯನು 32 >
1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
देखो, राजा धर्म से शासन करेंगे और अधिकारी न्याय से शासन करेंगे.
2 ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
सब मानो आंधी से छिपने का स्थान और बौछार के लिये आड़ के समान होगा, मरुभूमि में झरने एक विशाल चट्टान की छाया के समान होंगे.
3 ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
तब जो देखते हैं, उनकी आंख कमजोर न होगी, और जो सुनते हैं वे सुनेंगे.
4 ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.
उतावले लोगों के मन ज्ञान की बातें समझेंगे, और जो हकलाते हैं वे साफ़ बोलेंगे.
5 ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. ಮೋಸಗಾರನು ಮಹನೀಯನೆನಿಸಿಕೊಳ್ಳನು.
मूर्ख फिर उदार न कहलायेगा न कंजूस दानी कहलायेगा.
6 ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
क्योंकि एक मूर्ख मूढ़ता की बातें ही करता है, और उसका मन व्यर्थ बातों पर ही लगा रहता है: वह कपट और याहवेह के विषय में झूठ बोलता है जिससे वह भूखे को भूखा और प्यासे को प्यासा ही रख सके.
7 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
दुष्ट गलत बात सोचता है, और सीधे लोगों को भी अपनी बातों में फंसा देता है.
8 ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
किंतु सच्चा व्यक्ति तो अच्छा ही करता है, और अच्छाईयों पर स्थिर रहता है.
9 ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
हे आलसी स्त्रियों तुम जो निश्चिंत हो, मेरी बात को सुनो; हे निश्चिंत पुत्रियो उठो, मेरे वचन पर ध्यान दो!
10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
हे निश्चिंत पुत्रियो एक वर्ष और कुछ ही दिनों में तुम व्याकुल कर दी जाओगी; क्योंकि दाख का समय खत्म हो गया है, और फल एकत्र नहीं किए जाएंगे.
11 ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
हे निश्चिंत स्त्रियो, कांपो; कांपो, हे निश्चिंत पुत्रियो! अपने वस्त्र उतारकर अपनी कमर पर टाट बांध लो.
12 ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ ನಿಮ್ಮ ಎದೆ ಬಡಿದುಕೊಳ್ಳಿರಿ.
अच्छे खेतों के लिए और फलदार अंगूर के लिये रोओ,
13 ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.
क्योंकि मेरी प्रजा, जो बहुत खुश और आनंदित है, उनके खेत में झाड़ और कांटे उग रहे हैं.
14 ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.
क्योंकि राजमहल छोड़ दिया जायेगा, और नगर सुनसान हो जायेगा; पर्वत और उनके पहरेदारों के घर जहां है, वहां जंगली गधे मौज करेंगे, पालतू पशुओं की चराई बन जाएंगे.
15 ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.
जब तक हम पर ऊपर से आत्मा न उंडेला जाए, और मरुभूमि फलदायक खेत न बन जाए, और फलदायक खेत वन न बन जाए.
16 ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.
तब तक उस बंजर भूमि में याहवेह का न्याय रहेगा, और फलदायक खेत में धर्म रहेगा.
17 ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.
धार्मिकता का फल है शांति, उसका परिणाम चैन; और हमेशा के लिए साहस!
18 ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
तब मेरे लोग शांति से, और सुरक्षित एवं स्थिर रहेंगे.
19 ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.
और वन विनाश होगा और उस नगर का घमंड चूर-चूर किया जाएगा,
20 ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.
क्या ही धन्य हो तुम, जो जल के स्रोतों के पास बीज बोते हो, और गधे और बैल को आज़ादी से चराते हो.