< ಯೆಶಾಯನು 6 >
1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
၁သြဇိမင်းနတ်ရွာစံသောနှစ်၌ငါသည်ထာဝရဘုရားကိုဖူးမြင်ရ၏။ ကိုယ်တော်သည်မြင့်မြတ်သည့်ပလ္လင်တော်ပေါ်တွင်ထိုင်လျက်နေတော်မူ၏။ ဗိမာန်တော်တစ်ခုလုံးသည်လည်းကိုယ်တော်၏ဝတ်ရုံတော်နှင့်ပြည့်၍နေ၏။-
2 ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.
၂ကိုယ်တော်အားမီးလျှံထလျက်နေသောကောင်းကင်တမန်များသည် ခြံရံကာရပ်လျက်နေကြ၏။ သူတို့မှာအတောင်ခြောက်ခုစီရှိ၏။ သူတို့သည်အတောင်နှစ်ခုဖြင့်မိမိတို့မျက်နှာကိုလည်းကောင်း၊ အခြားနှစ်ခုဖြင့်ကိုယ်ခန္ဓာကိုလည်းကောင်းဖုံးအုပ်ထားကာကျန်အတောင်နှစ်ခုကိုမူပျံတက်ရာတွင်အသုံးပြုကြလေသည်။-
3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.
၃သူတို့သည် ``အနန္တတန်ခိုးရှင်ထာဝရဘုရားသည်သန့်ရှင်းမြင့်မြတ်တော်မူ၏။ သန့်ရှင်းမြင့်မြတ်တော်မူ၏။ သန့်ရှင်းမြင့်မြတ်တော်မူ၏။ ကမ္ဘာမြေကြီးသည်ကိုယ်တော်၏ဘုန်းအသရေတော်ဖြင့်ပြည့်လျက်ရှိပါ၏။'' ဟုအချင်းချင်းကြွေးကြော်၍နေကြ၏။
4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.
၄ဤသို့သူတို့ကြွေးကြော်ကြသည့်အသံကြောင့်၊ ဗိမာန်တော်အုတ်မြစ်သည်တုန်လှုပ်ကာဗိမာန်တော်သည်လည်းမီးခိုးများနှင့်ပြည့်၍လာတော့၏။
5 ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.
၅ငါကလည်း၊``ငါ၌မျှော်လင့်စရာမရှိတော့ပြီ။ ငါသည်အမင်္ဂလာရှိပါသည်တကား။ ငါ၏နှုတ်ထွက်စကားမှန်သမျှသည်ညစ်ညမ်း၍ ညစ်ညမ်းသောစကားကိုသာလျှင်ပြောဆိုတတ်သူတို့အထဲတွင်ငါနေထိုင်ရ၏။ သို့ရာတွင်ယခုငါသည် အနန္တတန်ခိုးရှင်ထာဝရဘုရားတည်းဟူသောဘုရင်မင်းကိုဖူးမြင်ရလေပြီ'' ဟုဆို၏။
6 ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,
၆ထိုအခါကောင်းကင်တမန်တစ်ပါးသည် ယဇ်ပလ္လင်မှမီးခဲတစ်ခဲကိုမီးညှပ်နှင့်ညှပ်၍ယူဆောင်ကာ ငါ့ထံသို့ပျံဆင်းလာ၏။-
7 ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.
၇သူသည်ငါ့နှုတ်ခမ်းကိုမီးခဲနှင့်တို့ပြီးလျှင် ``သင်၏နှုတ်ခမ်းသည်ဤမီးခဲနှင့်တို့ထိရပြီးဖြစ်သဖြင့်သင့်မှာအပြစ်မရှိတော့။ သင်သည်အပြစ်များမှဖြေလွှတ်၍သွားပေပြီ'' ဟုဆို၏။
8 ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.
၈ထိုနောက်ထာဝရဘုရားက``ငါသည်အဘယ်သူကိုစေလွှတ်ရပါမည်နည်း'' ဟုမေးတော်မူ၏။ ငါကလည်း``ကျွန်တော်မျိုးသွားပါမည်။ ကျွန်တော်မျိုးအားစေလွှတ်တော်မူပါ'' ဟုပြန်လည်လျှောက်ထား၏။
9 ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’
၉ဤသို့ဖြင့်ကိုယ်တော်သည်ငါ့အားထိုသူတို့ထံသို့စေလွှတ်ပြီးလျှင်``သူတို့အား`သင်တို့သည်ထပ်ကာထပ်ကာနားထောင်သော်လည်းနားလည်လိမ့်မည်မဟုတ်။ ထပ်ကာထပ်ကာကြည့်သော်လည်းအဖြစ်အပျက်ကိုသိလိမ့်မည်မဟုတ်' ဟုပြောကြားလော့'' ဟုမိန့်တော်မူ၏။-
10 ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.
၁၀ထိုနောက်ကိုယ်တော်က``ဤလူစု၏စိတ်နှလုံးသည်ထိုင်းမှိုင်းလျက်၊ သူတို့၏နားများသည်လေးလျက်၊ မျက်စိများသည်လည်းပိတ်လျက်နေအောင်ပြုလော့။ သို့မှသာလျှင်သူတို့သည်မမြင်နိုင်၊ မကြားနိုင်၊ နားမလည်နိုင်ဘဲနေကြလိမ့်မည်။ အကယ်၍သူတို့သည်မြင်နိုင်ကြားနိုင်နားလည်နိုင်ကြမည်ဆိုပါမူ မိမိတို့၏ဝိညာဉ်ဆိုင်ရာရောဂါများပျောက်ကင်းစေရအောင်စိတ်နှလုံးပြောင်းလဲကြလိမ့်မည်'' ဟုငါ့အားမိန့်တော်မူ၏။
11 ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,
၁၁ငါကလည်း``အို ထာဝရဘုရား၊ အဘယ်မျှကြာအောင်ဤသို့ဖြစ်ပျက်လျက်နေပါမည်နည်း'' ဟုလျှောက်လျှင် ကိုယ်တော်က``မြို့များပျက်စီးယိုယွင်း၍ဟာလာဟင်းလင်းဖြစ်၍နေချိန်တိုင်အောင်ဖြစ်၏။ အိမ်များတွင်လူသူကင်းမဲ့ပြီးထိုပြည်ကိုယ်တိုင်လူသူဆိတ်ငြိမ်ရာဖြစ်လျက်နေချိန်တိုင်အောင်ဖြစ်၏။-
12 ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.
၁၂ငါသည်လူတို့အားတစ်ပါးအရပ်သို့ပြောင်းရွှေ့စေ၍ ထိုပြည်ကိုလူသူဆိတ်ငြိမ်ရာဖြစ်စေမည်။-
13 ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”
၁၃အကယ်၍ထိုပြည်တွင်လူဦးရေဆယ်ရာနှုန်းမျှသာကျန်ရစ်မည်ဆိုလျှင်လည်း ထိုသူတို့သည်ဆုံးပါးပျက်စီးရကြမည်သာဖြစ်၏။ ထိုသူတို့သည်ခုတ်လှဲလိုက်သည့်ဝက်သစ်ချပင်တို့၏ငုတ်တိုများနှင့်တူလိမ့်မည်'' ဟုမိန့်တော်မူ၏။ (သစ်ငုတ်တိုများသည်ဘုရားသခင်လူမျိုးတော်၏ဘဝသစ်အစပျိုးမှုကိုဖော်ပြသည်။)