< ಯೆಶಾಯನು 6 >
1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
यशायाह का दर्शन है उस वर्ष जब राजा उज्जियाह की मृत्यु हुई, उस वर्ष मैंने प्रभु को ऊंचे सिंहासन पर बैठे देखा, उनके वस्त्र से मंदिर ढंक गया है.
2 ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.
और उनके ऊपर स्वर्गदूत दिखाई दिए जिनके छः-छः पंख थे: सबने दो पंखों से अपना मुंह ढंक रखा था, दो से अपने पैर और दो से उड़ रहे थे.
3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.
वे एक दूसरे से इस प्रकार कह रहे थे: “पवित्र, पवित्र, पवित्र हैं सर्वशक्तिमान याहवेह; सारी पृथ्वी उनके तेज से भरी है.”
4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.
उनकी आवाज से द्वार के कक्ष हिल गए और भवन धुएं से भरा हुआ हो गया.
5 ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.
तब मैंने कहा, “हाय मुझ पर! क्योंकि मैं नष्ट हो गया हूं! मैं एक ऐसा व्यक्ति हूं, जिसके होंठ अशुद्ध हैं और मैं उन व्यक्तियों के बीच रहता हूं जिनके होंठ अशुद्ध हैं; क्योंकि मैंने अपनी आंखों से महाराजाधिराज, सर्वशक्तिमान याहवेह को देख लिया है.”
6 ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,
तब एक स्वर्गदूत उड़कर मेरी ओर आया और उसके हाथ में अंगारा था, जिसे उसने चिमटे से वेदी पर से उठाया था.
7 ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.
उसने इस अंगारे से मेरे मुंह पर छूते हुए कहा, “देखो, तुम्हारे होंठों से अधर्म दूर कर दिया और तुम्हारे पापों को क्षमा कर दिया गया है.”
8 ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.
तब मैंने प्रभु को यह कहते हुए सुना, “मैं किसे भेजूं और कौन जाएगा हमारे लिए?” तब मैंने कहा, “मैं यहां हूं. मुझे भेजिए!”
9 ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’
प्रभु ने कहा, “जाओ और इन लोगों से कहो: “‘सुनते रहो किंतु समझो मत; देखते रहो किंतु ग्रहण मत करो.’
10 ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.
इन लोगों के हृदय कठोर; कान बहरे और आंख से अंधे हैं. कहीं ऐसा न हो कि वे अपनी आंखों से देखकर, अपने कानों से सुनकर, और मन फिराकर मेरे पास आएं, और चंगे हो जाएं.”
11 ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,
तब मैंने पूछा, “कब तक, प्रभु, कब तक?” प्रभु ने कहा: “जब तक नगर सूना न हो जाए और कोई न बचे, और पूरा देश सुनसान न हो जाएं,
12 ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.
याहवेह लोगों को दूर ले जाएं और देश में कई जगह निर्जन हो जाएं.
13 ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”
फिर इसमें लोगों का दसवां भाग रह जाए, तो उसे भी नष्ट किया जाएगा. जैसे बांझ वृक्ष को काटने के बाद भी ठूंठ बच जाता है, उसी प्रकार सब नष्ट होने के बाद, जो ठूंठ समान बच जाएगा, वह पवित्र बीज होगा.”