< ಯೆಶಾಯನು 38 >
1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.
౧ఆ రోజుల్లో హిజ్కియాకు ప్రాణాంతకమైన జబ్బు చేసింది. ప్రవక్త, ఆమోజు కొడుకు యెషయా అక్కడకు వచ్చాడు. “‘నువ్వు చనిపోబోతున్నావు, ఇక బతకవు. కాబట్టి నీ ఇల్లు చక్కబెట్టుకో’ అని యెహోవా సెలవిస్తున్నాడు” అని చెప్పాడు.
2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.
౨అప్పుడు హిజ్కియా గోడవైపు తిరిగి,
3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.
౩“యెహోవా, యథార్థ హృదయంతో, సత్యంతో నీ సన్నిధిలో నేనేవిధంగా జీవించానో, సమస్తాన్నీ ఏ విధంగా నీ దృష్టికి మంచిదిగా జరిగించానో, కృపతో జ్ఞాపకం చేసుకో” అని కన్నీళ్ళతో యెహోవాను ప్రార్థించాడు.
4 ಆಗ ಯೆಹೋವ ದೇವರ ವಾಕ್ಯವು ಯೆಶಾಯನಿಗೆ ಬಂದಿತು,
౪అప్పుడు యెహోవా వాక్కు యెషయాకు ప్రత్యక్షమై ఇలా చెప్పాడు,
5 “ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.
౫“నువ్వు తిరిగి హిజ్కియా దగ్గరికి పోయి అతనితో ఇలా చెప్పు, ‘నీ పూర్వికుడైన దావీదు దేవుడైన యెహోవా నీకు సెలవిచ్చేదేమంటే నీ కన్నీళ్లు నేను చూశాను. నీ ప్రార్థన అంగీకరించాను.
6 ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು.
౬నీ జీవితంలో 15 సంవత్సరాల ఆయుష్షు పెంచుతాను. నిన్ను, ఈ పట్టణాన్ని అష్షూరు రాజు చేతి నుండి విడిపించి కాపాడతాను.
7 “‘ಯೆಹೋವ ದೇವರು ತಾವು ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ.
౭తాను పలికిన మాట నెరవేరుతుంది అనడానికి యెహోవా నీకిచ్చే సూచన ఇదే,
8 ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.
౮ఆహాజు ఎండ గడియారం మీద సూర్యకాంతి చేత ముందుకు జరిగిన నీడ మళ్ళీ పది మెట్లు ఎక్కేలా చేస్తాను.’” అప్పుడు సూర్యకాంతిలో ముందుకు జరిగిన మెట్లలో పది మెట్లు మళ్ళీ వెనక్కి జరిగింది.
9 ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣಹೊಂದಿದ ನಂತರ ಬರೆದದ್ದು:
౯యూదారాజు హిజ్కియా జబ్బుపడి తిరిగి ఆరోగ్యం పొందిన తరువాత అతడు రచించిన ప్రార్థన.
10 “ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು. (Sheol )
౧౦“నా జీవితం సగభాగంలో నేను పాతాళ ద్వారం గుండా వెళ్ళాల్సివచ్చింది. మిగిలిన సగభాగం నేనిక కోల్పోయినట్టే. (Sheol )
11 ನಾನು ಹೀಗೆ ಯೋಚಿಸಿದೆ, “ಯೆಹೋವ ದೇವರನ್ನು ಜೀವಿತರ ದೇಶದಲ್ಲಿ ಯೆಹೋವ ದೇವರನ್ನು ಕಾಣೆನೆಂದುಕೊಂಡೆನು; ಭೂಲೋಕ ನಿವಾಸಿಗಳಲ್ಲಿ ಒಬ್ಬ ಮನುಷ್ಯನನ್ನೂ ಕಾಣೆನೆಂದುಕೊಂಡೆನು.
౧౧యెహోవాను, సజీవుల దేశంలో యెహోవాను చూడక పోయేవాణ్ణి. మృతుల లోకంలో పడిపోయి ఇక మనుషులకు కనిపించనేమో అనుకున్నాను.
12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.
౧౨నా జీవం తీసేశారు. గొర్రెల కాపరి గుడిసెలాగా అది నా దగ్గర నుండి తీసివేశారు. నేతపనివాడు చేసినట్టు నా జీవితాన్ని చుట్టేస్తున్నాను. ఆయన నన్ను మగ్గం నుండి దూరం చేశాడు. ఒక్క రోజులోనే నువ్వు నా జీవితాన్ని ముగిస్తున్నావు.
13 ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು.
౧౩(ఉదయం దాకా ఓర్చుకున్నాను. సింహం లాగా నా ఎముకలన్నిటినీ విరిచేశాడు.) ఒక్క రోజులోనే నువ్వు నన్ను సమాప్తి చేస్తావు.
14 ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”
౧౪ముళ్ళ తోక పిట్టలాగా కిచ కిచలాడాను. పావురం లాగా కూశాను. పైకి చూసీ చూసీ నా కళ్ళు అలసిపోయాయి. నలిగి పోయాను. యెహోవా, నాకు సహాయం చెయ్యి.
15 ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು.
౧౫నేనేమనగలను? ఆయన నా గురించి మాట పలికాడు, ఆయనే దాన్ని జరిగించాడు. నా హృదయంలో నిండి ఉన్న దుఃఖాన్ని బట్టి నా సంవత్సరాలన్నీ తడబడుతూ గడిపేస్తాను.
16 ಕರ್ತದೇವರೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ. ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು. ಹೀಗೆ ನನ್ನನ್ನು ನೀವು ಸ್ವಸ್ಥಮಾಡಿ ಬದುಕುವಂತೆ ಮಾಡಿದಿರಿ.
౧౬ప్రభూ, నీవు పంపిన బాధలు మనుషులకు మంచివే. వాటి వల్లనే నా ఆత్మ జీవిస్తున్నది. నువ్వు నన్ను బాగు చేసి నన్ను జీవింపజేశావు.
17 ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
౧౭ఆ తీవ్రమైన బాధ వల్లనే నాకు నెమ్మది కలిగింది. నీ ప్రేమతో నా ప్రాణాన్ని నాశనం అనే గోతి నుండి విడిపించావు. నా పాపాలన్నిటినీ నీ వీపు వెనుకకు పారవేశావు.
18 ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. ಮರಣವು ನಿನ್ನನ್ನು ಕೊಂಡಾಡುವುದಿಲ್ಲ. ಕುಣಿಯೊಳಕ್ಕೆ ಹೋಗುವವರು ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು. (Sheol )
౧౮ఎందుకంటే పాతాళంలో నీకు స్తుతి కలగదు. మరణం నీకు స్తుతి చెల్లించదు. సమాధిలోకి వెళ్ళినవారు నీ నమ్మకత్వంపై ఆశ పెట్టుకోరు. (Sheol )
19 ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.
౧౯సజీవులు, సజీవులే గదా నిన్ను స్తుతిస్తారు! ఈ రోజున నేను సజీవుడిగా నిన్ను స్తుతిస్తున్నాను. తండ్రులు తమ కొడుకులకు నీ సత్యాన్ని తెలియజేస్తారు. యెహోవా నన్ను రక్షించేవాడు.
20 ಯೆಹೋವ ದೇವರು ನನ್ನನ್ನು ರಕ್ಷಿಸುವರು. ಆದ್ದರಿಂದ ಯೆಹೋವ ದೇವರ ಆಲಯದಲ್ಲಿ ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು.
౨౦నా జీవిత కాలమంతా యెహోవా మందిరంలో సంగీత వాయిద్యాలు వాయిస్తాను.”
21 “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ, ಹುಣ್ಣಿನ ಮೇಲೆ ಇಟ್ಟರೆ, ಅವನು ಗುಣಹೊಂದುವನು,” ಎಂದು ಯೆಶಾಯನು ಹೇಳಿದನು.
౨౧యెషయా “ఒక అంజూరు పండ్ల ముద్దను ఆ పుండుకు కట్టండి, అప్పుడు అతడు బాగుపడతాడు” అని చెప్పాడు.
22 ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.
౨౨దానికి ముందు హిజ్కియా “నేను మళ్ళీ యెహోవా మందిరానికి వెళతాను అనేదానికి సూచన ఏమిటి?” అని అతణ్ణి అడిగాడు.